CHITRADURGA NEWS | 01 MAY 2024
ಚಿತ್ರದುರ್ಗ: ಜಾತ್ರೆಯಲ್ಲಿ ಕೋಣ ಗುದ್ದಿ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ನಡೆದಿದೆ.
ಚಿತ್ರದುರ್ಗ ತಾಲೂಕು ಮದಕರಿಪುರ ಗ್ರಾಮದಲ್ಲಿ ನಡೆಯುತ್ತಿದ್ದ ಕೊಲ್ಲಾಪುರದಮ್ಮನ ಜಾತ್ರೆಯ ಅಂಗವಾಗಿ ಸಾಕಿದ್ದ ಕೋಣ ಗುದ್ದಿದೆ.

ಇದನ್ನೂ ಓದಿ: ಮುರುಘಾ ಮಠದಲ್ಲಿ ಪೂರ್ವಭಾವಿ ಸಭೆ | ಅರ್ಥಪೂರ್ಣ ಬಸವ ಜಯಂತಿಗೆ ತೀರ್ಮಾನ
ಮದಕರಿಪುರದ 65 ವರ್ಷದ ಕೊಲ್ಲಾರಪ್ಪ ಕೋಣದ ತಿವಿತದಿಂದ ಗಂಭೀರ ಗಾಯಗೊಂಡು ಚಿಕಿತ್ಸೆ ಫಲಕಾರಿಯಾಗದೆ ಜಿಲ್ಲಾ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ಬುಧವಾರ ಬೆಳಗಿನ ಜಾವ ಮನೆಯ ಹಿತ್ತಿಲಿಗೆ ಕೋಣವನ್ನು ಹಿಡಿದುಕೊಂಡು ಹೋಗುತ್ತಿದ್ದಾಗ ಚಿನ್ಮಾಟ ಆಡಿಕೊಂಡು ಕೊಲ್ಲಾರಪ್ಪ ಅವರ ತೊಡೆಯ ಭಾಗಕ್ಕೆ ಬಲವಾಗಿ ತಿವಿದಿದೆ. ತೀವ್ರ ರಕ್ತಸ್ರಾವ ಆಗಿದ್ದ ಅವರನ್ನು ತಕ್ಷಣ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ಫಲಕಾರಿ ಆಗದೆ ಮೃತಪಟ್ಟಿದ್ದಾರೆ ಎಂದು ಅವರ ಪುತ್ರ ದೂರು ದಾಖಲಿಸಿದ್ದಾರೆ
ಇದನ್ನೂ ಓದಿ: ಆಹಾ ಸವಿರುಚಿ | ಇಂಜಿನಿಯರಿಂಗ್ ವಿದ್ಯಾರ್ಥಿಗಳ ಕೈಚಳಕಕ್ಕೆ ಬಾಯಿನೀರು..
ಘಟನಾ ಸ್ಥಳಕ್ಕೆ ಚಿತ್ರದುರ್ಗ ಬಡಾವಣೆ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail
chitradurganews23@gmail.com
» Whatsapp Number
