By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Reading: ನೀರಿನ ಪೈಪ್‌ಲೈನ್ ಮೇಲೆ ಕಣ್ಗಾವಲು | ಜಿಲ್ಲಾ ಪಂಚಾಯಿತಿ ಸಿಇಒ ಎಸ್.ಜೆ.ಸೋಮಶೇಖರ್‌ ಸೂಚನೆ
Share
Font ResizerAa
Chitradurga News-Kannada NewsChitradurga News-Kannada News
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2022 Foxiz News Network. Ruby Design Company. All Rights Reserved.

Home » ನೀರಿನ ಪೈಪ್‌ಲೈನ್ ಮೇಲೆ ಕಣ್ಗಾವಲು | ಜಿಲ್ಲಾ ಪಂಚಾಯಿತಿ ಸಿಇಒ ಎಸ್.ಜೆ.ಸೋಮಶೇಖರ್‌ ಸೂಚನೆ

ಮುಖ್ಯ ಸುದ್ದಿ

ನೀರಿನ ಪೈಪ್‌ಲೈನ್ ಮೇಲೆ ಕಣ್ಗಾವಲು | ಜಿಲ್ಲಾ ಪಂಚಾಯಿತಿ ಸಿಇಒ ಎಸ್.ಜೆ.ಸೋಮಶೇಖರ್‌ ಸೂಚನೆ

News Desk Chitradurga News
Last updated: 14 June 2024 14:37
News Desk Chitradurga News
1 year ago
Share
zp ceo
ಚಿತ್ರದುರ್ಗ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಕುಡಿಯುವ ನೀರಿನ ಸಂಬಂಧದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆವಹಿಸಿ ಜಿಲ್ಲಾ ಪಂಚಾಯಿತಿ ಸಿಇಒ ಎಸ್‌.ಜೆ.ಸೋಮಶೇಖರ್‌ ಮಾತನಾಡಿದರು.
SHARE
https://chat.whatsapp.com/Jhg5KALiCFpDwME3sTUl7x

CHITRADURGA NEWS | 14 JUNE 2024
ಚಿತ್ರದುರ್ಗ:‌ ಜಿಲ್ಲೆಯಲ್ಲಿ ಕಲುಷಿತ ನೀರು ಸೇವನೆಯಂತಹ ಯಾವುದೇ ಅಹಿತಕರ ಅವಘಡ ಸಂಭವಿಸಿದಂತೆ ಮುಂಜಾಗ್ರತಾ ಕ್ರಮವಾಗಿ ಎಲ್ಲ ಅಗತ್ಯ ಎಚ್ಚರಿಕಾ ಕ್ರಮಗಳನ್ನು ವಹಿಸಬೇಕು. ಯಾವುದೇ ಕಾರಣಕ್ಕೂ ಕಲುಷಿತ ನೀರಿನ ಸೇವನೆಯಿಂದ ಸಾವುಂಟಾಗುವ ಪ್ರಕರಣಗಳು ಜರುಗಬಾರದು ಎಂದು ಜಿಲ್ಲಾ ಪಂಚಾಯಿತಿ ಸಿಇಒ ಎಸ್‌.ಜೆ.ಸೋಮಶೇಖರ್‌ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಇಲ್ಲಿನ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಕುಡಿಯುವ ನೀರಿನ ಸಂಬಂಧದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಗ್ರಾಮ, ಜನವಸತಿ ಪ್ರದೇಶಗಳಲ್ಲಿ ಬರುವ ಕುಡಿಯುವ ನೀರಿನ ಪೂರೈಕೆ ವ್ಯವಸ್ಥೆಯಡಿಯಲ್ಲಿ ಬರುವ ಎಲ್ಲಾ ಪೈಪ್‍ಲೈನ್‍ಗಳನ್ನು ಪ್ರತಿದಿನವೂ ಕಣ್ಗಾವಲು ನಡೆಸಿ, ಯಾವುದಾದರೂ ಪೈಪ್‍ಲೈನ್‍ಗಳು ಹಾನಿಯಾಗಿರುವುದು ಕಂಡುಬಂದರೆ ಕೂಡಲೇ ದುರಸ್ಥಿ ಕಾರ್ಯ ಕೈಗೊಂಡು ಯಾವುದೇ ಕಲುಷಿತ ನೀರು ಕುಡಿಯುವ ನೀರಿನೊಂದಿಗೆ ಸೇರದಂತೆ ಕ್ರಮವಹಿಸಬೇಕು ಎಂದು ಸೂಚನೆ ನೀಡಿದರು.

ಕ್ಲಿಕ್ ಮಾಡಿ ಓದಿ: ರೇಣುಕಸ್ವಾಮಿ ಕೊಲೆ ಕೇಸ್‌ | ತಡರಾತ್ರಿ ನಡೆಯಿತು ಸ್ಥಳ ಮಹಜರು

ನೀರು ಸರಬರಾಜು ವ್ಯವಸ್ಥೆಯಲ್ಲಿ ಬರುವ ಎಲ್ಲಾ ನೀರು ಶೇಖರಣಾ ಘಟಕಗಳನ್ನು ಕಾಲ-ಕಾಲಕ್ಕೆ ಸ್ವಚ್ಛಗೊಳಿಸಿ ಪ್ರತಿ ಹಂತದಲ್ಲಿಯೂ ಕ್ಲೋರಿನೇಷನ್ ಮಾಡಬೇಕು. ಮುಂದಿನ ಒಂದು ವಾರದೊಳಗೆ ಜಿಲ್ಲೆಯ ಎಲ್ಲಾ ಓವರ್ ಹೆಡ್ ಟ್ಯಾಂಕ್‍ಗಳನ್ನು ಸ್ವಚ್ಛಗೊಳಿಸಬೇಕು. ನೀರಿನ ಮೂಲಗಳಾದ ಕೊಳವೆಬಾವಿಗಳ ಸುತ್ತಮುತ್ತಲೂ ಯಾವುದೇ ಕಲುಷಿತ ನೀರು ಅಥವಾ ಚರಂಡಿ ನೀರು ನಿಲ್ಲದಂತೆ ಹಾಗೂ ಕೊಳಚೆ ನೀರು ಸರಾಗವಾಗಿ ಹರಿಯಲು ಸೂಕ್ತ ಚರಂಡಿ ವ್ಯವಸ್ಥೆಯನ್ನು ಕೈಗೊಂಡು ಆ ನೀರಿನ ಮೂಲದ ಸುತ್ತಲೂ ಕಾಂಕ್ರಿಟ್‍ನಿಂದ ಕಟ್ಟೆ ಕಟ್ಟಬೇಕು ಎಂದು ತಿಳಿಸಿದರು.

ಜಿಲ್ಲಾ ಮತ್ತು ತಾಲ್ಲೂಕು ಪ್ರಯೋಗಾಲಯಗಳ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಕುಡಿಯುವ ನೀರಿನ ಮೂಲಗಳ ಗುಣಮಟ್ಟದ ಪರೀಕ್ಷೆಗಳನ್ನು ಮಳೆಗಾಲದ ಮುನ್ನ ಮತ್ತು ಮಳೆಗಾಲದ ನಂತರ ಕಡ್ಡಾಯವಾಗಿ ಹಾಗೂ ಅವಶ್ಯಕವಿದ್ದಾಗ ಪರೀಕ್ಷೆಗಳನ್ನು ಕೈಗೊಳ್ಳಬೇಕು. ಕಲುಷಿತ ಎಂದು ಕಂಡುಬರುವ ನೀರಿನ ಮೂಲಗಳಿಗೆ ಪರ್ಯಾಯವಾಗಿ ಶುದ್ಧ ಕುಡಿಯುವ ನೀರನ್ನು ಒದಗಿಸಲು ಕೂಡಲೇ ಕ್ರಮಕೈಗೊಳ್ಳಬೇಕು ಎಂದು ಸೂಚಿಸಿದರು.

ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಡಿಯಲ್ಲಿ ಸ್ಥಾಪಿಸಲಾಗಿರುವ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಕುಡಿಯುವ ನೀರಿನ ಗುಣಮಟ್ಟ ಪರೀಕ್ಷಾ ಪ್ರಯೋಗಾಲಯಗಳ ಪ್ರಗತಿ ಪರಿಶೀಲನೆಯನ್ನು ಮಾಸಿಕವಾಗಿ ಕೈಗೊಳ್ಳುವಂತೆ ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ತಾಕೀತು ಮಾಡಿದರು.

ಕ್ಲಿಕ್ ಮಾಡಿ ಓದಿ: ರೇಣುಕಾಸ್ವಾಮಿ ಕೊಲೆ ಪ್ರಕರಣ | ಕಾರು ಚಾಲಕ ರವಿ ಪೊಲೀಸರಿಗೆ ಶರಣಾಗತಿ

ಒಂದು ವೇಳೆ ನೀರು ಕಲುಷಿತ ಎಂದು ಕಂಡುಬಂದರೆ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು, ತಾ.ಪಂ ಇಒ ಮತ್ತು ತಾಲ್ಲೂಕು ಆರೋಗ್ಯ ಅಧಿಕಾರಿಗಳ ತಂಡ ಸ್ಥಳ ಪರೀಕ್ಷೆ ನಡೆಸಿ, ಕೂಡಲೇ ಆ ನೀರಿನ ಮೂಲಗಳಿಂದ ಸರಬರಾಜು ಮಾಡುವ ವ್ಯವಸ್ಥೆಯನ್ನು ಸಂಪೂರ್ಣವಾಗಿ ನಿಲ್ಲಿಸಿ, ಪರ್ಯಾಯ ಮೂಲಗಳಿಂದ ಕುಡಿಯುವ ನೀರನ್ನು ಸರಬರಾಜು ಮಾಡಲು ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು.

ಜಿಲ್ಲೆಯಲ್ಲಿ ಕಲುಷಿತ ನೀರಿನ ಸೇವನೆಯ ಅವಘಡಗಳನ್ನು ತಪ್ಪಿಸುವ ನಿಟ್ಟಿನಲ್ಲಿ ವಿವಿಧ ಇಲಾಖೆ ಅಧಿಕಾರಿಗಳು ಸಮನ್ವಯದಿಂದ ಹಾಗೂ ತಂಡವಾಗಿ ಕಾರ್ಯನಿರ್ವಹಿಸುವಂತೆ ಅಧಿಕಾರಿಗಳಿಗೆ ಸಲಹೆ ನೀಡಿದರು.

ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಕೆ.ತಿಮ್ಮಪ್ಪ ಮಾತನಾಡಿ, ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಡಿಯುವ ನೀರಿನ ಸರಬರಾಜು ವಿತರಣೆ ವ್ಯವಸ್ಥೆಯ ಸಂಪೂರ್ಣ ತಪಾಸಣೆ ಹಾಗೂ ಪರಿಶೀಲನೆ ಮಾಡುವುದು ಹಾಗೂ ನೀರು ಕಲುಷಿತಗೊಳ್ಳುವ ಮೂಲಗಳ ಬಿಂದುಗಳನ್ನು ಗುರುತಿಸಬೇಕು. ಗ್ರಾಮ ಪಂಚಾಯಿತಿಗಳು ಬ್ಲೀಚಿಂಗ್ ಪೌಡರ್‍ಗಳು ಸಾಕಷ್ಟು ದಾಸ್ತಾನುಗಳನ್ನು ಇರಿಸಿಕೊಳ್ಳಬೇಕು ಮತ್ತು ಬಳಸುವಿಕೆಯ ವಿಧಾನಗಳಿಗನುಸಾರ ಉಪಯೋಗಿಸಬೇಕು. ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿಗಳು ಮತ್ತು ತಾಲ್ಲೂಕು ಆರೋಗ್ಯಾಧಿಕಾರಿಗಳು ಗ್ರಾಮ ಪಂಚಾಯಿತಿಗಳಲ್ಲಿ ಆಶಾ ಕಾರ್ಯಕರ್ತರು, ಗ್ರಾಮ ಪಂಚಾಯಿತಿಗಳ ಪಂಪ್ ಆಪರೇಟರ್‍ಗಳು, ಗ್ರಾಮಪಂಚಾಯಿತಿ ಸಿಬ್ಬಂದಿಗಳಿಗೆ ಅಗತ್ಯ ತರಬೇತಿ ನೀಡಬೇಕು ಎಂದು ತಿಳಿಸಿದರು.

ಜಿಲ್ಲೆಯ ಜನರಿಗೆ ಶುದ್ಧ ಕುಡಿಯುವ ನೀರು ಒದಗಿಸುವ ಜತೆಗೆ ಕಾಯಿಸಿ ಆರಿಸಿದ ನೀರನ್ನು ಕುಡಿಯುವಂತೆ ಜನರಿಗೆ ತಿಳುವಳಿಕೆ ಮೂಡಿಸಬೇಕು ಎಂದು ಹೇಳಿದರು.

ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ ಸುರಕ್ಷಿತ ಕುಡಿಯುವ ನೀರು ಬಳಕೆ ಕುರಿತಂತೆ ಈಗಾಗಲೇ ಜೂನ್ 11 ರಿಂದ ಸ್ವಚ್ಛತಾ ಅಭಿಯಾನ ಪ್ರಾರಂಭವಾಗಿದ್ದು, ಒಂದು ವಾರಗಳ ಕಾಲ ನಡೆಯುವ ಸ್ವಚ್ಛತಾ ಅಭಿಯಾನವನ್ನು ಅಚ್ಚುಕಟ್ಟಾಗಿ ಆಯೋಜಿಸಬೇಕು ಎಂದು ಜಿ.ಪಂ ಸಿಇಒ ಎಸ್.ಜೆ.ಸೋಮಶೇಖರ್ ಸೂಚನೆ ನೀಡಿದರು.

ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕೈಗೊಂಡ ಸ್ವಚ್ಛತಾ ಅಭಿಯಾನ ಕಾರ್ಯಕ್ರಮದ ಛಾಯಾಚಿತ್ರಗಳೊಂದಿಗೆ ವರದಿಯನ್ನು ಜೂನ್ 21ರೊಳಗೆ ಜಿಲ್ಲಾ ಪಂಚಾಯಿತಿಗೆ ಸಲ್ಲಿಸುವಂತೆ ತಿಳಿಸಿದರು.

ಮಹಾತ್ಮಾ ಗಾಂಧಿ ನರೇಗಾ ಯೋಜನೆಯ ಪ್ರಗತಿ ಪರಿಶೀಲನೆಯನ್ನು ಇದೇ ಸಂದರ್ಭದಲ್ಲಿ ನಡೆಸಲಾಯಿತು. ಉದ್ಯೋಗದಲ್ಲಿ ಮಾನವ ದಿನಗಳ ಸೃಜನೆ, ಸಂಚಿತ ಮತ್ತು ವಾರ್ಷಿಕ ಗುರಿಗೆ ಶೇಕಡವಾರು ಸಾಧನೆ, ಎಚ್‍ಹೆಚ್‍ಜಿ ಶೆಡ್ ಕಾಮಗಾರಿಗಳ ಪ್ರಗತಿ ಪರಿಶೀಲನೆ ನಡೆಸಲಾಯಿತು.

ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಕೆ.ತಿಮ್ಮಪ್ಪ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಕಾರ್ಯಪಾಲಕ ಇಂಜಿನಿಯರ್ ಬಸವನಗೌಡ ಪಾಟೀಲ್, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಚಂದ್ರಶೇಖರ್ ಕಂಬಾಳಿಮಠ್ ಸೇರಿದಂತೆ ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿಗಳು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಸಹಾಯಕ ಕಾರ್ಯಪಾಲಕ ಅಭಿಯಂತರರು ಇದ್ದರು.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

TAGGED:CEODistrict PanchayatEngineerMonitoringPipelineಎಂಜಿನಿಯರ್ಕಣ್ಗಾವಲುಜಿಲ್ಲಾ ಪಂಚಾಯಿತಿಪೈಪ್‌ಲೈನ್ಸಿಇಒ
Share This Article
Facebook Email Print
Previous Article ಗಾಳಿಯಲ್ಲಿ ಹಾರಿಹೋದ ಬಸ್ ಟಿಕೆಟ್‌ | ನಡು ರಸ್ತೆಯಲ್ಲೇ ಮಹಿಳೆಯನ್ನು ಇಳಿಸಿದ ನಿರ್ವಾಹಕ
Next Article ಪೊಲೀಸರಿಗೆ ಶರಣಾದ ಚಿತ್ರದುರ್ಗದ ಜಗ್ಗು, ಅನು ರೇಣುಕಾಸ್ವಾಮಿ ಕೊಲೆ ಪ್ರಕರಣ | ಪೊಲೀಸರಿಗೆ ಶರಣಾದ ಚಿತ್ರದುರ್ಗದ ಜಗ್ಗು, ಅನು
Leave a Comment

Leave a Reply Cancel reply

Your email address will not be published. Required fields are marked *

today bhavishya
Astrology: ದಿನ ಭವಿಷ್ಯ | ಜೂನ್ 29 | ಆಕಸ್ಮಿಕ ಧನ ವ್ಯಯದ ಸೂಚನೆ, ಆಸ್ತಿ ವಿಷಯಗಳಲ್ಲಿ ವಿವಾದಗಳು
Dina Bhavishya
ಸೋಲು ಗೆಲುವಿಗಿಂತ ಚುನಾವಣೆಯಲ್ಲಿ ಸ್ಪರ್ಧಿಸುವುದು ಮುಖ್ಯ | ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷ ಮಂಜುನಾಥ್‍ ಗೌಡ
ಮುಖ್ಯ ಸುದ್ದಿ
Sadguru Pradeep participate hosadurga bandh
ಹೊಸದುರ್ಗ ಬಂದ್‌ | ಇಂದು ಅಂತ್ಯವಲ್ಲ, ಆರಂಭ | ಸದ್ಗುರು ಪ್ರದೀಪ್‌
ಹೊಸದುರ್ಗ
ಹೊಸದುರ್ಗ ಸ್ಥಿತಿ ಸಮುದ್ರದ ನೆಂಟಸ್ಥನ, ಉಪ್ಪಿಗೆ ಬರ | ಕೆ.ಎಸ್.ನವೀನ್
ಹೊಸದುರ್ಗ
© Chitradurga News. Ruby Design Company. All Rights Reserved.

Chitradurga News App

Install
Welcome Back!

Sign in to your account

Username or Email Address
Password

Lost your password?

Not a member? Sign Up