
CHITRADURGA NEWS | 17 AUGUST 2024
ಚಿತ್ರದುರ್ಗ: ಮಘೇ ಮಳೆ (Maghe Male) ಜಿಲ್ಲೆಯ ಉತ್ತಮ ಶುಭಾರಂಭ ಮಾಡಿದೆ. ಪರಿಣಾಮ ಶುಕ್ರವಾರ ರಾತ್ರಿಯೇ ಜಿಲ್ಲೆಯಾದ್ಯಂತ ಹದವಾದ ಮಳೆಯಾಗಿದೆ.
ರಾತ್ರಿ ಸುರಿದ ಮಳೆಗೆ ಚಳ್ಳಕೆರೆ ತಾಲೂಕಿನ ಹಲವು ಜಮೀನುಗಳು ಜಲಾವೃತಗೊಂಡಿವೆ. ಚಳ್ಳಕೆರೆ ತಾಲೂಕಿನ ವಿಡುಪನಕುಂಟೆ ಗ್ರಾಮದ ಅಡಿಕೆ ತೋಟ ಜಲಾವೃತವಾಗಿದೆ.
ಇದನ್ನೂ ಓದಿ: ವರ ಮಹಾಲಕ್ಷ್ಮೀ ಹಬ್ಬದ ದಿನವೇ ಲಕ್ಷಾಂತರ ಕಳ್ಳತನ | ಮನೆ ಮತ್ತು ಅಡಿಕೆ ಗೋಡಾನ್ ನುಗ್ಗಿದ ಗ್ಯಾಂಗ್
ಇನ್ನೂ ಮಳೆ ನೀರಿಗೆ ರಸ್ತೆ ಕೊಚ್ಚಿ ಹೋಗಿದ್ದು, ಎನ್.ದೇವರಹಳ್ಳಿ ಬಳಿ ಹಳ್ಳದ ಹರಿವಿಗೆ ರಸ್ತೆಯೊಂದು ಕೊಚ್ಚಿ ಹೋದ ಘಟನೆ ನಡೆದಿದೆ.
ನೇರ್ಲಗುಂಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎನ್.ದೇವರಹಳ್ಳಿ – ಭೀಮನಕೆರೆ ನಡುವಿನ ರಸ್ತೆ ಕಿತ್ತು ಹೋಗಿದ್ದು, ವಾಹನಗಳು ಓಡಾಡುವುದು ಕಷ್ಟವಾಗಿದೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
