Connect with us

Accident: ಕಾರು ಅಪಘಾತ | ಸರ್ಕಾರಿ ಶಾಲಾ ಶಿಕ್ಷಕರ ಸಂಘದ ತಾಲೂಕು ಅಧ್ಯಕ್ಷ ಮೃತ

car accident

ಕ್ರೈಂ ಸುದ್ದಿ

Accident: ಕಾರು ಅಪಘಾತ | ಸರ್ಕಾರಿ ಶಾಲಾ ಶಿಕ್ಷಕರ ಸಂಘದ ತಾಲೂಕು ಅಧ್ಯಕ್ಷ ಮೃತ

CHITRADURGA NEWS | 03 OCTOBER 2024

ಚಿತ್ರದುರ್ಗ: ಲಾರಿಗೆ ಹಿಂಬದಿಯಿಂದ ವೇಗವಾಗಿ ಕಾರು ಡಿಕ್ಕಿಯಾಗಿ (Accident) ಕಾರಿನಲ್ಲಿದ್ದ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಡೆದಿದೆ.

ಹಿರಿಯೂರು ತಾಲೂಕು ಕೆ.ಆರ್.ಹಳ್ಳಿ ಗೇಟ್ ಬಳಿ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಅಪಘಾತ ನಡೆದಿದದ್ದು, ಕಾರಿನಲ್ಲಿದ್ದ ಮೂರು ಜನರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ. ಅಪಘಾತದ ರಭಸಕ್ಕೆ ಕಾರಿನ ಮುಂಭಾಗ ನಜ್ಜುಗುಜ್ಜಾಗಿದೆ.

ಇದನ್ನೂ ಓದಿ: ಬೆಸ್ಕಾಂ ಮಹತ್ವದ ಸೂಚನೆ | ಅಕ್ಟೋಬರ್ 4 ರಿಂದ 6 ರವರೆಗೆ ಬಿಲ್ ಪಾವತಿಸುವ ಮುನ್ನಾ ಈ ಸುದ್ದಿ ಓದಿ

ಮೃತರನ್ನು ಚನ್ನಪಟ್ಟಣ ಮೂಲದ ಚಂದ್ರಶೇಖರ್(45) ಎಂದು ಗುರುತಿಸಲಾಗಿದೆ. ತನ್ನ ಪತ್ನಿ ಹಾಗೂ ಇಬ್ಬರು ಮಕ್ಕಳೊಂದಿಗೆ ಚನ್ನಪಟ್ಟಣದಿಂದ ದಾವಣಗೆರೆಗೆ ತೆರಳುತ್ತಿದ್ದಾಗ ಈ ದುರ್ಘಟನೆ ನಡೆದಿದೆ.

ಇದನ್ನೂ ಓದಿ: 2027ಕ್ಕೆ ಚಿತ್ರದುರ್ಗ-ತುಮಕೂರು ನೇರ ರೈಲು ಮಾರ್ಗ ಪೂರ್ಣ | ಪ್ರಧಾನಿ ನರೇಂದ್ರ ಮೋದಿಯಿಂದ ಉದ್ಘಾಟನೆ

ಮೃತ ಚಂದ್ರಶೇಖರ್ ಚನ್ನಪಟ್ಟಣ ತಾಲೂಕು ಸರ್ಕಾರಿ ಸರ್ಕಾರಿ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷರಾಗಿದ್ದರು ಎನ್ನಲಾಗಿದೆ.

ಮೃತ ಚಂದ್ರಶೇಖರ್ ಪುತ್ರನಿಗೆ ದಾವಣಗೆರೆಯಲ್ಲಿ ಮೆಡಿಕಲ್ ಕಾಲೇಜಿಗೆ ಸೇರಿಸಲು ಕುಟುಂಬ ಸಮೇತ ತೆರಳುತ್ತಿದ್ದರು. ಘಟನೆಯಲ್ಲಿ ಮಗ ಮತ್ತು ಪತ್ನಿ ಗಾಯಗೊಂಡಿದ್ದು, ಹಿರಿಯೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಇದನ್ನೂ ಓದಿ: ಭದ್ರಾ ಮೇಲ್ದಂಡೆ ಯೋಜನೆಗೆ ಒಂದೂವರೆ ತಿಂಗಳಲ್ಲಿ ಅನುದಾನ | ಸಚಿವ ವಿ.ಸೋಮಣ್ಣ ಭರವಸೆ

ಘಟನಾ ಸ್ಥಳಕ್ಕೆ ಹಿರಿಯೂರು ಗ್ರಾಮಾಂತರ ಠಾಣೆ ಪೊಲೀಸರು ತೆರಳಿ ಪರಿಶೀಲನೆ ನಡೆಸಿದ್ದಾರೆ.

Click to comment

Leave a Reply

Your email address will not be published. Required fields are marked *

More in ಕ್ರೈಂ ಸುದ್ದಿ

To Top
Exit mobile version