CHITRADURGA NEWS | 29 JUNE 2025
ಚಿತ್ರದುರ್ಗ: ನಗರದ ಶ್ರೀ ಜಗದ್ಗುರು ಮುರುಘರಾಜೇಂದ್ರ ಬೃಹನ್ಮಠದ ಅನುಭವ ಮಂಟಪದಲ್ಲಿ ಈಚೆಗೆ ಜಾಗತಿಕ ಲಿಂಗಾಯತ ಮಹಾಸಭಾದ 2025-26 ನೇ ಸಾಲಿನ ಮೊದಲನೇ ಕಾರ್ಯಕಾರಿ ಸಭೆಯು ನಡೆಯಿತು.
Also Read: ಹೊಸದುರ್ಗ ಬಂದ್ | ಇಂದು ಅಂತ್ಯವಲ್ಲ, ಆರಂಭ | ಸದ್ಗುರು ಪ್ರದೀಪ್

ಈ ಸಭೆಯು ನಿಯಮ 18 ಮತ್ತು 19ರ ಅನುಸಾರ ನಡೆದು, ರಾಷ್ಟ್ರೀಯ, ರಾಜ್ಯಮಟ್ಟದ ಪದಾಧಿಕಾರಿಗಳು,ವಿವಿಧ ವಿಭಾಗ ಮುಖ್ಯಸ್ಥರು ಮತ್ತು ಸದಸ್ಯರು, ಮಹಾಪೋಷಕರು, ಪೋಷಕರು, ಮಹಾದಾಸೋಹಿ, ದಾಸೋಹಿಗಳು ಈ ಸಭೆಯಲ್ಲಿ ಭಾಗವಹಿಸಿದ್ದರಲ್ಲದೆ ರಾಜ್ಯ ಹಾಗೂ ಹೊರರಾಜ್ಯಗಳಲ್ಲಿರುವ ಎಲ್ಲಾ ಘಟಕ ಜಿಲ್ಲಾ ಮಹಿಳಾ ಘಟಕ ಜಿಲ್ಲಾ ಯುವಘಟಕಗಳ ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿ, ಖಜಾಂಚಿಗಳು ಭಾಗವಹಿಸಿದ್ದರು.
ಸಭೆಯಲ್ಲಿ ಮುಖ್ಯವಾಗಿ 12 ರಿಂದ 13 ವಿಷಯಗಳು ಚರ್ಚಿತವಾದವು. ಅವುಗಳನ್ನು ಸಭೆಯಲ್ಲಿ ಸಭಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಶಿವಾನಂದ್ ಜಾಮದಾರ್ ಮಾತನಾಡುತ್ತ, ಅವುಗಳಿಗೆ ಸಂಬಂಧಿಸಿದ ಚರ್ಚೆ, ಸಂವಾದಗಳ ಮೂಲಕ ವಿಷಯಗಳಲ್ಲಿ ಪ್ರಮುಖವಾದವುಗಳೆಂದರೆ, ವಚನ ದರ್ಶನ, ಮಿತ್ಯ ವರ್ಸಸ್ ಸತ್ಯ ಪುಸ್ತಕ ಬಿಡುಗಡೆ ಎಲ್ಲಾ ಜಿಲ್ಲೆಗಳಲ್ಲಿ ಆಗುತ್ತಿದೆ. ಆಗದೇ ಇರುವಂತಹ ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲಿ ಮಾಡುವ ತೀರ್ಮಾನ ತೆಗೆದುಕೊಳ್ಳುವುದರ ಜೊತೆಗೆ ಶರಣರ ಐತಿಹಾಸಿಕ ಸತ್ಯ ಮತ್ತು ನಿಲುವುಗಳು ಸಾರ್ವಜನಿಕರಿಗೆ, ಬಸವಾಭಿಮಾನಿಗಳಿಗೆ ಅರ್ಥೈಸುವ ಅನಿವಾರ್ಯತೆ ಇದೆ ಎಂದರು.
ಕರ್ನಾಟಕ ಸರ್ಕಾರ ಮುಂದೆ ನಡೆಸಲಿರುವ ಜಾತಿ ಮರು ಜನಗಣತಿಯ ಬಗ್ಗೆ ಚರ್ಚಿಸಿದ ಜಾಮದಾರ್, ಈ ನಡುವೆ ಸಭಿಕರಿಂದ ಬಂದ ಪ್ರಶ್ನೆಗಳಿಗೆ ಉತ್ತರಿಸುತ್ತಾ, ಜಾತಿ ಕಾಲಂನಲ್ಲಿ ಲಿಂಗಾಯತ ಅಂತಲೇ ಬರೆಸಿ. ಒಳಪಂಗಡ ಇರಲಿ ಅದರ ಬಗ್ಗೆ ಮುಂದಿನ ದಿನಗಳಲ್ಲಿ ತಿಳಿಸಲಾಗುವುದು ಎಂದರು.
ಬರುವ ಸೆಪ್ಟೆಂಬರ್ 1 ರಿಂದ ಅಕ್ಟೋಬರ್ 1ರವರೆಗೆ ನಡೆಯಲಿರುವ ಬಸವ ಸಂಸ್ಕೃತಿ ಅಭಿಯಾನದ ಬಗ್ಗೆ ಸುದೀರ್ಘ ಚರ್ಚೆ ನಡೆಸಿ ಅಭಿಯಾನ ಯಶಸ್ವಿಗೊಳಿಸಬೇಕೆಂದರು.
Also Read: ಹೊಸದುರ್ಗ ಸ್ಥಿತಿ ಸಮುದ್ರದ ನೆಂಟಸ್ಥನ, ಉಪ್ಪಿಗೆ ಬರ | ಕೆ.ಎಸ್.ನವೀನ್
ಎಲ್ಲಾ ಜಿಲ್ಲೆಗಳಲ್ಲಿ ಸಭಾದ ಜಮಾ ಖರ್ಚು ಆಡಿಟ್ ಮಾಡಿಸಿ ಕೇಂದ್ರ ಕಚೇರಿಗೆ ಆದಷ್ಟು ತುರ್ತಾಗಿ ಕಳುಹಿಸಬೇಕು. ಪ್ರಸಕ್ತ ಸಾಲಿನಲ್ಲಿ ವಾರ್ಷಿಕ ವಿಶೇಷ ಮಹಾ ಸಮ್ಮೇಳನ ಒಂದು ಕಡೆ ಏರ್ಪಡಿಸಬೇಕು. ಇದರೊಂದಿಗೆ ಎಲ್ಲ ಪಂಗಡಗಳ ಒಳಪಂಗಡಗಳ ವಧು ವರರ ಸಮ್ಮೇಳನ ಆದರೆ ಒಳಿತು. ಅಲ್ಲಿ ಬರುವ ಎಲ್ಲಾ ವಿಧಿ ವಿಧಾನಗಳು ನಿಜಾಚರಣೆಗಳ ಮೂಲಕ ನಡೆಯುವ ಮತ್ತು ತರಬೇತಿ ನೀಡುವ ಕ್ರಮವಾಗಬೇಕು ಎಂದರು.
ಈ ನಿಟ್ಟಿನಲ್ಲಿ ಪ್ರತಿ ಜಿಲ್ಲೆಯಲ್ಲಿ ವಧು ವರರ ಮಾಹಿತಿ ಕೇಂದ್ರವನ್ನು ಸ್ಥಾಪಿಸಿ, ಆ ಮೂಲಕ ಕಲ್ಯಾಣವಾಗ ಬಯಸುವವರಿಗೆ ನೆರವಾಗಬಹುದಾಗಿದೆ ಎಂಬ ತೀರ್ಮಾನಕ್ಕೆ ಬರಲಾಯಿತು. ಜೊತೆಗೆ ಆನ್ಲೈನ್ ಮಾಸಿಕ ಪತ್ರಿಕೆಗೆ ಲೇಖನ ಮತ್ತು ಸಭಾದ ವತಿಯಿಂದ ನಡೆಯುವ ಕಾರ್ಯಕ್ರಮಗಳನ್ನು ನಡೆದ ಬಗೆಗಿನ ವರದಿಗಳನ್ನು ಪೂರೈಸಬೇಕು. ಎಲ್ಲ ಬಸವ ಸಂಘಟನೆಗಳು ಒಟ್ಟಾಗಿ ಹೋದಾಗ ಮಾತ್ರ ನಾವು ನಮ್ಮ ಗುರಿಯನ್ನು ತಲುಪಬಹುದಾಗಿದೆ ಎಂದು ಸೂಚ್ಯವಾಗಿ ಹೇಳಿದರು.
ಲಿಂಗಾಯತ ಮಠಾಧಿಪತಿಗಳ ಒಕ್ಕೂಟದಡಿಯಲ್ಲಿ ಕರ್ನಾಟಕದ ಪ್ರತಿಯೊಂದು ಜಿಲ್ಲೆಯಲ್ಲಿ ಬರುವ ಸೆಪ್ಟೆಂಬರ್ 1 ಅಕ್ಟೋಬರ್ 1ರವರೆಗೆ ಬಸವ ಸಂಸ್ಕೃತಿ ಅಭಿಯಾನ, ಅದರಲ್ಲಿ ಸಾಂಸ್ಕೃತಿಕ ನಾಯಕ ಬಸವಣ್ಣನವರ ಬಗ್ಗೆ, ಅವರು ನೀಡಿದ ವಚನ ಸಂವಿಧಾನ, ಸಂಸ್ಕೃತಿಯ ಅಭಿಯಾನದ ಉದ್ದೇಶ, ಅಭಿಯಾನದಲ್ಲಿ ಏನಿರುತ್ತದೆ ಎಂಬ ಇತ್ಯಾದಿ ವಿಚಾರಗಳನ್ನು ಮಂಡಿಸಲಾಯಿತು.
Also Read: ಹೊಸದುರ್ಗ ಬಂದ್ | ನೀರಿಗೆ ಅಡ್ಡಿ ಕಿಡಿಗೇಡಿ ಕೃತ್ಯ | ಎಸ್.ಲಿಂಗಮೂರ್ತಿ
ಬಸವ ಸಂಸ್ಕೃತಿಯ ಅಭಿಯಾನದಲ್ಲಿ ಜಿಲ್ಲಾ ಸಮಿತಿಯ ಜವಾಬ್ದಾರಿಗಳೇನು? ಲಿಂಗಾಯತ ಮಠಾಧಿಪತಿಗಳ ಒಕ್ಕೂಟದ ಜವಾಬ್ದಾರಿ ಮತ್ತು ಅಭಿಯಾನ ಯಾವ ದಿನಾಂಕ ಎಲ್ಲೆಲ್ಲಿ ನಡೆಯುತ್ತದೆಂಬ ವಿವರ ಪಟ್ಟಿಯಲ್ಲಿ ಪ್ರಕಟಗೊಂಡಿದೆ.
ಇದರೊಂದಿಗೆ ಅಭಿಯಾನದ ಆಶಯಗಳೇನು ಎಂದು ನೋಡುವುದಾದರೆ ಸಮ ಸಮಾಜದ ನಿರ್ಮಾಣ, ವ್ಯಸನ ಮುಕ್ತ ಸಮಾಜದ ನಿರ್ಮಾಣ, ಅಂದರ0ತೆ ಅಂಧಶ್ರದ್ಧೆ ಅಳಿಸಿ ಸುಜ್ಞಾನ ಬೆಳೆಸುವುದು, ಸದೃಢ ಸಮಾಜ ಕಟ್ಟುವುದು, ಮಕ್ಕಳಲ್ಲಿ ಆಧ್ಯಾತ್ಮಿಕ ಅರಿವು ಮೂಡಿಸುವುದು, ಮಹಿಳೆಯರ ಘನತೆಯನ್ನು ಕಾಪಾಡುವುದು ಹಾಗೂ ವ್ಯಕ್ತಿತ್ವ ವಿಕಸನ ಇತ್ಯಾದಿ ಸೇರಿದಂತೆ ಅನೇಕ ವಿಷಯಗಳ ಬಗ್ಗೆ ಚರ್ಚೆ ನಡೆಸಲಾಯಿತು.
ಸಾಣೇಹಳ್ಳಿಯ ಡಾ.ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ, ಅಥಣಿ ಮೋಟಗಿ ಮಠದ ಪ್ರಭು ಚನ್ನಬಸವ ಸ್ವಾಮೀಜಿ, ಚಿತ್ರದುರ್ಗ ಬೃಹನ್ಮಠದ ಆಡಳಿತ ಮಂಡಳಿ ಸದಸ್ಯರಾದ ಡಾ.ಬಸವಕುಮಾರ ಸ್ವಾಮೀಜಿ, ದಾವಣಗೆರೆ ವಿರಕ್ತ ಮಠದ ಡಾ.ಬಸವಪ್ರಭು ಸ್ವಾಮೀಜಿ, ಮರುಳಶಂಕರ ಪೀಠದ ಸಿದ್ಧಬಸವ ಕಬೀರ ಸ್ವಾಮಿಗಳು, ಗುರುಮಠಕಲ್ ಖಾಸಾಮಠದ ಶಾಂತವೀರ ಗುರು ಮುರುಘಾ ರಾಜೇಂದ್ರ ಸ್ವಾಮಿಗಳು, ಹೊಳಲ್ಕೆರೆ ತಿಪ್ಪೇರುದ್ರ ಸ್ವಾಮಿಗಳು, ಮುರುಘಾಮಠದ ಮುರುಘೇಂದ್ರ ಸ್ವಾಮಿಗಳು ಸೇರಿದಂತೆ ಅನೇಕ ಪೀಠಾಧಿಪತಿಗಳು ಭಾಗವಹಿಸಿದ್ದರು.
ನಿವೃತ್ತ ನ್ಯಾಯಾಧೀಶರಾದ ಎನ್.ಕೆಂಪೇಗೌಡರವರು ಅಧ್ಯಕ್ಷತೆ ವಹಿಸಿದ್ದರು.
Also Read: ಹೊಸದುರ್ಗ ಬಂದ್ | ಶಾಸಕ ಬಿ.ಜಿ.ಗೋವಿಂದಪ್ಪ ನೇತೃತ್ವದಲ್ಲಿ ಹೋರಾಟ
ಸಭೆಯಲ್ಲಿ ಜಾಗತಿಕ ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಸವರಾಜ್ ರೊಟ್ಟಿ, ಉಪಾಧ್ಯಕ್ಷರುಗಳಾದ ಮಾದೇವಪ್ಪ, ಬಸವರಾಜ ಧನ್ನೂರ್, ಮಹಾರಾಷ್ಟ್ರದ ರಾಜ್ಯ ಪ್ರಧಾನ ಕಾರ್ಯದರ್ಶಿ ಬಸವರಾಜ್ ಕಣಜೆ, ಕೊಂಗವಾಡ್, ಪರಮೇಶ್ವರ ಕಾಗಿನೆಲೆ, ಡಾ. ಜೆ.ಎಸ್. ಪಾಟೀಲ್, ಸವಿತಾ ನಡಕಟ್ಟಿ, ನಳಿನಿ ಮಹಾಗಾವಕರ್, ಶೈಲಜಾ ಬಾಬು, ಅಶೋಕ ಮಳಗಲಿ, ಮುರಿಗೆಪ್ಪ ಬಾಳಿ, ಚಂದ್ರಶೇಖರ್ ಗುಡಸಿ, ಬಸನಗೌಡ ಹರನಾಳ ಹಾಗೂ ವಿವಿಧ ಜಿಲ್ಲೆಗಳಿಂದ ಆಗಮಿಸಿದ ಜಿಲ್ಲಾಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು ಖಜಾಂಚಿಗಳು, ಮಹಿಳಾ ಘಟಕ, ಯುವ ಘಟಕಗಳ ಪದಾಧಿಕಾರಿಗಳು, ರಾಷ್ಟ್ರೀಯ ಕಾರ್ಯಕಾರಿ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail
chitradurganews23@gmail.com
» Whatsapp Number
