ಚಿತ್ರದುರ್ಗ ನ್ಯೂಸ್.ಕಾಂ: ಜಿಲ್ಲೆಯ ಹೊಸದುರ್ಗ ಪಟ್ಟಣದ KSRTC ಬಸ್ ನಿಲ್ದಾಣದಲ್ಲಿ ಮಂಗಳವಾರ ಬೆಳ್ಳಂ ಬೆಳಗ್ಗೆ ಶಾರ್ಟ್ ಸಕ್ರ್ಯೂಟ್ ಸಂಭವಿಸಿ ಕೆಲಕಾಲ ಆತಂಕದ ವಾತಾವರಣ ಸೃಷ್ಟಿಯಾಗಿತ್ತು.
ಇಲ್ಲಿನ ಬಸ್ ನಿಲ್ದಾಣದ ಎಡ ಬದಿಯಲ್ಲಿ ವಿದ್ಯುತ್ ಸಂಪರ್ಕಗಳ ನಿರ್ವಹಣಾ ಸ್ಥಳವಿದ್ದು, ಮೀಟರ್ ಬೋರ್ಡ್ಗಳು ಕೂಡಾ ಇವೆ. ಇದೇ ಸ್ಥಳದಲ್ಲಿ ಹಠಾತ್ತನೇ ಬೆಂಕಿ ಕಾಣಿಸಿಕೊಂಡು ಧಗಧಗನೆ ಉರಿಯಿತು.
ಇದನ್ನೂ ಓದಿ: ಬನ್ನಿ ಒಮ್ಮೆ ಶೌಚಾಲಯ ನೋಡಿ ಬರೋಣ

ಬೆಳಗ್ಗೆ 6.30ರ ವೇಳೆಗೆ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದರಿಂದ ನಿಲ್ದಾಣದಲ್ಲಿದ್ದ ಪ್ರಯಾಣಿಕರು ಹಾಗೂ ಸಿಬ್ಬಂದಿಗಳು ಗಾಬರಿಯಾಗಿದ್ದರು.
ತಕ್ಷಣ ಎಚ್ಚೆತ್ತ ಕೆಎಸ್ಆರ್ಟಿಸಿ ಸಿಬ್ಬಂದಿ ಬೆಸ್ಕಾಂ ಇಲಾಖೆಗೆ ಮಾಹಿತಿ ನೀಡಿದರು. ಅದೇ ಕ್ಷಣದಲ್ಲಿ ಬಸ್ ನಿಲ್ದಾಣ ಮಾರ್ಗದ ವಿದ್ಯುತ್ ಕಡಿತಗೊಳಿಸಿದ್ದರಿಂದ ಇನ್ನಿತರೆ ವಿದ್ಯುತ್ ಅವಘಡಗಳು ತಪ್ಪಿದವು. ಸ್ಥಳದಲ್ಲಿದ್ದವರು ಬೆಂಕಿ ನಂದಿಸಿದರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail
chitradurganews23@gmail.com
» Whatsapp Number
