CHITRADURGA NEWS | 14 JANUARY 2026
ಚಿತ್ರದುರ್ಗ: ಚಿತ್ರದುರ್ಗ ನಗರದ ಹೊರವಲಯದ ಕಾತ್ರಾಳು ಕೆರೆಯಲ್ಲಿ ಕೈಕಾಲು ಕಟ್ಟಿ ಚೀಲದಲ್ಲಿ ತುಂಬಿ ಎಸೆದಿರುವ ರೀತಿಯಲ್ಲಿ ಅಪರಿಚಿತ ಯುವಕನ ಶವ ಪತ್ತೆಯಾಗಿದೆ.
ತಾಲೂಕಿನ ಕಾತ್ರಾಳು ಕೆರೆಯಲ್ಲಿ ತೇಲುವ ರೀತಿಯಲ್ಲಿ ಶವ ಕಂಡು ಬಂದಿದ್ದು, ಸುಮಾರು 25 ವರ್ಷದ ಯುವಕ ಎಂದು ಅಂದಾಜಿಸಲಾಗುತ್ತಿದೆ.
ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ಜನವರಿ 14 | ಮೆಕ್ಕೆಜೋಳ, ಶೇಂಗಾ, ಕಡಲೆ ರೇಟ್ ಎಷ್ಟಿದೆ?
ದಾವಣಗೆರೆ-ಚಿತ್ರದುರ್ಗ ರಾಷ್ಟ್ರೀಯ ಹೆದ್ದಾರಿಗೆ ಹೊಂದಿಕೊಂಡಂತಿರುವ ಕೆ.ಬಳ್ಳೆಕಟ್ಟೆ ಬಳಿಯಿರುವ ಈ ಕೆರೆಯಲ್ಲಿ ಹಗ್ಗದಲ್ಲಿ ಕೈ ಕಾಲು ಕಟ್ಟಿ ಚೀಲಕ್ಕೆ ತುಂಬಿ ಎಸೆದಿರುವಂತೆ ಪ್ರಕರಣ ಮೇಲ್ನೋಟಕ್ಕೆ ಕಂಡು ಬರುತ್ತಿದೆ.
ಘಟನಾ ಸ್ಥಳಕ್ಕೆ ಚಿತ್ರದುರ್ಗ ಗ್ರಾಮಾಂತರ ಠಾಣೆ ಹಾಗೂ ಭರಮಸಾಗರ ಠಾಣೆ ಪೊಲೀಸರು, ಶ್ವಾನ ದಳ, ಸುಕೋ ಟೀಂ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
