ಚಿತ್ರದುರ್ಗ ನ್ಯೂಸ್.ಕಾಂ: ಭಾರತೀಯರ ಶತಮಾನಗಳ ಕನಸು, ಹಿಂದುಗಳ ಆರಾಧ್ಯ ದೈವ ಶ್ರೀರಾಮ ಮಂದಿರ ನಿರ್ಮಾಣ ಕಾರ್ಯ ಭರದಿಂದ ಸಾಗುತ್ತಿದೆ.
2024 ಜನವರಿ 22 ರಂದು ಶ್ರೀರಾಮ ದೇವರ 5 ಅಡಿ ಎತ್ತರದ ವಿಗ್ರಹದ(ಬಾಲ ರಾಮ) ಪ್ರಾಣ ಪ್ರತಿಷ್ಠಾಪನಾ ಕಾರ್ಯ ಹಮ್ಮಿಕೊಳ್ಳಲಾಗಿದೆ.
ಇದನ್ನೂ ಓದಿ: 50 ಸಾವಿರದತ್ತ ಮುಖ ಮಾಡಿದ ಅಡಿಕೆ ಬೆಲೆ
ಈ ಸಂದರ್ಭವನ್ನು ಇಡೀ ದೇಶ ಸಂಭ್ರಮಿಸಬೇಕು. ದೇಶದ ಪ್ರತಿ ಮನೆಗೂ ರಾಮನ ಪವಿತ್ರ ಮಂತ್ರಾಕ್ಷತೆ ತಲುಪಿಸಬೇಕು ಎನ್ನುವ ಸಂಕಲ್ಪವನ್ನು ಅಯೋಧ್ಯೆಯ ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ಮಾಡಿದೆ.
ಇದಕ್ಕೆ ಪೂರಕವಾಗಿ ದೇಶದ ಪ್ರತಿ ಜಿಲ್ಲೆಗಳಲ್ಲೂ ಕಳೆದ ಒಂದು ತಿಂಗಳಿಂದ ಭರದ ಸಿದ್ಧತೆಗಳು ನಡೆದಿವೆ.
ಚಿತ್ರದುರ್ಗ ಜಿಲ್ಲೆಯ ಪ್ರತಿ ಗ್ರಾಮಕ್ಕೆ ತಲುಪಲಿದೆ ಮಂತ್ರಾಕ್ಷತೆ:
ಅಯೋಧ್ಯೆಯಲ್ಲಿ ಶ್ರೀರಾಮಲಲ್ಲಾ ವಿಗ್ರಹದ ಪ್ರಾಣ ಪ್ರತಿಷ್ಠಾಪನೆ ಹಿನ್ನೆಲೆಯಲ್ಲಿ ಜಿಲ್ಲೆಯ 186 ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪ್ರತಿ ಮನೆಗೂ ಮಂತ್ರಾಕ್ಷತೆ, ಅಯೋಧ್ಯೆಯ ಆಹ್ವಾನ ಪತ್ರಿಕೆ ಹಾಗೂ ಒಂದು ಭಾವಚಿತ್ರ ತಲುಪಿಸಲು ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ಅಭಿಯಾನದಂತೆ ಜಿಲ್ಲೆಯಲ್ಲೂ ಕಾರ್ಯಕರ್ತರ ಪಡೆ ಸಜ್ಜಾಗಿದೆ.
ಈ ಕಾರಣಕ್ಕಾಗಿ ನವೆಂಬರ್ 27 ರಂದು ಜಿಲ್ಲಾ ಮಟ್ಟದಲ್ಲಿ ಪ್ರತಿ ತಾಲೂಕಿನಿಂದ ಕಾರ್ಯಕರ್ತರನ್ನು ಆಹ್ವಾನಿಸಿ ಪೂರ್ವಭಾವಿ ಸಭೆ ನಡೆಸಲಾಗಿದೆ. ಈ ಸಭೆಯಲ್ಲಿ ಸುಮಾರು 1500 ಕಾರ್ಯಕರ್ತರು ಭಾಗವಹಿಸಿದ್ದಾರೆ.
ಇಲ್ಲಿಂದ ತೆರಳಿದ ಕಾರ್ಯಕರ್ತರು ತಾಲೂಕು ಮಟ್ಟದಲ್ಲಿ ಸಭೆ ನಡೆಸಿದ್ದು, ಇದು ಗ್ರಾಮ ಪಂಚಾಯಿತಿ ಹಂತಕ್ಕೂ ತಲುಪಿದೆ. ಪ್ರತಿ ಗ್ರಾಮದಲ್ಲಿ ಸಮಿತಿ ರಚನೆ ಮಾಡಲಾಗಿದೆ.
ಇದನ್ನೂ ಓದಿ: ಮಿಂಚೇರಿಗೆ ಹೊಂಟವು ಸಾಲು ಸಾಲು ಎತ್ತಿನ ಬಂಡಿ
ನಾಳೆ ಅಂದರೆ ಡಿಸೆಂಬರ್ 27 ರಂದು ಬೆಳಗ್ಗೆ 9.30ಕ್ಕೆ ಚಿತ್ರದುರ್ಗ ನಗರದ ಡಿಸಿಸಿ ಬ್ಯಾಂಕ್ ಮುಂಭಾಗದಲ್ಲಿರುವ ಶ್ರೀರಾಮ ಮಂದಿರದಲ್ಲಿ ಜಿಲ್ಲೆಯಿಂದ ತಾಲೂಕುಗಳಿಗೆ ಮಂತ್ರಾಕ್ಷತೆ ವಿತರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಇಲ್ಲಿಗೆ ಪ್ರತಿ ತಾಲೂಕಿನ ಕಾರ್ಯಕರ್ತರ ತಂಡ ಆಗಮಿಸಿ ಮಂತ್ರಾಕ್ಷತೆಯನ್ನು ತೆಗೆದುಕೊಂಡು ಹೋಗಲಿದೆ.
ಈ ಕಾರ್ಯಕ್ರಮದಲ್ಲಿ ಜಿಲ್ಲೆಯ ವಿವಿಧ ಮಠಾಧೀಶರು, ಪ್ರಮುಖರು, ಈ ಅಭಿಯಾನದ ಸಂಚಾಲಕರು, ಸಂಘ ಪರಿವಾರದ ಮುಖಂಡರು, ಕಾರ್ಯಕರ್ತರು ಭಾಗಿಯಾಗಲಿದ್ದಾರೆ.
ಇಲ್ಲಿಂದ ತೆಗೆದುಕೊಂಡು ಹೋಗುವ ಮಂತ್ರಾಕ್ಷತೆ, ಆಹ್ವಾನ ಪತ್ರಿಕೆ ಹಾಗೂ ಭಾವಚಿತ್ರಗಳನ್ನು ಮುಂದಿನ 15 ದಿನಗಳ ಕಾಲ ವಿತರಣೆ ಮಾಡಲಾಗುತ್ತದೆ. ತಾಲೂಕಿನಲ್ಲಿ ಸಣ್ಣ ಸಣ್ಣ ಸಭೆಗಳನ್ನು ಮಾಡಿ ಡಿಸೆಂಬರ್ 30ರೊಳಗಾಗಿ ಹಳ್ಳಿಗಳಿಗೆ ತಲುಪಿಸಲಾಗುತ್ತದೆ.
ಗ್ರಾಮದ ದೇವಸ್ಥಾನದಲ್ಲಿ ಮಂತ್ರಾಕ್ಷತೆ ಇಟ್ಟು ಪೂಜೆ ಸಲ್ಲಿಸಿ, 2024 ಜನವರಿ 1 ರಿಂದ ಪ್ರತಿ ಮನೆಗಳಿಗೆ ವಿತರಣೆಗೆ ಚಾಲನೆ ನೀಡಲಾಗುತ್ತದೆ.
ಅಯೋಧ್ಯೆಯಲ್ಲಿ 2024 ಜನವರಿ 22 ರಂದು ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆ ನಡೆಯಲಿದ್ದು, ಅಂದು ಗ್ರಾಮ, ನಗರ, ಪಟ್ಟಣ ಪ್ರದೇಶಗಳಲ್ಲಿ ನಿಗಧಿತ ಸ್ಥಳ, ದೇವಸ್ಥಾನದ ಬಳಿ ಎಲ್ಇಡಿ ಅಥವಾ ಟಿವಿ ಇಟ್ಟು ಶ್ರೀರಾಮ ಲಲ್ಲಾ ವಿಗ್ರಹದ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮವನ್ನು ಸಾಮೂಹಿಕವಾಗಿ ವೀಕ್ಷಣೆ ಮಾಡಲು ವ್ಯವಸ್ಥೆ ಮಾಡಲಾಗಿದೆ.
ಅಂದು ಬೆಳಗ್ಗೆ 9 ಗಂಟೆಗೆ ಶ್ರೀರಾಮ ವಿಗ್ರಹದ ಪ್ರಾಣ ಪ್ರತಿಷ್ಠೆ ನಡೆಯಲಿದೆ. ಆನಂತರ ಪ್ರಧಾನಿ ನರೇಂದ್ರ ಮೋದಿ ಹಾಗೂ ಆರೆಸ್ಸೆಸ್ಸ್ ಸರಸಂಘಚಾಕರಾದ ಡಾ.ಮೋಹನ್ ಭಾಗವತ್ ಅವರು ಮಾತನಾಡಲಿದ್ದಾರೆ. ಮಧ್ಯಾಹ್ನ 1 ಗಂಟೆಯೊಳಗೆ ಕಾರ್ಯಕ್ರಮ ಮುಕ್ತಾಯವಾಗುತ್ತದೆ.
ಅದೇ ದಿನ ಸಂಜೆ 6 ಗಂಟೆಗೆ ಪ್ರತಿ ಹಿಂದೂ ಮನೆಯಲ್ಲೂ ಪೂಜೆ ಸಲ್ಲಿಸಿ, ಅಯೋಧ್ಯೆ ಕಡೆಗೆ ಅಂದರೆ ಉತ್ತರ ದಿಕ್ಕಿಗೆ 5 ದೀಪಗಳನ್ನು ಬೆಳಗಿಸಿ ಆರತಿ ಮಾಡಿ ಮನೆಯ ಜಗಲಿ ಅಥಾವಾ ದೇವರ ಕೋಣೆಯಲ್ಲಿ ದೀಪಗಳನ್ನಿಡಲು ಶ್ರಿರಾಮ ಜನ್ಮಭೂಮಿ ಟ್ರಸ್ಟ್ ಕರೆಕೊಟ್ಟಿದೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail
chitradurganews23@gmail.com
» Whatsapp Number