CHITRADURGA NEWS | 03 MAY 2025
ಚಿತ್ರದುರ್ಗ: ಇದು ಅಚ್ಚರಿಯಾದರೂ ಸತ್ಯ. ಬರೋಬ್ಬರಿ 28 ವರ್ಷಗಳ ಬಳಿಕ ಆರೋಪಿಯನ್ನು ಬಂಧಿಸಿರುವ ಪೊಲೀಸರು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
ಮೊಳಕಾಲ್ಮೂರು ಪೊಲೀಸರು ಈ ಕಾರ್ಯಾಚರಣೆ ನಡೆಸಿದ್ದು, ಕಳ್ಳತನ ಪ್ರಕರಣದಲ್ಲಿ ನ್ಯಾಯಾಲಯಕ್ಕೆ ಹಾಜರಾಗದೆ ತಪ್ಪಿಸಿಕೊಂಡಿದ್ದ ಆರೋಪಿ ಈಗ ನ್ಯಾಯಾಂಗ ಬಂಧನಕ್ಕೆ ಸಿಲುಕಿರುವ ಕಥೆ ಇದಾಗಿದೆ.

ಇದನ್ನೂ ಓದಿ: SSLC | ಹಿರಿಯೂರಿನ ಪಿಗ್ಮಿ ಕಲೆಕ್ಟರ್ ಪುತ್ರ, ಸರ್ಕಾರಿ ಶಾಲೆ ಶಿಕ್ಷಕರ ಪುತ್ರಿ ರಾಜ್ಯಕ್ಕೆ ಟಾಪರ್ಸ್
ಕಾನೂನಿನ ಕಣ್ಣಿನಿಂದ ತಪ್ಪಿಸಿಕೊಳ್ಳಲು ಯಾರಿಂದಲೂ ಸಾಧ್ಯವಿಲ್ಲ ಎನ್ನುವುದಕ್ಕೆ ಈ ಘಟನೆ ಸಾಕ್ಷಿಯಾಗಿದೆ.
ಮೊಳಕಾಲ್ಮೂರು ಪಟ್ಟಣದ ತಿಲಕ್ ನಗರದ ನಿವಾಸಿ, ಆರೋಪಿ 54 ವರ್ಷದ ಮಾರುತಿ ಅಲಿಯಾಸ್ ಮನು ಬಂಧಿತ ವ್ಯಕ್ತಿ.
1997 ರಲ್ಲಿ ಮೊಳಕಾಲ್ಮೂರು ಪಟ್ಟಣ ಹಾಗೂ ಕೊಂಡ್ಲಹಳ್ಳಿಯಲ್ಲಿ ಕಳ್ಳತನ ಪ್ರಕರಣಗಳಲ್ಲಿ ಆರೋಪಿಯಾಗಿದ್ದ ಮಾರುತಿ ಒಟ್ಟು 9 ಪ್ರಕರಣಗಳಲ್ಲಿ ಬೇಕಾಗಿದ್ದು, ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೆ 28 ವರ್ಷಗಳಿಂದ ತಲೆಮರೆಸಿಕೊಂಡಿದ್ದ.
ಇದನ್ನೂ ಓದಿ: ಪುರುಷರ ಹೊಟ್ಟೆಯ ಕೊಬ್ಬನ್ನು ಕಡಿಮೆ ಮಾಡಲು ಈ 5 ಮನೆಮದ್ದುಗಳನ್ನು ಬಳಸಿ
ತಲೆಮರೆಸಿಕೊಂಡಿದ್ದ ಮಾರುತಿ ಮಡಿಕೇರಿಯಲ್ಲಿ ನೆಲೆ ಕಂಡುಕೊಂಡಿದ್ದು, ಪೊಲೀಸರು ಅಲ್ಲಿಂದ ವಶಕ್ಕೆ ಪಡೆದುಕೊಂಡು ಬಂದಿದ್ದಾರೆ. ಬಂಧಿತನ್ನು ಮೇ.2 ರಂದು ಮೊಳಕಾಲ್ಮೂರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಸದರಿ ಆರೋಪಿಯ ಪತ್ತೆಗಾಗಿ ಚಳ್ಳಕೆರೆ ಡಿವೈಎಸ್ಪಿ ರಾಜಣ್ಣ, ಮೊಳಕಾಲ್ಮೂರು ಸಿಪಿಐ ವಸಂತ ವಿ ಆಸೋದೆ ಮಾರ್ಗದರ್ಶನದಲ್ಲಿ ಪಿಎಸ್ಐಗಳಾದ ಈರೇಶ್, ಪಾಂಡುರಂಗ ಜಿ, ಸಿಬ್ಬಂದಿಗಳಾದ ವೀರಣ್ಣ, ಖಾದರ್ ಭಾಷಾ, ಗೋವಿಂದ ಅವರ ತಂಡ ರಚಿಸಿ ಬಾತ್ಮೀದಾರರು, ತಾಂತ್ರಿಕ ಸಿಬ್ಬಂದಿ ನೆರವಿನೊಂದಿಗೆ ಎಲ್ಲಾ ಆಯಾಮಗಳಲ್ಲಿ ಮಾಹಿತಿ ಸಂಗ್ರಹಿಸಿ ಬಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಇದನ್ನೂ ಓದಿ: ಟೈರ್ ಬ್ಲಾಸ್ಟ್ | ಡಿವೈಡರ್ಗೆ ಡಿಕ್ಕಿಯಾದ ಇನ್ನೋವಾ | ಮೂರು ಜನ ಸಾವು
ಈ ಕಾರ್ಯಾಚರಣೆಯನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು ಶ್ಲಾಘಿಸಿದ್ದಾರೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail
chitradurganews23@gmail.com
» Whatsapp Number
