By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    suspended
    ಚುನಾವಣಾ ಕರ್ತವ್ಯ ಲೋಪ | ಶಿಕ್ಷಕಿ ಅಮಾನತು ಮಾಡಿ ಡಿಸಿ ವೆಂಕಟೇಶ್ ಆದೇಶ 
    34 minutes ago
    ನವೋದಯ ವಿದ್ಯಾಲಯ
    ನವೋದಯ ವಿದ್ಯಾಲಯದಲ್ಲಿ ಪ್ರಥಮ ಪಿಯು ವಿಜ್ಞಾನ ವಿಭಾಗದ ಪ್ರವೇಶ | ಅರ್ಜಿ ಆಹ್ವಾನ
    1 hour ago
    ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಮಾತನಾಡಿದರು
    ಜೂನ್ 21 ರಂದು ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಯಶಸ್ವಿಗೊಳಿಸಿ | ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ
    1 hour ago
    ಅರ್ಜಿ ಅಹ್ವಾನ
    ನೇಕಾರ ಸಮ್ಮಾನ್ ಯೋಜನೆ | ಅರ್ಜಿ ಆಹ್ವಾನ
    4 hours ago
    ಬಿ.ಕೆ.ಬಸವರಾಜ
    ಸರ್ಕಾರಿ ಕಲಾ ಕಾಲೇಜು ಸಹ ಪ್ರಾಧ್ಯಾಪಕ ಬಸವರಾಜ್ ಗೆ PHD 
    5 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    Hosadurga police work
    INSTAGRAM, FECEBOOK ಪರಿಚಯ | ಲೈಂಗಿಕ ದುರ್ಬಳಕೆ ವಂಚನೆ ಮಾಡುತ್ತಿದ್ದ ಆರೋಪಿ ಬಂಧನ | ಚಿನ್ನಾಭರಣ ವಶಕ್ಕೆ
    4 days ago
    ಚಿತ್ರದುರ್ಗ ಅಪರಾಧ
    ಜಾನುಕೊಂಡ ಬಳಿ ಭೀಕರ ಅಪಘಾತ | ಇಬ್ಬರು ಕುರಿಗಾಯಿಗಳು, 14 ಕುರಿ ಧಾರುಣ ಸಾವು
    2 weeks ago
    Accident near molakalmuru
    ಮೊಳಕಾಲ್ಮೂರು ಬಳಿ ಮತ್ತೊಂದು ಅಪಘಾತ | ಚಳ್ಳಕೆರೆಯ 5 ಜನ ಸಾವು | ಒಂದೇ ದಿನದ ಅಂತರದಲ್ಲಿ ಜಿಲ್ಲೆಯಲ್ಲಿ ಹತ್ತು ಸಾವು
    3 weeks ago
    ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ | 5 ಜನರ ದುರ್ಮರಣ
    3 weeks ago
    Accident between bike and car
    ಬೈಕ್‌ – ಕಾರು ನಡುವೆ ಅಪಘಾತ | ಸ್ಥಳದಲ್ಲೇ ಇಬ್ಬರು ಮೃತ
    3 weeks ago
  • ತಾಲೂಕು
    ತಾಲೂಕುShow More
    ಸುಜ್ಞಾನ ಸಂಗಮ, ಜೈನ ಸಮಾಜ ಬಾಂಧವರಿಗೆ ಸನ್ಮಾನ ಸಮಾರಂಭ
    ಸಾತ್ವಿಕತೆ ಇರುವಲ್ಲಿ ಸಹಬಾಳ್ವೆ, ಸೌಹಾರ್ದತೆ ಇರುತ್ತದೆ | ಶಾಂತವೀರ ಶ್ರೀ 
    5 days ago
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ 
    2 weeks ago
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    2 weeks ago
    ವಾಲಿಬಾಲ್ ಹೊನಲು ಬೆಳಕಿನ ಪಂದ್ಯಾವಳಿ
    ಸೋಲು ಮುಂದಿನ ಗೆಲುವಿಗೆ ಪ್ರೇರಣೆ | ಸಾಣೇಹಳ್ಳಿ ಶ್ರೀ 
    3 weeks ago
    ರಂಗಶಾಲಾ ನಾಟಕೋತ್ಸವ
    ಸಾಣೇಹಳ್ಳಿಯಲ್ಲಿ ಯಶಸ್ವಿಯಾಗಿ ನಡೆದ ರಂಗಶಾಲಾ ನಾಟಕೋತ್ಸವ
    4 weeks ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    1 week ago
    ARECANUT RATE
    ಅಡಿಕೆ ಧಾರಣೆ | 6 ಜೂನ್‌ | ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ ಹಾಗೂ ರಾಜ್ಯದ ಅಡಿಕೆ ರೇಟ್‌
    1 week ago
    ARECANUT RATE
    ಅಡಿಕೆ ಧಾರಣೆ | 5 ಜೂನ್‌ | ಇಂದಿನ ಅಡಿಕೆ ಮಾರುಕಟ್ಟೆ ವಿವರ
    2 weeks ago
    ARECANUT RATE
    ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ, ಸಾಗರ ಹಾಗೂ ರಾಜ್ಯದ ಅಡಿಕೆ ರೇಟ್‌
    2 weeks ago
    ARECANUT RATE
    ಅಡಿಕೆ ಧಾರಣೆ | 4 ಜೂನ್‌ | ಇಂದಿನ ರಾಶಿ, ಚಾಲಿ, ಕೆಂಪಡಕೆ ರೇಟ್‌
    2 weeks ago
  • Dina Bhavishya
    Dina BhavishyaShow More
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 16 | ಹೊಸ ವ್ಯವಹಾರಗಳಲ್ಲಿ ಹೂಡಿಕೆ, ಮಕ್ಕಳ ಆರೋಗ್ಯದಲ್ಲಿ ಜಾಗೃತಿ ವಹಿಸಿ
    14 hours ago
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 15 | ವ್ಯವಹಾರದಲ್ಲಿ ಆರ್ಥಿಕ ಪ್ರಗತಿ, ನಿರುದ್ಯೋಗಿಗಳಿಗೆ ಹೊಸ ಅವಕಾಶಗಳು
    2 days ago
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 14 | ವೃತ್ತಿ ಮತ್ತು ವ್ಯಾಪಾರದಲ್ಲಿ ನಿರೀಕ್ಷಿತ ಪ್ರಗತಿ, ದೂರ ಪ್ರಯಾಣ ಬೇಡ
    3 days ago
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 13 | ಕೈಗೊಂಡ ಕೆಲಸಗಳಲ್ಲಿ ಅಡಚಣೆಗಳು, ಅರೋಗ್ಯದಲ್ಲಿ ಎಚ್ಚರ
    4 days ago
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 12 | ಕೈಗೊಂಡ ಕೆಲಸದಲ್ಲಿ ವಿಳಂಬ, ಆರ್ಥಿಕ ಸಂಕಷ್ಟ
    5 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಜೂನ್ 15 | ಮೆಕ್ಕೆಜೋಳ, ಶೇಂಗಾ ರೇಟ್….
    1 day ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಜೂನ್ 12 | ರಾಗಿ, ಮೆಕ್ಕೆಜೋಳ ರೇಟ್….
    4 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಜೂನ್ 11 | ಹತ್ತಿ ರೇಟ್ ಎಷ್ಟಿದೆ?
    5 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಜೂನ್ 10 | ಮೆಕ್ಕೆಜೋಳ, ರಾಗಿ ರೇಟ್ ಎಷ್ಟಿದೆ?
    6 days ago
    ಮಾರುಕಟ್ಟೆ ಧಾರಣೆ
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್..
    1 week ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಆರೋಗ್ಯ ಕ್ಷೇಮ ಕೇಂದ್ರ ಕಟ್ಟಡ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    ನೂತನ ಆರೋಗ್ಯ ಕ್ಷೇಮ ಕೇಂದ್ರ ಕಟ್ಟಡ ನಿರ್ಮಾಣ ಕಾಮಗಾರಿಗೆ ಶಾಸಕ ಎಂ.ಚಂದ್ರಪ್ಪ ಭೂಮಿಪೂಜೆ 
    2 weeks ago
    ಸಿ.ಸಿ.ರಸ್ತೆ ಕಾಮಗಾರಿಗೆ ಭೂಮಿ ಪೂಜೆ
    ಮೂರ್ನಾಲ್ಕು ದಿನಗಳಲ್ಲೇ ತಾಳಿಕಟ್ಟೆ ಕೆರೆಗೆ‌ ನೀರು | ಶಾಸಕ‌ ಎಂ.ಚಂದ್ರಪ್ಪ
    3 weeks ago
    ಪೂರ್ವಭಾವಿ ಸಭೆ
    ಹೊಳಲ್ಕೆರೆ ಜಿಲ್ಲೆಯಲ್ಲಿಯೇ ಮಾದರಿ ಕ್ಷೇತ್ರ | ಶಾಸಕ ಎಂ.ಚಂದ್ರಪ್ಪ 
    1 month ago
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ | ಸಿದ್ಧಯ್ಯನಕೋಟೆ ಶ್ರೀ, ಎಚ್.ಆಂಜನೇಯ ಭಾಗೀ 
    2 months ago
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ 
    3 months ago
  • ಹಿರಿಯೂರು
    ಹಿರಿಯೂರುShow More
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    3 weeks ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    2 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    4 months ago
    Power Cut chitradurga News (3)
    ಹಿರಿಯೂರು | ಇಂದು ವಿದ್ಯುತ್ ವ್ಯತ್ಯಯ
    4 months ago
    Shree SHADAKSHARAMUNI SWAMIJI
    ಆದಿಜಾಂಬವ ಶಾಖಾ ಮಠದ ಹೆಸರಿನ ಸಭೆಗೆ ನಮ್ಮ ಸಮ್ಮತಿ ಇಲ್ಲ | ದಾವಣಗೆರೆಯಲ್ಲಿ ಫೆ.14 ರಂದು ಕರೆದಿರುವ ಸಭೆಗೆ ಸ್ಪಷ್ಟೀಕರಣ | ಶ್ರೀ ಷಡಾಕ್ಷರಮುನಿ ಸ್ವಾಮೀಜಿ
    4 months ago
  • ಹೊಸದುರ್ಗ
    ಹೊಸದುರ್ಗShow More
    ಸುಜ್ಞಾನ ಸಂಗಮ, ಜೈನ ಸಮಾಜ ಬಾಂಧವರಿಗೆ ಸನ್ಮಾನ ಸಮಾರಂಭ
    ಸಾತ್ವಿಕತೆ ಇರುವಲ್ಲಿ ಸಹಬಾಳ್ವೆ, ಸೌಹಾರ್ದತೆ ಇರುತ್ತದೆ | ಶಾಂತವೀರ ಶ್ರೀ 
    5 days ago
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ 
    2 weeks ago
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    2 weeks ago
    ವಾಲಿಬಾಲ್ ಹೊನಲು ಬೆಳಕಿನ ಪಂದ್ಯಾವಳಿ
    ಸೋಲು ಮುಂದಿನ ಗೆಲುವಿಗೆ ಪ್ರೇರಣೆ | ಸಾಣೇಹಳ್ಳಿ ಶ್ರೀ 
    3 weeks ago
    ರಂಗಶಾಲಾ ನಾಟಕೋತ್ಸವ
    ಸಾಣೇಹಳ್ಳಿಯಲ್ಲಿ ಯಶಸ್ವಿಯಾಗಿ ನಡೆದ ರಂಗಶಾಲಾ ನಾಟಕೋತ್ಸವ
    4 weeks ago
  • Life Style
    Life StyleShow More
    These items never spoil, so they can be stored for a long time
    ಈ ವಸ್ತುಗಳು ಎಂದಿಗೂ ಹಾಳಾಗುವುದಿಲ್ಲ, ಹಾಗಾಗಿ ಅವುಗಳನ್ನು ಹೆಚ್ಚು ಕಾಲ ಸಂಗ್ರಹಿಸಿಡಬಹುದು
    12 hours ago
    Eat these fruits to stay healthy during the rainy season
    ಮಳೆಗಾಲದಲ್ಲಿ ಆರೋಗ್ಯವಾಗಿರಲು ಈ ಹಣ್ಣುಗಳನ್ನು ಸೇವಿಸಿ
    13 hours ago
    eyes
    ಕಣ್ಣುಗಳಲ್ಲಿನ ಈ ಬದಲಾವಣೆಗಳು ರೋಗಗಳನ್ನು ಸೂಚಿಸುತ್ತವೆಯಂತೆ
    2 days ago
    care of your skin during pregnancy
    ಗರ್ಭಾವಸ್ಥೆಯಲ್ಲಿ ಚರ್ಮದ ಆರೈಕೆ ಮಾಡುವಾಗ ಈ ವಿಷಯಗಳನ್ನು ನೆನಪಿನಲ್ಲಿಡಿ
    2 days ago
    teeth
    ವೃದ್ಧರಾದ ಮೇಲೂ ನಿಮ್ಮ ಹಲ್ಲುಗಳು ಗಟ್ಟಿಯಾಗಿರಲು ಈ ಸಲಹೆ ಅನುಸರಿಸಿ
    3 days ago
Reading: ಇಂದಿನಿಂದ ತರಳಬಾಳು ಹುಣ್ಣಿಮೆ ಮಹೋತ್ಸವ | 9 ದಿನಗಳ ಕಾಲ ಭರಮಸಾಗರದಲ್ಲಿ ಹಬ್ಬದ ಸಂಭ್ರಮ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಇಂದಿನಿಂದ ತರಳಬಾಳು ಹುಣ್ಣಿಮೆ ಮಹೋತ್ಸವ | 9 ದಿನಗಳ ಕಾಲ ಭರಮಸಾಗರದಲ್ಲಿ ಹಬ್ಬದ ಸಂಭ್ರಮ

chitradurganews.com
Last updated: 4 February 2025 10:59
chitradurganews.com
1 year ago
Share
Taralabalu hunnime
ತರಳಬಾಳು ಹುಣ್ಣಿಮೆ ಮಹೋತ್ಸವ
SHARE

CHITRADURGA NEWS | 04 FEBRUARY 2025

ಚಿತ್ರದುರ್ಗ: ಸಿರಿಗೆರೆ ತರಳಬಾಳು ಬೃಹನ್ಮಠದಿಂದ ನಡೆಯುವ ತರಳಬಾಳು ಮಹೋತ್ಸವಕ್ಕೆ ದಾವಣಗೆರೆ-ಚಿತ್ರದುರ್ಗ ನಡುವೆ ರಾಷ್ಟ್ರೀಯ ಹೆದ್ದಾರಿಯಲ್ಲಿರುವ ಭರಮಸಾಗರ ನವ ವಧುವಿನಂತೆ ಸಿಂಗಾರಗೊಂಡಿದೆ.

ತರಳಬಾಳು ಹುಣ್ಣಿಮೆ ಮಹೋತ್ಸವದ ಐಕಾನ್ ಎಂಬಂತಿರುವ ಮಹಾದ್ವಾರ, ಮಂಟಪ ಸಿದ್ಧಗೊಂಡಿದ್ದು, ಸಿರಿಗೆರೆಯಿಂದ ಡಾ.ಶ್ರೀ.ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ಕೆಲ ಹೊತ್ತಿನಲ್ಲೇ ಭವ್ಯ ಮೆರವಣಿಗೆ ಮೂಲಕ ಭರಮಸಾಗರದತ್ತ ಪ್ರಯಾಣ ಬೆಳಸಲಿದ್ದಾರೆ.

ಶ್ರೀಗಳು ಹಾದು ಹೋಗುವ ಮಾರ್ಗದಲ್ಲಿ ಸಿಗುವ ಎಲ್ಲ ಹಳ್ಳಿಗಳಲ್ಲಿ ಗುರುಗಳನ್ನು ಸ್ವಾಗತಿಸಿ, ಗೌರವಿಸಿ, ಬೀಳ್ಕೊಡಲು ಸಿದ್ಧತೆಗಳು ಭರದಿಂದ ನಡೆದಿವೆ.

ಇದನ್ನೂ ಓದಿ: ತರಳಬಾಳು ಮಠ ಸರ್ವಜನಾಂಗದ ಶಾಂತಿಯ ತೋಟ | ಡಾ.ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ

ಫೆಬ್ರವರಿ 4 ರಿಂದ 12ರವರೆಗೆ ನಡೆಯುವ ಮಹೋತ್ಸವದಲ್ಲಿ ಪ್ರತಿ ದಿನ ಸಂಜೆ ಮತ್ತು ಬೆಳಗ್ಗೆ ವಿವಿಧ ಕಾರ್ಯಕ್ರಮಗಳು ನಡೆಯಲಿವೆ. ನಾಡಿನ ವಿವಿಧೆಡೆಯಿಂದ ಅನೇಕ ಗಣ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ಮೊದಲ ದಿನ ಶಿಕ್ಷಣ, ಕಲೆ, ಸಂಸ್ಕøತಿಗಳಿಗೆ ಮೀಸಲಾಗಿದ್ದರೆ, ಫೆ.5 ಮಹಿಳೆ ಮತ್ತು ಸಮಾಜ, ಫೆ.6 ರಾಜಕಾರಣ ಮತ್ತು ಸಮಾಜ, ಫೆ.7 ಶರಣ ಸಾಹಿತ್ಯ ಮತ್ತು ಸಮಾಜ, ಫೆ.8 ನ್ಯಾಯಾಲಯ ಮತ್ತು ಸಮಾಜ, ಫೆ.9 ಆರೋಗ್ಯ ಮತ್ತು ಸಮಾಜ ಫೆ.10 ಸಮೂಹ ಮಾಧ್ಯಮ ಮತ್ತು ಸಮಾಜ, ಫೆ.11 ರಂದು ಕೃಷಿ ಮತ್ತು ಜಲ ಸಂರಕ್ಷಣೆ, ಫೆ.12 ರಂದು ಧರ್ಮ – ವಿಜ್ಞಾನ – ಸಮಾಜ ವಿಚಾರವಾಗಿ ಚಿಂತನೆಗಳು ನಡೆಯಲಿವೆ.

ಇದನ್ನೂ ಓದಿ: ಸಿರಿಗೆರೆಯಲ್ಲಿ ತರಳಬಾಳು ಹುಣ್ಣಿಮೆ ಮಹೋತ್ಸವ | ಮೂರು ದಿನ ಸರಳ ಆಚರಣೆ

ಫೆಬ್ರವರಿ 12 ಬುಧವಾರ ಬೆಳಗ್ಗೆ 8ಕ್ಕೆ ಭರಮಸಾಗರದ ವಿವಿಧ ಬೀದಿಗಳಲ್ಲಿ ಪ್ರಭಾತ್‍ಪೇರಿ, ಶಿವಧ್ವಜಾರೋಹಣ, 10 ಗಂಟೆಗೆ ಕುಸ್ತಿ ಪಂದ್ಯಾವಳಿ ನಡೆಯಲಿವೆ. ಮಧ್ಯಾಹ್ನ 2.30 ರಿಂದ ಸಂಜೆ 5.30 ರವರೆಗೆ ಶ್ರೀಗಳ ಬೆಳ್ಳಿ ಪಲ್ಲಕ್ಕಿ ಉತ್ಸವ ಜರುಗಲಿದೆ.

9 ದಿನ ಭಾಗವಹಿಸುವ ಗಣ್ಯರ ವಿವರ:

ಫೆ.4 ಮಂಗಳವಾರ ಸಂಜೆ 6:30ಕ್ಕೆ ಶ್ರೀ ಸ್ವಾಮಿ ನಿರ್ಭಯಾನಂದ ಸರಸ್ವತಿ ಸ್ವಾಮಿಗಳು, ಎಂ.ಬಿ.ಪಾಟೀಲ್, ಮಧು ಬಂಗಾರಪ್ಪ, ಡಿ.ಸುಧಾಕರ್, ಡಾ.ಎಂ.ಚಂದ್ರಪ್ಪ, ಟಿ.ವೆಂಕಟೇಶ್, ರವಿಕುಮಾರ್, ಚಿತ್ರನಟ ಡಾಲಿ ಧನಂಜಯ್, ಕುಲಪತಿ ಬಿಡಿ ಕುಂಬಾರ ಭಾಗವಹಿಸಲಿದ್ದಾರೆ.

ಫೆ.5ರ ಶ್ರೀ ಜಯೇಂದ್ರಪುರಿ ಸ್ವಾಮೀಜಿ, ಲತಾ ಮಲ್ಲಿಕಾರ್ಜುನ್, ಉಮಾಶ್ರೀ, ನಾಗಲಕ್ಷ್ಮೀ ಚೌದರಿ, ಜಿ.ಆರ್.ಜೆ.ದಿವ್ಯಪ್ರಭು, ಶಾಲಿನಿ ಶ್ರೀಶೈಲ ದೊಡ್ಡಮನಿ, ಡಾ.ನಾಗಪುಷ್ಪಲತಾ ಭಾಗವಹಿಸಲಿದ್ದು, ಡಾ.ಬಿ.ಟಿ.ಕವಿತಾ, ಎಂ.ಎಸ್.ಆಶಾದೇವಿ, ಹಾಸ್ಯ ಭಾಷಣಕಾರರಾದ ಸಂಧ್ಯಾಶೆಣೈ ಉಪನ್ಯಾಸ ನೀಡಲಿದ್ದಾರೆ.

ಇದನ್ನೂ ಓದಿ: ಸಿರಿಗೆರೆಯಲ್ಲಿ ತರಳಬಾಳು ನುಡಿಹಬ್ಬಕ್ಕೆ ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ಚಾಲನೆ 

ಫೆ.6ರ ಮೌಲಾನ ಬಿ.ಎ ಇಬ್ರಾಹಿಂ ಸಖಾಫಿ, ಬಿ.ವೈ.ವಿಜಯೇಂದ್ರ, ಗೋವಿಂದ ಕಾರಜೋಳ, ಕೆ.ಆರ್.ರಮೇಶ್‍ಕುಮಾರ್, ಮುಖ್ಯಮಂತ್ರಿ ಚಂದ್ರು, ಬಿ.ಜಿ.ಗೋವಿಂದಪ್ಪ, ಎಸ್.ಎಲ್.ಬೋಜೇಗೌಡ, ಕೆ.ಎಸ್.ಬಸವಂತಪ್ಪ, ಎಚ್.ಕೆ.ಸುರೇಶ್ ಭಾಗವಹಿಸಲಿದ್ದಾರೆ. ಎಚ್.ಡಿ.ತಮ್ಮಯ್ಯ, ವೀರೇಂದ್ರ ಪಪ್ಪಿ, ಬಿ.ದೇವೇಂದ್ರಪ್ಪ, ಧನಂಜಯ ಸರ್ಜಿ, ಪ್ರಕಾಶ್ ಕೋಳಿವಾಡ, ಮಿಮಿಕ್ರಿ ಗೋಪಿ ಉಪನ್ಯಾಸ ನೀಡಲಿದ್ದಾರೆ.

Bharamasagara Taralabalu Hunnime
ತರಳಬಾಳು ಹುಣ್ಣಿಮೆ ಮಹೋತ್ಸವ

ಫೆ.7ರ ಶುಕ್ರವಾರ ಧಾರವಾಡ ಶ್ರೀ ಮುರುಘಾ ಮಠದ ಮು.ನಿ.ಪ್ರ.ಡಾ. ಮಲ್ಲಿಕಾರ್ಜುನ ಸ್ವಾಮಿಗಳು ಹಾಗೂ ಬೆಂಗಳೂರು ಬೇಲಿ ಮಠದ ಶ್ರೀ ಮ.ನಿ.ಪ.ಶಿವಾನುಭವ ಚರಮೂರ್ತಿ ಶಿವರುದ್ರ ಸ್ವಾಮೀಜಿಯವರು, ಡಾ.ಹಂಪಾ ನಾಗರಾಜಯ್ಯ, ಗೊ.ರು.ಚನ್ನಬಸಪ್ಪ, ಡಾ.ಶಿವಾನಂದ ಕಣವಿ, ಡಾ.ಮಾಂತೇಶ್‍ಬೀಳಗಿ, ಡಾ.ಬಿ.ರಾಜಶೇಖರಪ್ಪ, ಡಾ.ರಾಜಶೇಖರ ಜಮದಂಡಿ ಆಗಮಿಸಲಿದ್ದಾರೆ. ಡಾ.ಮಹಾಂತೇಶ್ ಬಿರಾದಾರ, ಅಶೋಕ್ ದೊಮ್ಮಲೂರು ಉಪನ್ಯಾಸ ನೀಡಲಿದ್ದಾರೆ.

ಇದನ್ನೂ ಓದಿ: ದೊಡ್ಡಹೊಟ್ಟೆ ರಂಗನಾಥಸ್ವಾಮಿ ದೇವಸ್ಥಾನಕ್ಕೆ ಸಿಸಿ ರಸ್ತೆ | ಶಾಸಕ ಎಂ.ಚಂದ್ರಪ್ಪ ಭೂಮಿ ಪೂಜೆ

ಫೆ.8ರ ಶನಿವಾರ ನ್ಯಾ.ಎನ್.ಸಂತೋಷ್ ಹೆಗಡೆ, ಪ್ರಭಾಕರ ಶಾಸ್ತ್ರಿ, ಕೃಷ್ಣ ಎಸ್.ದೀಕ್ಷಿತ್, ವೇದವ್ಯಾಸಾಚಾರ್ ಶ್ರೀಶಾನಂದ ಆಗಮಿಸಲಿದ್ದಾರೆ.
ಫೆ.9ರ ಭಾನುವಾರ ಹರಿಹರದ ಶ್ರೀ ವಚನಾನಂದ ಸ್ವಾಮೀಜಿ, ಡಾ.ಶರಣಪ್ರಕಾಶ್ ರುದ್ರಪ್ಪ ಪಾಟೀಲ್, ಡಾ.ಸಿ.ಎನ್.ಮಂಜುನಾಥ್, ಡಾ.ಪ್ರಭಾ ಮಲ್ಲಿಕಾರ್ಜುನ್, ಡಾ.ಶರಣ್ ಪಾಟೀಲ್, ಎಂ.ಎಸ್.ದಿವಾಕರ್, ಡಾ.ಅಬ್ದುಲ್‍ಬಷೀರ್, ಕೊಗಳಿ ಕೊಟ್ರೇಶ್ ಆಗಮಿಸಲಿದ್ದಾರೆ.

ಫೆ.10ರ ಸೋಮವಾರ ವಾಲ್ಮೀಕಿ ಗುರುಪೀಠದ ಶ್ರೀ ಪ್ರಸನ್ನಾನಂದಪುರಿ ಸ್ವಾಮೀಜಿ, ಪಬ್ಲಿಕ್ ಟಿ.ವಿಯ ಎಚ್.ಆರ್.ರಂಗನಾಥ್, ವಿಜಯ ಕರ್ನಾಟಕ ಸಂಪಾದಕರಾದ ಸುದರ್ಶನ್ ಚನ್ನಂಗಿಹಳ್ಳಿ, ಡಾ.ಬಿ.ಆರ್.ರವಿಕಾಂತ್‍ಗೌಡ, ಡಾ.ಜಿ.ಎಂ.ಗಂಗಾಧರಸ್ವಾಮಿ, ಬಿ.ಪಿ.ಹರೀಶ್, ಕೆ.ಎಸ್.ನವೀನ್, ಬೆಳ್ಳಿಪ್ರಕಾಶ್, ಎಚ್.ಪಿ.ರಾಜೇಶ್, ಆಗಮಿಸಲಿದ್ದು, ಟಿ.ವಿ.9 ರಂಗನಾಥ್ ಭಾರಧ್ವಜ್, ಎಂ.ಎಸ್.ರಾಘವೇಂದ್ರ, ಯತೀಶ್‍ಚಂದ್ರ, ಎಂ.ಎಸ್.ಶರತ್ ಉಪನ್ಯಾಸ ನೀಡಲಿದ್ದಾರೆ.

ಇದನ್ನೂ ಓದಿ: ದಾಳಿಂಬೆ, ‌ಮಾವು, ಬಾಳೆ ಸೂಕ್ಷ್ಮ ನೀರಾವರಿ ಅಳವಡಿಕೆ ತರಬೇತಿ 

ಫೆ.11ರ ಮಂಗಳವಾರ ಮಹಾರಾಷ್ಟ್ರದ ಕನ್ನೇರಿ ಅದೃಶ್ಯ ಕಾಡುಸಿದ್ದೇಶ್ವರ ಸ್ವಾಮೀಜಿ ಹಾಗೂ ಹೆಬ್ಬಾಳ್ ವಿರಕ್ತ ಮಠದ ಶ್ರೀ ಮಹಾಂತ ರುದ್ರೇಶ್ವರ ಸ್ವಾಮೀಜಿ, ಬಿ.ಎಸ್.ಯಡಿಯೂರಪ್ಪ, ಎನ್.ಚೆಲುವರಾಯಸ್ವಾಮಿ, ಡಾ.ರಾಜೇಂದ್ರಸಿಂಗ್, ಎಚ್.ಆರ್.ಬಸವರಾಜಪ್ಪ, ಎಚ್.ಆಂಜನೇಯ, ಟಿ.ರಘುಮೂರ್ತಿ, ಎಸ್.ವಿ.ರಾಮಚಂದ್ರಪ್ಪ, ಮಲ್ಲಿಕಾರ್ಜುನ ಗುಂಗೆ ಭಾಗವಹಿಸಲಿದ್ದಾರೆ.

ಸಮಾರೋಪ ಸಮಾರಂಭದಲ್ಲಿ ಮೈಸೂರು ಮಹಾರಾಜರು:

ಫೆ.12ರ ಸಮಾರೋಪ ಸಮಾರಂಭದಲ್ಲಿ ಸಂಸದರೂ ಆಗಿರುವ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ಡಿಸಿಎಂ ಡಿ.ಕೆ.ಶಿವಕುಮಾರ್, ಬಸವರಾಜ ಬೊಮ್ಮಾಯಿ, ಎಸ್.ಎಸ್.ಮಲ್ಲಿಕಾರ್ಜುನ್, ಜಿ.ಎಂ.ಸಿದ್ದೇಶ್ವರ, ಜೆ.ಸಿ.ಮಾಧುಸ್ವಾಮಿ, ಡಿ.ಜಿ.ಶಾಂತನಗೌಡ, ಯು.ಬಿ.ಬಣಕಾರ್, ಶಿವಗಂಗಾ ಬಸವರಾಜ್, ಡಾ. ಬಿ.ಎನ್.ಸುರೇಶ್, ಪ್ರೊ.ಎಂ.ಕೃಷ್ಣೇಗೌಡ, ಸುವರ್ಣ ನ್ಯೂಸ್ ಅಜಿತ್ ಹನುಮಕ್ಕನವರ್, ಡಾ.ಎಚ್.ಎಸ್.ಹರಿಶಂಕರ್ ಭಾಗವಹಿಸಲಿದ್ದಾರೆ.

ಶ್ರೀಗಳು ಸಂಚರಿಸುವ ಮಾರ್ಗ.

ಭರಮಸಾಗರದಲ್ಲಿ ನಡೆಯುತ್ತಿರುವ ತರಳಬಾಳು ಹುಣ್ಣಿಮೆ ಮಹೋತ್ಸವಕ್ಕೆ ಫೆ.4ರ ಸೋಮವಾರ ಬೆಳಗ್ಗೆ 10 ಗಂಟೆಗೆ ಐಕ್ಯಮಂಟಪಕ್ಕೆ ಆಗಮಿಸಿ ಲಿಂ.ಶಿವಕುಮಾರ ಶ್ರೀಗಳ ಹಾಗೂ ಗುರುಶಾಂತೇಶ್ವರ ಶ್ರೀಗಳ ಕರ್ತೃ ಗದ್ದಿಗೆಗೆ ಪುಷ್ಪ ನಮನ ಸಲ್ಲಿಸಿ, ನಂತರ ಒಬ್ಬವ್ವನಾಗತಿಹಳ್ಳಿ, ಸಿರಿಗೆರೆ ಸರ್ಕಲ್, ಚಿಕ್ಕಬೆನ್ನೂರು, ಕೊಳಹಾಳ್, ಬೇಡರಶಿವನಕೆರೆ, ಬಸವನಶಿವನಕೆರೆ, ಹಿರೇಕಬ್ಬಿಗೆರೆ, ಚಿಕ್ಕಕಬ್ಬಿಗೆರೆ, ಮುದ್ದಾಪುರ, ಮುದ್ದಾಪುರಮ್ಯಾಸರಹಟ್ಟಿ, ಯಳಗೋಡು, ಬಸ್ತಿಹಳ್ಳಿ, ನೆಲ್ಲಿಕಟ್ಟೆ, ಹೊಸಹಟ್ಟಿ, ಇಸಾಮುದ್ರ, ಕಾಲಗೆರೆ ಕೋಡಿಹಳ್ಳಿ, ಕೊಗುಂಡೆ, ಬಹದ್ದೂರ್‍ಗಟ್ಟ, ಯಮ್ಮನಘಟ್ಟ, ಪಂಜಯ್ಯನಹಟ್ಟಿ, ನಂದಿಹಳ್ಳಿ, ದ್ಯಾಪನಹಳ್ಳಿ, ಚೌಲಿಹಳ್ಳಿ, ಚೌಲಿಹಳ್ಳಿ ಗೊಲ್ಲರಹಟ್ಟಿ, ಕೋಡಿರಂಗವನಹಳ್ಳಿ, ವಡ್ಡರಹಟ್ಟಿ, ಹೆಗಡೆಹಾಳು, ಕಸವನಹಳ್ಳಿ ಬಿ.ಗೊಲ್ಲರಹಟ್ಟಿ, ಭರಮಸಾಗರ ಭರಮಣ್ಣನಾಯಕ ತೆಪ್ಪೋತ್ಸವದ ನಂತರ ಬಿಚ್ಚುಗತ್ತಿ ಭರಮನಾಯಕ ಮಹಾಮಂಟಪಕ್ಕೆ ಆಗಮಿಸಲಿದ್ದಾರೆ.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:BharamasagaraChitradurgaChitradurga LatestDr. Shivamurthy Shivacharya SwamijifeaturedKannada NewsSirigereTaralbalu Full Moon Festivalಕನ್ನಡ ಸುದ್ದಿಚಿತ್ರದುರ್ಗಚಿತ್ರದುರ್ಗ ಲೇಟೆಸ್ಟ್ಡಾ.ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿತರಳಬಾಳು ಹುಣ್ಣಿಮೆ ಮಹೋತ್ಸವಭರಮಸಾಗರಸಿರಿಗೆರೆ
Share This Article
Facebook Email Print
Previous Article Agriculture Tryning center ದಾಳಿಂಬೆ, ‌ಮಾವು, ಬಾಳೆ ಸೂಕ್ಷ್ಮ ನೀರಾವರಿ ಅಳವಡಿಕೆ ತರಬೇತಿ 
Next Article Boating ಭರಮಸಾಗರ ಕೆರೆಯಲ್ಲಿ ಇಂದಿನಿಂದ ಬೋಟಿಂಗ್ | ಮುರುಡೇಶ್ವರದಿಂದ ಬಂದಿವೆ ಬೋಟ್
Leave a Comment

Leave a Reply Cancel reply

Your email address will not be published. Required fields are marked *

suspended
ಚುನಾವಣಾ ಕರ್ತವ್ಯ ಲೋಪ | ಶಿಕ್ಷಕಿ ಅಮಾನತು ಮಾಡಿ ಡಿಸಿ ವೆಂಕಟೇಶ್ ಆದೇಶ 
ಮುಖ್ಯ ಸುದ್ದಿ
ನವೋದಯ ವಿದ್ಯಾಲಯ
ನವೋದಯ ವಿದ್ಯಾಲಯದಲ್ಲಿ ಪ್ರಥಮ ಪಿಯು ವಿಜ್ಞಾನ ವಿಭಾಗದ ಪ್ರವೇಶ | ಅರ್ಜಿ ಆಹ್ವಾನ
ಮುಖ್ಯ ಸುದ್ದಿ
ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಮಾತನಾಡಿದರು
ಜೂನ್ 21 ರಂದು ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಯಶಸ್ವಿಗೊಳಿಸಿ | ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ
ಮುಖ್ಯ ಸುದ್ದಿ
ಅರ್ಜಿ ಅಹ್ವಾನ
ನೇಕಾರ ಸಮ್ಮಾನ್ ಯೋಜನೆ | ಅರ್ಜಿ ಆಹ್ವಾನ
ಮುಖ್ಯ ಸುದ್ದಿ
© Chitradurga News 2025 | Powered By Karnatakabest.com

Loading Comments...

    Welcome Back!

    Sign in to your account

    Username or Email Address
    Password

    Lost your password?

    Not a member? Sign Up