CHITRADURGA NEWS | 25 APRIL 2025
ಚಿತ್ರದುರ್ಗ: ಮಕ್ಕಳು ದೈಹಿಕವಾಗಿ ಸದೃಢರಾಗಲು ಬೇಸಿಗೆ ಸಮಯದಲ್ಲಿ ಶಿಬಿರಗಳಲ್ಲಿ ಭಾಗವಹಿಸಬೇಕು ಎಂದು ವಿಧಾನ ಪರಿಷತ್ ಸದಸ್ಯ ಕೆ.ಎಸ್.ನವೀನ್ ಹೇಳಿದರು.
Also Read: ಅಡಿಕೆ ಧಾರಣೆ | ಚನ್ನಗಿರಿ ಮಾರುಕಟ್ಟೆಯಲ್ಲಿ ಇಳಿಕೆ ಕಂಡ ಅಡಿಕೆ

ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಸ್ಟೇಡಿಯಂ ಯೂತ್ಸ್ ಅಥ್ಲೆಟಿಕ್ ಅಕಾಡೆಮಿ ವತಿಯಿಂದ ಮಾ.24 ರಿಂದ ಏ. 24ರವರೆಗೆ ಹಮ್ಮಿಕೊಳ್ಳಲಾಗಿದ್ದ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು.
ಇಂದಿನ ಮಕ್ಕಳಿಗೆ ಆಟ ಎಂದರೆ ಬರಿ ಕ್ರಿಕೆಟ್ ಎಂದು ಮಾತ್ರ ಅರ್ಥವಾಗುತ್ತದೆ, ಇದನ್ನು ಬಿಟ್ಟು ಬೇರೆ ಆಟಗಳು ಸಹಾ ನಮ್ಮಲ್ಲಿ ಇವೆ ಎಂಬುದನ್ನು ಮರೆಯಲಾಗಿದೆ.
ಇದ್ದಲ್ಲದೆ ಮನೆಯಲ್ಲಿ ಮೊಬೈಲ್ ಅಥವಾ ಮನೆಯಲ್ಲಿ ಇಂಟರ್ನೆಟ್ ಇದ್ದರೆ ಸಾಕು ಮನೆಯಿಂದ ಮಕ್ಕಳು ಹೊರಗಡೆಯೇ ಬರುವುದಿಲ್ಲ. ಸಂಜೆ ಮೈದಾನದಲ್ಲಿ ಮಕ್ಕಳು ಸಹಾ ಕಾಣುವುದು ಕಡಿಮೆಯಾಗಿದೆ.
Also Read: ಕಾಶ್ಮೀರದ ಉಗ್ರ ದಾಳಿ ಖಂಡಿಸಿ ಮುಸ್ಲಿಂ ಸಮುದಾಯದಿಂದ ಪ್ರತಿಭಟನೆ | ಬಗ್ಗು ಬಡಿಯಲು ಪ್ರಧಾನಿಗೆ ಮನವಿ
ಪೋಷಕರು ಮಕ್ಕಳಿಗೆ ಯಾವ ರೀತಿ ಅಂಕಗಳನ್ನು ಪಡೆಯಲು ಪ್ರೋತ್ಸಾಹ ನೀಡತರೋ ಅದೇ ರೀತಿ ಬೇಸಿಗೆ ಸಮಯದಲ್ಲಿ ಇಂತಹ ಶಿಬಿರಗಳಿಗೆ ಕಲಿಸುವುದರ ಮೂಲಕ ತಮ್ಮ ಮಕ್ಕಳನ್ನು ಬಲಿಷ್ಠರನ್ನಾಗಿ ಮಾಡಬೇಕಿದೆ.
ಇದಕ್ಕೆ ಕ್ರೀಡೆಯೊಂದೇ ದಾರಿಯಾಗಿದೆ ಇದರಿಂದ ದೇಶಕ್ಕೆ ಉತ್ತಮವಾದ ಆರೋಗ್ಯವಂತ ಪ್ರಜೆಗಳನ್ನು ನೀಡಲು ಸಾಧ್ಯವಾಗುತ್ತದೆ ಎಂದರು.
ಸಂಘಟಕರಾದ ಸತೀಶ್, ತರಬೇತಿದಾರ ಸಾಧಿಕ್ ಮಾತನಾಡಿದರು.
ಕಾರ್ಯಕ್ರಮದಲ್ಲಿ ದೈಹಿಕ ಶಿಕ್ಷಕ ತಿಪ್ಪೇಸ್ವಾಮಿ, ಆಕಾಡೆಮಿಯ ಕಾರ್ಯದರ್ಶಿ ಶಿವು, ಬಸವರಾಜು, ಸುಹಾಸ್, ಶಶಾಂಕ ಗೌಡ, ನಾಗರಾಜ್ ಬೇದ್ರೇ ಭಾಗವಹಿಸಿದ್ದರು.
Also Read: ನಾಳೆ ಸರ್ಕಾರದ ನಡೆ ಕಾರ್ಯಕರ್ತರ ಕಡೆ ಸಮಾವೇಶ | ಶಾಸಕ ಕೆ.ಸಿ.ವೀರೇಂದ್ರ (ಪಪ್ಪಿ)
ಶಿಬಿರದಲ್ಲಿ ಸುಮಾರು 150 ರಿಂದ 180 ಮಕ್ಕಳು ಭಾಗವಹಿಸಿದ್ದರು. ಕ್ರೀಡೆಯಲ್ಲಿ ವಿಜೇತರಾದ ಮಕ್ಕಳಿಗೆ ಪದಕ ಹಾಗೂ ಪ್ರಮಾಣ ಪತ್ರವನ್ನು ವಿತರಿಸಲಾಯಿತು.
ಕಾರ್ಯಕ್ರಮಕ್ಕೂ ಮನ್ನಾ ಕಾಶ್ಮೀರದ ಪಹಲ್ಗಾಮ್ನಲ್ಲಿ ಉಗ್ರರ ಅಟ್ಟಹಾಸಕ್ಕೆ ಬಲಿಯಾಗಿ ತಮ್ಮ ಪ್ರಾಣವನ್ನು ಕಳೆದುಕೊಂಡವರ ಸ್ಮರಣಾರ್ಥ ಒಂದು ನಿಮಿಷ ಮೌನವನ್ನು ಆಚರಿಸಲಾಯಿತು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail
chitradurganews23@gmail.com
» Whatsapp Number
