
CHITRADURGA NEWS | 23 FEBRUARY 2024
| ಹರೀಶ್ ನಾಯಕನಹಟ್ಟಿ
ಚಿತ್ರದುರ್ಗ: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಮಳೆ, ಬೆಳೆ ದೂರವಾಗಿ ಭೀಕರ ಬರಗಾಲ ಆವರಿಸಿದೆ. ಈ ಸರ್ಕಾರಕ್ಕೆ ರೈತರ ಪರ ಒಂದಿಷ್ಟು ಕಾಳಜಿಯಿಲ್ಲ ಎಂದು ಮೊಳಕಾಲ್ಮುರು ಕ್ಷೇತ್ರದ ಜೆಡಿಎಸ್ ಪರಾಜಿತ ಅಭ್ಯರ್ಥಿ ಟಿ.ವೀರಭದ್ರಪ್ಪ ಆಕ್ರೋಶ ವ್ಯಕ್ತಪಡಿಸಿದರು.
ನಾಯಕನಹಟ್ಟಿ ಪಟ್ಟಣದ ಒಳಮಠಕ್ಕೆ ಶುಕ್ರವಾರ ಆಗಮಿಸಿ ತಿಪ್ಪೇರುದ್ರಸ್ವಾಮಿಯ ದರ್ಶನ ಪಡೆದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಕಾಂಗ್ರೆಸ್ ಸರ್ಕಾರ ಅಭಿವೃದ್ಧಿ ವಿಚಾರದಲ್ಲಿ ಸಂಪೂರ್ಣ ವಿಫಲವಾಗಿದೆ. ರಾಜ್ಯದ ಮತದಾರರು ಈ ಸರ್ಕಾರವನ್ನು ನೋಡಿ ಬೇಸತ್ತು ಹೋಗಿದ್ದಾರೆ. ಪ್ರಾದೇಶಿಕ ಪಕ್ಷವಾದ ಜೆಡಿಎಸ್ಗೆ ಒಲವು ತೊರುತ್ತಿದ್ದಾರೆ’ ಎಂದರು.

ಇದನ್ನೂ ಓದಿ: ಜಗದೊಡೆಯ ತಿಪ್ಪೇಶನ ಮಹಾರಥೋತ್ಸವ ವೈಭವಕ್ಕೆ ದಿನಗಣನೆ | 24 ರಂದು ಪೂರ್ವಸಿದ್ಧತಾ ಸಭೆ
ರಾಜ್ಯದ ವಿಧಾನಸಭಾ ಚುನಾವಣೆಯಲ್ಲಿ ಸೋತಿದ್ದೇನೆ. ಆದರೆ ಮುಂದೆ ಗೆಲ್ಲುವ ವಿಶ್ವಾಸ ನನಗಿದೆ. ರಾಜ್ಯ ಸರ್ಕಾರ ಲೋಕಸಭಾ ಚುನಾವಣೆಯ ಬಳಿಕ ಪತನವಾಗಲಿದೆ. ಗ್ಯಾರಂಟಿ ಯೋಜನೆಗಳಿಂದ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿಲ್ಲ ಎಂದು ಕಿಡಿಕಾರಿದರು.
ಚಳ್ಳಕೆರೆ ತಾಲ್ಲೂಕು ಅಧ್ಯಕ್ಷ ಡಿ.ಬಿ.ಚೌಳಕೆರೆ ಕರಿಬಸಪ್ಪ, ಹನುಮಂತನಹಳ್ಳಿ ನಾಗರಾಜ್, ಅಬ್ಬೇನಹಳ್ಳಿ ಚನ್ನಬಸಪ್ಪ, ಓಬಯ್ಯನಹಟ್ಟಿ ಕುಮಾರ್, ಚನ್ನಪ್ಪ, ಧನಂಜಯ್ ಇದ್ದರು.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
