By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Reading: ಸಿರಿಗೆರೆಯಲ್ಲಿ ತರಳಬಾಳು ಹುಣ್ಣಿಮೆ ಮಹೋತ್ಸವ | ಮೂರು ದಿನ ಸರಳ ಆಚರಣೆ
Share
Font ResizerAa
Chitradurga News-Kannada NewsChitradurga News-Kannada News
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2022 Foxiz News Network. Ruby Design Company. All Rights Reserved.

Home » ಸಿರಿಗೆರೆಯಲ್ಲಿ ತರಳಬಾಳು ಹುಣ್ಣಿಮೆ ಮಹೋತ್ಸವ | ಮೂರು ದಿನ ಸರಳ ಆಚರಣೆ

ಮುಖ್ಯ ಸುದ್ದಿ

ಸಿರಿಗೆರೆಯಲ್ಲಿ ತರಳಬಾಳು ಹುಣ್ಣಿಮೆ ಮಹೋತ್ಸವ | ಮೂರು ದಿನ ಸರಳ ಆಚರಣೆ

News Desk Chitradurga News
Last updated: 22 February 2024 07:57
News Desk Chitradurga News
1 year ago
Share
SHARE
https://chat.whatsapp.com/Jhg5KALiCFpDwME3sTUl7x

CHITRADURGA NEWS | 22 FEBRUARY 2024
ಚಿತ್ರದುರ್ಗ:‌ ಬರದ ಹಿನ್ನೆಲೆಯಲ್ಲಿ ಈ ಬಾರಿ ಸಿರಿಗೆರೆಯಲ್ಲಿ ಮೂರು ದಿನ ತರಳಬಾಳು ಹುಣ್ಣಿಮೆ ಸರಳವಾಗಿ ಆಚರಣೆಯಾಗುತ್ತಿದೆ. ಇಂದು ಬೆಳಿಗ್ಗೆ 9.30ಕ್ಕೆ ಶಿವಧ್ವಜಾರೋಹಣದ ಮೂಲಕ ವಿದ್ಯುಕ್ತ ಚಾಲನೆ ದೊರೆಯಲಿದೆ.

ಪ್ರತಿವರ್ಷ ಅದ್ಧೂರಿಯಾಗಿ 9 ದಿನಗಳ ಕಾಲ ಸಿರಿಗೆರೆಯ ತರಳಬಾಳು ಜಗದ್ಗುರು ಬೃಹನ್ಮಠದ ಪೀಠಾಧ್ಯಕ್ಷರಾದ ಡಾ. ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ನೇತೃತ್ವದಲ್ಲಿ ನಡೆಯುತ್ತಿದ್ದ ತರಳಬಾಳು ಹುಣ್ಣಿಮೆ ಮಹೋತ್ಸವ ಈ ಬಾರಿ ಸಿರಿಗೆರೆಯಲ್ಲಿ ಸರಳವಾಗಿ ಮೂರು ದಿನ ನಡೆಯುತ್ತಿದೆ.

ಸಿರಿಗೆರೆಯ ಬಿ. ಲಿಂಗಯ್ಯ ವಸತಿ ಪದವಿಪೂರ್ವ ಕಾಲೇಜಿನ ವಿಶಾಲ ಆವರಣದಲ್ಲಿ ಮಹೋತ್ಸವ ಆರಂಭವಾಗಲಿದೆ. ತರಳಬಾಳು ಸಿಬಿಎಸ್‌ಇ ಶಾಲೆಯ ಮುಖ್ಯದ್ವಾರದಲ್ಲಿ ಹುಣ್ಣಿಮೆ ಆಚರಣೆಗಾಗಿ ವೇದಿಕೆಯನ್ನು ಸಿದ್ಧಗೊಳಿಸಲಾಗಿದೆ. ವೇದಿಕೆ ಕಾರ್ಯಕ್ರಮ ವೀಕ್ಷಿಸಲು ಬೃಹತ್‌ ಎಲ್‌ಇಡಿ ಪರದೆಗಳನ್ನು ಅಳವಡಿಸಲಾಗಿದೆ.

ಇದನ್ನೂ ಓದಿ: ನಿರುದ್ಯೋಗಿಗಳಿಗೆ ಸುವರ್ಣವಕಾಶ | ನಿಮಗಾಗಿ ಉದ್ಯೋಗದ ಬಾಗಿಲು ತೆರೆದಿವೆ 500 ಕಂಪನಿಗಳು | ಕೂಡಲೇ ನೋಂದಣಿ ಮಾಡಿ

ರೈತ ಸಮುದಾಯಕ್ಕೆ ಮಾಹಿತಿ ನೀಡುವ ಹಲವು ಮಳಿಗೆಗಳನ್ನು ತೆರೆಯಲು ವ್ಯವಸ್ಥೆ ಮಾಡಲಾಗಿದೆ. ಮಠದ ಪ್ರಕಟಣೆಗಳ ಪ್ರದರ್ಶನ ಮತ್ತು ಮಾರಾಟ ಕೇಂದ್ರ ತೆರೆಯಲಾಗಿದೆ. ಮೂರು ದಿನಗಳ ಕಾಲವೂ ಸಿಹಿ ಊಟದ ದಾಸೋಹ ವ್ಯವಸ್ಥೆ ಮಾಡಲಾಗಿದೆ.

ಫೆ.22 ರ ಬೆಳಿಗ್ಗೆ 9.30ಕ್ಕೆ ನಿವೃತ್ತ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಎಚ್‌.ಎಂ.ವಿರೂಪಾಕ್ಷಯ್ಯ ಅವರಿಂದ ಶಿವಧ್ವಜಾರೋಹಣ, 10ಗಂಟೆಗೆ ವಿಜ್ಞಾನ ವಸ್ತು ಪ್ರದರ್ಶನ ಉದ್ಘಾಟನೆ, ಬಳಿಕ ಉಪನ್ಯಾಸ ಕಾರ್ಯಕ್ರಮ, ಸಂಜೆ 6 ಗಂಟೆಗೆ ವೇದಿಕೆ ಕಾರ್ಯಕ್ರಮ ನಡೆಯಲಿದೆ. ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದಾರೆ. ವಿಜಯಪುರ ಜ್ಞಾನಯೋಗಾಶ್ರಮ ಅಧ್ಯಕ್ಷ ಬಸವಲಿಂಗ ಸ್ವಾಮೀಜಿ ಆಶೀರ್ವಚನ ನೀಡಲಿದ್ದಾರೆ.

ಇದನ್ನೂ ಓದಿ: ಮೈನವಿರೇಳಿಸಿದ ಜೋಡೆತ್ತಿನ ಬಂಡಿ ಓಟ | ಶಿಳ್ಳೆ, ಕೇಕೆ ಹಾಕಿ ಜನರ ಸಂಭ್ರಮ

ಸಚಿವ ಎಸ್.ಎಸ್.‌ಮಲ್ಲಿಕಾರ್ಜುನ್, ಶಾಸಕರಾದ ಎಂ. ಚಂದ್ರಪ್ಪ, ಬಿ.ಪಿ. ಹರೀಶ್‌, ಎಚ್.ಡಿ. ತಮ್ಮಯ್ಯ, ಬಿ. ದೇವೇಂದ್ರಪ್ಪ ಭಾಗವಹಿಸಲಿದ್ದಾರೆ. ಗಂಗಾವತಿ ಪ್ರಾಣೇಶ್‌, ಅಣ್ಣಾಪುರ ಶಿವಕುಮಾರ್‌ ಉಪನ್ಯಾಸ ನೀಡಲಿದ್ದಾರೆ.

ದಾವಣಗೆರೆ, ಜಗಳೂರು, ಚನ್ನಗಿರಿ, ಹರಿಹರ, ಹರಪನಹಳ್ಳಿ, ಕೊಟ್ಟೂರು, ರಾಣೆಬೆನ್ನೂರು, ಹಳೆಬೀಡು, ಹೊಳಲ್ಕೆರೆ, ಚಿತ್ರದುರ್ಗ, ತಿಪಟೂರು ಮತ್ತು ಭದ್ರಾವತಿ ತಾಲ್ಲೂಕಿನ ಯುವಕರನ್ನು ಸಂಘಟಿಸಿ ಗ್ರಾಮೀಣ ಕ್ರೀಡಾಕೂಟವನ್ನು ಆಯೋಜಿಸಲಾಗಿದೆ. ಪುರುಷರು ಮತ್ತು ಮಹಿಳೆಯರ ವಿಭಾಗದಲ್ಲಿ ಒಂದು ಸುತ್ತಿನ ಸ್ಪರ್ಧೆಗಳನ್ನು ನಡೆಸಲಾಗಿದೆ. ಅಂತಿಮ ಸುತ್ತಿನ ಸ್ಪರ್ಧೆಗಳು ಫೆ.22 ಮತ್ತು 23 ರಂದು ನಡೆಯಲಿವೆ.

ಫೆ.24 ರಂದು ಸಿಂಹಾಸನಾರೋಹಣ ನಡೆಯಲಿದೆ. ಈ ಬಾರಿ ಪಲ್ಲಕ್ಕಿ ಮೆರವಣಿಗೆಯನ್ನು ಈಗಾಗಲೇ ಶ್ರೀಗಳು ನಿರಾಕರಿಸಿದ್ದಾರೆ. ಬೆಳ್ಳಿಯ ಸಿಂಹಾಸನದ ಮೇಲೆ ಕುಳಿತು ಭಕ್ತರಿಗೆ ಆಶೀರ್ವಚನ ನೀಡುವ ಪರಂಪರೆ ನಡೆಯಲಿದೆ.

ದೇಶಕ್ಕಾಗಿ ಹೋರಾಡಿ ಹುತಾತ್ಮರಾದವರ ಕುಟುಂಬದವರಿಗೆ ಅಂತಿಮ ದಿನದಂದು ತರಳಬಾಳು ಮಠದಿಂದ ₹ 1 ಲಕ್ಷ ಆರ್ಥಿಕ ನೆರವು ನೀಡಿ ಸತ್ಕರಿಸಲಾಗುತ್ತಿದೆ. ಬೆಂಗಳೂರಿನ ಕ್ಯಾಪ್ಟನ್‌ ಎಂ.ಜಿ. ಪ್ರಾಂಜಲ್‌, ಗೋಕಾಕಿನ ಮಂಜುನಾಥ ಗೌಡನ್ನವರ, ಕಲಬುರಗಿಯ ಸಿ.ಟಿ. ರಾಜಕುಮಾರ್‌ ಮಾವಿನ್‌, ಜಗಳೂರಿನ ವೈ. ಹನುಮಂತಪ್ಪ, ಚಿತ್ರದುರ್ಗದ ಆರ್.‌ ಸುನೀತಾ, ನಿಪ್ಪಾಣಿಯ ಪ್ರಕಾಶ್‌ ಜಾಧವ ಕುಟುಂಬದವರಿಗೆ ಈ ಬಾರಿ ಆರ್ಥಿಕ ನೆರವು ನೀಡಿ ಗೌರವಿಸಲಾಗುತ್ತಿದೆ.

ಮೂರು ದಿನ ಸಂಜೆ ವಚನಗೀತೆ, ಭರತನಾಟ್ಯ, ವಚನ ನೃತ್ಯ, ನೃತ್ಯ ರೂಪಕ, ಜಾನಪದ ನೃತ್ಯ, ದೊಡ್ಡಾಟ, ಯಕ್ಷಗಾನ, ಮಲ್ಲಿ ಹಗ್ಗ, ಮಲ್ಲಕಂಬ ಪ್ರದರ್ಶನ ನಡೆಯಲಿದೆ.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

TAGGED:MahotsavaSimple RitualSirigereSwamijiTaralabaluತರಳಬಾಳುಮಹೋತ್ಸವಸರಳ ಆಚರಣೆಸಿರಿಗೆರೆಸ್ವಾಮೀಜಿ
Share This Article
Facebook Email Print
Previous Article ರಾಜವೀರ ಮದಕರಿ ನಾಯಕ ಸಿನಿಮಾ | ನಟ ದರ್ಶನ್ ಹೇಳಿದ್ದೇನು ?
Next Article ಲೋಕಸಭೆ ಚುನಾವಣೆಗೆ ದಿನಗಣನೆ | ಚಿತ್ರದುರ್ಗದಲ್ಲಿ ಶುರುವಾಯ್ತು ಟಿಕೇಟ್ ಅಂದರ್-ಬಾಹರ್ ಆಟ
Leave a Comment

Leave a Reply Cancel reply

Your email address will not be published. Required fields are marked *

Gavayi smaranothsava
ಶಾರದಮ್ಮ ರುದ್ರಪ್ಪ ಕಲ್ಯಾಣ ಮಂಟಪದಲ್ಲಿ ಗಾನಯೋಗಿಗಳ ಪುಣ್ಯ ಸ್ಮರಣೆ | ಸಾಧಕರಿಗೆ ಸನ್ಮಾನ
ಮುಖ್ಯ ಸುದ್ದಿ
ಮುರುಘಾಮಠದಲ್ಲಿ ಜಾಗತಿಕ ಲಿಂಗಾಯತ ಮಹಾಸಭಾದ ಮೊದಲನೇ ಕಾರ್ಯಕಾರಿ ಸಭೆ | ಮಠಾಧೀಶರು ಸೇರಿದಂತೆ ಗಣ್ಯರು ಭಾಗೀ
ಮುಖ್ಯ ಸುದ್ದಿ
ಉಸಿರಾಟದ ಕಾಯಿಲೆಗಳಿಗೆ ಈ ಎಲೆಯನ್ನು ಬಳಸಿ
Life Style
ಹೃದಯಾಘಾತದ ನಂತರ ಈ ತಪ್ಪುಗಳನ್ನು ಮಾಡಬೇಡಿ
Life Style
© Chitradurga News. Ruby Design Company. All Rights Reserved.

Chitradurga News App

Install
Welcome Back!

Sign in to your account

Username or Email Address
Password

Lost your password?

Not a member? Sign Up