By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Reading: ತಾಲೂಕು ಮಟ್ಟದ ಎತ್ತಿನಗಾಡಿ ಓಟದ ಸ್ಪರ್ಧೆ | ಶಾಸಕ ಟಿ.ರಘುಮೂರ್ತಿ ಚಾಲನೆ
Share
Font ResizerAa
Chitradurga News-Kannada NewsChitradurga News-Kannada News
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2022 Foxiz News Network. Ruby Design Company. All Rights Reserved.

Home » ತಾಲೂಕು ಮಟ್ಟದ ಎತ್ತಿನಗಾಡಿ ಓಟದ ಸ್ಪರ್ಧೆ | ಶಾಸಕ ಟಿ.ರಘುಮೂರ್ತಿ ಚಾಲನೆ

ಮುಖ್ಯ ಸುದ್ದಿ

ತಾಲೂಕು ಮಟ್ಟದ ಎತ್ತಿನಗಾಡಿ ಓಟದ ಸ್ಪರ್ಧೆ | ಶಾಸಕ ಟಿ.ರಘುಮೂರ್ತಿ ಚಾಲನೆ

News Desk Chitradurga News
Last updated: 1 April 2025 07:18
News Desk Chitradurga News
3 months ago
Share
ತಾಲೂಕು ಮಟ್ಟದ ಎತ್ತಿನಗಾಡಿ ಓಟದ ಸ್ಪರ್ಧೆ | ಶಾಸಕ ಟಿ.ರಘುಮೂರ್ತಿ ಚಾಲನೆ
SHARE
https://chat.whatsapp.com/Jhg5KALiCFpDwME3sTUl7x

CHITRADURG NEWS | APRIL 01 2025

ಚಿತ್ರದುರ್ಗ: ತಾಲೂಕು ತುರುವನೂರು ಹೋಬಳಿಯ ಹುಣಸೇಕಟ್ಟೆ ಗ್ರಾಮದಲ್ಲಿ ನಡೆದ ತಾಲೂಕು ಮಟ್ಟದ ಎತ್ತಿನಗಾಡಿ ಓಟದ ಸ್ಪರ್ಧೆಗೆ ಶಾಸಕ ಟಿ. ರಘುಮೂರ್ತಿ ಚಾಲನೆ ನೀಡಿದರು.

Also Read: ಹಿಂದೂಗಳ ಹೊಸ ವರ್ಷ ಯುಗಾದಿ | ಸಡಗರ ಸಂಭ್ರಮದ ಸಮ್ಮಿಲನ

ನಂತರ ಮಾತನಾಡಿದ ಅವರು, ಆಧುನೀಕರಣದ ಭರಾಟೆಯಲ್ಲಿ ಗ್ರಾಮೀಣ ಸೊಗಡು ಕಣ್ಮರೆಯಾಗುತ್ತಿದೆ. ಗ್ರಾಮೀಣ ಕ್ರೀಡೆಗಳು ಅಪರೂಪವಾಗಿವೆ. ಇಂತಹ ಸನ್ನಿವೇಶದಲ್ಲಿ ಯುಗಾದಿ ಹಬ್ಬದ ಸಂಭ್ರಮ ಇಮ್ಮಡಿಯಾಗುವಂತೆ ಎತ್ತಿನ ಗಾಡಿ ಓಟದ ಸ್ಪರ್ಧೆ ಆಯೋಜಿಸಿರುವುದು ಅತ್ಯಂತ ಸಂತಸದ ವಿಚಾರ ಎಂದು ಚಳ್ಳಕೆರೆ ಶಾಸಕ ಹಾಗೂ ಸಣ್ಣ ಕೈಗಾರಿಕೆ ಅಭಿವೃದ್ಧಿ ನಿಗಮದ ಅಧ್ಯಕ್ಷ ಟಿ.ರಘುಮೂರ್ತಿ ಹೇಳಿದರು.

ಎಲ್ಲ ರೈತಾಪಿ ಕೆಲಸಗಳನ್ನು ಮುಗಿಸಿದ ಈ ಸಂದರ್ಭದಲ್ಲಿ ರೈತರು ಎತ್ತಿನ ಗಾಡಿ ಓಟದ ಸ್ಪರ್ಧೆ ಆಯೋಜಿಸುವ ಮೂಲಕ ತಾವು ಮನರಂಜನೆ ಪಡೆಯುವ ಮೂಲಕ ಎತ್ತುಗಳಿಗೂ ಉಲ್ಲಾಸ ಉಂಟು ಮಾಡುತ್ತಾರೆ. ರೈತರ ಹೆಗಲಿಗೆ ಹೆಗಲಾಗಿ ದುಡಿಯುವ ಎತ್ತುಗಳನ್ನು ಪೂಜಿಸುವುದು ರೈತ ಸಂಸ್ಕೃತಿಯ ಪ್ರತೀಕ ಎಂದು ಬಣ್ಣಿಸಿದರು.

ಚಳ್ಳಕೆರೆ ವಿಧಾನಸಭಾ ಕ್ಷೇತ್ರ ಬುಡಕಟ್ಟು ಸಂಸ್ಕೃತಿಗಳ ತವರು. ಬುಡಕಟ್ಟು ಸಮುದಾಯಗಳಿಗೆ ಸಂಬAಧಿಸಿದ ಅನೇಕ ಆಚರಣೆಗಳು ಇಲ್ಲಿ ನಿರಂತರವಾಗಿ ನಡೆಯುತ್ತಾ ಬಂದಿವೆ. ಅದೇ ರೀತಿಯಲ್ಲಿ ರೈತರಿಗೆ ಎತ್ತು, ಗಾಡಿ ದೇವರಿದ್ದಂತೆ. ಅವುಗಳು ಮನೆಯಲ್ಲಿದ್ದರೆ ಲಕ್ಷ್ಮೀ ಇದ್ದಂತೆ ಎಂಬ ನಂಬಿಕೆ ಇದೆ. ಈ ಕಾರಣಕ್ಕೆ ಎಲ್ಲ ರೈತರ ಮನೆಗಳಲ್ಲೂ ಎತ್ತು ಮತ್ತು ಗಾಡಿ ಇರುತ್ತವೆ. ಇದರಿಂದ ಕೃಷಿ ಸಾಕಷ್ಟು ಸುಲಭವಾಗುತ್ತದೆ ಎಂದರು.

Also Read: 2 ಅಂಗಡಿಗೆ ಆಕಸ್ಮಿಕ ಬೆಂಕಿ | ಲಕ್ಷಾಂತರ ಮೌಲ್ಯದ ವಸ್ತುಗಳು ಭಸ್ಮ

ತಾಲೂಕಿನ ಹುಣಸೆಕಟ್ಟೆ ಗ್ರಾಮದಲ್ಲಿ ಯಾವುದೇ ಕಾರ್ಯಕ್ರಮಗಳು ನಡೆದರೂ, ಒಟ್ಟಾಗಿ ಆಚರಣೆ ಮಾಡುವ ಪದ್ಧತಿ ಮೊದಲಿನಿಂದಲೂ ನಡೆದು ಬಂದಿದೆ. ಇಲ್ಲಿ ನಡೆಯುವ ಕಾರ್ಯಕ್ರಮಗಳನ್ನು ಅಚ್ಚುಕಟ್ಟಾಗಿ ಆಯೋಜನೆ ಮಾಡಲಾಗುತ್ತದೆ ಎಂದು ರೈತರನ್ನು ಶ್ಲಾಘಿಸಿದರು.

ಎತ್ತಿನಗಾಡಿ ಓಟದ ಸ್ಪರ್ಧೆ ಸುಲಭವಲ್ಲ. ಇದರಲ್ಲಿ ಭಾಗವಹಿಸಲು ಎದೆಗಾರಿಕೆ ಬೇಕು. ಎತ್ತಿನ ಗಾಡಿ ಓಡಿಸುವುದು ಸುಲಭವಲ್ಲ, ಇದೊಂದು ಸಾಹಸ. ಪರಿಣತಿ ಬೇಕಾಗುತ್ತದೆ. ತಮ್ಮದೇ ಎತ್ತುಗಳ ಬಂಡಿಯ ಮೂಲಕ ಸ್ಪರ್ಧಾ ಸ್ಥಳಕ್ಕೆ ತೆರಳಿ ಅಲ್ಲಿ ಓಡಿ ಗೆಲುವು ಪಡೆಯುವ ಮೂಲಕ ಹತ್ತೂರುಗಳಲ್ಲಿ ಹೆಸರು ಪಡೆಯುತ್ತಿದ್ದ ಕಾಲವಿತ್ತು. ಇವತ್ತಿಗೂ ಬಹಳಷ್ಟು ರೈತರು ಬರೀ ಕೃಷಿ ಚಟುವಟಿಕೆ ಮಾತ್ರವಲ್ಲದೆ, ಎತ್ತಿನಗಾಡಿ ಓಡಿಸಿ ಗೆಲುವು ಸಾಧಿಸುವ ಮೂಲಕ ಸಾಧನೆ ಮಾಡಿ ಜನರ ಮೆಚ್ಚುಗೆಗೆ ಪಾತ್ರರಾಗುತ್ತಿದ್ದಾರೆ ಎಂದು ಸ್ಮರಿಸಿದರು.

ಗ್ರಾಮೀಣ ಭಾಗದಲ್ಲಿ ಹಿಂದೆ ನಡೆಯುತ್ತಿದ್ದ ಸಾಕಷ್ಟು ಬದಲಾವಣೆಗಳಾಗಿವೆ. ರೈತರು ಎತ್ತುಗಳನ್ನು ಕಟ್ಟುವುದು ಕಡಿಮೆಯಾಗಿದೆ. ಇದೆಲ್ಲದರ ನಡುವೆಯೂ 30 ಜೊತೆ ಎತ್ತು, ಗಾಡಿಗಳು ಸ್ಪರ್ಧೆಯಲ್ಲಿ ಭಾಗವಹಿಸಿರುವುದು ಸಂತಸದ ವಿಚಾರ ಎಂದು ಶಾಸಕರು ತಿಳಿಸಿದರು.

Also Read: ಯುಗಾದಿ ಅಮವಾಸ್ಯೆಯಂದೇ ಭೀಕರ ಅಪಘಾತ | ಮೂವರ ದುರ್ಮರಣ

ಕಾರ್ಯಕ್ರಮದಲ್ಲಿ ಕೂನಬೇವು ಗ್ರಾಪಂ ಅಧ್ಯಕ್ಷೆ ಪದ್ಮಾವತಿ, ಜಿಲ್ಲಾ ಗ್ಯಾರೆಂಟಿ ಸಮಿತಿ ಉಪಾಧ್ಯಕಷ ಜಿ.ಟಿ.ಬಾಬುರೆಡ್ಡಿ, ಗ್ರಾಪಂ ಸದಸ್ಯರಾದ ಕೆ.ನಿಂಗಮ್ಮ, ಎಸ್.ಪಾಲಯ್ಯ, ಕೆ.ಟಿ.ಯಶೋಧ, ಆರ್ಚನಾ, ಮುಖಂಡರಾದ ಗುರುಮೂರ್ತಿ, ಹೆಚ್.ಕಾಂತರಾಜ್ , ಮಾರುತಿ, ಮಹಂತೇಶ್, ಏಕಾಂತ ಇತರರಿದ್ದರು.

ತುಂಗಭದ್ರಾ ಹಿನ್ನೀರಿನಿಂದ ಚಳ್ಳಕೆರೆ, ಕೂಡ್ಲಿಗಿ, ಮೊಳಕಾಲ್ಮೂರು, ಪಾವಗಡ ಕ್ಷೇತ್ರಕ್ಕೆ ಕುಡಿಯುವ ನೀರು ಒದಗಿಸುವ ಯೋಜನೆ ಪೂರ್ಣಗೊಂಡಿದೆ. ಈಗ ಟ್ರಯಲ್‌ರನ್ ಮಾಡಲಾಗುತ್ತಿದೆ. ಈ ಯೋಜನೆಯಲ್ಲಿ ತುರುವನೂರು ಹೋಬಳಿಗೂ ಪ್ರತಿ ಮನೆಗೂ ಶುದ್ಧ ಕುಡಿಯುವ ನೀರು ಬರಲಿದೆ ಎಂದು ಶಾಸಕ ಟಿ.ರಘುಮೂರ್ತಿ ತಿಳಿಸಿದರು.
ಇನ್ನೂ ಭದ್ರಾ ಮೇಲ್ದಂಡೆ ಯೋಜನೆಗೆ ತುರುವನೂರು ಹೋಬಳಿಯ 9 ಕೆರೆಗಳು ಸೇರಿದ್ದು, ಚಳ್ಳಕೆರೆ ವಿಧಾನಸಭಾ ಕ್ಷೇತ್ರದ 51 ಕೆರೆಗಳು ಭರ್ತಿಯಾಗಲಿವೆ. ರೈತರು ಆತ್ಮವಿಶ್ವಾಸ ಕಳೆದುಕೊಳ್ಳುವುದು ಬೇಡ, ಭದ್ರಾ ನೀರು ನೂರಕ್ಕೆ ನೂರರಷ್ಟು ಹರಿಯುತ್ತದೆ ಎಂದು ಭರವಸೆ ವ್ಯಕ್ತಪಡಿಸಿದರು.
ಸರ್ಕಾರದ ಯೋಜನೆಯಿಂದ ಹುಣಸೇಕಟ್ಟೆ ಗ್ರಾಮಕ್ಕೆ 25 ಕ್ಕೂ ಹೆಚ್ಚು ಹಸುಗಳು ಕೊಡಿಸಿದ್ದೆ. ಎಲ್ಲಾ ಹಸುಗಳು ಕರು ಹಾಕಿದ್ದು ಉತ್ತಮವಾಗಿ ಹಾಲು ನೀಡುತ್ತಿವೆ ಎನ್ನುವ ವಿಚಾರ ಕೇಳಿ ಸಂತಸವಾಗಿದೆ. ಮುಂದಿನ ದಿನಗಳಲ್ಲಿ ಹೈನುಗಾರಿಕೆಗೂ ಹಂತ ಹಂತವಾಗಿ ಪ್ರೋತ್ಸಾಹ ನೀಡುತ್ತೇನೆ 
| ಟಿ.ರಘುಮೂರ್ತಿ, ಚಳ್ಳಕೆರೆ ಶಾಸಕರು.

ಕಳೆದ ಐದು ವರ್ಷಗಳಿಂದ ಎತ್ತಿನಗಾಡಿ ಸ್ಪರ್ಧೆ ಆಯೋಜಿಸುತ್ತಿದ್ದು, ಉತ್ತಮ ಪ್ರತಿಕ್ರಿಯೆ ಬರುತ್ತಿದೆ. ಗೆದ್ದವರಿಗೆ ಎತ್ತಿನ ಗಾಡಿಯನ್ನೇ ಮೊದಲ ಬಹುಮಾನವಾಗಿ ಕೊಡಲಾಗುತ್ತಿದೆ. ಈ ಮೂಲಕ ಗ್ರಾಮೀಣ ಕ್ರೀಡೆಗಳಿಗೆ ಉತ್ತೇಜನ ನೀಡುತ್ತಿದ್ದೇವೆ.

ಪಿ.ವಿ.ಅರುಣ್‌ಕುಮಾರ್, ಅಹೋಬಲ ಟಿವಿಎಸ್ ಮಾಲಿಕರು.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

TAGGED:bullock cart raceChitradurgaChitradurga newsChitradurga UpdatesdrivingKannada Latest NewsKannada NewsMLA T. Raghumurthytaluk levelTurvanurಎತ್ತಿನಗಾಡಿ ಓಟದ ಸ್ಪರ್ಧೆಕನ್ನಡ ನ್ಯೂಸ್ಕನ್ನಡ ಲೇಟೆಸ್ಟ್ ನ್ಯೂಸ್ಕನ್ನಡ ಸುದ್ದಿಚಾಲನೆಚಿತ್ರದುರ್ಗಚಿತ್ರದುರ್ಗ ನ್ಯೂಸ್ತಾಲೂಕು ಮಟ್ಟತುರುವನೂರುಶಾಸಕ ಟಿ.ರಘುಮೂರ್ತಿ
Share This Article
Facebook Email Print
Previous Article Eyes ಬೇಸಿಗೆಯಲ್ಲಿ ಕಣ್ಣುಗಳು ಸೋಂಕಿಗೊಳಗಾಗುವುದನ್ನು ತಪ್ಪಿಸಲು ವೈದ್ಯರು ಹೇಳಿದ ಈ ಸಲಹೆ ಪಾಲಿಸಿರಿ
Next Article today bhavishya Astrology: ದಿನ ಭವಿಷ್ಯ | ಏಪ್ರಿಲ್ 01 | ಉದ್ಯೋಗದಲ್ಲಿ ಅನುಕೂಲಕರ ವಾತಾವರಣ, ಆರೋಗ್ಯದಲ್ಲಿ ಎಚ್ಚರ
Leave a Comment

Leave a Reply Cancel reply

Your email address will not be published. Required fields are marked *

Sadguru Pradeep participate hosadurga bandh
ಹೊಸದುರ್ಗ ಬಂದ್‌ | ಇಂದು ಅಂತ್ಯವಲ್ಲ, ಆರಂಭ | ಸದ್ಗುರು ಪ್ರದೀಪ್‌
ಹೊಸದುರ್ಗ
ಹೊಸದುರ್ಗ ಸ್ಥಿತಿ ಸಮುದ್ರದ ನೆಂಟಸ್ಥನ, ಉಪ್ಪಿಗೆ ಬರ | ಕೆ.ಎಸ್.ನವೀನ್
ಹೊಸದುರ್ಗ
ಹೊಸದುರ್ಗ ಬಂದ್ | ನೀರಿಗೆ ಅಡ್ಡಿ ಕಿಡಿಗೇಡಿ ಕೃತ್ಯ | ಎಸ್.ಲಿಂಗಮೂರ್ತಿ
ಹೊಸದುರ್ಗ
ಹೊಸದುರ್ಗ ಬಂದ್ | ಶಾಸಕ ಬಿ.ಜಿ.ಗೋವಿಂದಪ್ಪ ನೇತೃತ್ವದಲ್ಲಿ ಹೋರಾಟ
ಹೊಸದುರ್ಗ
© Chitradurga News. Ruby Design Company. All Rights Reserved.

Chitradurga News App

Install
Welcome Back!

Sign in to your account

Username or Email Address
Password

Lost your password?

Not a member? Sign Up