CHITRADURGA NEWS | 25 MAY 2026
ಚಿತ್ರದುರ್ಗ: ಡಿ.ಎಂ.ಎಫ್ (ಜಿಲ್ಲಾ ಖನಿಜ ಪ್ರತಿಷ್ಠಾನ ನಿಧಿ) ಅಡಿ ಪೂರ್ಣಗೊಂಡ ಕಾಮಗಾರಿಗಳಿಗೆ ಸಂಬಂಧ ಪಟ್ಟ ಇಲಾಖೆಯವರು ತಕ್ಷಣವೇ ಬಳಕೆ ಪ್ರಮಾಣ ಪತ್ರ ಸಲ್ಲಿಸುವಂತೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ತಾಕೀತು ಮಾಡಿದರು.

ಇದನ್ನೂ ಓದಿ: ಎಸಿ ಗಾಳಿಯಿಂದ ನಿಮ್ಮ ಚರ್ಮ ಹಾನಿಗೊಳಗಾಗುತ್ತಿದೆಯೇ? ಹಾಗಾದ್ರೆ ನಿಮ್ಮ ಚರ್ಮವನ್ನು ಹೀಗೆ ಕಾಳಜಿ ಮಾಡಿ
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಖನಿಜ ಪ್ರತಿಷ್ಠಾನ ಟ್ರಸ್ಟ್ ವ್ಯವಸ್ಥಾಪನ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಲೋಕೋಪಯೋಗಿ, ಪಂಚಾಯತ್ ರಾಜ್ ಇಂಜಿನಿಯರಿAಗ್, ನಿರ್ಮಿತಿ ಕೇಂದ್ರ, ಕೆ.ಆರ್.ಡಿ.ಎಲ್. ಸಣ್ಣ ನೀರಾವರಿ ಸೇರಿದಂತೆ ಎಲ್ಲಾ ಇಲಾಖೆಗಳು 2020-21 ರಿಂದ 2024-25ನೇ ಸಾಲಿನವರೆಗೆ ಅನುಮೋದಿಸಲಾಗಿರುವ ಯೋಜನೆಗಳನ್ನು ಶೀಘ್ರವೇ ಪೂರ್ಣಗೊಳಿಸಬೇಕು. ಈಗಾಗಲೇ ಪೂರ್ಣಗೊಂಡಿರುವ ಕಾಮಗಾರಿಗಳ ಬಳಕೆ ಪ್ರಮಾಣ ಪತ್ರವನ್ನು ಸಲ್ಲಿಸಿ ಬಾಕಿ ಉಳಿದಿರುವ ಅನುದಾನವನ್ನು ಪಡೆದುಕೊಳ್ಳಬೇಕು ಸೂಚಿಸಿದರು.
ಡಿ.ಎಂ.ಎಫ್ ಅಡಿ ಲೋಕೋಯೋಗಿ ಇಲಾಖೆಗೆ ಒಟ್ಟು ರೂ.33 ಕೋಟಿ ವೆಚ್ಚದ ಕಾಮಾಗರಿಗಳಿಗೆ ಅನುಮೋದನೆ ನೀಡಲಾಗಿದೆ. ಕಾಮಗಾರಿ ಪೂರ್ಣಗೊಂಡಿರುವ ಕುರಿತು ಸರಿಯಾದ ಮಾಹಿತಿ ನೀಡದೇ ನಿರ್ಲಕ್ಷö್ಯ ವಹಿಸುತ್ತಿರುವ ಇಂಜಿಯರ್ಗಳ ವಿರುದ್ದ ಕಠಿಣ ಕ್ರಮಕ್ಕೆ ಶಿಫಾರಸ್ಸು ಮಾಡಲಾಗುವುದು. ಸಣ್ಣ ನೀರಾವರಿ ಇಲಾಖೆಯ ಬಹುತೇಕ ಕಾಮಗಾರಿಗಳು ಪೂರ್ಣಗೊಂಡಿದ್ದು, ಕೂಡಲೇ ಬಳಕೆ ಪ್ರಮಾಣ ಪತ್ರ ನೀಡಿ, ಬಾಕಿ ಉಳಿದ ರೂ.10 ಕೋಟಿ ಅನುದಾನ ಬಿಡುಗಡೆ ಅಂತಿಮ ಬಿಲ್ ಸಲ್ಲಿಸುವಂತೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸೂಚಿಸಿದರು.
ಇದನ್ನೂ ಓದಿ: ಮಜ್ಜಿಗೆ ಕುಡಿಯುವುದರಿಂದ ಚರ್ಮಕ್ಕಾಗುವ ಪ್ರಯೋಜನಗಳೇನು ಗೊತ್ತಾ?
ಜಿಲ್ಲೆಯಲ್ಲಿ ಅನುಮೋದನೆ ಪಡೆಯದೆ ನಿಯಮಬಾಹಿರವಾಗಿ ಸೃಷ್ಟಿಸಲಾಗಿರುವ ಯಾವುದೇ ಕಾಮಗಾರಿಗಳನ್ನು ಒಪ್ಪಲು ಸಾಧ್ಯವಿಲ್ಲ. ಪ್ರತಿ ಸಭೆಯಲ್ಲೂ ಕಾಮಗಾರಿಗಳ ಸಂಪೂರ್ಣ ಅಂದಾಜು ಪಟ್ಟಿ ಹಾಗೂ ಪ್ರಗತಿ ವಿವರಗಳನ್ನು ನೀಡುವಂತೆ ಕೇಳುತ್ತಲೇ ಇದ್ದೇನೆ. ಆದರೆ ಅಧಿಕಾರಿಗಳು ಸಬೂಬು ಹೇಳುತ್ತಾ ಕಾಲಹರಣ ಮಾಡುತ್ತಿದ್ದಾರೆ. ಇನ್ನು ಮುಂದೆ ಇಂತಹ ಉದಾಸೀನ ಧೋರಣೆ ಸಹಿಸುವುದಿಲ್ಲ. ಹಳೆಯ ಕೆಲಸಗಳನ್ನು ನಿಯಮಾನುಸಾರ ತಕ್ಷಣವೇ ಪೂರ್ಣಗೊಳಿಸಿ ವರದಿ ಒಪ್ಪಿಸಬೇಕು. ಇಲ್ಲದಿದ್ದರೆ ಸಂಬAಧಪಟ್ಟ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಟಿ. ವೆಂಕಟೇಶ್ ಕಟುವಾಗಿ ಎಚ್ಚರಿಸಿದರು.
ಶಿಕ್ಷಣ ಇಲಾಖೆ ಕಾಮಗಾರಿಗಳ ಪರಿಶೀಲನೆಗೆ ಸಮಿತಿ ರಚನೆ:
ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಕಾಮಗಾರಿಗಳ ಅನುಷ್ಠಾನದ ಬಗ್ಗೆ ಲೆಕ್ಕಪರಿಶೋದಕ ಸಮಿತಿ ಆಕ್ಷಪಣೆ ವ್ಯಕ್ತಪಡಿದೆ. ಈ ಹಿನ್ನಲೆಯಲ್ಲಿ, ಉಪವಿಭಾಗಾಧಿಕಾರಿ ನೇತೃತ್ವದಲ್ಲಿ ಎನ್.ಐ.ಸಿ, ಜಿ.ಟಿ.ಟಿ.ಸಿ, ಸೇರಿದಂತೆ ಇತರೆ ಇಲಾಖೆಗಳ ಅಧಿಕಾರಿಗಳ ಪರಿಶೀಲನಾ ಸಮಿತಿ ರಚಿಸುವಂತೆ ಟಿ.ವೆಂಕಟೇಶ್ ಸೂಚಿಸಿದರು.
ಇದನ್ನೂ ಓದಿ: ಹೊಳಲ್ಕೆರೆ | ಹಾಸ್ಟೆಲ್ ಪ್ರವೇಶಕ್ಕೆ ಅರ್ಜಿ ಅಹ್ವಾನ
ಡಿ.ಎಮ್.ಎಫ್ ನಿಧಿ ಬಳಕೆಗೆ ಅದರದೇ ಆದ ಸ್ಪಷ್ಟ ನಿಯಮಗಳಿವೆ. ಆದರೆ ಶಿಕ್ಷಣ ಇಲಾಖೆಯಿಂದ ಶಾಲೆಗಳಲ್ಲಿ ಅಳವಡಿಸಿರುವ ಸ್ಮಾರ್ಟ್ ಕ್ಲಾಸ್, ಕಂಪೂಟರ್ ಲ್ಯಾಬ್ ಹಾಗೂ ಶಾಲೆಗಳಿಗೆ ನೀಡಿದ ವಾಹನಗಳಲ್ಲಿ ನಿಯಮಗಳ ಪಾಲನೆಯಾಗಿಲ್ಲ ಎಂದು ಲೆಕ್ಕಪರಿಶೋಧಕರ ಸಮತಿ ಆಕ್ಷೇಪಿಸಿದೆ. ಇದಕ್ಕೆ ಡಿ.ಡಿ.ಪಿ.ಐ ಅವರು ಸಮಿತಿ ಮುಂದೆ ಉತ್ತರಿಸಬೇಕು. ಇದರೊಂದಿಗೆ ಲೆಕ್ಕಪರಿಶೋಧಕರಿಗೂ ಪತ್ರ ಬರೆದು ಸ್ಪಷ್ಟನೆ ನೀಡುವಂತೆ ನಿರ್ದೇಶನ ನೀಡಿದರು.
ಕಾಮಗಾರಿಗಳ ವರದಿ ನೀಡಲು ಸೂಚನೆ:
ಡಿ.ಎಂ.ಎಫ್ ಹಾಗೂ ಕೆ.ಎಂ.ಇ.ಆರ್.ಸಿ ಅಡಿ ಶಾಲಾ ಕೊಠಡಿ, ಶಾಲೆಗಳಲ್ಲಿ ಶೌಚಾಲಯ, ಹೈಮಾಸ್ಟ್ ದೀಪ ಅಳವಡಿಕೆ, ಶುದ್ದ ಕುಡಿಯುವ ನೀರಿನ ಘಟಕ ಹಾಗೂ ಹಳ್ಳಿಗಳ ರಸ್ತೆ ಅಭಿವೃದ್ಧಿಗೆ ಅನುದಾನ ಬಿಡುಗಡೆ ಮಾಡಲಾಗಿದೆ. ಯಾವುದೇ ಕಾರಣಗಳನ್ನು ಕಾಮಗಾರಿಗಳು ಈ ಎರೆಡು ಯೋಜನೆಗಳಲ್ಲಿ ಪುನಾರವರ್ತನೆಯಾಗಬಾರದು.
ಈ ಕುರಿತಂತೆ ಕಾಮಗಾರಿಗಳ ಸಂಪೂರ್ಣ ವಿವರವುಳ್ಳ ವರದಿಯನ್ನು ನೀಡುವಂತೆ ಜಿಲ್ಲಾಧಿಕಾರಿ ಟಿ. ವೆಂಕಟೇಶ್ ಸೂಚಿಸಿದರು. ಈಗಾಗಲೇ ಪ್ರಗತಿಯಲ್ಲಿರುವ ಹೈ ಮಾಸ್ಟ್ ದೀಪಗಳ ಅಳವಡಿಕೆ ಹೊರತು ಪಡಿಸಿ, ಹೊಸದಾಗಿ ಹೈ ಮಾಸ್ಟ್ ದೀಪಗಳ ಅಳವಡಿಕೆಯನ್ನು ಸ್ಥಗತಿಗೊಳಿಸಬೇಕು.
ಇದನ್ನೂ ಓದಿ: ಪುಸ್ತಕ ಆಯ್ಕೆ ಪಟ್ಟಿ ಬಿಡುಗಡೆ
ಈಗಾಗಲೇ ಯೋಜನೆಯಡಿ ಅನುಮತಿ ಪಡಿದು ಕಾಮಗಾರಿ ಇನ್ನೂ ಕಾಮಗಾರಿ ಆರಂಭವಾಗಿರಿದ್ದರೆ ಅವುಗಳನ್ನು ನಿಲ್ಲಿಸಿ, ಬೇರೆ ಯೋಜನೆಯನ್ನು ರೂಪಿಸುವಂತೆ ಜಿಲ್ಲಾಧಿಕಾರಿ ಹೇಳಿದರು. ಇದರೊಂದಿಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ದಿ ಇಲಾಖೆಯಿಂದ ಮಹಿಳೆಯರಿಗೆ ನೀಡಿರುವ ಕೌಶಲ್ಯ ಅಭಿವೃದ್ಧಿ ತರಬೇತಿ ವಿವರವನ್ನು ಸಲ್ಲಿಸುವಂತೆ ತಾಕೀತು ಮಾಡಿದರು.
ಸಭೆಯಲ್ಲಿ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು, ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಉಪನಿರ್ದೇಶಕ ಮಹೇಶ್, ಜಿ.ಪಂ.ಉಪಕಾರ್ಯದರ್ಶಿ ಡಾ.ರಂಗಸ್ವಾಮಿ, ಉಪಅರಣ್ಯ ಸಂರಕ್ಷಣಾಧಿಕಾರಿ ಗೋಪ್ಯಾನಾಯ್ಕ್, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಕಾರ್ಯಪಾಲಕ ಇಂಜಿನಿಯರ್ ಅಮರನಾಥ್ ಜೈನ್ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥತರಿದ್ದರು.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
