ಮುಖ್ಯ ಸುದ್ದಿ
ZP CEO Somashekhar: ಬೀದಿನಾಯಿಗಳ ಸಂತಾನ ನಿಯಂತ್ರಣ ಕ್ರಮಕೈಗೊಳ್ಳಿ | ಜಿಪಂ ಸಿಇಓ ಸೋಮಶೇಖರ್


CHITRADURGA NEWS | 16 OCTOBER 2024
ಚಿತ್ರದುರ್ಗ: ನಗರ ಹಾಗೂ ಪಟ್ಟಣ ಪಂಚಾಯಿತಿ ಪ್ರದೇಶಗಳಲ್ಲಿ ಬೀದಿನಾಯಿಗಳ ಸಂಖ್ಯೆ ಹೆಚ್ಚಾಗಿದೆ. ಮುಖ್ಯ ಬೀದಿಗಳಲ್ಲೇ ರಾತ್ರಿ ವೇಳೆ ಜನರ ಮೇಲೆ ಬೀದಿನಾಯಿಗಳು ಆಕ್ರಮಣ ಮಾಡಿದ ಘಟನೆಗಳು ವರದಿಯಾಗಿವೆ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಸ್.ಜೆ.ಸೋಮಶೇಖರ್ (ZP CEO Somashekhar) ತಿಳಿಸಿದ್ದಾರೆ.
ಇದನ್ನೂ ಓದಿ: ಅ.17 ರಂದು ವಾಲ್ಮೀಕಿ ಜಯಂತಿ | ಸಿಎಂ ಸಿದ್ದರಾಮಯ್ಯ ಭಾಗೀ
ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಈ ವಿಚಾರದ ಬಗ್ಗೆ ಗಮನ ಸೆಳೆದ ಅವರು, ನಗರಸಭೆ ಹಾಗೂ ಪಶು ಇಲಾಖೆಯಿಂದ ಬೀದಿನಾಯಿಗಳ ಸಂತಾನ ನಿಯಂತ್ರಣಕ್ಕೆ ಕ್ರಮಕೈಗೊಳ್ಳುವಂತೆ ಸೂಚನೆ ನೀಡಿದರು.
ಇದನ್ನೂ ಓದಿ: ಭದ್ರಾದಿಂದ ಕೆರೆಗಳಿಗೆ ನೀರು ತುಂಬಿಸಲು 105 ಕೋಟಿ ವೆಚ್ಚದ ಮೋಟಾರ್ | ಶಾಸಕ ಎಂ.ಚಂದ್ರಪ್ಪ
ಅ.28 ರವರೆಗೆ ನಡೆಸುತ್ತಿರುವ ಉಚಿತ ರೇಬೀಸ್ ನಿರೋಧಕ ಲಸಿಕಾ ಅಭಿಯಾನದಲ್ಲಿ ಹೆಚ್ಚಿನ ಸಂಖ್ಯೆಯ ಸಾಕು ಪ್ರಾಣಿಗಳಾದ ನಾಯಿ, ಬೆಕ್ಕುಗಳಿಗೆ ಲಸಿಕೆ ನೀಡಬೇಕು ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಕೂಡಾ ಅಧಿಕಾರಿಗಳಿಗೆ ತಿಳಿಸಿದ್ದಾರೆ.
ಇದನ್ನೂ ಓದಿ: ಚಿತ್ರದುರ್ಗ ಮಾರುಕಟ್ಟೆ ಧಾರಣೆ | ಅಕ್ಟೋಬರ್ 15 | ಇಂದಿನ ಹತ್ತಿ ರೇಟ್

