By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಭಾರೀ ಮಳೆಗೆ ಮನೆಗೆ ನುಗ್ಗಿದ ನೀರು | ರಾತ್ರಿ‌ ಜನಜೀವನ ಅಸ್ತವ್ಯಸ್ತ
    10 hours ago
    ಜಿಲ್ಲಾ ಪ್ರಶಿಕ್ಷಣ ವರ್ಗದ ಕಾರ್ಯಾಗಾರ
    ಚಿತ್ರದುರ್ಗ ಬಿಜೆಪಿ ಕಾರ್ಯಕರ್ತರಿಗೆ ಶಿವಮೊಗ್ಗದಲ್ಲಿ ಪ್ರಶಿಕ್ಷಣ ವರ್ಗ | ಬಿ.ವೈ.ವಿಜಯೇಂದ್ರ ಭಾಗೀ
    10 hours ago
    ಪೂರ್ವಭಾವಿ ಸಭೆ ಕೆಪಿಸಿಸಿ ಉಪಾಧ್ಯಕ್ಷ ಮುರುಳಿಧರ ಹಾಲಪ್ಪ ಮಾತನಾಡಿದರು
    ಕಾಂಗ್ರೆಸ್‌ನಲ್ಲಿ ಅಶಿಸ್ತಿಗೆ ಅವಕಾಶವಿಲ್ಲ | ಮುರುಳೀಧರ ಹಾಲಪ್ಪ ಎಚ್ಚರಿಕೆ
    12 hours ago
    ಸಹಜ ಕೃಷಿ ತರಬೇತಿ ಕಾರ್ಯಾಗಾರ
    ವಿಷಯುಕ್ತ ಆಹಾರಕ್ಕಾಗಿ ಸಹಜ ಕೃಷಿ ಅನಿವಾರ್ಯ | ಐಕಾಂತಿಕ ರಾಘವ
    13 hours ago
    ಶಾಲೆ ಸಂಸತ್ತಿನ ಚುನಾವಣೆ
    ಶಾಲೆಗೆ‌‌ ಆಧಾರ್ ಕಾರ್ಡ್ ತಂದು ಮತದಾನ ಮಾಡಿದ ಮಕ್ಕಳು | ಕ್ಯಾದಿಗೆರೆ ಶಾಲೆಯಲ್ಲಿ ಚುನಾವಣೆ 
    14 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    Hosadurga police work
    INSTAGRAM, FECEBOOK ಪರಿಚಯ | ಲೈಂಗಿಕ ದುರ್ಬಳಕೆ ವಂಚನೆ ಮಾಡುತ್ತಿದ್ದ ಆರೋಪಿ ಬಂಧನ | ಚಿನ್ನಾಭರಣ ವಶಕ್ಕೆ
    3 days ago
    ಚಿತ್ರದುರ್ಗ ಅಪರಾಧ
    ಜಾನುಕೊಂಡ ಬಳಿ ಭೀಕರ ಅಪಘಾತ | ಇಬ್ಬರು ಕುರಿಗಾಯಿಗಳು, 14 ಕುರಿ ಧಾರುಣ ಸಾವು
    2 weeks ago
    Accident near molakalmuru
    ಮೊಳಕಾಲ್ಮೂರು ಬಳಿ ಮತ್ತೊಂದು ಅಪಘಾತ | ಚಳ್ಳಕೆರೆಯ 5 ಜನ ಸಾವು | ಒಂದೇ ದಿನದ ಅಂತರದಲ್ಲಿ ಜಿಲ್ಲೆಯಲ್ಲಿ ಹತ್ತು ಸಾವು
    3 weeks ago
    ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ | 5 ಜನರ ದುರ್ಮರಣ
    3 weeks ago
    Accident between bike and car
    ಬೈಕ್‌ – ಕಾರು ನಡುವೆ ಅಪಘಾತ | ಸ್ಥಳದಲ್ಲೇ ಇಬ್ಬರು ಮೃತ
    3 weeks ago
  • ತಾಲೂಕು
    ತಾಲೂಕುShow More
    ಸುಜ್ಞಾನ ಸಂಗಮ, ಜೈನ ಸಮಾಜ ಬಾಂಧವರಿಗೆ ಸನ್ಮಾನ ಸಮಾರಂಭ
    ಸಾತ್ವಿಕತೆ ಇರುವಲ್ಲಿ ಸಹಬಾಳ್ವೆ, ಸೌಹಾರ್ದತೆ ಇರುತ್ತದೆ | ಶಾಂತವೀರ ಶ್ರೀ 
    5 days ago
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ 
    2 weeks ago
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    2 weeks ago
    ವಾಲಿಬಾಲ್ ಹೊನಲು ಬೆಳಕಿನ ಪಂದ್ಯಾವಳಿ
    ಸೋಲು ಮುಂದಿನ ಗೆಲುವಿಗೆ ಪ್ರೇರಣೆ | ಸಾಣೇಹಳ್ಳಿ ಶ್ರೀ 
    3 weeks ago
    ರಂಗಶಾಲಾ ನಾಟಕೋತ್ಸವ
    ಸಾಣೇಹಳ್ಳಿಯಲ್ಲಿ ಯಶಸ್ವಿಯಾಗಿ ನಡೆದ ರಂಗಶಾಲಾ ನಾಟಕೋತ್ಸವ
    4 weeks ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    1 week ago
    ARECANUT RATE
    ಅಡಿಕೆ ಧಾರಣೆ | 6 ಜೂನ್‌ | ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ ಹಾಗೂ ರಾಜ್ಯದ ಅಡಿಕೆ ರೇಟ್‌
    1 week ago
    ARECANUT RATE
    ಅಡಿಕೆ ಧಾರಣೆ | 5 ಜೂನ್‌ | ಇಂದಿನ ಅಡಿಕೆ ಮಾರುಕಟ್ಟೆ ವಿವರ
    1 week ago
    ARECANUT RATE
    ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ, ಸಾಗರ ಹಾಗೂ ರಾಜ್ಯದ ಅಡಿಕೆ ರೇಟ್‌
    2 weeks ago
    ARECANUT RATE
    ಅಡಿಕೆ ಧಾರಣೆ | 4 ಜೂನ್‌ | ಇಂದಿನ ರಾಶಿ, ಚಾಲಿ, ಕೆಂಪಡಕೆ ರೇಟ್‌
    2 weeks ago
  • Dina Bhavishya
    Dina BhavishyaShow More
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 16 | ಹೊಸ ವ್ಯವಹಾರಗಳಲ್ಲಿ ಹೂಡಿಕೆ, ಮಕ್ಕಳ ಆರೋಗ್ಯದಲ್ಲಿ ಜಾಗೃತಿ ವಹಿಸಿ
    2 hours ago
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 15 | ವ್ಯವಹಾರದಲ್ಲಿ ಆರ್ಥಿಕ ಪ್ರಗತಿ, ನಿರುದ್ಯೋಗಿಗಳಿಗೆ ಹೊಸ ಅವಕಾಶಗಳು
    1 day ago
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 14 | ವೃತ್ತಿ ಮತ್ತು ವ್ಯಾಪಾರದಲ್ಲಿ ನಿರೀಕ್ಷಿತ ಪ್ರಗತಿ, ದೂರ ಪ್ರಯಾಣ ಬೇಡ
    2 days ago
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 13 | ಕೈಗೊಂಡ ಕೆಲಸಗಳಲ್ಲಿ ಅಡಚಣೆಗಳು, ಅರೋಗ್ಯದಲ್ಲಿ ಎಚ್ಚರ
    3 days ago
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 12 | ಕೈಗೊಂಡ ಕೆಲಸದಲ್ಲಿ ವಿಳಂಬ, ಆರ್ಥಿಕ ಸಂಕಷ್ಟ
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಜೂನ್ 15 | ಮೆಕ್ಕೆಜೋಳ, ಶೇಂಗಾ ರೇಟ್….
    17 hours ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಜೂನ್ 12 | ರಾಗಿ, ಮೆಕ್ಕೆಜೋಳ ರೇಟ್….
    4 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಜೂನ್ 11 | ಹತ್ತಿ ರೇಟ್ ಎಷ್ಟಿದೆ?
    5 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಜೂನ್ 10 | ಮೆಕ್ಕೆಜೋಳ, ರಾಗಿ ರೇಟ್ ಎಷ್ಟಿದೆ?
    6 days ago
    ಮಾರುಕಟ್ಟೆ ಧಾರಣೆ
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್..
    7 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಆರೋಗ್ಯ ಕ್ಷೇಮ ಕೇಂದ್ರ ಕಟ್ಟಡ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    ನೂತನ ಆರೋಗ್ಯ ಕ್ಷೇಮ ಕೇಂದ್ರ ಕಟ್ಟಡ ನಿರ್ಮಾಣ ಕಾಮಗಾರಿಗೆ ಶಾಸಕ ಎಂ.ಚಂದ್ರಪ್ಪ ಭೂಮಿಪೂಜೆ 
    2 weeks ago
    ಸಿ.ಸಿ.ರಸ್ತೆ ಕಾಮಗಾರಿಗೆ ಭೂಮಿ ಪೂಜೆ
    ಮೂರ್ನಾಲ್ಕು ದಿನಗಳಲ್ಲೇ ತಾಳಿಕಟ್ಟೆ ಕೆರೆಗೆ‌ ನೀರು | ಶಾಸಕ‌ ಎಂ.ಚಂದ್ರಪ್ಪ
    3 weeks ago
    ಪೂರ್ವಭಾವಿ ಸಭೆ
    ಹೊಳಲ್ಕೆರೆ ಜಿಲ್ಲೆಯಲ್ಲಿಯೇ ಮಾದರಿ ಕ್ಷೇತ್ರ | ಶಾಸಕ ಎಂ.ಚಂದ್ರಪ್ಪ 
    1 month ago
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ | ಸಿದ್ಧಯ್ಯನಕೋಟೆ ಶ್ರೀ, ಎಚ್.ಆಂಜನೇಯ ಭಾಗೀ 
    2 months ago
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ 
    2 months ago
  • ಹಿರಿಯೂರು
    ಹಿರಿಯೂರುShow More
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    3 weeks ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    2 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    4 months ago
    Power Cut chitradurga News (3)
    ಹಿರಿಯೂರು | ಇಂದು ವಿದ್ಯುತ್ ವ್ಯತ್ಯಯ
    4 months ago
    Shree SHADAKSHARAMUNI SWAMIJI
    ಆದಿಜಾಂಬವ ಶಾಖಾ ಮಠದ ಹೆಸರಿನ ಸಭೆಗೆ ನಮ್ಮ ಸಮ್ಮತಿ ಇಲ್ಲ | ದಾವಣಗೆರೆಯಲ್ಲಿ ಫೆ.14 ರಂದು ಕರೆದಿರುವ ಸಭೆಗೆ ಸ್ಪಷ್ಟೀಕರಣ | ಶ್ರೀ ಷಡಾಕ್ಷರಮುನಿ ಸ್ವಾಮೀಜಿ
    4 months ago
  • ಹೊಸದುರ್ಗ
    ಹೊಸದುರ್ಗShow More
    ಸುಜ್ಞಾನ ಸಂಗಮ, ಜೈನ ಸಮಾಜ ಬಾಂಧವರಿಗೆ ಸನ್ಮಾನ ಸಮಾರಂಭ
    ಸಾತ್ವಿಕತೆ ಇರುವಲ್ಲಿ ಸಹಬಾಳ್ವೆ, ಸೌಹಾರ್ದತೆ ಇರುತ್ತದೆ | ಶಾಂತವೀರ ಶ್ರೀ 
    5 days ago
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ 
    2 weeks ago
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    2 weeks ago
    ವಾಲಿಬಾಲ್ ಹೊನಲು ಬೆಳಕಿನ ಪಂದ್ಯಾವಳಿ
    ಸೋಲು ಮುಂದಿನ ಗೆಲುವಿಗೆ ಪ್ರೇರಣೆ | ಸಾಣೇಹಳ್ಳಿ ಶ್ರೀ 
    3 weeks ago
    ರಂಗಶಾಲಾ ನಾಟಕೋತ್ಸವ
    ಸಾಣೇಹಳ್ಳಿಯಲ್ಲಿ ಯಶಸ್ವಿಯಾಗಿ ನಡೆದ ರಂಗಶಾಲಾ ನಾಟಕೋತ್ಸವ
    4 weeks ago
  • Life Style
    Life StyleShow More
    Eat these fruits to stay healthy during the rainy season
    ಮಳೆಗಾಲದಲ್ಲಿ ಆರೋಗ್ಯವಾಗಿರಲು ಈ ಹಣ್ಣುಗಳನ್ನು ಸೇವಿಸಿ
    59 minutes ago
    eyes
    ಕಣ್ಣುಗಳಲ್ಲಿನ ಈ ಬದಲಾವಣೆಗಳು ರೋಗಗಳನ್ನು ಸೂಚಿಸುತ್ತವೆಯಂತೆ
    24 hours ago
    care of your skin during pregnancy
    ಗರ್ಭಾವಸ್ಥೆಯಲ್ಲಿ ಚರ್ಮದ ಆರೈಕೆ ಮಾಡುವಾಗ ಈ ವಿಷಯಗಳನ್ನು ನೆನಪಿನಲ್ಲಿಡಿ
    1 day ago
    teeth
    ವೃದ್ಧರಾದ ಮೇಲೂ ನಿಮ್ಮ ಹಲ್ಲುಗಳು ಗಟ್ಟಿಯಾಗಿರಲು ಈ ಸಲಹೆ ಅನುಸರಿಸಿ
    2 days ago
    heart disease
    ದೇಹದಲ್ಲಿನ ಈ ಬದಲಾವಣೆಗಳು ಹೃದಯ ಕಾಯಿಲೆಯ ಲಕ್ಷಣವಾಗಿದೆ
    2 days ago
Reading: ಅಯೋಧ್ಯೆಯಲ್ಲಿ ಟೈಗರ್ ತಿಪ್ಪೇಸ್ವಾಮಿ ಮೃತಪಟ್ಟಿದ್ದಾರೆ ಎನ್ನುವ ಸುದ್ದಿ ಹಬ್ಬಿತ್ತು…!
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಅಯೋಧ್ಯೆಯಲ್ಲಿ ಟೈಗರ್ ತಿಪ್ಪೇಸ್ವಾಮಿ ಮೃತಪಟ್ಟಿದ್ದಾರೆ ಎನ್ನುವ ಸುದ್ದಿ ಹಬ್ಬಿತ್ತು…!

chitradurganews.com
Last updated: 13 January 2024 20:30
chitradurganews.com
2 years ago
Share
ಟೈಗರ್ ತಿಪ್ಪೇಸ್ವಾಮಿ
ಟೈಗರ್ ತಿಪ್ಪೇಸ್ವಾಮಿ
SHARE

ಅಯೋಧ್ಯೆಯಲ್ಲಿ ಭವ್ಯ ರಾಮ ಮಂದಿರ ನಿರ್ಮಾಣವಾಗುತ್ತಿದೆ. ಜನವರಿ 22 ರಂದು ಬಾಲ ರಾಮ ವಿಗ್ರಹದ ಪ್ರಾಣ ಪ್ರತಿಷ್ಠಾಪನೆಯೂ ಆಗುತ್ತಿದೆ. ಸತತ 500 ವರ್ಷಗಳ ಹೋರಾಟದ ಫಲವಾಗಿ ಇಂದು ಮಂದಿರ ಎದ್ದು ನಿಲ್ಲುತ್ತಿದೆ. ಲಕ್ಷಾಂತರ ಜನ ಇದಕ್ಕಾಗಿ ಬಲಿದಾನ ಮಾಡಿದ್ದಾರೆ. ಅಯೋಧ್ಯೆ ಶ್ರೀರಾಮ ಮಂದಿರಕ್ಕಾಗಿ ನಡೆದ ಹಲವು ಹಂತದ ಹೋರಾಟಗಳಲ್ಲಿ ಕೋಟೆನಾಡು ಚಿತ್ರದುರ್ಗ ಜಿಲ್ಲೆಯ ಹಲವು ಹೋರಾಟಗಾರರು ಭಾಗಿಯಾಗಿದ್ದಾರೆ. ಅಂಥವರನ್ನು ಸ್ಮರಿಸುವ, ಹೋರಾಟದಲ್ಲಿ ಭಾಗಿಯಾದವರ ಅನುಭವಗಳನ್ನು ಇಂದಿನಿಂದ ನಿಮ್ಮ ಚಿತ್ರದುರ್ಗ ನ್ಯೂಸ್ ಪ್ರತಿ ದಿನ ಪ್ರಕಟಿಸಲಿದೆ.

ಅದೂ 1990. ಅಯೋಧ್ಯೆಯಲ್ಲಿ ಮಂದಿರ ನಿರ್ಮಾಣಕ್ಕೆ ಕೈಗೊಂಡ ಕರಸೇವೆಗೆ ಚಿತ್ರದುರ್ಗದಿಂದಲೂ ಒಂದು ತಂಡ ಹೋಗಿತ್ತು. ಸುಮಾರು 35 ಜನ ಜಿಲ್ಲೆಯಿಂದ ತೆರಳಿದ್ದರು.

ಈ ತಂಡದಲ್ಲಿ ಚಿತ್ರದುರ್ಗದಲ್ಲಿ ಟೈಗರ್ ತಿಪ್ಪೇಸ್ವಾಮಿ ಎಂದೇ ಹೆಸರಾಗಿರುವ ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ತಿಪ್ಪೇಸ್ವಾಮಿ ಕೂಡಾ ಭಾಗಿಯಾಗಿದ್ದರು.

ಇದನ್ನೂ ಓದಿ: ಅಪರಾಧ ಕುರಿತ ತೀರ್ಮಾನಕ್ಕೆ ಪರಿಣಾಮಕಾರಿ ತನಿಖೆ ಅತ್ಯಗತ್ಯ

ಅಯೋಧ್ಯೆಗೆ ಹೋಗಿದ್ದ ಟೈಗರ್ ತಿಪ್ಪೇಸ್ವಾಮಿ ವಾಪಾಸು ಬರುವ ವೇಳೆಗೆ, ಅಲ್ಲಿ ಶೂಟೌಟ್ ನಡೆದಿದೆ. ಈ ಶೂಟೌಟ್‍ನಲ್ಲಿ ತಿಪ್ಪೇಸ್ವಾಮಿ ಮೃತಪಟ್ಟಿದ್ದಾರೆ ಎಂದು ದುರ್ಗದಲ್ಲಿ ಸುದ್ದಿ ಹಬ್ಬಿತ್ತು ಎಂದು ಚಿತ್ರದುರ್ಗ ನ್ಯೂಸ್ ಜೊತೆಗೆ ಹಳೆಯ ನೆನಪನ್ನು ಮೆಲುಕು ಹಾಕಿದ್ದಾರೆ ಟೈಗರ್.

1990ರಲ್ಲಿ ನಾವು ಅಯೋಧ್ಯೆಗೆ ಕರಸೇವೆಗೆ ಹೊರಟಾಗ, ಉತ್ತರ ಪ್ರದೇಶದಲ್ಲಿ ಮುಲಾಯಂ ಸಿಂಗ್ ಯಾದವ್ ಸರ್ಕಾರ ಇತ್ತು. ಅವರೇ ಮುಖ್ಯಮಂತ್ರಿ. ಒಬ್ಬ ನರಪಿಳ್ಳೆಯನ್ನೂ ಉತ್ತರ ಪ್ರದೇಶದ ಒಳಗೆ ಬಿಡುವುದಿಲ್ಲ ಎಂದು ಬಂದೋಬಸ್ತ್ ಮಾಡಿದ್ದರು.

ಈ ಕಾರಣಕ್ಕೆ ಮುಖ್ಯ ರಸ್ತೆಗಳಲ್ಲಿ ಟ್ರಂಚ್(ಗುಂಡಿ) ಹೊಡೆದಿದ್ದರು. ವಾಹನಗಳು ರಸ್ತೆ ದಾಟುವುದು ಕಷ್ಟವಾಗಿತ್ತು. ರಸ್ತೆಗಳಲ್ಲಿರುವ ಯಾವ ಪೆಟ್ರೋಲ್ ಬಂಕ್ ಕೂಡಾ ತೆರೆದಿರಲಿಲ್ಲ. ಕರಸೇವಕರನ್ನು ಸಿಕ್ಕ ಸಿಕ್ಕಲ್ಲಿ ಬಂಧಿಸಿ ಮಧ್ಯಪ್ರದೇಶಕ್ಕೆ ಕರೆತಂದು ಬಿಡುತ್ತಿದ್ದರು.

ಇದನ್ನೂ ಓದಿ: ಚಿತ್ರದುರ್ಗದಲ್ಲಿ ಶೋಷಿತರ ಶಕ್ತಿ ಪ್ರದರ್ಶನಕ್ಕೆ ಭರದ ಸಿದ್ಧತೆ

ನಾವೆಲ್ಲಾ ರಾಯಚೂರಿನಿಂದ ರೈಲು ಮೂಲಕ ಉತ್ತರ ಪ್ರದೇಶಕ್ಕೆ ಪ್ರಯಾಣ ಬೆಳೆಸಿದ್ದೆವು. ಉತ್ತರಪ್ರದೇಶದ ದದ್ರಿ ಎಂಬಲ್ಲಿ ನಮ್ಮ ಬಂಧನ ಗ್ಯಾರೆಂಟಿ ಎನ್ನುವುದು ಗೊತ್ತಾಗಿ, ಅಲ್ಲೇ ರೈಲಿನಿಂದ ಇಳಿದು ಕಾಡಲ್ಲಿ 40 ಕಿ.ಮೀ ನಡೆದುಕೊಂಡು ಹೋಗಿದ್ದೆವು.

ನಡೆದು ನಡೆದು ಸುಸ್ತಾಗಿ ಒಂದು ಕಡೆ ಕಾಡಿನಲ್ಲೇ ಮಲಗಿದ್ದೆವು. ಆ ಕಾಡಿಗೆ ಉತ್ತರಪ್ರದೇಶ ಪೊಲೀಸರು ಬಂದು ಬಂಧಿಸುತ್ತಿರುವ ಸುದ್ದಿ ಕೇಳಿಬಂತು. ನಾನು ಮತ್ತೆ ನನ್ನ ಜೊತೆಗೆ ಬಂದಿದ್ದ ಸೋಮಶೇಖರ್ ಮರ ಹತ್ತಿ ಕುಳಿತಿದ್ದೆವು.

ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಹಾಗೂ ಹಾಲಿ ಪ್ರಧಾನಿ ನರೇಂದ್ರ ಮೋದಿ ಅವರ ಜೊತೆ ಟೈಗರ್ ತಿಪ್ಪೇಸ್ವಾಮಿ

ತಡರಾತ್ರಿ ಆಗುತ್ತಿದ್ದಂತೆ ಕಾಡಿನ ವಿಚಿತ್ರ ಶಬ್ದ, ಪ್ರಾಣಿಗಳ ಓಡಾಟ, ಪ್ರಾಣಿಗಳ ಆರ್ಭಟ ಕೇಳಿ ಹೆದರಿದ್ದೆವು. ಮರದಿಂದ ಇಳಿದು ಅರೆಸ್ಟ್ ಮಾಡಿದ ಜಾಗಕ್ಕೆ ಬಂದು ಮಲಗಿದ್ದೆವು.

ಇಲ್ಲಿಂದ ಚಿತ್ರಕೂಟಕ್ಕೆ ನಡಿಗೆ ಶುರುವಾಯಿತು. ಊಟ, ತಿಂಡಿ ಸಿಕ್ಕಿರಲಿಲ್ಲ. ಚಿತ್ರಕೂಟದಲ್ಲಿ ಸಾದ್ವಿ ರಿತುಂಬರಾ ಹಾಗೂ ಲಾಲ್‍ಕೃಷ್ಣ ಅಡ್ವಾಣಿ ಅವರ ರಥಯಾತ್ರೆಯೂ ಸಿಕ್ಕಿತ್ತು. ಇಲ್ಲೇ ಸ್ವಯಂಸೇವಕರೊಬ್ಬರ ಮನೆಯಲ್ಲಿ ಊಟ ಮಾಡಿದೆವು.

ಇದನ್ನೂ ಓದಿ: ಅಯೋಧ್ಯೆಯಲ್ಲಿ ದುರ್ಗದ ಕೀರ್ತಿ

ಚಿತ್ರಕೂಟದಲ್ಲಿ ಬಿ.ಎಸ್.ಯಡಿಯೂರಪ್ಪ, ರಾಮಚಂದ್ರೇಗೌಡ್ರು ಸಿಕ್ಕಿದ್ದರು. ಅಲ್ಲಿಂದ ಅಯೋಧ್ಯೆಯತ್ತ ತೆರಳುವಾಗ ಮತ್ತೆ ಅರೆಸ್ಟ್ ಮಾಡಿ, ದದ್ರಿಗೆ ಕರೆತಂದು ಬಿಟ್ಟರು.

ಈ ವೇಳೆ ಸರ್ಕಾರದ ಗಮನ ಸೆಳೆಯಲು ಬಸ್‍ಗೆ ಬೆಂಕಿ ಹಚ್ಚಲು ನಾನು ಆಲೋಚನೆ ಮಾಡಿದ್ದೆ. ಆಗ ಯಡಿಯೂರಪ್ಪ ಬೈದು, ಗಲಾಟೆ ಮಾಡಿದ್ದರು. ಶಿಖಾರಿಪುರದ ಕಾರ್ಯಕರ್ತರು ನಮ್ಮನ್ನು ಹೆದರಿಸಿದ್ದರು.

ಅಲ್ಲಿಂದ ಒಟ್ಟಿಗೆ ನಮ್ಮನ್ನು ಬಂಧಿಸಿದರು. ಈ ವೇಳೆ ಲಾರಿಯಿಂದ ಜಿಗಿದು ತಪ್ಪಿಸಿಕೊಂಡು ಬಂದಿದ್ದೆವು.
ನಂತರ ಮಾಣಿಕ್‍ಪುರದಲ್ಲಿ ಸಂಘದ ಸ್ವಯಂಸೇವಕರ ಮನೆಯಲ್ಲಿ ಒಂದು ದಿನ ಉಳಿದು, ಅಲ್ಲಿಂದ ನಡೆದುಕೊಂಡು ಕಾಶಿ ತಲುಪಿದ್ದೆವು. ಕಾಶಿಯ ರೈಲು ನಿಲ್ದಾಣದಲ್ಲಿ ಸಿಕ್ಕಿದ ರೈಲು ಹತ್ತಿ ಹೊರಟರೆ ಅದು ನಮ್ಮನ್ನು ಅಮೇಥಿಗೆ ತಲುಪಿಸಿತ್ತು. ಅಲ್ಲಿದ್ದವು ಇಲ್ಲಿಗ್ಯಾಕೆ ಬಂದಿದ್ದೀರಿ ಎಂದು ಅಲ್ಲಿಂದ ವಾಪಾಸು ಆನಂದಪುರಕ್ಕೆ ಸ್ಥಳೀಯರು ಕರೆದುಕೊಂಡು ಬಿಟ್ಟಿದ್ದರು.

ಇನ್ನೇನು ನಾವು ಅಯೋಧ್ಯೆ ಕಡೆಗೆ ಹೋಗುತ್ತಿದ್ದೇವೆ ಎನ್ನುವಾಗ ಸೈನಿಕರು ಶೂಟ್ ಮಾಡುತ್ತಿದ್ದಾರೆ. ಕೇಸರ ಬಟ್ಟೆ ಹಾಕಿದವರು ಕಣ್ಣಿಗೆ ಬೀಳಬೇಡಿ ಎಂದು ಹೆದರಿಸಿದರು.

ನಾನು ಅಯೋಧ್ಯೆಯಲ್ಲಿ ಶ್ರೀರಾಮನ ದರ್ಶನ ಮಾಡುವವರೆಗೆ ಗಡ್ಡ, ಮೀಸಿ, ಮಂಡೆ ತೆಗೆಯುವುದಿಲ್ಲ ಎಂದು ಸಂಕಲ್ಪ ಮಾಡಿದ್ದೆ. ಹೇಗೋ ಅಲ್ಲಿ, ಇಲ್ಲಿ ಮೂರು ದಿನ ಕಾದು ಕುಳಿತೆವು. ಅದೇ ಸಮಯಕ್ಕೆ ನ್ಯಾಯಾಲಯ ದೇವರ ದರ್ಶನಕ್ಕೆ ಅವಕಾಶ ಕಲ್ಪಿಸಿತ್ತು. ಒಟ್ಟು 21 ದಿನಗಳ ಕಾಲ ಅಯೋಧ್ಯೆ ಯಾತ್ರೆ ಮಾಡಿದ್ದೆವು.

ಅಯೋಧ್ಯೆ ಶ್ರೀರಾಮ ಮಂದಿರ
ಅಯೋಧ್ಯೆ ಶ್ರೀರಾಮ ಮಂದಿರ

ತಿಪ್ಪೇಸ್ವಾಮಿ ಶೂಟೌಟ್‍ನಲ್ಲಿ ಸತ್ತರು ಎನ್ನುವ ಸುದ್ದಿ:

ಅಯೋಧ್ಯೆಯಲ್ಲಿ ಕರ್ನಾಟಕದ ತಿಪ್ಪೇಸ್ವಾಮಿ ಎನ್ನುವವರು ಶೂಟೌಟ್‍ನಲ್ಲಿ ಮೃತಪಟ್ಟಿದ್ದರು. ಆಗ ನಾನೇ ಸತ್ತಿದ್ದೇನೆ ಎಂದು ಅನೇಕರು ಭಾವಿಸಿದ್ದರು. ಚಿತ್ರದುರ್ಗಕ್ಕೂ ಸುದ್ದಿ ತಲುಪಿ ಇಲ್ಲಿ ಬಂದೋಬಸ್ತ್ ಮಾಡಿಕೊಂಡಿದ್ದರು.

ಇಲ್ಲಿಗೆ ಬಂದಾಗ ಎಲ್ಲರೂ ನಿಟ್ಟುಸಿರು ಬಿಟ್ಟಿದ್ದರು. 1992ರ ಕರಸೇವೆಗೆ ಕರೆ ಕೊಟ್ಟಾಗ ಹೋಗಲು ಆಗಲಿಲ್ಲ. ಅದೇ ಸಮಯಕ್ಕೆ ನನ್ನ ಮಗಳು ಮೃತಪಟ್ಟಿದ್ದರು ಎಂದು ಟೈಗರ್ ತಿಪ್ಪೇಸ್ವಾಮಿ ಸ್ಮರಿಸಿದರು.

ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣ ಆಗಬೇಕು ಎಂದು ಸುಮಾರು 500 ವರ್ಷಗಳ ಕಾಲ ಹೋರಾಟ ನಡೆದಿದೆ. ನಾವು ಕಳೆದ 35-40 ವರ್ಷಗಳಿಂದ ಹೋರಾಟ ಮಾಡಿದವರು. ನಮ್ಮ ಕಣ್ಣೆದುರು ಮಂದಿರ ನಿರ್ಮಾಣ ಆಗುತ್ತಿರುವುದು ಬಹಳ ಸಂತಸ ತಂದಿದೆ.

ನನ್ನ ಜೊತೆಗೆ ಸೋಮೇಶಖರ್, ಲಕ್ಷ್ಮೀನಾರಾಯಣ ಎನ್ನುವವರು ಅಯೋಧ್ಯೆವರೆಗೆ ಬಂದಿದ್ದರು. ಸಾಕಷ್ಟು ಜನರನ್ನು ಆರಂಭದಲ್ಲೇ ಬಂದಿಸಿದ್ದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:AyodhyaChitradurgaKarasevaSri RamaTiger Thippeswamyಅಯೋಧ್ಯೆಕರಸೇವೆಚಿತ್ರದುರ್ಗಟೈಗರ್ ತಿಪ್ಪೇಸ್ವಾಮಿಶ್ರೀರಾಮ
Share This Article
Facebook Email Print
Previous Article arecanut price list ಅಡಕೆ ಧಾರಣೆ | ಜನವರಿ 13 | ವಾರಾಂತ್ಯದ ಮಾರುಕಟ್ಟೆಯಲ್ಲಿ ದರ ವಿವರ
Next Article ಜಿಲ್ಲಾ ಕೌಶಲ್ಯಾಭಿವೃಧ್ದಿ ಅಧಿಕಾರಿ ಕೆ.ಗೋಪಾಲ ರೆಡ್ಡಿ ಜಿಲ್ಲಾ ಕೌಶಲ್ಯಾಭಿವೃಧ್ದಿ ಅಧಿಕಾರಿ ಕೆ.ಗೋಪಾಲ ರೆಡ್ಡಿ ನಿಧನ
Leave a Comment

Leave a Reply Cancel reply

Your email address will not be published. Required fields are marked *

Eat these fruits to stay healthy during the rainy season
ಮಳೆಗಾಲದಲ್ಲಿ ಆರೋಗ್ಯವಾಗಿರಲು ಈ ಹಣ್ಣುಗಳನ್ನು ಸೇವಿಸಿ
Life Style
ದಿನ ಭವಿಷ್ಯ
ದಿನ ಭವಿಷ್ಯ | ಜೂನ್ 16 | ಹೊಸ ವ್ಯವಹಾರಗಳಲ್ಲಿ ಹೂಡಿಕೆ, ಮಕ್ಕಳ ಆರೋಗ್ಯದಲ್ಲಿ ಜಾಗೃತಿ ವಹಿಸಿ
Dina Bhavishya
ಭಾರೀ ಮಳೆಗೆ ಮನೆಗೆ ನುಗ್ಗಿದ ನೀರು | ರಾತ್ರಿ‌ ಜನಜೀವನ ಅಸ್ತವ್ಯಸ್ತ
ಮುಖ್ಯ ಸುದ್ದಿ
ಜಿಲ್ಲಾ ಪ್ರಶಿಕ್ಷಣ ವರ್ಗದ ಕಾರ್ಯಾಗಾರ
ಚಿತ್ರದುರ್ಗ ಬಿಜೆಪಿ ಕಾರ್ಯಕರ್ತರಿಗೆ ಶಿವಮೊಗ್ಗದಲ್ಲಿ ಪ್ರಶಿಕ್ಷಣ ವರ್ಗ | ಬಿ.ವೈ.ವಿಜಯೇಂದ್ರ ಭಾಗೀ
ಮುಖ್ಯ ಸುದ್ದಿ
© Chitradurga News 2025 | Powered By Karnatakabest.com

Loading Comments...

    Welcome Back!

    Sign in to your account

    Username or Email Address
    Password

    Lost your password?

    Not a member? Sign Up