ಚಿತ್ರದುರ್ಗ ನ್ಯೂಸ್.ಕಾಂ: ಮುರುಘಾ ಶ್ರೀಗಳ ವಿರುದ್ಧ ದಾಖಲಾಗಿದ್ದ ಪೋಕ್ಸೋ ಪ್ರಕರಣದಲ್ಲಿ ಎರಡನೇ ಆರೋಪಿಯಾಗಿದ್ದ ಎಸ್ಜೆಎಂ ವಿದ್ಯಾಪೀಠದ ಹಾಸ್ಟೆಲ್ ವಾರ್ಡನ್ ಎಸ್.ರಶ್ಮಿ ಬುಧವಾರ ಸಂಜೆ ಜೈಲಿನಿಂದ ಬಿಡುಗಡೆ ಆಗಿದ್ದಾರೆ.
ಕಳೆದ ಒಂದೂವರೆ ವರ್ಷದಿಂದ ನ್ಯಾಯಾಂಗ ಬಂಧನದ ಅಡಿಯಲ್ಲಿ ಕಾರಾಗೃಹದಲ್ಲಿದ್ದ ಎಸ್.ರಶ್ಮಿ ಅವರಿಗೆ ಡಿಸೆಂಬರ್ 21 ರಂದು ಹೈಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿತ್ತು.
ಹೈಕೋರ್ಟ್ನ ಏಕಸದಸ್ಯ ಪೀಠದ ನ್ಯಾಯಮೂರ್ತಿ ಮೊಹಮ್ಮದ್ ನವಾಜ್ ಷರತ್ತುಗಳನ್ನು ವಿಧಿಸಿ ಜಾಮೀನು ಮಂಜೂರು ಮಾಡಿದ್ದರು.
ನ್ಯಾಯಾಲಯ ಹಾಗೂ ಕಾರಾಗೃಹದ ಎಲ್ಲ ಪ್ರಕ್ರಿಯೆಗಳು ಮುಗಿದು, ಡಿಸೆಂಬರ್ 27 ಬುಧವಾರ ಸಂಜೆ 7 ಗಂಟೆಗೆ ಜಿಲ್ಲಾ ಕಾರಾಗೃಹದಿಂದ ವಾರ್ಡನ್ ಎಸ್.ರಶ್ಮಿ ಬಿಡುಗಡೆಯಾದರು.
ಇದನ್ನೂ ಓದಿ: ಮಠದ ವಾರ್ಡನ್ ಎಸ್.ರಶ್ಮಿಗೆ ಜಾಮೀನು
ಜಾಮೀನಿನಲ್ಲಿ ವಿಧಿಸಿದ್ದ ಎಲ್ಲ ಷರತ್ತುಗಳನ್ನು ಚಿತ್ರದುರ್ಗ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಪರಿಶೀಲನೆ ನಡೆಸಿ ಬಿಡುಗಡೆಗೆ ಆದೇಶಿಸಿತ್ತು.
ಮುರುಘಾ ಮಠದ ಪೀಠಾಧಿಪತಿ ಡಾ.ಶ್ರೀ.ಶಿವಮೂರ್ತಿ ಮುರುಘಾ ಶರಣರ ವಿರುದ್ಧ ದಾಖಲಾಗಿದ್ದ ಲೈಂಗಿಕ ದೌರ್ಜನ್ಯ ಆರೋಪದ ಪೋಕ್ಸೋ ಪ್ರಕರಣದಲ್ಲಿ ಮಠದ ಹಾಸ್ಟೆಲ್ ವಾರ್ಡನ್ ಆಗಿದ್ದ ಎಸ್.ರಶ್ಮಿ ದೌರ್ಜನ್ಯಕ್ಕೆ ಸಹಕಾರ ನಿಡಿದ ಆರೋಪದಲ್ಲಿ 2022 ಸೆಪ್ಟಂಬರ್ 1 ರಂದು ಬಂಧನವಾಗಿದ್ದರು.
ಸದರಿ ಪ್ರಕರಣದಲ್ಲಿ ಮೊದಲ ಆರೋಪಿಯಾಗಿದ್ದ ಶ್ರೀಗಳು ಕಳೆದ ತಿಂಗಳು ಬಿಡುಗಡೆಯಾಗಿದ್ದರು. ಮೂರನೇ ಆರೋಪಿಯಾಗಿದ್ದ ಮಠದ ವ್ಯವಸ್ಥಾಪಕ ಪರಮಶಿವಯ್ಯ ಕೂಡಾ ಈಗಾಗಲೇ ಬಿಡುಗಡೆ ಆಗಿದ್ದಾರೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail
chitradurganews23@gmail.com
» Whatsapp Number