CHITRADURGA NEWS | 02 AUGUST 2026
ಚಿತ್ರದುರ್ಗ: ಪ್ರತಿಷ್ಠಿತ ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ನಿರ್ವಹಿಸುವಲ್ಲಿ ಅನುಷ್ಠಾನಾಧಿಕಾರಿಗಳ ಪಾತ್ರ ಮುಖ್ಯವಾಗಿದೆ ಎಂದು ಡಯಟ್ ಪ್ರಾಚಾರ್ಯ ಎಸ್.ನಾಗಭೂಷಣ್ ಹೇಳಿದರು.
ಇದನ್ನೂ ಓದಿ: 1.40 ಕೋಟಿ ವೆಚ್ಚದ ಸಿಸಿ ರಸ್ತೆ, ಚರಂಡಿ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಕೆ.ಸಿ.ವೀರೇಂದ್ರ (ಪಪ್ಪಿ) ಭೂಮಿಪೂಜೆ
ಶೈಕ್ಷಣಿಕ ಚಟುವಟಿಕೆಗಳು, ಪ್ರತಿಷ್ಠಿತ ಕಾರ್ಯಕ್ರಮಗಳು(FLAG SHIP PROGRAMME) ಅನುಷ್ಠಾನ ಕುರಿತು ಜಿಲ್ಲಾ ಮತ್ತು ತಾಲೂಕು ಹಂತದ ಶೇಕ್ಷಣಿಕ ಅನುಷ್ಠಾನಾಧಿಕಾರಿಗಳಿಗೆ ಡಯಟ್ನಲ್ಲಿ ಶನಿವಾರ ಆಯೋಜಿಸಿದ್ದ ಆನ್ಲೈನ್ ಸಭೆಯಲ್ಲಿ ಮಾತನಾಡಿದರು.
ದ್ವಿಭಾಷಾ ತರಗತಿ, ಇಸಿಸಿಇ(ಆರಂಭಿಕ ಬಾಲ್ಯದ ಆರೈಕೆ ಮತ್ತು ಶಿಕ್ಷಣ) ಮೌಲ್ಯ ಶಿಕ್ಷಣ ಕಾರ್ಯಕ್ರಮಗಳನ್ನು ಶಾಲೆಗಳಲ್ಲಿ ಅನುಷ್ಠಾನ ಮಾಡಿರುವ ನಿಖರ ಮಾಹಿತಿಯನ್ನು ನಿಗದಿತ ನಮೂನೆಯಲ್ಲಿ(ಗೂಗಲ್ ಫಾರ್ಮ್) ಭರ್ತಿ ಮಾಡಿ ಪ್ರತಿ ಶನಿವಾರ ಡಯಟ್ನಲ್ಲಿ ನಡೆಸುವ ಪ್ರಗತಿ ಪರಿಶೀಲನಾ ಸಭೆಯಲ್ಲಿ ಸಲ್ಲಿಸಬೇಕು.
ತರಗತಿ ವೀಕ್ಷಣೆಯಲ್ಲಿ ಶಿಕ್ಷಕರಿಗೆ ಕಂಡುಬರುವ ಸವಾಲುಗಳು, ವಿದ್ಯಾರ್ಥಿಗಳ ಭಾಗವಹಿಸುವಿಕೆ ಗುರುತಿಸಿ ಸಕಾರಾತ್ಮಕ ಪ್ರೋತ್ಸಾಹ ನೀಡಬೇಕು ಎಂದು ತಿಳಿಸಿದರು. 1 ರಿಂದ 10 ನೇ ತರಗತಿವರೆಗೆ ಮೌಲ್ಯ ಶಿಕ್ಷಣ ಅಳವಡಿಸಲಾಗಿದ್ದು ಪ್ರತಿ ತರಗತಿಯಲ್ಲಿ ಮೌಲ್ಯಗಳ ಗೋಡೆ, ಸಾಮರ್ಥ್ಯಗಳ ಗೋಡೆ ನಿರ್ಮಾಣ ಮಾಡಿಕೊಳ್ಳ:ಲು ಶಿಕ್ಷಕರಿಗೆ ಮಾರ್ಗದರ್ಶನ ಮಾಡಬೇಕು ಎಂದರು.
ಹಿರಿಯ ಉಪನ್ಯಾಸಕ ಎಸ್.ಸಿ.ಪ್ರಸಾದ್ ಮಾತನಾಡಿ, ಅನುಷ್ಠಾನಾಧಿಕಾರಿಗಳು ಶಾಲೆಗೆ ಭೇಟಿ ನೀಡಿದಾಗ ಶಿಕ್ಷಕರು ನಿಧಾನ, ಸರಾಸರಿ, ವೇಗವಾಗಿ ಕಲಿಯುವ ಮಕ್ಕಳನ್ನು ಒಳಗೊಳ್ಳುವಂತೆ ತರಗತಿ ನಿರ್ವಹಣೆ ಮಾಡುತ್ತಿರುವ ಕುರಿತು ಬೋಧನೆಯಲ್ಲಿ ಭಾಷಾ ಆಟಗಳು, ಪದ್ಯಗಳು, ಕಥೆಗಳು, ಕಲಿಕಾ ಸಾಮಗ್ರಿಗಳ ಬಳಕೆ, ವಿದ್ಯಾರ್ಥಿಗಳ ಕೃತಿಸಂಪುಟ ನಿರ್ವಹಣೆ ಕುರಿತು ಪರಿಶೀಲಿಸಿ ಮಾರ್ಗದರ್ಶನ ಮಾಡಬೇಕು ಎಂದು ತಿಳಿಸಿದರು.
ಇದನ್ನೂ ಓದಿ: ಪಾಳೆಯಗಾರರ ಕಾಲದ ಶಿಲಾ ಶಾಸನ ಪತ್ತೆ | ವಸ್ತು ಸಂಗ್ರಹಕಾಯಕ್ಕೆ ಹಸ್ತಾಂತರ
ಹಿರಿಯ ಉಪನ್ಯಾಸಕರಾದ ಜ್ಞಾನೇಶ್ವರಿ, ಉಪನ್ಯಾಸಕರಾದ ಶಿವಲೀಲ, ಎಸ್.ಬಸವರಾಜು, ರಾಮಣ್ಣ, ಎಲ್.ರೇವಣ್ಣ, ಅರ್ಜುಮಂದ್ ಬಾನು, ಶಂಕರನಾಯ್ಕ, ಮಂಜುಳಾ, ರಂಗಸ್ವಾಮಿ, ತಾಂತ್ರಿಕ ಸಹಾಯಕ ಅವಿನಾಶ್, ಬಿಆರ್ಸಿಗಳಾದ ಸಂಪತ್ಕುಮಾರ್, ಸುರೇಂದ್ರನಾಥ್, ಶ್ರೀನಿವಾಸ್, ತಿಪ್ಪೇಸ್ವಾಮಿ, ಮಂಜುಬಾಬು ಎಲ್ಲಾ ತಾಲೂಕಿನ ಶಿಕ್ಷಣ ಸಂಯೋಜಕರು, ಬಿಆರ್ಪಿ ಮತ್ತು ಸಿಆರ್ಪಿಗಳು ಇದ್ದರು.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

