Police Martyrs Day; ಪ್ರಾಣ ಪಣಕ್ಕಿಟ್ಟು ಕರ್ತವ್ಯ ನಿರ್ವಹಿಸುವ ಪೊಲೀಸರ ತ್ಯಾಗ ಸ್ಮರಣೀಯ | ಡಿಸಿ ವೆಂಕಟೇಶ್

ಜಿಲ್ಲಾ ಸಶಸ್ತ್ರ ಮೀಸಲು ಪೊಲೀಸ್ ಪಡೆಯ ಆವರಣದಲ್ಲಿ ಪೊಲೀಸ್ ಹುತಾತ್ಮರ ದಿನಾಚರಣೆ

CHITRADURGA NEWS | 21 OCTOBER 2024

ಚಿತ್ರದುರ್ಗ: ನಾಗರಿಕರು ನೆಮ್ಮದಿಂದ ಜೀವಿಸಲು ಪೊಲೀಸ(Police)ರು ತಮ್ಮ ಪ್ರಾಣವನ್ನು ಪಣಕಿಟ್ಟು ಕರ್ತವ್ಯ ನಿರ್ವಹಿಸುತ್ತಾರೆ. ಇಂತಹ ಪೊಲೀಸರ ತ್ಯಾಗ ಹಾಗೂ ಬಲಿದಾನ ಸದಾಕಾಲ ಸ್ಮರಣೀಯವಾಗಿದೆ ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಹೇಳಿದರು.

ಕ್ಲಿಕ್ ಮಾಡಿ ಓದಿ: APMC; ಮಾರುಕಟ್ಟೆ ಧಾರಣೆ | ಇಂದಿನ ಮೆಕ್ಕೆಜೋಳ, ಶೇಂಗಾ ಧಾರಣೆ ಎಷ್ಟಿದೆ?

ನಗರದ ಜಿಲ್ಲಾ ಸಶಸ್ತ್ರ ಮೀಸಲು ಪೊಲೀಸ್ ಪಡೆಯ ಆವರಣದಲ್ಲಿ ಜಿಲ್ಲಾ ಪೊಲೀಸ್ ಇಲಾಖೆಯಿಂದ ಆಯೋಜಿಸಲಾದ ಪೊಲೀಸ್ ಹುತಾತ್ಮರ ದಿನಾಚರಣೆ(Martyrs Day)ಯ ಮುಖ್ಯ ಅತಿಥಿಗಳಾಗಿ ಭಾಗವಹಿಸಿ, ಹುತಾತ್ಮ ಸ್ಮಾರಕಕ್ಕೆ ಗೌರವ ಸಲ್ಲಿಸಿ ಅವರು ಮಾತನಾಡಿದರು.

1959 ಅಕ್ಟೋಬರ್ 21 ರಂದು ಲಡಾಕ್ ನ ಇಂಡೋ‌ ಟಿಬೇಟಿಯನ್ ಗಡಿಯಲ್ಲಿ ಗಸ್ತು ತಿರುಗುತ್ತದ್ದ ಸಿಆರ್ ಪಿಎಫ್ ಪಡೆಯ ಮೇಲೆ ಚೈನಾ ಸೇನೆ ಆಕ್ರಮಣ ನಡೆಸಿತು.

ಸಮುದ್ರ ಮಟ್ಟದಿಂದ ಸುಮಾರು 18 ಸಾವಿರ ಅಡಿ ಎತ್ತರದಲ್ಲಿ ಜರುಗಿದ ಈ ಯದ್ದದಲ್ಲಿ, ತೀವ್ರ ಚಳಿ ಹಾಗೂ ಕಠಿಣ ಪರಿಸ್ಥಿತಿಯಲ್ಲಿ ಧೈರ್ಯದಿಂದ ಹೋರಾಟ ನಡೆಸಿದ ಸಿಆರ್ ಪಿಎಫ್ ಪಡೆಯ10 ಜನ ಪೊಲೀಸರು ಹುತಾತ್ಮರಾದರು.

ಕ್ಲಿಕ್ ಮಾಡಿ ಓದಿ: VaniVilasaSagara: ವಿವಿ ಸಾಗರ ಭರ್ತಿಗೆ ಇನ್ನು 6 ಅಡಿ ಬಾಕಿ | ಚಿತ್ತಾ ಮಳೆ ಆರ್ಭಟಕ್ಕೆ ಹೆಚ್ಚಾದ ಒಳಹರಿವು

ಇವರ ಸ್ಮರಣಾರ್ಥ ಪ್ರತಿ ವರ್ಷ ಹುತಾತ್ಮ ದಿನಾಚರಣೆ ಆಚರಿಸಲಾಗುತ್ತಿದೆ. ಇದುವರೆಗೂ ದೇಶದ್ಯಾಂತ 40 ಸಾವಿರಕ್ಕೂ ಹೆಚ್ಚು ಪೊಲೀಸರು ಹುತಾತ್ಮರಾಗಿದ್ದಾರೆ.

ಬೇಂದ್ರೆಯವರ ಕವನದ ಸಾಲುಗಳಂತೆ “ಎನ್ನ ಪಾಡೆನಗಿರಲಿ, ಅದರ ಹಾಡನ್ನಷ್ಟೆ ನೀಡುವೆನು ರಸಿಕ ನಿನಗೆ; ಕಲ್ಲುಸಕ್ಕರೆಯಂಥ ನಿನ್ನೆದೆಯು ಕರಗಿದರೆ

ಆ ಸವಿಯ ಹಣಿಸು ನನಗೆ” ಎನುವಂತೆ ಎಂತಹದೇ ಸಂದರ್ಭದಲ್ಲಿ ಪೊಲೀಸರು ಅವರ ಎಲ್ಲಾ ಕಷ್ಟ ಕಾರ್ಪಣ್ಯಗಳನ್ನು ಮರೆತು ಜನರ ರಕ್ಷಣೆ ಮಾಡುತ್ತಾರೆ ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಹೇಳಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು ದೇಶದಾದ್ಯಂತ ಹುತಾತ್ಮರಾದ 216 ಪೊಲೀಸ್ ಹಾಗೂ ಸಿಬ್ಬಂದಿಗಳ ಹೆಸರುಗಳನ್ನು ಈ ಸಂದರ್ಭದಲ್ಲಿ ವಾಚಿಸಿದರು.

ಇದಕ್ಕೂ ಮುನ್ನ ಮುಖ್ಯ ಅತಿಥಿಗಳು ಸೇರಿದಂತೆ ಇತರೆ ಗಣ್ಯರು ಹುತಾತ್ಮರ ಸ್ಮಾರಕಕ್ಕೆ ಹೂ ಗೂಚ್ಛ ಇರಿಸಿ ಗೌರವ ಸಮರ್ಪಿಸಿದರು. ಹುತ್ಮಾತರ ಗೌರವಾರ್ಥ 3 ಸುತ್ತಿನ ವಾಲಿ ಫೈರಿಂಗ್ ಮಾಡುವುದರ ಜೊತೆಗೆ ಪೊಲೀಸ್ ವಾದ್ಯ ವೃಂದದಿಂದ ರಾಷ್ಟ್ರಗೀತೆ ನುಡಿಸಲಾಯಿತು. 2 ನಿಮಿಷಗಳ ಮೌನಾಚರಣೆ ಮಾಡಲಾಯಿತು.

ಕ್ಲಿಕ್ ಮಾಡಿ ಓದಿ: Onake Obavva; ಒನಕೆ ಓಬವ್ವ ಜಯಂತಿ | ಅದ್ದೂರಿ ಆಚರಣೆಗೆ ಛಲವಾದಿ ಜನಾಂಗದಿಂದ ಪೂರ್ವಭಾವಿ ಸಭೆ

1 ಸೆಪ್ಟೆಂಬರ್ 2023 ರಿಂದ 30 ಆಗಸ್ಟ್ 2024 ರ ವರೆಗೆ ದೇಶಾದ್ಯಂತ 216 ಪೊಲೀಸ ಅಧಿಕಾರಿ ಹಾಗೂ ಸಿಬ್ಬಂದಿ ಹುತಾತ್ಮರಾಗಿದ್ದಾರೆ. ಈ ಅವಧಿಯಲ್ಲಿ ಕರ್ನಾಟಕದ 5 ಪೊಲೀಸ್ ಸಿಬ್ಬಂದಿ ಕರ್ತವ್ಯದ ವೇಳೆ ಹುತಾತ್ಮರಾಗಿದ್ದಾರೆ.

ಕಾರ್ಯಕ್ರಮದಲ್ಲಿ ಕರ್ತವ್ಯ ನಿರತ ಪೊಲೀಸ್ ಅಧಿಕಾರಿಗಳು, ನಿವೃತ್ತ ಪೊಲೀಸ್ ಸಿಬ್ಬಂದಿ ಸೇರಿದಂತೆ ಸಾರ್ವಜನಿಕರು ಉಪಸ್ಥಿತರಿದ್ದರು.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

Share This Article
Leave a Comment

Leave a Reply

Your email address will not be published. Required fields are marked *

Exit mobile version