By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಪ್ರಧಾನ ಮಂತ್ರಿ ಫಸಲ್ ಬಿಮಾ (ವಿಮಾ) ಯೋಜನೆ
    ತೋಟಗಾರಿಕೆ ಬೆಳೆ | ಫಸಲ್ ಬಿಮಾ ಯೋಜನೆ ನೋಂದಣಿ ಆರಂಭ
    6 hours ago
    ಹೊಸ ಆದಾಯ ತೆರಿಗೆ ಕಾಯ್ದೆ-2025' ಕುರಿತ ಜಾಗೃತಿ ಕಾರ್ಯಕ್ರಮ
    ದೇಶದ ಸರ್ವತೋಮುಖ ಪ್ರಗತಿಯಲ್ಲಿ ಪ್ರತಿಯೊಬ್ಬ ತೆರಿಗೆದಾರರ ಪಾತ್ರವೂ ಅತ್ಯಂತ ಪ್ರಮುಖ | ರಾಮನಾಥನ್
    6 hours ago
    ಚಿತ್ರದುರ್ಗ ನಗರದಲ್ಲಿ ನೂತನ ಆಧಾರ್ ಸೇವಾ ಕೇಂದ್ರ | AC ಡಾ.ಕೆ.ಜೆ.ಕಾಂತರಾಜ್ ಉದ್ಘಾಟನೆ
    ಚಿತ್ರದುರ್ಗ ನಗರದಲ್ಲಿ ನೂತನ ಆಧಾರ್ ಸೇವಾ ಕೇಂದ್ರ | AC ಡಾ.ಕೆ.ಜೆ.ಕಾಂತರಾಜ್ ಉದ್ಘಾಟನೆ 
    6 hours ago
    ಬಿಜೆಪಿ ಕಚೇರಿಯಲ್ಲಿ ಡಾ.ಶ್ಯಾಮ ಪ್ರಸಾದ ಮುಖರ್ಜಿ ಬಲಿದಾನ ಸ್ಮರಣೆ
    ಬಿಜೆಪಿ ಕಚೇರಿಯಲ್ಲಿ ಡಾ.ಶ್ಯಾಮ ಪ್ರಸಾದ ಮುಖರ್ಜಿ ಬಲಿದಾನ ಸ್ಮರಣೆ 
    6 hours ago
    ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ | AC ಡಾ.ಕಾಂತರಾಜ್ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ
    ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ | AC ಡಾ.ಕಾಂತರಾಜ್ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ
    1 day ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    Hosadurga police work
    INSTAGRAM, FECEBOOK ಪರಿಚಯ | ಲೈಂಗಿಕ ದುರ್ಬಳಕೆ ವಂಚನೆ ಮಾಡುತ್ತಿದ್ದ ಆರೋಪಿ ಬಂಧನ | ಚಿನ್ನಾಭರಣ ವಶಕ್ಕೆ
    2 weeks ago
    ಚಿತ್ರದುರ್ಗ ಅಪರಾಧ
    ಜಾನುಕೊಂಡ ಬಳಿ ಭೀಕರ ಅಪಘಾತ | ಇಬ್ಬರು ಕುರಿಗಾಯಿಗಳು, 14 ಕುರಿ ಧಾರುಣ ಸಾವು
    3 weeks ago
    Accident near molakalmuru
    ಮೊಳಕಾಲ್ಮೂರು ಬಳಿ ಮತ್ತೊಂದು ಅಪಘಾತ | ಚಳ್ಳಕೆರೆಯ 5 ಜನ ಸಾವು | ಒಂದೇ ದಿನದ ಅಂತರದಲ್ಲಿ ಜಿಲ್ಲೆಯಲ್ಲಿ ಹತ್ತು ಸಾವು
    4 weeks ago
    ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ | 5 ಜನರ ದುರ್ಮರಣ
    4 weeks ago
    Accident between bike and car
    ಬೈಕ್‌ – ಕಾರು ನಡುವೆ ಅಪಘಾತ | ಸ್ಥಳದಲ್ಲೇ ಇಬ್ಬರು ಮೃತ
    1 month ago
  • ತಾಲೂಕು
    ತಾಲೂಕುShow More
    ದುರ್ಗಾವರ ಗ್ರಾಮದಲ್ಲಿ ಭಗೀರಥ ಜಯಂತಿ ಆಚರಣೆ
    ದುರ್ಗಾವರ ಗ್ರಾಮದಲ್ಲಿ ಭಗೀರಥ ಜಯಂತಿ ಆಚರಣೆ | ಬಿಜೆಪಿ ಜಿಲ್ಲಾಧ್ಯಕ್ಷ ಕೆ.ಟಿ.ಕುಮಾರಸ್ವಾಮಿ ಭಾಗೀ 
    3 days ago
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    5 days ago
    ಸುಜ್ಞಾನ ಸಂಗಮ, ಜೈನ ಸಮಾಜ ಬಾಂಧವರಿಗೆ ಸನ್ಮಾನ ಸಮಾರಂಭ
    ಸಾತ್ವಿಕತೆ ಇರುವಲ್ಲಿ ಸಹಬಾಳ್ವೆ, ಸೌಹಾರ್ದತೆ ಇರುತ್ತದೆ | ಶಾಂತವೀರ ಶ್ರೀ 
    2 weeks ago
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ 
    3 weeks ago
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    3 weeks ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    2 weeks ago
    ARECANUT RATE
    ಅಡಿಕೆ ಧಾರಣೆ | 6 ಜೂನ್‌ | ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ ಹಾಗೂ ರಾಜ್ಯದ ಅಡಿಕೆ ರೇಟ್‌
    3 weeks ago
    ARECANUT RATE
    ಅಡಿಕೆ ಧಾರಣೆ | 5 ಜೂನ್‌ | ಇಂದಿನ ಅಡಿಕೆ ಮಾರುಕಟ್ಟೆ ವಿವರ
    3 weeks ago
    ARECANUT RATE
    ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ, ಸಾಗರ ಹಾಗೂ ರಾಜ್ಯದ ಅಡಿಕೆ ರೇಟ್‌
    3 weeks ago
    ARECANUT RATE
    ಅಡಿಕೆ ಧಾರಣೆ | 4 ಜೂನ್‌ | ಇಂದಿನ ರಾಶಿ, ಚಾಲಿ, ಕೆಂಪಡಕೆ ರೇಟ್‌
    3 weeks ago
  • Dina Bhavishya
    Dina BhavishyaShow More
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 24 | ಉದ್ಯೋಗಗಳಲ್ಲಿ ಬಡ್ತಿ, ಅರೋಗ್ಯದಲ್ಲಿ ಎಚ್ಚರ
    8 hours ago
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 23 | ಉದ್ಯೋಗಿಗಳಿಗೆ ಕೆಲಸದ ಒತ್ತಡ, ಹಠಾತ್ ಆರ್ಥಿಕ ಲಾಭ
    1 day ago
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 22 | ವ್ಯವಹಾರದಲ್ಲಿ ಅನಿರೀಕ್ಷಿತ ಅಡೆತಡೆಗಳು, ನಿರುದ್ಯೋಗಿಗಳಿಗೆ ಹೊಸ ಅವಕಾಶಗಳು
    2 days ago
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 21 | ವೃತ್ತಿಪರ ಉದ್ಯೋಗಗಳಲ್ಲಿ ಕಿರಿಕಿರಿ, ಅರೋಗ್ಯದಲ್ಲಿ ಎಚ್ಚರ
    3 days ago
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 20 | ಮಕ್ಕಳ ಶಿಕ್ಷಣದ ಕಡೆ ಗಮನ ಹರಿಸಿ, ದೂರದ ಪ್ರಯಾಣ ಬೇಡ
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್…
    1 day ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಜೂನ್ 22 | ರಾಗಿ, ಶೇಂಗಾ ರೇಟ್
    2 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಜೂನ್ 15 | ಮೆಕ್ಕೆಜೋಳ, ಶೇಂಗಾ ರೇಟ್….
    1 week ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಜೂನ್ 12 | ರಾಗಿ, ಮೆಕ್ಕೆಜೋಳ ರೇಟ್….
    2 weeks ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಜೂನ್ 11 | ಹತ್ತಿ ರೇಟ್ ಎಷ್ಟಿದೆ?
    2 weeks ago
  • ಹೊಳಲ್ಕೆರೆ
    ಹೊಳಲ್ಕೆರೆShow More
    65 ಲಕ್ಷದ ಅಭಿವೃದ್ಧಿ ಕಾಮಗಾರಿಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ
    65 ಲಕ್ಷದ ಅಭಿವೃದ್ಧಿ ಕಾಮಗಾರಿಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ 
    6 hours ago
    ಹುಲೆಮಳಲಿ ಗ್ರಾಮದಲ್ಲಿ ಸಿ.ಸಿ.ರಸ್ತೆ ಕಾಮಗಾರಿಗೆ ಭೂಮಿಪೂಜೆ
    ಮೂರು ತಿಂಗಳಲ್ಲಿ ತಾಲ್ಲೂಕಿನ ಕೆರೆಗಳಿಗೆ ನೀರು | ಶಾಸಕ ಡಾ.ಎಂ.ಚಂದ್ರಪ್ಪ 
    5 days ago
    ಆರೋಗ್ಯ ಕ್ಷೇಮ ಕೇಂದ್ರ ಕಟ್ಟಡ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    ನೂತನ ಆರೋಗ್ಯ ಕ್ಷೇಮ ಕೇಂದ್ರ ಕಟ್ಟಡ ನಿರ್ಮಾಣ ಕಾಮಗಾರಿಗೆ ಶಾಸಕ ಎಂ.ಚಂದ್ರಪ್ಪ ಭೂಮಿಪೂಜೆ 
    3 weeks ago
    ಸಿ.ಸಿ.ರಸ್ತೆ ಕಾಮಗಾರಿಗೆ ಭೂಮಿ ಪೂಜೆ
    ಮೂರ್ನಾಲ್ಕು ದಿನಗಳಲ್ಲೇ ತಾಳಿಕಟ್ಟೆ ಕೆರೆಗೆ‌ ನೀರು | ಶಾಸಕ‌ ಎಂ.ಚಂದ್ರಪ್ಪ
    4 weeks ago
    ಪೂರ್ವಭಾವಿ ಸಭೆ
    ಹೊಳಲ್ಕೆರೆ ಜಿಲ್ಲೆಯಲ್ಲಿಯೇ ಮಾದರಿ ಕ್ಷೇತ್ರ | ಶಾಸಕ ಎಂ.ಚಂದ್ರಪ್ಪ 
    2 months ago
  • ಹಿರಿಯೂರು
    ಹಿರಿಯೂರುShow More
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    2 days ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    1 week ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    1 month ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    2 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    4 months ago
  • ಹೊಸದುರ್ಗ
    ಹೊಸದುರ್ಗShow More
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    5 days ago
    ಸುಜ್ಞಾನ ಸಂಗಮ, ಜೈನ ಸಮಾಜ ಬಾಂಧವರಿಗೆ ಸನ್ಮಾನ ಸಮಾರಂಭ
    ಸಾತ್ವಿಕತೆ ಇರುವಲ್ಲಿ ಸಹಬಾಳ್ವೆ, ಸೌಹಾರ್ದತೆ ಇರುತ್ತದೆ | ಶಾಂತವೀರ ಶ್ರೀ 
    2 weeks ago
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ 
    3 weeks ago
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    3 weeks ago
    ವಾಲಿಬಾಲ್ ಹೊನಲು ಬೆಳಕಿನ ಪಂದ್ಯಾವಳಿ
    ಸೋಲು ಮುಂದಿನ ಗೆಲುವಿಗೆ ಪ್ರೇರಣೆ | ಸಾಣೇಹಳ್ಳಿ ಶ್ರೀ 
    1 month ago
  • Life Style
    Life StyleShow More
    eye
    ನಿಮ್ಮ ಕಣ್ಣಿನ ಚೀಲಗಳು ಸಹ ನಿಮ್ಮ ಆರೋಗ್ಯದ ಬಗ್ಗೆ ತಿಳಿಸುತ್ತವೆಯಂತೆ
    6 hours ago
    black chickpeas
    ಹೆಚ್ಚಿನ ಪ್ರೋಟೀನ್‍ಗಾಗಿ ಈ 6 ಆಹಾರಗಳನ್ನು ಕಪ್ಪು ಕಡಲೆಯೊಂದಿಗೆ ಸೇವಿಸಿ
    7 hours ago
    Bitter gourd
    ಹಾಗಲಕಾಯಿಯ ಕಹಿಯನ್ನು ಕಡಿಮೆ ಮಾಡಲು ಈ ಟ್ರಿಕ್ ಫಾಲೋ ಮಾಡಿ
    1 day ago
    windows and doors
    ನಿಮ್ಮ ಮನೆಯಲ್ಲಿ ಶಾಂತಿ, ನೆಮ್ಮದಿ ನೆಲೆಸಲು ವಾಸ್ತು ಪ್ರಕಾರ ಕಿಟಕಿಗಳು ಮತ್ತು ಬಾಗಿಲುಗಳ ಸಂಖ್ಯೆಯನ್ನು ಎಷ್ಟಿರಬೇಕು ಗೊತ್ತಾ?
    1 day ago
    Does sweat make your hair smel
    ಬೆವರಿನಿಂದ ನಿಮ್ಮ ಕೂದಲಿನಲ್ಲಿ ವಾಸನೆ ಬರುತ್ತದೆಯೇ? ಹಾಗಾದ್ರೆ ಅಡುಗೆಮನೆಯಲ್ಲಿ ಸಿಗುವ ಈ ಪದಾರ್ಥವನ್ನು ಬಳಸಿ
    2 days ago
Reading: ದೇಶದ ಸರ್ವತೋಮುಖ ಪ್ರಗತಿಯಲ್ಲಿ ಪ್ರತಿಯೊಬ್ಬ ತೆರಿಗೆದಾರರ ಪಾತ್ರವೂ ಅತ್ಯಂತ ಪ್ರಮುಖ | ರಾಮನಾಥನ್
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ದೇಶದ ಸರ್ವತೋಮುಖ ಪ್ರಗತಿಯಲ್ಲಿ ಪ್ರತಿಯೊಬ್ಬ ತೆರಿಗೆದಾರರ ಪಾತ್ರವೂ ಅತ್ಯಂತ ಪ್ರಮುಖ | ರಾಮನಾಥನ್

News Desk Chitradurga News
Last updated: 24 June 2026 08:23
News Desk Chitradurga News
6 hours ago
Share
ಹೊಸ ಆದಾಯ ತೆರಿಗೆ ಕಾಯ್ದೆ-2025' ಕುರಿತ ಜಾಗೃತಿ ಕಾರ್ಯಕ್ರಮ
ಹೊಸ ಆದಾಯ ತೆರಿಗೆ ಕಾಯ್ದೆ-2025' ಕುರಿತ ಜಾಗೃತಿ ಕಾರ್ಯಕ್ರಮ
SHARE

CHITRADURGA NEWS | 24 JUNE 2026

ಚಿತ್ರದುರ್ಗ: ದೇಶದ ಸರ್ವತೋಮುಖ ಪ್ರಗತಿಯಲ್ಲಿ ಪ್ರತಿಯೊಬ್ಬ ತೆರಿಗೆದಾರರ ಪಾತ್ರವೂ ಅತ್ಯಂತ ಪ್ರಮುಖವಾಗಿದೆ. ಭಾರತ ಸರ್ಕಾರವು ಸುಲಭ ತೆರಿಗೆ ವ್ಯವಸ್ಥೆ ಜಾರಿಗೆ ತರುವ ಮೂಲಕ ತೆರಿಗೆ ಸುಧಾರಣೆಗೆ ಮಹತ್ವದ ಹೆಜ್ಜೆಯನ್ನಿಟ್ಟಿದೆ ಎಂದು ಹೆಚ್ಚುವರಿ ಆದಾಯ ತೆರಿಗೆ ಅಧಿಕಾರಿ ರಾಮನಾಥನ್ ಅಭಿಪ್ರಾಯಪಟ್ಟರು.

ಇದನ್ನೂ ಓದಿ: ಚಿತ್ರದುರ್ಗ ನಗರದಲ್ಲಿ ನೂತನ ಆಧಾರ್ ಸೇವಾ ಕೇಂದ್ರ | AC ಡಾ.ಕೆ.ಜೆ.ಕಾಂತರಾಜ್ ಉದ್ಘಾಟನೆ 

ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಮಂಗಳವಾರ ಆದಾಯ ತೆರಿಗೆ ಇಲಾಖೆ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ‘ಹೊಸ ಆದಾಯ ತೆರಿಗೆ ಕಾಯ್ದೆ-2025′ ಕುರಿತ ಜಾಗೃತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಭಾರತ ಸರ್ಕಾರವು ದೇಶದಲ್ಲಿ ‘ಸುಲಭ ವ್ಯಾಪಾರ ಮತ್ತು ಜೀವನ ನಿರ್ವಹಣೆ’ ಉತ್ತೇಜಿಸಲು ಬದ್ಧವಾಗಿದೆ. ಈ ನಿಟ್ಟಿನಲ್ಲಿ ತೆರಿಗೆ ಸುಧಾರಣೆಗಳನ್ನು ತರುವುದು ಸರ್ಕಾರದ ಪ್ರಮುಖ ಗುರಿಯಾಗಿದೆ. ಜಾಗತಿಕ ಮಟ್ಟದಲ್ಲಿ ಭಾರತದ ಆರ್ಥಿಕತೆ ಬಲಪಡಿಸಲು ಮತ್ತು 2047ರ ವೇಳೆಗೆ ಅಮೃತ ಕಾಲದ ಗುರಿ ತಲುಪಲು ಈ ತೆರಿಗೆ ವ್ಯವಸ್ಥೆಯು ಸಹಕಾರಿಯಾಗಲಿದೆ ಎಂದರು.

ಸುಮಾರು 60ಕ್ಕೂ ಹೆಚ್ಚು ವರ್ಷಗಳ ಇತಿಹಾಸವಿರುವ ‘ಆದಾಯ ತೆರಿಗೆ ಕಾಯ್ದೆ 1961’ರ ಅಡಿಯಲ್ಲಿ ಹಲವು ತಿದ್ದುಪಡಿಗಳು, ಕೋರ್ಟ್ ಪ್ರಕರಣಗಳು ಹಾಗೂ ಜಟಿಲ ನಿಯಮಗಳು ಸೃಷ್ಠಿಯಾಗಿದ್ದವು. ಇದರಿಂದಾಗಿ ತೆರಿಗೆದಾರರಲ್ಲಿ ಗೊಂದಲ ಹಾಗೂ ವ್ಯಾಜ್ಯಗಳು ಹೆಚ್ಚಾಗಿದ್ದವು. 

ಇದನ್ನೂ ಓದಿ: ಬಿಜೆಪಿ ಕಚೇರಿಯಲ್ಲಿ ಡಾ.ಶ್ಯಾಮ ಪ್ರಸಾದ ಮುಖರ್ಜಿ ಬಲಿದಾನ ಸ್ಮರಣೆ 

ಇವೆಲ್ಲವನ್ನೂ ಸರಳಗೊಳಿಸುವ ನಿಟ್ಟಿನಲ್ಲಿ ಸರ್ಕಾರವು ಎಲ್ಲಾ ಪ್ರಮುಖ ಉದ್ಯಮಿಗಳು, ತೆರಿಗೆದಾರರು ಹಾಗೂ ವಾಣಿಜ್ಯ ಸಂಘಟನೆಗಳ ಜೊತೆ ಸುದೀರ್ಘ ಚರ್ಚೆ ನಡೆಸಿ, ಅವರ ಸಲಹೆಗಳನ್ನು ಆಲಿಸಿದೆ. ಎಲ್ಲರಿಗೂ ಸುಲಭವಾಗಿ ಅರ್ಥವಾಗುವಂತಹ ಮತ್ತು ಪಾರದರ್ಶಕವಾದ ಹೊಸ ಕಾಯ್ದೆ ಜಾರಿಗೆ ತರಲಾಗುತ್ತಿದ್ದು, ಇದು ಮುಂಬರುವ ಏಪ್ರಿಲ್ ತಿಂಗಳಿನಿಂದ ಅನುಷ್ಠಾನಕ್ಕೆ ಬರಲಿದೆ ಎಂದು ಮಾಹಿತಿ ನೀಡಿದರು.

ತೆರಿಗೆ ಇಲಾಖೆಯು ಸಾರ್ವಜನಿಕರೊಂದಿಗೆ ಅತ್ಯಂತ ಸ್ನೇಹಪರ ವಾತಾವರಣದಲ್ಲಿ ಕೆಲಸ ಮಾಡಲು ಇಚ್ಛಿಸುತ್ತದೆ. ಸಾರ್ವಜನಿಕರು ಹಾಗೂ ತೆರಿಗೆದಾರರು ಯಾವುದೇ ಆತಂಕವಿಲ್ಲದೆ ತಮ್ಮ ಪ್ರಶ್ನೆಗಳು, ಗೊಂದಲಗಳು ಅಥವಾ ತಿದ್ದುಪಡಿಗಳ ಕುರಿತ ಸಲಹೆಗಳನ್ನು ಮುಕ್ತವಾಗಿ ಹಂಚಿಕೊಳ್ಳಬಹುದು. ಪ್ರತಿಯೊಂದು ಸಲಹೆಯನ್ನೂ ಮುಕ್ತವಾಗಿ ಸ್ವೀಕರಿಸಿ, ಪರಿಗಣಿಸಲಾಗುವುದು ಎಂದು ಭರವಸೆ ನೀಡಿದರು.

ದಾವಣಗೆರೆ ಆದಾಯ ತೆರಿಗೆ ಇಲಾಖೆ ಅಧಿಕಾರಿ ಸುಬ್ಬರಾಜ್ ಮಾತನಾಡಿ, ಆದಾಯ ತೆರಿಗೆ ಇಲಾಖೆ ಎಂದರೆ ಜನರು ಹೆದರಬೇಕಾಗಿಲ್ಲ. ಫ್ಯಾಮಿಲಿ ಡಾಕ್ಟರ್ ನಮ್ಮ ಇಡೀ ಆರೋಗ್ಯದ ಇತಿಹಾಸ ತಿಳಿದುಕೊಂಡು ಸೂಕ್ತ ಚಿಕಿತ್ಸೆ ನೀಡುವಂತೆ, ಆದಾಯ ತೆರಿಗೆ ಇಲಾಖೆಯು ತೆರಿಗೆದಾರರ ಆರ್ಥಿಕ ಆರೋಗ್ಯ ಕಾಯುತ್ತದೆ ಹಾಗೂ ತಪ್ಪುಗಳಿದ್ದರೆ ಮುನ್ಸೂಚನೆ ನೀಡಿ ಸರಿಪಡಿಸಲು ನೆರವಾಗುತ್ತದೆ ಎಂದರು.

ಇದನ್ನೂ ಓದಿ: ಹೆಚ್ಚಿನ ಪ್ರೋಟೀನ್‍ಗಾಗಿ ಈ 6 ಆಹಾರಗಳನ್ನು ಕಪ್ಪು ಕಡಲೆಯೊಂದಿಗೆ ಸೇವಿಸಿ

 1961ರ ಆದಾಯ ತೆರಿಗೆ ಕಾಯ್ದೆಗೆ ಮಹತ್ವದ ಬದಲಾವಣೆಗಳನ್ನು ತರಲಾಗಿದ್ದು, ‘ಆದಾಯ ತೆರಿಗೆ ಕಾಯ್ದೆ-2025′ ಆಗಿ ರೂಪಿಸಲಾಗಿದೆ. ಕಾನೂನಿನ ಕಠಿಣ ಭಾಷೆಯನ್ನು ಸರಳಗೊಳಿಸುವುದು ಹಾಗೂ ತೆರಿಗೆದಾರ ಸ್ನೇಹಿಯಾಗಿಸುವುದು ಈ ಹೊಸ ಕಾಯ್ದೆಯ ಪ್ರಮುಖ ಉದ್ದೇಶವಾಗಿದೆ ಎಂದರು.

ಇದುವರೆಗೆ ಜಾರಿಯಲ್ಲಿದ್ದ ‘ಹಣಕಾಸು ವರ್ಷ’ ಮತ್ತು ‘ಮೌಲ್ಯಮಾಪನ ವರ್ಷ’ ಎಂಬ ಗೊಂದಲಕಾರಿ ಪದಗಳ ಕೈಬಿಡಲಾಗಿದ್ದು, ಅದರ ಬದಲಿಗೆ ಸರಳವಾಗಿ ‘ಟ್ಯಾಕ್ಸ್ ಇಯರ್’ ಎಂಬ ಒಂದೇ ಪರಿಕಲ್ಪನೆ ಜಾರಿಗೆ ತರಲಾಗಿದೆ. ಉದಾಹರಣೆಗೆ ಟ್ಯಾಕ್ಸ್ ಇಯರ್ 2026-27 ರಲ್ಲಿ ಮಾಡುವ ವ್ಯವಹಾರಗಳಿಗೆ ಅದೇ ವರ್ಷದಲ್ಲೇ ರಿಟರ್ನ್ಸ್ ಸಲ್ಲಿಸಬಹುದಾಗಿದ್ದು, ಸಾಮಾನ್ಯ ಜನರಿಗೂ ಇದು ಸುಲಭವಾಗಿ ಅರ್ಥವಾಗಲಿದೆ. 

ಹೊಸ ಕಾಯ್ದೆಯ ಸೆಕ್ಷನ್ 536(2) ರ ಪ್ರಕಾರ, ಹಳೆಯ ಕಾಯ್ದೆಯಡಿ ಬಾಕಿ ಇರುವ ಯಾವುದೇ ಅಸೆಸ್‌ಮೆಂಟ್‌ಗಳು, ಬೇಡಿಕೆಗಳು ಅಥವಾ ಅಪೀಲುಗಳು ಹಳೆಯ ಕಾಯ್ದೆಯ ನಿಯಮಗಳಡಿಯೇ ಮುಂದುವರಿಯಲಿವೆ. ಇದರಿಂದ ತೆರಿಗೆದಾರರಿಗೆ ಯಾವುದೇ ಹೊಸ ಕಾನೂನಿನ ಗೊಂದಲಗಳು ಎದುರಾಗುವುದಿಲ್ಲ ಎಂದರು.

ಇದನ್ನೂ ಓದಿ: ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ | AC ಡಾ.ಕಾಂತರಾಜ್ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ

ತೆರಿಗೆದಾರರು ಇನ್ಮುಂದೆ ತಮ್ಮ ರಿಟರ್ನ್ಸ್ ಸಲ್ಲಿಸುವಾಗ ಮನೆ ಹಾಗೂ ಕಚೇರಿ ಎರಡೂ ವಿಳಾಸಗಳನ್ನು ನೀಡಲು ಹೊಸ ನಮೂನೆಯಲ್ಲಿ ಅವಕಾಶ ಕಲ್ಪಿಸಲಾಗಿದೆ. ಇದರೊಂದಿಗೆ, ದೇಣಿಗೆ ನೀಡಿ ತೆರಿಗೆ ವಿನಾಯಿತಿ ಪಡೆಯಲು ಇನ್ಮುಂದೆ ಕಡ್ಡಾಯವಾಗಿ ಯುಪಿಐ, ಚೆಕ್ ಅಥವಾ ಆರ್‌ಟಿಜಿಎಸ್‌ನ ವಹಿವಾಟು ಉಲ್ಲೇಖ ಸಂಖ್ಯೆ ಹಾಗೂ ಬ್ಯಾಂಕ್ ಖಾತೆ ವಿವರಗಳನ್ನು ನೀಡಬೇಕಾಗುತ್ತದೆ. ಇದರಿಂದ ನಕಲಿ ದೇಣಿಗೆ ಹಾವಳಿಗೆ ಸಂಪೂರ್ಣವಾಗಿ ಕಡಿವಾಣ ಬೀಳಲಿದೆ ಎಂದು ಮಾಹಿತಿ ನೀಡಿದರು.

ಕಾರ್ಯಕ್ರಮದಲ್ಲಿ ಚಿತ್ರದುರ್ಗ ಆದಾಯ ತೆರಿಗೆ ಅಧಿಕಾರಿ ಆರ್.ಪಿ.ಕುಮಾರಸ್ವಾಮಿ, ಇನ್‌ಕಮ್ ಟ್ಯಾಕ್ಸ್ ಪ್ರಾಕ್ಟಿಸ್ ಅಸೋಸಿಯೇಷನ್‌ನ ತಿಪ್ಪೇಸ್ವಾಮಿ, ಚಾರ್ಟೆಡ್ ಅಕೌಂಟೆಡ್‌ಗಳಾದ ಕಾರ್ತೀಕ್, ಜಗನ್ನಾಥ್ ಸೇರಿದಂತೆ ತೆರಿಗೆದಾರರು, ಸಾರ್ವಜನಿಕರು ಇದ್ದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:ChitradurgaChitradurga newsCountryIncome Taxಆದಾಯ ತೆರಿಗೆಚಿತ್ರದುರ್ಗಚಿತ್ರದುರ್ಗ ನ್ಯೂಸ್ದೇಶ
Share This Article
Facebook Email Print
Previous Article ಚಿತ್ರದುರ್ಗ ನಗರದಲ್ಲಿ ನೂತನ ಆಧಾರ್ ಸೇವಾ ಕೇಂದ್ರ | AC ಡಾ.ಕೆ.ಜೆ.ಕಾಂತರಾಜ್ ಉದ್ಘಾಟನೆ ಚಿತ್ರದುರ್ಗ ನಗರದಲ್ಲಿ ನೂತನ ಆಧಾರ್ ಸೇವಾ ಕೇಂದ್ರ | AC ಡಾ.ಕೆ.ಜೆ.ಕಾಂತರಾಜ್ ಉದ್ಘಾಟನೆ 
Next Article 65 ಲಕ್ಷದ ಅಭಿವೃದ್ಧಿ ಕಾಮಗಾರಿಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ 65 ಲಕ್ಷದ ಅಭಿವೃದ್ಧಿ ಕಾಮಗಾರಿಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ 
Leave a Comment

Leave a Reply Cancel reply

Your email address will not be published. Required fields are marked *

eye
ನಿಮ್ಮ ಕಣ್ಣಿನ ಚೀಲಗಳು ಸಹ ನಿಮ್ಮ ಆರೋಗ್ಯದ ಬಗ್ಗೆ ತಿಳಿಸುತ್ತವೆಯಂತೆ
Life Style
ಪ್ರಧಾನ ಮಂತ್ರಿ ಫಸಲ್ ಬಿಮಾ (ವಿಮಾ) ಯೋಜನೆ
ತೋಟಗಾರಿಕೆ ಬೆಳೆ | ಫಸಲ್ ಬಿಮಾ ಯೋಜನೆ ನೋಂದಣಿ ಆರಂಭ
ಮುಖ್ಯ ಸುದ್ದಿ
65 ಲಕ್ಷದ ಅಭಿವೃದ್ಧಿ ಕಾಮಗಾರಿಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ
65 ಲಕ್ಷದ ಅಭಿವೃದ್ಧಿ ಕಾಮಗಾರಿಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ 
ಹೊಳಲ್ಕೆರೆ
ಚಿತ್ರದುರ್ಗ ನಗರದಲ್ಲಿ ನೂತನ ಆಧಾರ್ ಸೇವಾ ಕೇಂದ್ರ | AC ಡಾ.ಕೆ.ಜೆ.ಕಾಂತರಾಜ್ ಉದ್ಘಾಟನೆ
ಚಿತ್ರದುರ್ಗ ನಗರದಲ್ಲಿ ನೂತನ ಆಧಾರ್ ಸೇವಾ ಕೇಂದ್ರ | AC ಡಾ.ಕೆ.ಜೆ.ಕಾಂತರಾಜ್ ಉದ್ಘಾಟನೆ 
ಮುಖ್ಯ ಸುದ್ದಿ
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up