By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Reading: ಭೀಕರ ಅಪಘಾತ | ಐದು ಜನ ಸ್ಥಳದಲ್ಲೇ ಸಾವು | ತಮಟಕಲ್ಲು ಬಳಿ ಘಟನೆ
Share
Font ResizerAa
Chitradurga News-Kannada NewsChitradurga News-Kannada News
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2022 Foxiz News Network. Ruby Design Company. All Rights Reserved.

Home » ಭೀಕರ ಅಪಘಾತ | ಐದು ಜನ ಸ್ಥಳದಲ್ಲೇ ಸಾವು | ತಮಟಕಲ್ಲು ಬಳಿ ಘಟನೆ

ಕ್ರೈಂ ಸುದ್ದಿ

ಭೀಕರ ಅಪಘಾತ | ಐದು ಜನ ಸ್ಥಳದಲ್ಲೇ ಸಾವು | ತಮಟಕಲ್ಲು ಬಳಿ ಘಟನೆ

chitradurganews.com
Last updated: 9 March 2025 20:08
chitradurganews.com
4 months ago
Share
Accident near thamatakallu
ಭೀಕರ ಅಪಘಾತ
SHARE
https://chat.whatsapp.com/Jhg5KALiCFpDwME3sTUl7x

CHITRADURGA NEWS | 09 MARCH 2025

ಚಿತ್ರದುರ್ಗ: ಮಟ ಮಟ ಮಧ್ಯಾಹ್ನ ಚಿತ್ರದುರ್ಗ ನಗರದ ಹೊರವಲಯದ ಹೊಸ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ತಮಟಕಲ್ಲು ಮೇಲ್ಸೇತುವೆ ಸಮೀಪ ಭೀಕರ ಅಪಘಾತ ಸಂಭವಿಸಿ ಐದು ಜನ ಮೃತಪಟ್ಟಿದ್ದಾರೆ.

ಬೆಳಗಾವಿ ಕಡೆಯಿಂದ ಬೆಂಗಳೂರು ಕಡೆಗೆ ತೆರಳುತ್ತಿದ್ದ ಇನ್ನೋವಾ ಕಾರು ಲಾರಿಗೆ ಡಿಕ್ಕಿಯಾಗಿದ್ದು, ಡಿಕ್ಕಿಯ ರಭಸಕ್ಕೆ ಕಾರು ನಜ್ಜುಗುಜ್ಜಾಗಿದೆ.

ಇದನ್ನೂ ಓದಿ: ಮೂವರು ಪೊಲೀಸ್ Inspector ವರ್ಗಾವಣೆ

ಇನ್ನೋವಾ ಕಾರಿನಲ್ಲಿದ್ದ ಐದು ಜನ ಸ್ಥಳದಲ್ಲೇ ಮೃತಪಟ್ಟಿದ್ದರೆ, ಒಬ್ಬರು ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಹೆದ್ದಾರಿಯ ಬದಿಯಲ್ಲಿ ಲಾರಿ ನಿಂತಿದ್ದು, ವೇಗವಾಗಿ ಬಂದ ಇನ್ನೋವಾ ಕಾರಿನ ಚಾಲಕನ ನಿಯಂತ್ರಣ ತಪ್ಪಿ ಲಾರಿಗೆ ಅಪ್ಪಳಿಸಿದೆ. ಅಪಘಾತದಲ್ಲಿ ಮೃತಪಟ್ಟವರನ್ನು ಬೆಂಗಳೂರು ಮೂಲದವರು ಎಂದು ಗುರುತಿಸಲಾಗಿದೆ.

ಇದನ್ನೂ ಓದಿ: ನಾಳೆಯಿಂದ ಒಂದು ವಾರ ವಿದ್ಯುತ್ ವ್ಯತ್ಯಯ

ಅಪಘಾತದಲ್ಲಿ ಮೃತಪಟ್ಟವರನ್ನು ಬೆಂಗಳೂರು ಬಿಎಂಟಿಸಿ ನಿವೃತ್ತ ನೌಕರ ಜೆ.ಸಿ.ಶಾಂತಮೂರ್ತಿ(60), ವಿದ್ಯಾರಣ್ಯಪುರದ ಎನ್.ಎಸ್.ರುದ್ರಸ್ವಾಮಿ(69), ಶ್ರೀನಿವಾಸ್, ವಿದ್ಯಾರಣ್ಯಪುರದ ಚಂದ್ರಹಾಸ್(67) ಹಾಗೂ ಮಲ್ಲಿಕಾರ್ಜುನ(70) ಮೃತರು. 72 ವರ್ಷದ ಎನ್.ಬಿ.ಚಿದಂಬರಚಾರ್ ಗಂಭೀರವಾಗಿ ಗಾಯಗೊಂಡಿದ್ದಾರೆ.

ಬೆಂಗಳೂರು ಮೂಲದ ನಿವೃತ್ತಿಯಾಗಿರುವ ವಾಕಿಂಗ್ ಸ್ನೇಹಿತರಾಗಿದ್ದು, ಎಲ್ಲರೂ ಒಟ್ಟಿಗೆ ಉತ್ತರ ಕರ್ನಾಟಕ ಭಾಗದ ಗವಿಸಿದ್ದೇಶ್ವರ ಮಠ, ಅಂಜನಾಧ್ರಿ ಬೆಟ್ಟ ಮತ್ತಿತರೆ ದೇವಸ್ಥಾನಗಳಿಗೆ ತೆರಳಿ ದಾವಣಗೆರೆ ಮೂಲಕ ಬೆಂಗಳೂರಿಗೆ ವಾಪಾಸಾಗುತ್ತಿದ್ದಾಗ ಈ ಘಟನೆ ನಡೆದಿದೆ.

ಇದನ್ನೂ ಓದಿ: ಮೊಬೈಲ್ ಕ್ಯಾಂಟೀನ್ ಸಹಾಯಧನಕ್ಕೆ ಆಯ್ಕೆಪಟ್ಟಿ ಪ್ರಕಟ | ಆಕ್ಷೇಪಣೆ ಸಲ್ಲಿಸಲು ಮಾರ್ಚ್ 12 ಕೊನೆ ದಿನ

ಘಟನಾ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್‍ಕುಮಾರ್ ಬಂಡಾರು, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಎಸ್.ಜೆ.ಕುಮಾರಸ್ವಾಮಿ, ಡಿವೈಎಸ್‍ಪಿ ದಿನಕರ್ ಸೇರಿದಂತೆ ಗ್ರಾಮಾಂತರ ಠಾಣೆ ಪೊಲೀಸ್ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

TAGGED:accidentBangaloreBelgaumChitradurga newsfeaturedKannada NewsNational Highway 48Policeಅಪಘಾರಕನ್ನಡ ಸುದ್ದಿಚಿತ್ರದುರ್ಗ ನ್ಯೂಸ್ಪೊಲೀಸ್ಬೆಂಗಳೂರುಬೆಳಗಾವಿರಾಷ್ಟ್ರೀಯ ಹೆದ್ದಾರಿ 48
Share This Article
Facebook Email Print
Previous Article Habbida Malemadhyadolage Kannada Novel: 23. ಜಂಗಮಯ್ಯರ ಗೃಹ ನಿರ್ಮಾಣ
Next Article ವಿಜೃಂಭಣೆಯಿಂದ ಜರುಗಿದ ಮಾವಿನಹಳ್ಳಿ ಬಸವೇಶ್ವರ ಸ್ವಾಮಿ ರಥೋತ್ಸವ
Leave a Comment

Leave a Reply Cancel reply

Your email address will not be published. Required fields are marked *

ಉಸಿರಾಟದ ಕಾಯಿಲೆಗಳಿಗೆ ಈ ಎಲೆಯನ್ನು ಬಳಸಿ
Life Style
ಹೃದಯಾಘಾತದ ನಂತರ ಈ ತಪ್ಪುಗಳನ್ನು ಮಾಡಬೇಡಿ
Life Style
ಸ್ವಸ್ತಿಕ್ ಚಿಹ್ನೆ ಬಿಡಿಸುವಾಗ ನೀವು ಈ ತಪ್ಪನ್ನು ಮಾಡಬೇಡಿ
Life Style
today bhavishya
Astrology: ದಿನ ಭವಿಷ್ಯ | ಜೂನ್ 29 | ಆಕಸ್ಮಿಕ ಧನ ವ್ಯಯದ ಸೂಚನೆ, ಆಸ್ತಿ ವಿಷಯಗಳಲ್ಲಿ ವಿವಾದಗಳು
Dina Bhavishya
© Chitradurga News. Ruby Design Company. All Rights Reserved.

Chitradurga News App

Install
Welcome Back!

Sign in to your account

Username or Email Address
Password

Lost your password?

Not a member? Sign Up