By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Reading: SSLC ಪರೀಕ್ಷೆ ಅಕ್ರಮ | ಹತ್ತು ಜನ ಶಿಕ್ಷಕರ ಅಮಾನತು | ಫಲಿತಾಂಶದ ಮೇಲೆ ಪರಿಣಾಮ ಬೀರುತ್ತಾ ?
Share
Font ResizerAa
Chitradurga News-Kannada NewsChitradurga News-Kannada News
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2022 Foxiz News Network. Ruby Design Company. All Rights Reserved.

Home » SSLC ಪರೀಕ್ಷೆ ಅಕ್ರಮ | ಹತ್ತು ಜನ ಶಿಕ್ಷಕರ ಅಮಾನತು | ಫಲಿತಾಂಶದ ಮೇಲೆ ಪರಿಣಾಮ ಬೀರುತ್ತಾ ?

ಮುಖ್ಯ ಸುದ್ದಿ

SSLC ಪರೀಕ್ಷೆ ಅಕ್ರಮ | ಹತ್ತು ಜನ ಶಿಕ್ಷಕರ ಅಮಾನತು | ಫಲಿತಾಂಶದ ಮೇಲೆ ಪರಿಣಾಮ ಬೀರುತ್ತಾ ?

chitradurganews.com
Last updated: 30 April 2025 08:53
chitradurganews.com
2 months ago
Share
ddpi office
ಶಾಲಾ ಶಿಕ್ಷಣ ಇಲಾಖೆ
SHARE
https://chat.whatsapp.com/Jhg5KALiCFpDwME3sTUl7x

CHITRADURGA NEWS | 30 APRIL 2025

ಚಿತ್ರದುರ್ಗ: SSLC ಪರೀಕ್ಷೆ ವೇಳೆ ಅಕ್ರಮ ನಡೆದಿರುವುದು ತಡವಾಗಿ ಬೆಳಕಿಗೆ ಬಂದಿದ್ದು, ಸದರಿ ಪ್ರಕರಣದಲ್ಲಿ ಈಗಾಗಲೇ ಹತ್ತು ಜನ ಶಿಕ್ಷಕರು ಅಮಾನತು ಆಗಿದ್ದಾರೆ.

ಗಣಿತ ಪರೀಕ್ಷೆ ವೇಳೆ ಕೊಠಡಿಗಳಿಗೆ ತೆರಳಿ ಅನಧಿಕೃತ ಮಹಿಳೆಯೊಬ್ಬರು ನಕಲು ಮಾಡಿಸಿರುವುದು ಸಿ.ಸಿ.ಟಿವಿ ದೃಶ್ಯಗಳಲ್ಲಿ ಕಂಡು ಬಂದಿದ್ದು, ಇದೇ ವಿಚಾರಕ್ಕೆ ಬಿಇಓ, ಡಿಡಿಪಿಐ ಅವರಿಗೂ ಕಾರಣ ಕೇಳಿ ನೋಟೀಸ್‌ ನೀಡಲಾಗಿದೆ.

ಇದನ್ನೂ ಓದಿ: ಮೇ 05 ರಿಂದ ಪರಿಶಿಷ್ಟ ಜಾತಿ ಕುಟುಂಬಗಳ ಸಮೀಕ್ಷೆ | ಜಿಲ್ಲಾಧಿಕಾರಿ ವೆಂಕಟೇಶ್

ಚಿತ್ರದುರ್ಗ ನಗರದ ವಾಸವಿ ವಿದ್ಯಾಸಂಸ್ಥೆಯಲ್ಲಿದ್ದ ಎಸ್ಸೆಸ್ಸೆಲ್ಸಿ ಪರೀಕ್ಷಾ ಕೇಂದ್ರದಲ್ಲಿ ಮಾರ್ಚ್‌ 24 ರಂದು ಗಣಿತ ಪರೀಕ್ಷೆ ವೇಳೆ ಈ ಘಟನೆ ನಡೆದಿದೆ.

ಪರೀಕ್ಷೆಗೆ ಸಂಬಂಧ ಇಲ್ಲದ ಅನಾಮಧೇಯ ಮಹಿಳೆಯೊಬ್ಬರು ಪರೀಕ್ಷಾ ಕೇಂದ್ರಕ್ಕೆ ಬಂದು ಕೊಠಡಿಯಿಂದ ಕೊಠಡಿಗೆ ಓಡಾಡಿದ್ದಾರೆ. ಸಾಮೂಹಿಕವಾಗಿ ನಕಲು ಮಾಡಿಸಿದ್ದು, ಈ ಸಂಬಂಧ ನ್ಯಾಯವಾದಿ ಸಿ.ಎಲ್‌.ಅವಿನಾಶ್‌ ದೂರು ನೀಡಿದ್ದರು.

ಇದನ್ನೂ ಓದಿ: ಅಡಿಕೆ ಧಾರಣೆ | ರಾಜ್ಯದ ಯಾವ ಮಾರುಕಟ್ಟೆಯಲ್ಲಿ ಎಷ್ಟು ರೇಟ್‌

ಎಚ್ಚೆತ್ತ ಜಿಲ್ಲಾಧಿಕಾರಿ ಟಿ.ವೆಂಕಟೇಶ್‌ ಹಾಗೂ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಸ್‌.ಜೆ.ಸೋಮಶೇಖರ್‌ ಎಸ್ಸೆಸ್ಸೆಲ್ಸಿ ಪರೀಕ್ಷೆ ವೇಳೆ ಅಳವಡಿಸಿದ್ದ ಸಿ.ಸಿ.ಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದಾಗ ಮಹಿಳೆ ಪರೀಕ್ಷಾ ಕೇಂದ್ರಕ್ಕೆ ಬಂದು ಹೋಗಿರುವುದು ಸಾಬೀತಾಗಿದೆ.

ಈ ಹಿನ್ನೆಲೆಯಲ್ಲಿ ಚಿತ್ರದುರ್ಗ ತಾಲೂಕು ಬಿಇಓ ನಾಗಭೂಷಣ್‌ ಹಾಗೂ ಡಿಡಿಪಿಐ ಮಂಜುನಾಥ್‌ ಅವರಿಗೆ ಶೋಕಾಸ್‌ ನೋಟೀಸ್‌ ನೀಡಿದ್ದಾರೆ.

ಇದನ್ನೂ ಓದಿ: ಬೇಸಿಗೆಯಲ್ಲಿ ಈ 3 ವಸ್ತುಗಳನ್ನು ಮುಖಕ್ಕೆ ಹಚ್ಚಿದರೆ ಮುಖದ ಬಣ್ಣ ಕಳೆದುಹೋಗುತ್ತದೆಯಂತೆ

ಜಿಪಂ ಸಿಇಓ ಎಸ್‌.ಜೆ.ಸೋಮಶೇಖರ್‌ ಪರೀಕ್ಷಾ ಕೇಂದ್ರದಲ್ಲಿ ಸ್ಥಾನಿಕ ಜಾಗೃತ ದಳದ ಅಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದ ಕೊಳಾಳು ಸರ್ಕಾರಿ ಪ್ರೌಢಶಾಲೆ ಮುಖ್ಯ ಶಿಕ್ಷಕ ಎಚ್‌.ಆರ್‌.ತಿಮ್ಮಪ್ಪ ಹಾಗೂ ಕೇಂದ್ರದ ಉಪ ಅಧೀಕ್ಷಕರಾಗಿ ಕಾರ್ಯನಿರ್ವಹಿಸಿದ್ದ ಕೋಟೆ ಪ್ರೌಢಶಾಲೆ ಮುಖ್ಯ ಶಿಕ್ಷಕಿ ಸಿ.ಟಿ.ಸೌಮ್ಯಕುಮಾರಿ ಅವರನ್ನು ಅಮಾನತು ಮಾಡಿ ಏ.೫ ರಂದು ಆದೇಶ ಹೊರಡಿಸಿದ್ದಾರೆ.

ಇದರೊಟ್ಟಿಗೆ ಪರೀಕ್ಷಾ ಕೇಂದ್ರದಲ್ಲಿ ಮೇಲ್ವಿಚಾರಕರಾಗಿ ಕಾರ್ಯನಿರ್ವಹಿಸಿದ್ದ ನಂದಿಪುರ ಸರ್ಕಾರಿ ಶಾಲೆ ಶಿಕ್ಷಕ ಕೆಂಚಮೂರ್ತಿ, ಲಕ್ಷ್ಮೀಸಾಗರ ಸರ್ಕಾರಿ ಶಾಲೆ ಶಿಕ್ಷಕಿ ರೋಷನ್‌ ಅರಾ, ಎಂ.ಕೆ.ಹಟ್ಟಿ ರಾಮಕೃಷ್ಣ ಪ್ರೌಢಶಾಲೆ ಶಿಕ್ಷಕಿ ಜಿ.ಕೆ.ಕವಿತಾ, ಪಂಡ್ರಹಳ್ಳಿ ಶಾಲೆ ಶಿಕ್ಷಕಿ ಸಿ.ರಂಗಮ್ಮ, ರೋಟರಿ ಶಾಲೆ ಶಿಕ್ಷಕಿ ಆರ್‌.ಜಯಲಕ್ಷ್ಮೀ, ಎಣ್ಣೆಗೆರೆ ಸರ್ಕಾರಿ ಶಾಲೆ ಶಿಕ್ಷಕ ಎಸ್‌.ಉಮಾಪತಿ ಅವರನ್ನು ಶಿಕ್ಷಣ ಇಲಾಖೆ ಉಪನಿರ್ದೇಶಕ ಮಂಜುನಾಥ್‌ ಅಮಾನತು ಮಾಡಿದ್ದಾರೆ.

ಇದನ್ನೂ ಓದಿ: ಮಗುವಿಗೆ ಖರ್ಜೂರ ತಿನ್ನಿಸುವುದರಿಂದಾಗುವ ಪ್ರಯೋಜನಗಳು

ಪರೀಕ್ಷೆ ನಡೆಯುತ್ತಿದ್ದ ಕೊಠಡಿಗಳಿಗೆ ಅಪರಿಚಿತ ಮಹಿಳೆಯೊಬ್ಬರು ತೆರಳಿ ನಕಲು ಮಾಡಿಸಿರುವುದು ದೃಢಪಟ್ಟ ಹಿನ್ನೆಲೆಯಲಿ ಬಿಇಓ ಎಸ್‌.ನಾಗಭೂಷಣ್‌ ಚಿತ್ರದುರ್ಗ ನಗರ ಠಾಣೆಯಲ್ಲಿ ಮಹಿಳೆ ವಿರುದ್ಧ ಕ್ರಿಮಿನಲ್‌ ಮೊಕದ್ದಮೆ ದಾಖಲಿಸಲು ದೂರು ನೀಡಿದ್ದಾರೆ. ಆರಂಭದಲ್ಲಿ ಅನಾಮಧೇಯ ಮಹಿಳೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿತ್ತು. ಆನಂತರ ಮಹಿಳೆಯ ಹೆಸರು ರಶ್ಮಿ ಎಂದು ತಿಳಿದು ಬಂದಿದೆ.

ಒಟ್ಟಾರೆ ಇಡೀ ಪ್ರಕರಣದ ಕುರಿತಾಗಿ ಜಿಲ್ಲಾಧಿಕಾರಿಗಳು ಸರ್ಕಾರಕ್ಕೆ ವರದಿ ಸಲ್ಲಿಸಿರುವುದಾಗಿ ಮಾಹಿತಿ ನೀಡಿದ್ದಾರೆ.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

TAGGED:District Collector T.VenkateshDUPLICATIONExaminationfeaturedMALL PRACTICEMASS DUPLICATIONMathematicsS.J. SomasekharSSLCSuspensionTeachersVasavi SchoolZilla Panchayat Chief Executive Officerಅಮಾನತುಎಸ್.ಜೆ.ಸೋಮಶೇಖರ್ಎಸ್ಸೆಸ್ಸೆಲ್ಸಿಗಣಿತಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಜಿಲ್ಲಾಧಿಕಾರಿ ಟಿ.ವೆಂಕಟೇಶ್ನಕಲುಪರೀಕ್ಷೆಮಾಲ್‌ ಪ್ರಾಕ್ಟೀಸ್‌ವಾಸವಿ ವಿದ್ಯಾಸಂಸ್ಥೆಶಿಕ್ಷಕರುಸಾಮೂಹಿಕ ನಕಲು
Share This Article
Facebook Email Print
Previous Article ರಾಜ್ಯ ಮಟ್ಟದ ತಾಂತ್ರಿಕ ಸ್ಪರ್ಧೆ | SRS ಕಾಲೇಜಿನ ಅನಿತಾ ದ್ವಿತೀಯ ಸ್ಥಾನ
Next Article VEERASHIVA SAMUDAYA BHAVANA BHUMI PUJE ವೀರಶೈವ ಸಮದಾಯ ಭವನಕ್ಕೆ ಭೂಮಿ ಪೂಜೆ | ವೀರಶೈವ ಅರ್ಬನ್‌ ಕೋ-ಆಪರೇಟಿವ್‌ ಸೊಸೈಟಿ ರಜತ ಮಹೋತ್ಸವದ ಸ್ಮರಣಾರ್ಥ
Leave a Comment

Leave a Reply Cancel reply

Your email address will not be published. Required fields are marked *

today bhavishya
Astrology: ದಿನ ಭವಿಷ್ಯ | ಜೂನ್ 22 | ವ್ಯವಹಾರದಲ್ಲಿ ಅನಿರೀಕ್ಷಿತ ಅಡೆತಡೆಗಳು, ಆರೋಗ್ಯ ಸಮಸ್ಯೆ, ಹೊಸ ವಾಹನ ಖರೀದಿ
Dina Bhavishya
ಯೋಗಶಾಸ್ತ್ರದ ನಿರಂತರ ಅನುಷ್ಠಾನದಿಂದ ಜೀವನೋತ್ಸಾಹ | ಇಮ್ಮಡಿ ಸಿದ್ದರಾಮೇಶ್ವರ ಶ್ರೀ
ಮುಖ್ಯ ಸುದ್ದಿ
ಮಾಹಿತಿ ಹಕ್ಕು ಕಾಯ್ದೆ | ಶುಲ್ಕ ಪರಿಷ್ಕರಣೆಗೆ ಪ್ರಸ್ತಾವನೆ | ಆಯುಕ್ತ ರುದ್ರಣ್ಣ ಹರ್ತಿಕೋಟೆ
ಮುಖ್ಯ ಸುದ್ದಿ
ಅರ್ಜಿ ಅಹ್ವಾನ
ಜೂನ್ 30ರವರೆಗೆ ವಿದ್ಯಾರ್ಥಿ ನಿಲಯ ಪ್ರವೇಶಕ್ಕೆ ಅರ್ಜಿ ಸಲ್ಲಿಸಲು ಅವಕಾಶ
ಮುಖ್ಯ ಸುದ್ದಿ
© Chitradurga News. Ruby Design Company. All Rights Reserved.

Chitradurga News App

Install
Welcome Back!

Sign in to your account

Username or Email Address
Password

Lost your password?

Not a member? Sign Up