CHITRADURGA NEWS | 30 MAY 2025
ಚಿತ್ರದುರ್ಗ: ತಮಿಳಿನಿಂದ ಕನ್ನಡ ಹುಟ್ಟಿದೆಯೆಂದು ವಿವಾದಾತ್ಮಕವಾಗಿ ಮಾತನಾಡಿರುವ ನಟ ಕಮಲಹಾಸನ್ ನಟಿಸಿರುವ ಥಗ್ಲೈಫ್ ಚಿತ್ರವನ್ನು ಕರ್ನಾಟಕದಲ್ಲಿ ಬಿಡುಗಡೆಗೊಳಿಸಬಾರದೆಂದು ಕರ್ನಾಟಕ ರಕ್ಷಣಾ ವೇದಿಕೆ ಟಿ.ಎ.ನಾರಾಯಣಗೌಡ ಬಣದ ಕಾರ್ಯಕರ್ತರು ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
Also Read: ಪೌರ ಕಾರ್ಮಿಕರ ವಿವಿಧ ಬೇಡಿಕೆ ಈಡೇರಿಸುವಂತೆ ರಾಜ್ಯ ಸರ್ಕಾರಕ್ಕೆ ಜಿ.ಹೆಚ್.ತಿಪ್ಪಾರೆಡ್ಡಿ ಒತ್ತಾಯ

ಕನ್ನಡ ಭಾಷೆಗೆ ಎರಡು ಸಾವಿರ ವರ್ಷಗಳ ಇತಿಹಾಸವಿದೆ. ಎಂಟು ಜ್ಞಾನಪೀಠ ಪ್ರಶಸ್ತಿಗಳು ಸಿಕ್ಕಿವೆ ಎಂಬ ಸಾಮಾನ್ಯ ಜ್ಞಾನವಿಲ್ಲದ ನಟ ಕಮಲಹಾಸನ್ ತಮಿಳಿನಿಂದ ಕನ್ನಡ ಹುಟ್ಟಿದೆ ಎಂದು ಹೇಳಿ ಕನ್ನಡಿಗರ ಭಾವನೆಗಳಿಗೆ ಧಕ್ಕೆ ತಂದಿರುವುದು ಸರಿಯಲ್ಲ.
ಕೂಡಲೆ ಕಮಲಹಾಸನ್ ಕನ್ನಡಿಗರ ಕ್ಷಮೆ ಕೇಳಬೇಕು. ಇಲ್ಲದಿದ್ದರೆ ಮುಂದಿನ ತಿಂಗಳು ಐದನೆ ತಾರೀಖಿನಂದು ರಾಜ್ಯದಲ್ಲಿ ಬಿಡುಗಡೆಗೆ ಸಿದ್ದಗೊಂಡಿರುವ ಥಗ್ಲೈಫ್ ಕನ್ನಡ ಚಿತ್ರ ಪ್ರದರ್ಶನಕ್ಕೆ ಅವಕಾಶ ನೀಡುವುದಿಲ್ಲವೆಂದು ಎಚ್ಚರಿಸಿದರು.
Also Read: ದುಬೈನಲ್ಲಿ ಸುಜ್ಞಾನ-ಸಂಗಮ ಕಾರ್ಯಕ್ರಮ | ಭಕ್ತರೊಂದಿಗೆ ತೆರಳಿದ ಶಾಂತವೀರ ಶ್ರೀಗಳು
ಪ್ರತಿಭಟನೆಯಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷ ಟಿ.ರಮೇಶ್, ಪ್ರಧಾನ ಕಾರ್ಯದರ್ಶಿ ವಿಜಯಕುಮಾರ್, ತಾಲ್ಲೂಕು ಅಧ್ಯಕ್ಷ ರಾಜಪ್ಪ ಜಿ. ಪ್ರಧಾನ ಸಂಚಾಲಕ ಎಸ್.ಬಿ.ಗಣೇಶ್, ಉಪಾಧ್ಯಕ್ಷ ಆರ್.ಬಿ.ಲಕ್ಷ್ಮಣ, ತಾಲ್ಲೂಕು ಪ್ರಧಾನ ಕಾರ್ಯದರ್ಶಿ ನೀಲಕಂಠ, ಘನಶ್ಯಾಮ್, ಪ್ರಸಾದ್ಮಲ್ಲ, ರಮೇಶ್, ರಾಮು, ಅನಿಲ್, ರಾಮಕೃಷ್ಣಪ್ಪ, ದಾದಾಪೀರ್, ಬಸವರಾಜ್, ಜಾಫರ್, ಜಾಕೀರ್, ಚಂದ್ರಕಲಾ, ದ್ರಾಕ್ಷಾಯಿಣಿ, ಮಂಜುಳ, ಸುಮ, ಅಂಬಿಕ, ಮನು, ಮಹದೇವಯ್ಯ ಪಾಲ್ಗೊಂಡಿದ್ದರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail
chitradurganews23@gmail.com
» Whatsapp Number
