By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Reading: ಜಿಲ್ಲೆಯ ಅಂತಿಮ ಮತದಾರರ ಪಟ್ಟಿ ಪ್ರಕಟ | ಒಟ್ಟು ಮತದಾರರೆಷ್ಟು | ಯಾರ ಸಂಖ್ಯೆ ಹೆಚ್ಚು ಮಹಿಳೆಯರೋ – ಪುರುಷರೋ | ಈ ವರದಿ ಓದಿ
Share
Font ResizerAa
Chitradurga News-Kannada NewsChitradurga News-Kannada News
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2022 Foxiz News Network. Ruby Design Company. All Rights Reserved.

Home » ಜಿಲ್ಲೆಯ ಅಂತಿಮ ಮತದಾರರ ಪಟ್ಟಿ ಪ್ರಕಟ | ಒಟ್ಟು ಮತದಾರರೆಷ್ಟು | ಯಾರ ಸಂಖ್ಯೆ ಹೆಚ್ಚು ಮಹಿಳೆಯರೋ – ಪುರುಷರೋ | ಈ ವರದಿ ಓದಿ

ಮುಖ್ಯ ಸುದ್ದಿ

ಜಿಲ್ಲೆಯ ಅಂತಿಮ ಮತದಾರರ ಪಟ್ಟಿ ಪ್ರಕಟ | ಒಟ್ಟು ಮತದಾರರೆಷ್ಟು | ಯಾರ ಸಂಖ್ಯೆ ಹೆಚ್ಚು ಮಹಿಳೆಯರೋ – ಪುರುಷರೋ | ಈ ವರದಿ ಓದಿ

chitradurganews.com
Last updated: 22 January 2024 17:26
chitradurganews.com
1 year ago
Share
ಅಂತಿಮ ಪಟ್ಟಿಯನ್ನು ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ ಪ್ರಕಟಿಸಿದ್ದಾರೆ.
ಅಂತಿಮ ಪಟ್ಟಿಯನ್ನು ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ ಪ್ರಕಟಿಸಿದ್ದಾರೆ.
SHARE
https://chat.whatsapp.com/Jhg5KALiCFpDwME3sTUl7x

CHITRADURGA NEWS | 22 JANUARY 2024

ಚಿತ್ರದುರ್ಗ: ಭಾರತ ಚುನಾವಣಾ ಆಯೋಗದ ಸೂಚನೆಯಂತೆ ಜಿಲ್ಲೆಯ ವಿಧಾನಸಭಾ ಕ್ಷೇತ್ರವಾರು ಮತದಾರರ ಅಂತಿಮ ಪಟ್ಟಿಯನ್ನು ಸೋಮವಾರ ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳ ಸಮ್ಮುಖದಲ್ಲಿ ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ ಪ್ರಕಟಿಸಿದ್ದಾರೆ.

ಇದನ್ನೂ ಓದಿ: ಅಯೋಧ್ಯೆ ಭವ್ಯ ಮಂದಿರದಲ್ಲಿ ಬಾಲರಾಮ ವಿರಾಜಮಾನ

ಜಿಲ್ಲೆಯಲ್ಲಿ 14,18,211 ಮತದಾರರು:

ಜಿಲ್ಲೆಯಲ್ಲಿ ಒಟ್ಟು 1661 ಮತಗಟ್ಟೆಗಳಿದ್ದು, ಕರಡು ಮತದಾರರ ಪಟ್ಟಿಯಲ್ಲಿ 14,01,830 ಮತದಾರರು ಇದ್ದರು. ಮತದಾರರ ಅಂತಿಮ ಪಟ್ಟಿ ಪ್ರಕಟ ಅನ್ವಯ 7,04,896 ಪುರುಷ ಮತದಾರರು, 7,13,228 ಮಹಿಳಾ ಮತದಾರರು ಹಾಗೂ 87 ಇತರೆ ಮತದಾರರು ಸೇರಿದಂತೆ ಜಿಲ್ಲೆಯಲ್ಲಿ ಒಟ್ಟು 14,18,211 ಮತದಾರರು ಇದ್ದಾರೆ ಎಂದು ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ ತಿಳಿಸಿದರು.

ಮೊಳಕಾಲ್ಮುರು ವಿಧಾನಸಭಾ ಕ್ಷೇತ್ರದಲ್ಲಿ 1,25,058 ಪುರುಷರು, 1,24,181 ಮಹಿಳೆಯರು ಹಾಗೂ 13 ಇತರೆ ಸೇರಿದಂತೆ ಒಟ್ಟು 2,49,252 ಮತದಾರರರಿದ್ದಾರೆ.

ಇದನ್ನೂ ಓದಿ: ಅಯೋಧ್ಯೆಯ ಭವ್ಯ ಶ್ರೀರಾಮ ಮಂದಿರದ ಎದುರಿನಲ್ಲಿ ಕರುನಾಡಿನ ಶ್ರೀಗಳು

ಚಳ್ಳಕೆರೆ ವಿಧಾನಸಭಾ ಕ್ಷೇತ್ರದಲ್ಲಿ 1,10,448 ಪುರುಷರು, 1,12,106 ಮಹಿಳೆಯರು ಹಾಗೂ 6 ಇತರೆ ಸೇರಿದಂತೆ ಒಟ್ಟು 2,22,560 ಮತದಾರರಿದ್ದಾರೆ.

ಚಿತ್ರದುರ್ಗ ವಿಧಾನಸಭಾ ಕ್ಷೇತ್ರದಲ್ಲಿ 1,29,809 ಪುರುಷರು, 1,34,398 ಮಹಿಳೆಯರು ಹಾಗೂ 41 ಇತರೆ ಸೇರಿ ಒಟ್ಟು 2,64,248 ಮತದಾರರಿದ್ದಾರೆ.

ಹಿರಿಯೂರು ವಿಧಾನಸಭಾ ಕ್ಷೇತ್ರದಲ್ಲಿ 1,21,502 ಪುರುಷರು, 1,24,210 ಮಹಿಳೆಯರು ಹಾಗೂ 16 ಇತರೆ ಮತದಾರರು ಸೇರಿದಂತೆ ಒಟ್ಟು 2,45,728 ಮತದಾರರು ಇದ್ದಾರೆ.

ಇದನ್ನೂ ಓದಿ: ಭವಿಷ್ಯ ನುಡಿಯುವ ಗಂಗೆ ಹೊಂಡ

ಹೊಸದುರ್ಗ ವಿಧಾನಸಭಾ ಕ್ಷೇತ್ರದಲ್ಲಿ 99,860 ಪುರುಷರು, 99,596 ಹಾಗೂ 1 ಇತರೆ ಮತದಾರರು ಸೇರಿದಂತೆ ಒಟ್ಟು 1,99,457 ಮತದಾರರು ಇದ್ದಾರೆ.

ಹೊಳಲ್ಕೆರೆ ವಿಧಾನಸಭಾ ಕ್ಷೇತ್ರದಲ್ಲಿ 1,18,219 ಪುರುಷರು, 1,18,737 ಮಹಿಳೆಯರು ಹಾಗೂ 10 ಇತರೆ ಸೇರಿದಂತೆ ಒಟ್ಟು 2,36,966 ಮತದಾರರು ಇದ್ದಾರೆ.

ಜಿಲ್ಲೆಯ ಆರು ವಿಧಾನಸಭಾ ಕ್ಷೇತ್ರಗಳು ಸೇರಿದಂತೆ ಜಿಲ್ಲೆಯಲ್ಲಿ ಒಟ್ಟು 1418211 ಮತದಾರರು ಇದ್ದಾರೆ.

2023ರ ಅಕ್ಟೋಬರ್ ಹಾಗೂ ನವೆಂಬರ್ ಮಾಹೆಯಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ಕಾರ್ಯಕ್ರಮದಲ್ಲಿ ಜಿಲ್ಲೆಯಲ್ಲಿ 11,260 ಪುರುಷರು ಹಾಗೂ 14,761 ಮಹಿಳೆಯರು ಹಾಗೂ 8 ಮಂದಿ ಇತರರು ಸೇರಿದಂತೆ ಒಟ್ಟು 26,029 ಮತದಾರರು ಹೊಸದಾಗಿ ಮತದಾರರ ಪಟ್ಟಿಗೆ ಸೇರ್ಪಡೆಯಾಗಿದ್ದಾರೆ.

ಮರಣ ಹೊಂದಿದ 9648 ಮತದಾರರನ್ನು ಗುರುತಿಸಿ ಅವರನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ ಎಂದರು.

35,683 ಯುವ ಮತದಾರರು:

ಮತದಾರರ ಅಂತಿಮ ಪಟ್ಟಿಯಲ್ಲಿ 18-19 ವರ್ಷ ವಯೋಮಿತಿಯ ಯುವ ಮತದಾರರು ಜಿಲ್ಲೆಯಲ್ಲಿ 35,683 ಮಂದಿ ಇದ್ದಾರೆ.

ಕರಡು ಮತದಾರರ ಪಟ್ಟಿಯಲ್ಲಿ 23,659 ಮತದಾರರು ಇದ್ದರು. ಕಳೆದ ಎರಡು-ಮೂರು ತಿಂಗಳಿಂದ ಬಿಎಲ್‍ಒಗಳು ಮನೆ ಮನೆ ಭೇಟಿ, ಕಾಲೇಜುಗಳಲ್ಲಿಯೂ ಸಹ ಯುವ ಮತದಾರರನ್ನು ಸೇರ್ಪಡೆ ಮಾಡಿದ್ದಾರೆ.

ಇದನ್ನೂ ಓದಿ: ಜಿಲ್ಲಾಧಿಕಾರಿ ದಿವ್ಯಪ್ರಭು ಅವರಿಗೆ ರಾಷ್ಟ್ರಮಟ್ಟದ ಪ್ರಶಸ್ತಿ

ಚಿತ್ರದುರ್ಗ ಜಿಲ್ಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮತದಾರರ ನೊಂದಣಿ ಕಾರ್ಯ ಮಾಡಿರುವುದಕ್ಕೆ ಭಾರತ ಚುನಾವಣಾ ಆಯೋಗವು ಸಹ ಶ್ಲಾಘನೆ ಮಾಡಿದೆ ಜಿಲ್ಲಾಧಿಕಾರಿಗಳು ತಿಳಿಸಿದರು.

ಮತದಾರರ ಪಟ್ಟಿಯ ಬಗ್ಗೆ ಯಾವುದೇ ಸಂದೇಹಗಳಿದ್ದಲ್ಲಿ ಜಿಲ್ಲಾಧಿಕಾರಿಗಳ ಕಚೇರಿಯ ಜಿಲ್ಲಾ ಸಂಪರ್ಕ ಕೇಂದ್ರದ ಸಹಾಯವಾಣಿ ಸಂಖ್ಯೆ 08194-222176 ಅಥವಾ ಟೋಲ್ ಫ್ರೀ ಸಂಖ್ಯೆ 1950 ಗೆ ಕರೆ ಮಾಡಬಹುದು ಎಂದು ತಿಳಿಸಿದರು.

ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಮಾತನಾಡಿ, ಅರ್ಹ ಮತದಾರರು ಸಂಬಂಧಿಸಿದ ಮತದಾರರ ಪಟ್ಟಿಯಲ್ಲಿ ಹೆಸರು ಸೇರಿಲ್ಲದವರು ಹಾಗೂ ಹೆಸರು ಕೈಬಿಟ್ಟುಹೋಗಿರುವವರು ಹಾಗೂ ಮತದಾರರ ಪಟ್ಟಿಯಲ್ಲಿ ಮಾಹಿತಿಯನ್ನು ತಿದ್ದುಪಡಿ ಮಾಡಿಸಬೇಕಾದಲ್ಲಿ ಮತ್ತು ಅದೇ ವಿಧಾನಸಭಾ ಕ್ಷೇತ್ರದ ಬೇರೆ ಬೇರೆ ಮತಗಟ್ಟೆಗೆ ವರ್ಗಾಯಿಸಬೇಕಾಗಿದ್ದಲ್ಲಿ ನಿಗಧಿಪಡಿಸಿರುವ ನಮೂನೆಗಳಲ್ಲಿ ಅರ್ಜಿಗಳನ್ನು ಭರ್ತಿ ಮಾಡಿ ತಮ್ಮ ವ್ಯಾಪ್ತಿಯ ಮತದಾನ ಕೇಂದ್ರದಲ್ಲಿ, ತಾಲ್ಲೂಕು ಕಚೇರಿಯಲ್ಲಿ, ಉಪವಿಭಾಗಾಧಿಕಾರಿಗಳ ಕಾರ್ಯಾಲಯದಲ್ಲಿ ನೀಡಿ ಸ್ವೀಕೃತಿ ಪಡೆಯಬಹುದಾಗಿದೆ. ಹಾಗೂ www.ceokarnataka.kar.nic.in &https://chitradurga.nic.in ವೆಬ್‍ಸೈಟ್‍ನಲ್ಲಿಯೂ ಸಹ ಪರಿಶೀಲಿಸಿಕೊಂಡು ಪಟ್ಟಿಯಲ್ಲಿ ಹೆಸರು ಇಲ್ಲದಿದ್ದಲ್ಲಿ ಪೂರಕ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿಗಳನ್ನು VHA App (Voter help Line) ನಲ್ಲಿಯೂ ಆನ್‍ಲೈನ್ ಮೂಲಕ ಸಲ್ಲಿಸಹುದಾಗಿದೆ ಎಂದರು.

ಸಭೆಯಲ್ಲಿ ಪ್ರಭಾರ ಉಪವಿಭಾಗಾಧಿಕಾರಿ ವಿವೇಕ್, ಜೆಡಿಎಸ್ ಜಿಲ್ಲಾ ಮಹಾ ಪ್ರಧಾನ ಕಾರ್ಯದರ್ಶಿ ಗೋಪಾಲಸ್ವಾಮಿ ನಾಯಕ, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಡಿ.ಎನ್.ಮೈಲಾರಪ್ಪ, ಕಾರ್ಯದರ್ಶಿ ಸಿ.ಜೆ.ನಾಸಿರುದ್ದೀನ್, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ನರೇಂದ್ರ ಹೊನ್ನಾಳ್, ಸಿಪಿಐಎಂ ಡಿಒಸಿ ಸಿ.ಕೆ.ಗೌಸ್‍ಪೀರ್ ಸೇರಿದಂತೆ ಚುನಾವಣಾ ತಹಶೀಲ್ದಾರ್ ಎಂ.ಸಂತೋಷ್ ಕುಮಾರ್ ಹಾಗೂ ಚುನಾವಣೆ ಶಾಖೆಯ ಸಿಬ್ಬಂದಿ ವರ್ಗದವರು ಇದ್ದರು.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

TAGGED:ChitradurgaDistrict CollectorDivyaprabhu GRJElection CommissionElectoral Rollಚಿತ್ರದುರ್ಗಚುನಾವಣಾ ಆಯೋಗಜಿಲ್ಲಾಧಿಕಾರಿದಿವ್ಯಪ್ರಭು ಜಿ.ಆರ್.ಜೆಮತದಾರರ ಪಟ್ಟಿ
Share This Article
Facebook Email Print
Previous Article ಎಸ್‌ಆರ್‌ಎಸ್‌ನಲ್ಲಿ ಅಯೋಧ್ಯೆ ಬಾಲಮಂದಿರ | ಶುಭ ಮುಹೂರ್ತದಲ್ಲಿ ಲೋಕಾರ್ಪಣೆ
Next Article arecanut price list ಅಡಿಕೆ ಧಾರಣೆ | ಜನವರಿ 22 | ಭೀಮಸಮುದ್ರದ ಮಾರುಕಟ್ಟೆಯಲ್ಲಿ ಇಂದಿನ ರೇಟ್
Leave a Comment

Leave a Reply Cancel reply

Your email address will not be published. Required fields are marked *

ಕಾಂಗ್ರೆಸ್ ಅವಧಿಯಲ್ಲಿ ಶೇ.60 ರಷ್ಟು ಕಮಿಷನ್ ನಡೆಯುತ್ತಿದೆ | AAP ಜಿಲ್ಲಾಧ್ಯಕ್ಷ ಜಗದೀಶ್
ಮುಖ್ಯ ಸುದ್ದಿ
ಗಾಂಧಿವೃತ್ತ, ಸಂತೆಹೊಂಡದ ಬಳಿಯ ವಾಣಿಜ್ಯ ಸಂಕೀರ್ಣಗಳ ಕಾಮಗಾರಿ ವೀಕ್ಷಿಸಿದ ಸಚಿವರು
ಮುಖ್ಯ ಸುದ್ದಿ
ಸಚಿವ ಸ್ಥಾನದಿಂದ ಜಮೀರ್ ಅಹಮದ್‍ ಖಾನ್ ವಜಾಗೊಳಿಸಿ | ಜೆಡಿಎಸ್ ಪ್ರತಿಭಟನೆ
ಮುಖ್ಯ ಸುದ್ದಿ
ಡಾ.ಶ್ರೀ.ಶಿವಮೂರ್ತಿ ಮುರುಘಾ ಶರಣರು
ಮುರುಘಾ ಶ್ರೀಗಳ ಪ್ರಕರಣ ಅಂತಿಮ ಹಂತಕ್ಕೆ | ಖುದ್ದು ಹೇಳಿಕೆ ದಾಖಲಿಸಲು ದಿನಾಂಕ ನಿಗಧಿ | ನ್ಯಾಯಾಲಯಕ್ಕೆ ಹಾಜರಾಗಲಿದ್ದಾರೆ ಶರಣರು
ಮುಖ್ಯ ಸುದ್ದಿ
© Chitradurga News. Ruby Design Company. All Rights Reserved.

Chitradurga News App

Install
Welcome Back!

Sign in to your account

Username or Email Address
Password

Lost your password?

Not a member? Sign Up