
CHITRADURGA NEWS | 06 JUNE 2026
ಚಿತ್ರದುರ್ಗ: ಇಂದಿನ ದಿನಮಾನದಲ್ಲಿ ಪರಿಸರ ಹಾಗೂ ಮನಸ್ಥಿತಿಗಳು ಕಲುಷಿತವಾಗಿವೆ, ನಾವುಗಳು ಬೇರೆಯವರು ಹಾಕಿದ ಮರಗಳಲ್ಲಿ ಇಂದು ನೆರಳನ್ನು ಪಡೆಯುತ್ತಿದ್ದೇವೆ. ಇದೇ ರೀತಿ ಮುಂದಿನ ಪೀಳಿಗೆ ಇಂದು ನಾವು ಹಾಕಿದ ಮರಗಳಲ್ಲಿ ನೆರಳನ್ನು ಪಡೆಯುವಂತಾಗಬೇಕಿದೆ ಎಂದು ಶ್ರೀ ಜಗದ್ಗುರು ಮುರುಘರಾಜೇಂದ್ರ ಬೃಹನ್ಮಠ ಹಾಗೂ ಎಸ್.ಜೆ.ಎಂ. ವಿದ್ಯಾಪೀಠ ಆಡಳಿತ ಮಂಡಳಿಯ ಸದಸ್ಯರಾದ ಡಾ.ಬಸವಕುಮಾರ ಸ್ವಾಮೀಜಿ ಹೇಳಿದರು.
ಇದನ್ನೂ ಓದಿ: SJM ಫಿಸಿಯೋಥೆರಪಿ ಕಾಲೇಜಿನಲ್ಲಿ ಪರಿಸರ ದಿನಾಚರಣೆ
ನಗರದ ಶ್ರೀ ಜಗದ್ಗುರು ಮುರುಘರಾಜೇಂದ್ರ ಬೃಹನ್ಮಠ, ಎಸ್.ಜೆ.ಎಂ.ವಿದ್ಯಾಪೀಠ ಹಾಗೂ ಎಸ್.ಜೆ.ಎಂ. ವಿಶ್ವವಿದ್ಯಾಲಯದವತಿಯಿಂದ ಬ್ಯಾಂಕ್ ಕಾಲೋನಿ ಸಂಯುಕ್ತಾಶ್ರಯದಲ್ಲಿ ಶನಿವಾರ ವಿಶ್ವಪರಿಸರ ದಿನಾಚರಣೆಯ ಅಂಗವಾಗಿ ಆಯೋಜಿಸಲಾಗಿರುವ ಸಸಿ ನೆಡುವ ಸಪ್ತಾಹದ ಕಾರ್ಯಕ್ರಮದಡಿಯಲ್ಲಿ ನಗರದ ಹೊರ ವಲಯದ ಬ್ಯಾಂಕ್ ಕಾಲೋನಿಯಲ್ಲಿ ನಡೆದ ಸಸಿ ನೆಡುವ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಶ್ರೀಗಳು,
ಪರಿಸರ ಬೆಳಸುವ ಕಾರ್ಯ ಇಂದಿನ ಕೆಲವು ದಿನಗಳಿಗೆ ಮಾತ್ರ ಸೀಮೀತವಾಗದೆ ಇದು ನಿರಂತರವಾಗಿ ನಡೆಯುವ ಕಾರ್ಯವಾಗಬೇಕಿದೆ ಆಗ ಮಾತ್ರ ಪರಿಸರ ಸಂರಕ್ಷಣೆಯಾಗುತ್ತದೆ ಎಂದರು.
ಚಿತ್ರದುರ್ಗ ಮುರುಘ ರಾಜೇಂದ್ರ ಬೃಹನ್ಮಠವೂ ವರ್ಷವೀಡಿ ಸಮಾಜದ ಹಿತದೃಷ್ಟಿಯಿಂದ ವಿನೂತನ ಹಾಗೂ ವಿಶೇಷ ಅಭಿಯಾನದಂತಹ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳತ್ತ ಬಂದಿದೆ. ಈಗಾಗಲೇ ಆರು ದಿನಗಳಿಂದ ನಿರಂತರವಾಗಿ ಸಸಿ ನೆಡುವ ಸಪ್ತಾಹ ಕಾರ್ಯಕ್ರಮವನ್ನು ವಿಶ್ವ ಪರಿಸರ ದಿನಾಚರಣೆಯ ಪ್ರಯುಕ್ತ, ಅರಣ್ಯ ಇಲಾಖೆ, ಶಾಲಾ-ಕಾಲೇಜುಗಳು ಹಾಗೂ ಸಂಘ-ಸಂಸ್ಥೆಗಳು ಜೊತೆಯಾಗಿವೆ. ಇಂತಹ ಕಾರ್ಯಕ್ರಮಗಳ ಮೂಲಕ ಜನಸಾಮಾನ್ಯರಿಗೆ ಪರಿಸರದ ಬಗ್ಗೆ ಜಾಗೃತಿ ಮೂಡಿಸುವ ಕೆಲಸ ನೆಡೆಯುತ್ತಿದೆ.
ಇದನ್ನೂ ಓದಿ: ಮುರುಘಾ ಮಠದಲ್ಲಿ ಸಾಮೂಹಿಕ ಕಲ್ಯಾಣ ಮಹೋತ್ಸವ ಮತ್ತು ಪರಿಸರ ದಿನಾಚರಣೆ | ನೂತನ ವಧು-ವರರು ಸಸಿ ನೆಟ್ಟರು
ಪ್ರಸ್ತುತ ನಾವೆಲ್ಲ ಭವಿಷ್ಯದ ಪೀಳಿಗೆಯ ಬಗ್ಗೆ ಎಚ್ಚರ ವಹಿಸಬೇಕಿದೆ. ಮೊದಲು ನಾವು ಪರಿಸರವನ್ನು ಸಂರಕ್ಷಿಸಿದರೆ ಮುಂದಿನ ಪೀಳಿಗೆಯು ಸಹ ಪರಿಸರ ಸಂರಕ್ಷಿಸುವ ಪ್ರೀತಿಸುವ ಗುಣವನ್ನು ಬೆಳಸಿಕೊಳ್ಳುತ್ತದೆ. ಆದ್ದರಿಂದ ಈ ಸಸಿ ನೆಡುವ ಕಾರ್ಯಕ್ರಮ ಕೇವಲ ಔಪಚಾರಿಕವಾಗದೇ ಕಾರ್ಯಗತವಾಗಬೇಕು. ನಾವು ಗಿಡಗಳನ್ನು ನೆಟ್ಟಿದ್ದೆವೆ. ಅವುಗಳನ್ನು ಸಂರಕ್ಷಿಸುವ ಕೆಲಸ ಪ್ರತಿಯೊಬ್ಬ ನಾಗರೀಕನ ಕರ್ತವ್ಯವಾಗಿದೆ ಎಂದರು.
ಬಾಪೂಜಿ ವಿದ್ಯಾ ಸಂಸ್ಥೆಯ ಕಾರ್ಯದರ್ಶಿ ಕೆ.ಎಂ.ವಿರೇಶ್ ಮಾತನಾಡಿ, ಮರುಘಾಮಠ ಯಾವುದೆ ಕೆಲಸವನ್ನು ಮಾಡಿದರೂ ಸಹಾ ಉತ್ತಮವಾದ ತಂಡವನ್ನು ಕಟ್ಟಿಕೊಂಡು ಯಾವುದೇ ಲೋಪ ಇಲ್ಲದೆ ಕೆಲಸವನ್ನು ಮಾಡುತ್ತದೆ, ಇದರಿಂದ ಕಾರ್ಯಕ್ರಮಗಳು ಯಶಸ್ವಿಯಾಗುತ್ತವೆ. ಚಿತ್ರದುರ್ಗವನ್ನು ಪ್ರವಾಸಿ ಕೇಂದ್ರವನ್ನಾಗಿ ಮಾಡುವಲ್ಲಿ ಮಠದ ಪಾತ್ರ ಹೆಚ್ಚಾಗಿದೆ.
ಚಿತ್ರದುರ್ಗದ ಹಲವಡೆಗಳಲ್ಲಿ ಸಸಿಗಳನ್ನು ನೆಡುವುದರ ಮೂಲಕ ಜನತೆಯಲ್ಲಿ ಪರಿಸರ ಜಾಗೃತಿಯನ್ನು ಮೂಡಿಸುವಂತ ಕಾರ್ಯವನ್ನು ಮಾಡುತ್ತಿದೆ ಎಂದರು.
ಇದನ್ನೂ ಓದಿ: ರೋಸ್ ವಾಟರ್ ಬೆರೆಸಿದ ನೀರಿನಲ್ಲಿ ಸ್ನಾನ ಮಾಡಿದರೆ ಈ ಪ್ರಯೋಜನ ಪಡೆಯಬಹುದು
ನಿವೃತ್ತ ಕೃಷಿ ಅಧಿಕಾರಿ ತಿಪ್ಪೇಸ್ವಾಮಿ, ನಿವೃತ್ತ ಶಿಕ್ಷಣ ಇಲಾಖೆಯ ಅಧಿಕಾರಿ ಮಲ್ಲಣ್ಣ ಮಾತನಾಡಿದರು. ಈ ಸಂದರ್ಭದಲ್ಲಿ ಲತಾ ಉಮೇಶ್, ರೆಡ್ಡಿ ಭಾಗವಹಿಸಿದ್ದರು. ಬ್ಯಾಂಕ್ ಕಾಲೋನಿಯಲ್ಲಿನ ಆಟದ ಮೈದಾನಕ್ಕೆ ಮುರುಘಾರಾಜೇಂದ್ರ ಆಟದ ಮೈದಾನದ ನಾಮ ಫಲಕವನ್ನು ಡಾ.ಬಸವಕುಮಾರ ಸ್ವಾಮೀಜಿ ಉದ್ಘಾಟಿಸಿದರು.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
