
CHITRADURGA NEWS | 20 APRIL 2025
ಹೊಳಲ್ಕೆರೆ: ರೈತರಿಗೆ ತಲೆನೋವಾಗಿದ್ದ, ತೀವ್ರ ಆತಂಕ ಹುಟ್ಟಿಸಿದ್ದ ಚಿರತೆಯನ್ನು ಬೋನಿಗೆ ಬೀಳಿಸುವಲ್ಲಿ ಅರಣ್ಯ ಇಲಾಖೆ ಯಶಸ್ವಿಯಾಗಿದೆ.
ಹೊಳಲ್ಕೆರೆ ತಾಲೂಕು ಕೊಳಾಳು ಬಳಿ ಕೆಲ ದಿನಗಳಿಂದ ರೈತರಿಗೆ ಇನ್ನಿಲ್ಲದಂತೆ ಕಾಡುತ್ತಿದ್ದ ಚಿರತೆ ಬೋನಿಗೆ ಬೀಳುವ ಮೂಲಕ ನಿಟ್ಟುಸಿರು ಬಿಡುವಂತಾಗಿದೆ.

ಇದನ್ನೂ ಓದಿ: 60 ಸಾವಿರದತ್ತ ಅಡಿಕೆ ಧಾರಣೆ | ಇಂದಿನ ಚನ್ನಗಿರಿ ಮಾರುಕಟ್ಟೆ ರೇಟ್
ಕೊಳಾಳು, ತೇಕಲವಟ್ಟಿ ಭಾಗದಲ್ಲಿ ಗುಡ್ಡಗಾಡು ಪ್ರದೇಶ ಸಾಕಷ್ಟಿದ್ದು, ಈ ಭಾಗದಲ್ಲಿ ಒಂಟಿ ಚಿರತೆಯೊಂದು ಓಡಾಡಿಕೊಂಡಿತ್ತು.
ಇಲ್ಲಿನ ರೈತರು ಸಾಕಾಣೆ ಮಾಡುತ್ತಿದ್ದ ಕುರಿ, ಮೇಕೆ ತಿನ್ನುವ ಮೂಲಕ ರೈತರಲ್ಲಿ ಆತಂಕ ಸೃಷ್ಟಿಸಿತ್ತು,
ಈ ಸಂಬಂಧ ರೈತರು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮನವಿ ಮಾಡಿಕೊಂಡಿದ್ದು, ಚಿರತೆ ಸೆರೆಗೆ ಬೋನು ಅಳವಡಿಸಲಾಗಿತ್ತು.
ಇದನ್ನೂ ಓದಿ: ರೈತರಿಗೆ ಆಧುನಿಕ ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ
ಈಗ ಚಿರತೆ ಬೋನಿಗೆ ಬಿದ್ದಿದ್ದು, ಅದನ್ನು ನೋಡಲು ಜನ ಮುಗಿಬಿದ್ದಿದ್ದರು. ಬೋನಿನ ಒಳಗೆ ಆರ್ಭಟಿಸುತ್ತಿದ್ದ ಚಿರತೆ, ಬಿಟ್ಟರೆ ಸಾಕೆಂದು ಅತ್ತಿಂದಿತ್ತ ಹಾರಾಡುತ್ತಾ ಜನರನ್ನು ನೋಡಿ ಘರ್ಜಿಸುವ ದೃಶ್ಯ ಭಯ ಹುಟ್ಟಿಸುತ್ತಿದ್ದವು.
ಕಳೆದ ತಿಂಗಳಷ್ಟೇ ಕೊಳಾಳು ಬಳಿ ತಾಯಿಯಿಂದ ಬೇರೆಯಾಗಿದ್ದ ಎರಡು ಚಿರತೆ ಮರಿಗಳು ಸಾರ್ವಜನಿಕರ ಕೈಗೆ ಸಿಕ್ಕಿದ್ದವು, ಇವುಗಳನ್ನು ಆಡುಮಲ್ಲೇಶ್ವರ ಮೃಗಾಲಯದಲ್ಲಿ ತಂದು ಅರಣ್ಯ ಇಲಾಖೆ ಸಿಬ್ಬಂದಿ ಆರೈಕೆ ಮಾಡುತ್ತಿದ್ದರು.
ಇದನ್ನೂ ಓದಿ: ಕೊಳಾಳು ಗ್ರಾಮದಲ್ಲಿ 2 ಚಿರತೆ ಮರಿ ಪತ್ತೆ | ಆಡುಮಲ್ಲೇಶ್ವರ ಮೃಗಾಯಲಕ್ಕೆ ಹಸ್ತಾಂತರ


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
