By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Reading: ಹತ್ಯೆ ಮಾಡಿದ ತಾಯಿ ಪೊಲೀಸ್ ಕಸ್ಟಡಿಗೆ | ಮೃತ ಮಗು ಅಪ್ಪನ ಮಡಿಲಿಗೆ
Share
Font ResizerAa
Chitradurga News-Kannada NewsChitradurga News-Kannada News
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2022 Foxiz News Network. Ruby Design Company. All Rights Reserved.

Home » ಹತ್ಯೆ ಮಾಡಿದ ತಾಯಿ ಪೊಲೀಸ್ ಕಸ್ಟಡಿಗೆ | ಮೃತ ಮಗು ಅಪ್ಪನ ಮಡಿಲಿಗೆ

ಕ್ರೈಂ ಸುದ್ದಿ

ಹತ್ಯೆ ಮಾಡಿದ ತಾಯಿ ಪೊಲೀಸ್ ಕಸ್ಟಡಿಗೆ | ಮೃತ ಮಗು ಅಪ್ಪನ ಮಡಿಲಿಗೆ

chitradurganews.com
Last updated: 9 January 2024 22:20
chitradurganews.com
1 year ago
Share
ಸುಚನಾ ಸೇಠ್ ಪೊಲೀಸ್ ಕಸ್ಟಡಿಗೆ
ಸುಚನಾ ಸೇಠ್ ಪೊಲೀಸ್ ಕಸ್ಟಡಿಗೆ
SHARE
https://chat.whatsapp.com/Jhg5KALiCFpDwME3sTUl7x

CHITRADURGA NEWS | 9 JANUARY 2024

ಚಿತ್ರದುರ್ಗ: ಹೆತ್ತ ಕಂದನ ಕೊಂದ ಆರೋಪದಲ್ಲಿ ತಾಯಿ 6 ದಿನ ಪೊಲೀಸ್ ಕಸ್ಟಡಿಗೆ ಹೋದರೆ, ಇತ್ತ ಒಂದೀಡಿ ದಿನ ಅನಾಥವಾಗಿ ಶವಾಗಾರದಲ್ಲಿ ಮಲಗಿದ್ದ ಮಗುವಿನ ಮೃತ ದೇಹ ತಂದೆಯ ಪಾಲಾಗಿದೆ.

ಯಾವ ತಂದೆ ತಾಯಿಗೂ ಇಂಥಹ ಪರಿಸ್ಥಿತಿ ಬರಬಾರದು ಎನ್ನುವಂತಹ ಧಾರುಣ ಘಟನೆ ಇಂದು ಕರ್ನಾಟಕ ಹಾಗೂ ಗೋವಾ ಎರಡು ರಾಜ್ಯಗಳ ಜನರನ್ನು ತೀವ್ರವಾಗಿ ಕಾಡಿತು.

ಪತಿ ವೆಂಕಟರಮಣ ಜೊತೆ ವಿಚ್ಚೇದನಕ್ಕೆ ಅರ್ಜಿ ಸಲ್ಲಿಸಿದ್ದ ಸುಚನಾ ಸೇಠ್, ಅದ್ಯಾವ ಕ್ಷಣದಲ್ಲಿ ತಪ್ಪು ನಿರ್ಧಾರ ತೆಗೆದುಕೊಂಡರೋ ಮಗುವನ್ನು ಹತ್ಯೆ ಮಾಡಿದ್ದಾರೆ.

ದೂರದ ಇಂಡೋನೇಷ್ಯಾದಲ್ಲಿದ್ದ ವೆಂಕಟರಮಣ ಮೃತ ಮಗುವಿನ ಮುಖ ನೋಡಲು ಓಡೋಡಿ ಬಂದರು. ಇದಿಷ್ಟೂ ಇಂದು ಕರ್ನಾಟಕ ಹಾಗೂ ಗೋವಾದಲ್ಲಿ ನಡೆದ ಕರುಳು ಹಿಂಡುವ ಸನ್ನಿವೇಶಗಳಾಗಿದ್ದವು.

ಇದನ್ನೂ ಓದಿ: ಹೆತ್ತ ಕಂದನ ಕೊಂದು ನಿರ್ಭಾವುಕಳಾಗಿ ಕಾರು ಹತ್ತಿದ ತಾಯಿ

ಸೋಮವಾರ ಸಂಜೆ ಐಮಂಗಲ ಪೊಲೀಸ್ ಠಾಣೆಯಲ್ಲಿ ಬಂಧನಕ್ಕೊಳಗಾದ ಸುಚನಾ ಸೇಠ್ ಅವರನ್ನು ತಡರಾತ್ರಿಯೇ ಗೋವಾ ಪೊಲೀಸರು ವಶಕ್ಕೆ ಪಡೆದು ಕರೆದೊಯ್ದು ನ್ಯಾಯಾಲಯದ ಎದುರು ಹಾಜರುಪಡಿಸಿದರು.

ವಿಚಾರಣೆ ನಡೆಸಿದ ನ್ಯಾಯಾಲಯ ಪೊಲೀಸ್ ತನಿಖೆಗಾಗಿ ಅವರ ಮನವಿಯ ಮೇರೆಗೆ 6 ದಿನಗಳ ಕಾಲ ಸುಚನಾ ಅವರನ್ನು ಕಸ್ಟಡಿಗೆ ನೀಡಿದೆ.

ಇತ್ತ ಹಿರಿಯೂರು ಸಾರ್ವಜನಿಕ ಆಸ್ಪತ್ರೆಯಲ್ಲಿ ಅನಾಥವಾಗಿದ್ದ ಅವರ ಮಗುವಿನ ಮರಣೋತ್ತರ ಪರೀಕ್ಷೆ ಸಂಜೆ 8 ಗಂಟೆ ವೇಳೆಗೆ ನಡೆಯಿತು. ತಂದೆಯ ಸಮ್ಮುಖದಲ್ಲಿ ಮರಣೋತ್ತರ ಪರೀಕ್ಷೆ ನಡೆಸಿದ ವೈದ್ಯರು ಹಾಗೂ ಪೊಲೀಸರು ನಂತರ ಹಸ್ತಾಂತರ ಮಾಡಿದ್ದಾರೆ.

ಗೋವಾದ ಕ್ಯಾಲಂಗುಟ್ ಪೊಲೀಸರು ಮಾಹಿತಿ ಮೇರೆಗೆ ಭಾರತೀಯ ದಂಡ ಸಂಹಿತೆ ಮತ್ತು ಗೋವಾ ಬಾಲಾಪರಾಧಿ ಕಾಯ್ದೆಯ ಸೆಕ್ಷನ್ 302 ಮತ್ತು 201 ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

ಸುಚನಾ ಪಶ್ಚಿಮ ಬಂಗಾಳದವರಾಗಿದ್ದು, ಬೆಂಗಳೂರಿನಲ್ಲಿ ವಾಸಿಸುತ್ತಿದ್ದರು. ಆಕೆಯ ಪತಿ ಕೇರಳಾ ಮೂಲದವರಾಗಿದ್ದುದ, ಸದ್ಯ ಇಂಡೋನೇಷ್ಯಾದ ಜಕಾರ್ತದಲ್ಲಿದ್ದಾರೆ.

ಪೊಲೀಸರು ಘಟನೆಯ ಮಾಹಿತಿ ನೀಡಿದ ನಂತರ ಭಾರತಕ್ಕೆ ಆಗಮಿಸಿ ನೇರವಾಗಿ ಚಿತ್ರದುರ್ಗ ಜಿಲ್ಲೆಯ ಹಿರಿಯೂರಿಗೆ ಆಗಮಿಸಿ ಮಗು ಮೃತಪಟ್ಟಿರುವುದನ್ನು ಕಂಡು ಭಾವುಕರಾದರು.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

TAGGED:Child MurderChitradurgaGoaKarnatakaMother who killed her CHAILDಕರ್ನಾಟಕಗೋವಾಚಿತ್ರದುರ್ಗಮಗುವಿನ ಕೊಲೆಹೆತ್ತ ಕಂದನ ಕೊಂದ ತಾಯಿ
Share This Article
Facebook Email Print
Previous Article arecanut price list ಅಡಿಕೆ ಧಾರಣೆ | ಜನವರಿ 9 | ಯಾವ ಮಾರುಕಟ್ಟೆಯಲ್ಲಿ ಎಷ್ಟು ರೇಟಿದೆ..
Next Article ಡಾ.ಶ್ರೀ.ಶಿವಮೂರ್ತಿ ಮುರುಘಾ ಶರಣರು ಮುರುಘಾ ಶರಣರಿಗೆ ಹೈಕೋರ್ಟ್ ಕಟ್ಟುನಿಟ್ಟಿನ ಸೂಚನೆ | ವಿದ್ಯಾಪೀಠದ ನೀತಿ ನಿರೂಪಣೆಗಳಲ್ಲಿ ಹಸ್ತಕ್ಷೇಪ ಬೇಡ
Leave a Comment

Leave a Reply Cancel reply

Your email address will not be published. Required fields are marked *

ಬೆಳೆವಿಮೆ
ಫಸಲ್ ಭೀಮಾ ಯೋಜನೆ | ನೋಂದಣಿ ಆರಂಭ
ಮುಖ್ಯ ಸುದ್ದಿ
ಬೆಳೆ ಸಮೀಕ್ಷೆ | ರೈತರೇ Mobile App ಮೂಲಕ ಮಾಹಿತಿ ಅಪ್‍ಲೋಡ್ ಮಾಡಬಹುದು | ಅದು ಹೇಗೆ ಎಂದು ತಿಳಿಯಿರಿ 
ಮುಖ್ಯ ಸುದ್ದಿ
arecanut price list
ಅಡಿಕೆ ಧಾರಣೆ | ಜುಲೈ 1 | ಯಾವ ಅಡಿಕೆಗೆ ಎಷ್ಟು ರೇಟ್‌
ಅಡಕೆ ಧಾರಣೆ
ರಕ್ತದಾನದಿಂದ ಆರೋಗ್ಯ ವೃದ್ಧಿ | ಎಂ.ಕೆ.ರವೀಂದ್ರ
ಮುಖ್ಯ ಸುದ್ದಿ
© Chitradurga News. Ruby Design Company. All Rights Reserved.

Chitradurga News App

Install
Welcome Back!

Sign in to your account

Username or Email Address
Password

Lost your password?

Not a member? Sign Up