CHITRADURGA NEWS | 06 AUGUST 2026
ಹೊಳಲ್ಕೆರೆ: ಅಷ್ಟಾವರಣಗಳು ವ್ಯಕ್ತಿಯ ಆಧ್ಯಾತ್ಮಿಕ, ನೈತಿಕ ಹಾಗೂ ಸಾಮಾಜಿಕ ಬದುಕಿಗೆ ರಕ್ಷಣಾ ಕವಚಗಳಾಗಿ ಕಾರ್ಯನಿರ್ವಹಿಸುತ್ತವೆ ಎಂದು ಕೊಟ್ರೆ ನಂಜಪ್ಪ ಕಾಲೇಜಿನ ಇತಿಹಾಸ ಉಪನ್ಯಾಸಕ ಡಾ.ಜಿ.ವಿ.ಮಂಜುನಾಥ ಹೇಳಿದರು.
ಇದನ್ನೂ ಓದಿ: ಸಚಿವರಾಗಿ ದುರ್ಗಕ್ಕೆ ಆಗಮಿಸಿದ ಟಿ.ರಘುಮೂರ್ತಿ | ಮದಕರಿ ವೃತ್ತದಲ್ಲಿ ಅದ್ದೂರಿ ಸ್ವಾಗತ
ಹೊಳಲ್ಕೆರೆಯ ಒಂಟಿಕಂಬದ ಮುರುಘಾಮಠದಲ್ಲಿ ಲಿಂಗೈಕ್ಯ ಜಗದ್ಗುರು ಶ್ರೀ ಮಲ್ಲಿಕಾರ್ಜುನ ಮುರುಘರಾಜೇಂದ್ರ ಮಹಾಸ್ವಾಮಿಗಳವರ ಸ್ಮರಣೋತ್ಸವ ಅಂಗವಾಗಿ ಆಯೋಜಿಸಿದ್ದ ಶರಣತತ್ವ ಶಿಕ್ಷಣ ಕಾರ್ಯಾಗಾರದಲ್ಲಿ ‘ಗುರು–ಲಿಂಗ–ಜಂಗಮ’ ವಿಷಯದ ಕುರಿತು ವಿಶೇಷ ಉಪನ್ಯಾಸ ನೀಡಿದ ಅವರು, ಬಸವಣ್ಣನವರ ಶರಣ ಧರ್ಮವು ಮಾನವೀಯತೆ, ಸಮಾನತೆ, ಕಾಯಕ ಹಾಗೂ ದಾಸೋಹದ ಮೌಲ್ಯಗಳನ್ನು ಪ್ರತಿಪಾದಿಸುವ ವಿಶ್ವಮಾನವ ಧರ್ಮವಾಗಿದೆ ಎಂದು ತಿಳಿಸಿದರು.
ಶರಣರ ವಚನಗಳಲ್ಲಿ ಅಡಕವಾಗಿರುವ ಸಾಮಾಜಿಕ ನ್ಯಾಯ, ಸಮಾನತೆ, ಸೌಹಾರ್ದತೆ ಮತ್ತು ವ್ಯಕ್ತಿತ್ವ ವಿಕಾಸದ ಸಂದೇಶಗಳು ಇಂದಿನ ಯುವಜನತೆಗೆ ದಾರಿದೀಪವಾಗಿದ್ದು, ಶರಣ ಸಾಹಿತ್ಯವು ಸಮಾಜ ಪರಿವರ್ತನೆಗೆ ಪ್ರೇರಣೆಯಾದ ಮಹತ್ವದ ಚಳವಳಿಯಾಗಿದೆ ಎಂದು ಹೇಳಿದರು.
ಧಾರವಾಡದ ಚೆನ್ನಬಸವ ಮಹಾಸ್ವಾಮಿಗಳು ಮಾತನಾಡಿ, ವಿಭೂತಿ, ರುದ್ರಾಕ್ಷಿ ಹಾಗೂ ಮಂತ್ರಗಳ ಆಧ್ಯಾತ್ಮಿಕ ಮಹತ್ವವನ್ನು ವಿವರಿಸಿದರು. ಅಷ್ಟಾವರಣಗಳ ಆಚರಣೆ ವ್ಯಕ್ತಿಯನ್ನು ಸತ್ಯ, ಶಾಂತಿ ಮತ್ತು ಧರ್ಮದ ಮಾರ್ಗದಲ್ಲಿ ನಡೆಸಿ ಆತ್ಮಶುದ್ಧಿಗೆ ದಾರಿ ಮಾಡಿಕೊಡುತ್ತದೆ ಎಂದು ತಿಳಿಸಿದರು.
ಇದನ್ನೂ ಓದಿ: ಚಳ್ಳಕೆರೆಯಲ್ಲಿ ತೀವ್ರ ಬರದ ಬರೆ | ರೈತರ ಜಮೀನುಗಳಿಗೆ ಸಚಿವ ಟಿ.ರಘುಮೂರ್ತಿ ಭೇಟಿ
ಸಾಹಿತಿ ನಿರಂಜನ ದೇವರಮನೆ ಅವರು ಪಾದೋದಕ ಮತ್ತು ಪ್ರಸಾದದ ಮಹತ್ವವನ್ನು ವಿವರಿಸಿ, ಶರಣಧರ್ಮದಲ್ಲಿ ಅವು ಸಮಾನತೆ, ದಾಸೋಹ, ಸಹಬಾಳ್ವೆ ಮತ್ತು ಮಾನವೀಯ ಮೌಲ್ಯಗಳನ್ನು ಪ್ರತಿಬಿಂಬಿಸುವ ಜೀವನ ಪದ್ಧತಿಗಳಾಗಿವೆ ಎಂದು ಹೇಳಿದರು.
ಚಿತ್ರದುರ್ಗದ ಛಲವಾದಿ ಗುರುಪೀಠದ ಬಸವನಾಗಿದೇವ ಮಹಾಸ್ವಾಮಿಗಳು ಮಾತನಾಡಿ, ಬಸವಣ್ಣನವರ ಶರಣ ಧರ್ಮವು ಸಮಾನತೆ, ಕಾಯಕ, ದಾಸೋಹ ಮತ್ತು ಮಾನವೀಯತೆಯ ಮೌಲ್ಯಗಳನ್ನು ಸಾರುವ ಶ್ರೇಷ್ಠ ಜೀವನ ಮಾರ್ಗವಾಗಿದೆ. ಯುವಜನತೆ ಶರಣರ ವಚನಗಳಲ್ಲಿರುವ ನೈತಿಕ ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಂಡರೆ ಸಮಾಜದಲ್ಲಿ ಶಾಂತಿ, ಸಹಬಾಳ್ವೆ ಹಾಗೂ ಪರಸ್ಪರ ಗೌರವ ವೃದ್ಧಿಯಾಗುತ್ತದೆ ಎಂದು ಹೇಳಿದರು.
ಇದನ್ನೂ ಓದಿ: ಆ.30ರೊಳಗೆ 75 ಗ್ರಾಮಗಳಿಗೆ ಕುಡಿಯುವ ನೀರು |ಅಧಿಕಾರಿಗಳಿಗೆ ಸಚಿವ ಟಿ.ರಘುಮೂರ್ತಿ ಖಡಕ್ ಸೂಚನೆ
ಕಾರ್ಯಕ್ರಮದಲ್ಲಿ ತಿಪ್ಪೇರುದ್ರಸ್ವಾಮಿಗಳು, ಪೂರ್ಣಾನಂದ ಶ್ರೀಗಳು, ಶರಣೆ ಅಕ್ಕಮಹಾದೇವಿ ತಾಯಿ, ವಿವಿಧ ಶಿಕ್ಷಣ ಸಂಸ್ಥೆಗಳ ಉಪನ್ಯಾಸಕರು, ಸಂಶೋಧಕರು, ವಿದ್ಯಾರ್ಥಿಗಳು, ರೈತರು, ಶರಣತತ್ವ ಚಿಂತಕರು ಹಾಗೂ ಸಾಹಿತ್ಯಾಸಕ್ತರು ಭಾಗವಹಿಸಿದ್ದರು.
ನಾಳೆಯ ಕಾರ್ಯಕ್ರಮ:
ಆಗಸ್ಟ್ 7ರಂದು ಬೆಳಿಗ್ಗೆ 7 ಗಂಟೆಗೆ ಬಸವಭೃಂಗೇಶ್ವರ ಮಹಾಸ್ವಾಮಿಗಳಿಂದ ಇಷ್ಟಲಿಂಗ ಪೂಜೆಯ ಪ್ರಾತ್ಯಕ್ಷಿಕೆ ನಡೆಯಲಿದೆ. ಬಳಿಕ ಭಕ್ತ–ಮಹೇಶ, ಪ್ರಸಾದಿ–ಪ್ರಾಣಲಿಂಗಿ, ಶರಣ–ಐಕ್ಯ ಸೇರಿದಂತೆ ವಿವಿಧ ವಿಷಯಗಳ ಕುರಿತು ಉಪನ್ಯಾಸಗಳು ಹಾಗೂ ಮಧ್ಯಾಹ್ನ ಸಾಮೂಹಿಕ ಚರ್ಚೆ, ಪರಿಸರ ಗೀತೆ ಮತ್ತು ಗುರುಕರಣ ತ್ರಿವಿಧಿ ಸಾಮೂಹಿಕ ಪಠಣ ಕಾರ್ಯಕ್ರಮಗಳು ನಡೆಯಲಿವೆ ಎಂದು ಸಂಘಟಕರು ತಿಳಿಸಿದ್ದಾರೆ.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

