By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Reading: ವಿದ್ಯಾರ್ಥಿನಿಲಯಕ್ಕೆ ಸಚಿವ, ಶಾಸಕರ ದಿಢೀರ್ ಭೇಟಿ | ವಾರ್ಡನ್‌ಗೆ ಕ್ಲಾಸ್
Share
Font ResizerAa
Chitradurga News-Kannada NewsChitradurga News-Kannada News
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2022 Foxiz News Network. Ruby Design Company. All Rights Reserved.

Home » ವಿದ್ಯಾರ್ಥಿನಿಲಯಕ್ಕೆ ಸಚಿವ, ಶಾಸಕರ ದಿಢೀರ್ ಭೇಟಿ | ವಾರ್ಡನ್‌ಗೆ ಕ್ಲಾಸ್

ಮುಖ್ಯ ಸುದ್ದಿ

ವಿದ್ಯಾರ್ಥಿನಿಲಯಕ್ಕೆ ಸಚಿವ, ಶಾಸಕರ ದಿಢೀರ್ ಭೇಟಿ | ವಾರ್ಡನ್‌ಗೆ ಕ್ಲಾಸ್

News Desk Chitradurga News
Last updated: 24 May 2024 07:05
News Desk Chitradurga News
1 year ago
Share
hostel visit
ವಿದ್ಯಾರ್ಥಿನಿಯರ ಸಮಸ್ಯೆ ಆಲಿಸಿದ ಸತಿ ಸಚಿವ ಜಮೀರ್‌ ಅಹ್ಮದ್‌ ಖಾನ್‌ ಹಾಗೂ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ
SHARE
https://chat.whatsapp.com/Jhg5KALiCFpDwME3sTUl7x

CHITRADURGA NEWS | 24 MAY 2024
ಚಿತ್ರದುರ್ಗ: ಊಟದ ಸಮಸ್ಯೆ, ಸ್ವಚ್ಛತೆ ಬಗ್ಗೆ ವಿದ್ಯಾರ್ಥಿನಿಯರಿಂದ ದೂರು ಬಂದ ಹಿನ್ನೆಲೆಯಲ್ಲಿ ನಗರದ ಅಲ್ಪಸಂಖ್ಯಾತರ ಮೆಟ್ರಿಕಕ್‌ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯಕ್ಕೆ ವಸತಿ ಸಚಿವ ಜಮೀರ್‌ ಅಹ್ಮದ್‌ ಖಾನ್‌ ಹಾಗೂ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಗುರುವಾರ ರಾತ್ರಿ 9 ಗಂಟೆ ವೇಳೆಗೆ ದಿಢೀರ್‌ ಆಗಮಿಸಿ ವಿದ್ಯಾರ್ಥಿನಿಯರನ್ನು ಪರಿಚಯಿಸಿಕೊಂಡರು. ಧೈರ್ಯವಾಗಿ ನಿಮ್ಮ ಸಮಸ್ಯೆ ಹೇಳಿ..ಇಲ್ಲಿ ಯಾರಿಗೂ ಹೆದರುವ ಅವಶ್ಯಕತೆಯಿಲ್ಲ. ನಾವಿದ್ದೇವೆ ಎಂದು ಸಚಿವರು, ಶಾಸಕರು ಹೇಳುತ್ತಿದ್ದಂತೆ ವಿದ್ಯಾರ್ಥಿನಿಯರು ಸಮಸ್ಯೆಗಳ ಪಟ್ಟಿಯನ್ನು ತೆರೆದಿಟ್ಟರು.

ಕ್ಲಿಕ್ ಮಾಡಿ ಓದಿ: ಚಿತ್ರದುರ್ಗಕ್ಕೂ ಬಂತು ಡ್ರೋನ್‌ | ಔಷಧ ಸಿಂಪರಣೆಗೆ ರೈತರಿಗೆ ನೆರವು

hostel visit 1
ಸತಿ ಸಚಿವ ಜಮೀರ್‌ ಅಹ್ಮದ್‌ ಖಾನ್‌ ಹಾಗೂ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಅವರಿಗೆ ಸಮಸ್ಯೆ ತಿಳಿಸಿದ ವಿದ್ಯಾರ್ಥಿನಿಯರು

ಈವರೆಗೂ ನಾವು ಮೆನು ಚಾರ್ಟ್‌ ನೋಡಿಲ್ಲ, ವಾರಕ್ಕೆ ಒಂದು ದಿನ ಮಾತ್ರ ಮೊಟ್ಟೆ ನೀಡುತ್ತಾರೆ. ಒಂದೇ ಥರಾ ಅಡುಗೆ ಮಾಡುತ್ತಾರೆ. ಇಲ್ಲಿನ ಕೆಲಸದವರು ವಾರ್ಡನ್‌ ಮನೆ ಕೆಲಸಕ್ಕೆ ಹೋಗುತ್ತಾರೆ. ವಿದ್ಯುತ್‌ ಸಮಸ್ಯೆ ಹೆಚ್ಚಾಗಿದೆ ಎಂದು ತಿಳಿಸಿದರು. ಈ ವೇಳೆ ವಾರ್ಡನ್‌ ಮಧ್ಯ ಪ್ರವೇಶಿಸುತ್ತಿದ್ದಂತೆ ಮಕ್ಕಳು ಏಕೆ ಸುಳ್ಳು ಹೇಳ್ತಾರೆ ಎಂದು ಸಚಿವರು ಗರಂ ಆದರು.

ಬಳಿಕ 20 ನಿಮಿಷಕ್ಕೂ ಹೆಚ್ಚು ಸಮಯ ವಿದ್ಯಾರ್ಥಿ ನಿಲಯವನ್ನು ಪರಿಶೀಲಿಸಿದ ಸಚಿವ ಜಮೀರ್‌ ಅಹ್ಮದ್‌ ಖಾನ್‌, ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ, ‘ನೀವು ಚೆನ್ನಾಗಿ ಓದಿ. ಎಲ್ಲ ವ್ಯವಸ್ಥೆ ಸರಿಯಾಗುತ್ತದೆ. ಈ ವಾರ್ಡನ್‌ ಅಮಾನತು ಮಾಡಿ ಹೊಸಬರನ್ನು ಕಳಿಸುತ್ತೇವೆ. ನಿಮಗೆ ಯಾರದರು ಬೆದರಿಕೆ ಹಾಕಿದರೆ ಶಾಸಕರ ಇಲ್ಲವೇ ನನ್ನ ಗಮನಕ್ಕೆ ತನ್ನಿ. ನಮ್ಮ ಆಪ್ತ ಸಹಾಯಕರ ಫೋನ್ ನಂಬರ್‌ಗೆ ಕರೆ ಮಾಡಿ ತಿಳಿಸಿ. ನಾವಿದ್ದೇವೆ’ ಎಂದು ಹೇಳಿ ಸ್ಥಳದಿಂದ ತೆರಳಿದರು.

hostel visit 2
ವಿದ್ಯಾರ್ಥಿ ನಿಲಯಕ್ಕೆ ವಸತಿ ಸಚಿವ ಜಮೀರ್‌ ಅಹ್ಮದ್‌ ಖಾನ್‌ ಹಾಗೂ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಭೇಟಿ

ಗುರುವಾರ ಬೆಳಿಗ್ಗೆ ಶಾಸಕ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಚಿತ್ರದುರ್ಗದ ಪ್ರವಾಸಿ ಮಂದಿರದಲ್ಲಿ ಸಾರ್ವಜನಿಕರ ಅಹವಾಲು ಸ್ವೀಕರಿಸುತ್ತಿದ್ದ ಸಮಯದಲ್ಲಿ ವಿದ್ಯಾರ್ಥಿನಿಲಯ ಇಬ್ಬರು ವಿದ್ಯಾರ್ಥಿನಿಯರು ಶಾಸಕರಿಗೆ ವಿದ್ಯಾರ್ಥಿನಿಲಯದ ಸಮಸ್ಯೆ ತಿಳಿಸಿದ್ದರು. ಕೂಡಲೇ ಕಾರ್ಯಪ್ರವೃತ್ತರಾದ ಶಾಸಕರು ಸಂಜೆ ಖಾಸಗಿ ಕಾರ್ಯಕ್ರಮಕ್ಕೆ ಆಗಮಿಸಿದ್ದ ಸಚಿವರನ್ನು ಕರೆದುಕೊಂಡು ಹೋಗಿ ಸಮಸ್ಯೆ ಬಗೆಹರಿಸಿ ಬಂದಿದ್ದಾರೆ.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

TAGGED:HostelJameer Ahmed KhanVirendra Pappivisitಜಮೀರ್‌ ಅಹ್ಮದ್‌ ಖಾನ್‌ದಿಢೀರ್ ಭೇಟಿವಿದ್ಯಾರ್ಥಿನಿಲಯವೀರೇಂದ್ರ ಪಪ್ಪಿ
Share This Article
Facebook Email Print
Previous Article ನಗರದ ಬುದ್ಧ ವಿಹಾರ ಕೇಂದ್ರದಲ್ಲಿ ಬುದ್ಧ ಪೂರ್ಣಮೆ ಜಯಂತಿ ಆಚರಣೆ ಚಿತ್ರದುರ್ಗದಲ್ಲಿ ವೈಶಾಖಾ ಬುದ್ಧ ಪೂರ್ಣಿಮೆ | ಮಾಜಿ ಶಾಸಕಿ ಪೂರ್ಣಿಮಾ, ಕೆ.ಸಿ.ನಾಗರಾಜ್ ಭಾಗೀ
Next Article CM video conference ಗೋಶಾಲೆಗಳಿಗೆ ನೀರು, ಮೇವು ಪೂರೈಕೆ | ಸಿಎಂಗೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್‌ ಮಾಹಿತಿ
Leave a Comment

Leave a Reply Cancel reply

Your email address will not be published. Required fields are marked *

Sadguru Pradeep participate hosadurga bandh
ಹೊಸದುರ್ಗ ಬಂದ್‌ | ಇಂದು ಅಂತ್ಯವಲ್ಲ, ಆರಂಭ | ಸದ್ಗುರು ಪ್ರದೀಪ್‌
ಹೊಸದುರ್ಗ
ಹೊಸದುರ್ಗ ಸ್ಥಿತಿ ಸಮುದ್ರದ ನೆಂಟಸ್ಥನ, ಉಪ್ಪಿಗೆ ಬರ | ಕೆ.ಎಸ್.ನವೀನ್
ಹೊಸದುರ್ಗ
ಹೊಸದುರ್ಗ ಬಂದ್ | ನೀರಿಗೆ ಅಡ್ಡಿ ಕಿಡಿಗೇಡಿ ಕೃತ್ಯ | ಎಸ್.ಲಿಂಗಮೂರ್ತಿ
ಹೊಸದುರ್ಗ
ಹೊಸದುರ್ಗ ಬಂದ್ | ಶಾಸಕ ಬಿ.ಜಿ.ಗೋವಿಂದಪ್ಪ ನೇತೃತ್ವದಲ್ಲಿ ಹೋರಾಟ
ಹೊಸದುರ್ಗ
© Chitradurga News. Ruby Design Company. All Rights Reserved.

Chitradurga News App

Install
Welcome Back!

Sign in to your account

Username or Email Address
Password

Lost your password?

Not a member? Sign Up