By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Reading: Taralabalu mata: ಸಿರಿಗೆರೆ ತರಳಬಾಳು ಮಠಕ್ಕೆ ಬೈಲಾ ಇಲ್ಲ | ಶ್ರೀ ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ
Share
Font ResizerAa
Chitradurga News-Kannada NewsChitradurga News-Kannada News
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2022 Foxiz News Network. Ruby Design Company. All Rights Reserved.

Home » Taralabalu mata: ಸಿರಿಗೆರೆ ತರಳಬಾಳು ಮಠಕ್ಕೆ ಬೈಲಾ ಇಲ್ಲ | ಶ್ರೀ ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ

ಮುಖ್ಯ ಸುದ್ದಿ

Taralabalu mata: ಸಿರಿಗೆರೆ ತರಳಬಾಳು ಮಠಕ್ಕೆ ಬೈಲಾ ಇಲ್ಲ | ಶ್ರೀ ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ

News Desk Chitradurga News
Last updated: 6 August 2024 11:30
News Desk Chitradurga News
11 months ago
Share
shivamurthy shivacharya swamiji
ಶ್ರೀ ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ
SHARE
https://chat.whatsapp.com/Jhg5KALiCFpDwME3sTUl7x

CHITRADURGA NEWS | 06 AUGUST 2024
ಚಿತ್ರದುರ್ಗ: ದಾವಣಗೆರೆಯ ರೆಸಾರ್ಟ್‌ನಲ್ಲಿ ಭಾನುವಾರ ಮಠದ ವಿರುದ್ಧ ಸಭೆ ನಡೆಸಿರುವವರ ಬಗ್ಗೆ ನನಗೆ ವಿಶ್ವಾಸವಿಲ್ಲ. ನಾಲ್ಕು ಗೋಡೆಗಳ ಮಧ್ಯೆ ಖಾಸಗಿಯಾಗಿ ಮಾತನಾಡುವ ಬದಲು ಶಿಷ್ಯರ ಎದುರಿನಲ್ಲಿಯೇ ಚರ್ಚಿಸೋಣ ಎಂದು ತರಳಬಾಳು ಜಗದ್ಗುರು ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ತಿಳಿಸಿದರು.

ಸಿರಿಗೆರೆಯ ಮಠದ ಆವರಣದಲ್ಲಿ ಸೋಮವಾರ ನಡೆದ ಭಕ್ತರ ಸಭೆಯಲ್ಲಿ ಮಾತನಾಡಿ, ‘ಮಠಕ್ಕೆ ಕೆಲವು ರೀತಿ ರಿವಾಜುಗಳು ಇವೆ. ಧಾರ್ಮಿಕ ಸಂಸ್ಥೆಯೊಂದರ ವಿಚಾರಗಳನ್ನು ರಾಜಕಾರಣಿಗಳಂತೆ ರೆಸಾರ್ಟ್‌ನಲ್ಲಿ ಚರ್ಚಿಸುವುದು ತರವಲ್ಲ. ಅದು ಶಿಷ್ಟಾಚಾರವಲ್ಲದ ನಡವಳಿಕೆ. ಮಠದ ಬೈಲಾ ಬಗ್ಗೆ ಕೆಲವರು ತಪ್ಪು ತಿಳಿವಳಿಕೆ ಹೊಂದಿದ್ದಾರೆ. ವಾಸ್ತವದಲ್ಲಿ ಮಠಕ್ಕೆ ಬೈಲಾ ಇಲ್ಲ’ ಎಂದು ಸ್ಪಷ್ಟಪಡಿಸಿದರು.

ಇದನ್ನು ಓದಿ:ದಾವಣಗೆರೆ ಸಭೆಯಲ್ಲಿದ್ದ ಸ್ವಾರ್ಥಿಗಳನ್ನು ಮಠದಿಂದ ಬಹಿಷ್ಕರಿಸಿ | ಸಿರಿಗೆರೆ ಮಠದ ಭಕ್ತರ ಒಕ್ಕೊರಲ ಒತ್ತಾಯ

‘ಮಠದ ಚಟುವಟಿಕೆ ಬಗ್ಗೆ ಭಕ್ತರಿಗೆ ಅಸಮಾಧಾನವಿದ್ದರೆ ಸಾಧು ಸದ್ಧರ್ಮ ವೀರಶೈವ ಸಂಘಕ್ಕೆ ದೂರು ನೀಡಬೇಕು. ಅದನ್ನು ಬಿಟ್ಟು ರೆಸಾರ್ಟ್‌ನಲ್ಲಿ ಮಠದ ವಿಚಾರದ ಏಕೆ ಚರ್ಚಿಸಬೇಕು. ಕೆಲವರು ತಮ್ಮ ಅಹವಾಲು ಹೇಳಿಕೊಳ್ಳಲು ಬೆಂಗಳೂರು ಕೇಂದ್ರದಲ್ಲಿ ನನ್ನನ್ನು ಭೇಟಿಯಾಗಲು ನಿರ್ಧರಿಸಿದ್ದಾರೆ. ಆದರೆ ನಾಲ್ಕು ಗೋಡೆಗಳ ಮಧ್ಯೆ ಖಾಸಗಿಯಾಗಿ ಮಾತನಾಡುವ ಬದಲು ಶಿಷ್ಯರ ಎದುರಿನಲ್ಲಿಯೇ ಚರ್ಚಿಸಬೇಕು. ಅವರು ಬೆಂಗಳೂರಿನಲ್ಲಿ ನಮ್ಮನ್ನು ಭೇಟಿಯಾಗುವುದು ಬೇಡ, ಸಿರಿಗೆರೆಯಲ್ಲಿಯೇ ಆಗಲಿ’ ಎಂದು ಹೇಳಿದರು.

‘ಮಠದಲ್ಲಿ ಯಾವುದೇ ಹಣ ಮತ್ತು ಆಸ್ತಿಯ ದುರುಪಯೋಗ ನಡೆದಿಲ್ಲ. ಪೀಠಾಧಿಪತಿ, ಚರಪಟ್ಟಾಧ್ಯಕ್ಷರು ಮತ್ತು ಶಾಖಾಮಠದ ಹೆಸರಿನಲ್ಲಿರುವ ಎಲ್ಲಾ ಆಸ್ತಿಯೂ ಮಠದ್ದೇ ಆಗಿರುತ್ತದೆ. ಪೀಠಾಧಿಪತಿಯಾಗಿ ನಾವು ಆಸ್ತಿ ಮತ್ತು ಹಣವನ್ನು ಸಂರಕ್ಷಣೆ ಮಾಡುತ್ತಿದ್ದೇವೆ’ ಎಂದರು.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

TAGGED:BailaMathPoliticianShivamurthySirigereSwamijiTaralbaluತರಳಬಾಳುಬೈಲಾಮಠರಾಜಕಾರಣಿಶಿವಮೂರ್ತಿಸಿರಿಗೆರೆಸ್ವಾಮೀಜಿ
Share This Article
Facebook Email Print
Previous Article srigere matta Sirigere mata: ದಾವಣಗೆರೆ ಸಭೆಯಲ್ಲಿದ್ದ ಸ್ವಾರ್ಥಿಗಳನ್ನು ಮಠದಿಂದ ಬಹಿಷ್ಕರಿಸಿ | ಸಿರಿಗೆರೆ ಮಠದ ಭಕ್ತರ ಒಕ್ಕೊರಲ ಒತ್ತಾಯ
Next Article ಅರ್ಜಿ ಅಹ್ವಾನ Application; ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ | ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ
Leave a Comment

Leave a Reply Cancel reply

Your email address will not be published. Required fields are marked *

ಉಸಿರಾಟದ ಕಾಯಿಲೆಗಳಿಗೆ ಈ ಎಲೆಯನ್ನು ಬಳಸಿ
Life Style
ಹೃದಯಾಘಾತದ ನಂತರ ಈ ತಪ್ಪುಗಳನ್ನು ಮಾಡಬೇಡಿ
Life Style
ಸ್ವಸ್ತಿಕ್ ಚಿಹ್ನೆ ಬಿಡಿಸುವಾಗ ನೀವು ಈ ತಪ್ಪನ್ನು ಮಾಡಬೇಡಿ
Life Style
today bhavishya
Astrology: ದಿನ ಭವಿಷ್ಯ | ಜೂನ್ 29 | ಆಕಸ್ಮಿಕ ಧನ ವ್ಯಯದ ಸೂಚನೆ, ಆಸ್ತಿ ವಿಷಯಗಳಲ್ಲಿ ವಿವಾದಗಳು
Dina Bhavishya
© Chitradurga News. Ruby Design Company. All Rights Reserved.

Chitradurga News App

Install
Welcome Back!

Sign in to your account

Username or Email Address
Password

Lost your password?

Not a member? Sign Up