CHITRADURGA NEWS | 06 JULY 2024
(Accidnet news)ಚಿತ್ರದುರ್ಗ: ಶಿವಮೊಗ್ಗ ಬಳಿ ಎರಡು ಕಾರುಗಳ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂರು ಜನ ಮೃತಪಟ್ಟಿರುವ ಧಾರುಣ ಘಟನೆ ನಡೆದಿದೆ.
ಶಿವಮೊಗ್ಗದ ಲಯನ್ ಸಫಾರಿ ಬಳಿ ಇನ್ನೋವಾ ಹಾಗೂ ಸ್ವಿಫ್ಟ್ ಡಿಸೈರ್ ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ.
ಇದನ್ನೂ ಓದಿ: ಹಿಮಾಲಯ ಟ್ರಕ್ಕಿಂಗ್ ಮಾಡಿದ ದುರ್ಗದ ವೈದ್ಯ ಡಾ.ಪ್ರಹ್ಲಾದ್
ಸ್ವಿಫ್ಟ್ ಕಾರಿನಲ್ಲಿದ್ದವರು ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಸಿದ್ದಣ್ಣ, ಚಂದ್ರು ಹಾಗೂ ಇಮಾಮ್ಸಾಬ್ ಎಂದು ಗುರುತಿಸಲಾಗಿದೆ.
ಅಪಘಾತದಲ್ಲಿ ಗಾಯಗೊಂಡವರನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಇದನ್ನೂ ಓದಿ: ಬಸವಣ್ಣ ಪಠ್ಯಕ್ಕೆ ‘ವೀರಶೈವ’ ಪದ ಸೇರಿಸಬೇಡಿ | ಮುಖ್ಯಮಂತ್ರಿಗೆ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಪತ್ರ
ಸ್ವಿಫ್ಟ್ ಕಾರು ಆಯನೂರು ಕಡೆಯಿಂದ ಶಿವಮೊಗ್ಗಕ್ಕೆ ಬಂದು ಚಳ್ಳಕೆರೆ ಕಡೆಗೆ ತೆರಳುತ್ತಿದ್ದಾಗ ಮುತ್ತಿನಕೊಪ್ಪ ಸಮೀಪದಲ್ಲಿ ಇನ್ನೋವಾ ಕಾರು ಡಿಕ್ಕಿಯಾಗಿದೆ.
ಇನ್ನೋವಾ ಕಾರಿನಲ್ಲಿ ಇಬ್ಬರು ಮಕ್ಕಳು ಸೇರಿದಂತೆ ನಾಲ್ವರು ವಿದೇಶಿಯರಿದ್ದರು. ಅವರಿಗೆ ಸಣ್ಣ ಪುಟ್ಟ ಗಾಯಗಳಾಗಿದೆ. ಇನ್ನೋವಾದಲ್ಲಿ ಏರ್ಬ್ಯಾಗ್ ತೆರೆದುಕೊಂಡಿದ್ದರಿಂದ ಅವರಿಗೆ ಹೆಚ್ಚು ತೊಂದರೆಯಾಗಿಲ್ಲ.
ಇದನ್ನೂ ಓದಿ: ಸಂಸದ ಗೋವಿಂದ ಕಾರಜೋಳ ಆಪ್ತ ಸಹಾಯಕರಾಗಿ ಸಿ.ಹೆಚ್.ದೇವರಾಜ್
ಶಿವಮೊಗ್ಗ ಜಿಲ್ಲೆಯ ಕುಂಸಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail
chitradurganews23@gmail.com
» Whatsapp Number
