ಹಿರಿಯೂರು
ವಿದ್ಯಾರ್ಥಿನಿಗೆ ಥಳಿಸಿದ್ದ ಶಿಕ್ಷಕ ಅಮಾನತು
CHITRADURGA NEWS | 25 DECEMBER 2024
ಹಿರಿಯೂರು: ವಿದ್ಯಾರ್ಥಿನಿಗೆ ಬೆನ್ನಿಗೆ ಬಾಸುಂಡೆ ಬರುವಂತೆ ಥಳಿಸಿದ್ದ ತಾಲೂಕು ಬಬ್ಬೂರು ಸರ್ಕಾರಿ ಶಾಲೆ ಶಿಕ್ಷಕ ಬಿ. ರಮೇಶ್ ಅವರನ್ನು ಅಮಾನತುಗೊಳಿಸಿ ಬಿಇಓ ತಿಪ್ಪೇಸ್ವಾಮಿ ಆದೇಶ ಹೊರಡಿಸಿದ್ದಾರೆ.
ಕ್ಲಿಕ್ ಮಾಡಿ ಓದಿ: ದಿನ ಭವಿಷ್ಯ | ಡಿಸೆಂಬರ್ 25
4 ನೇ ತರಗತಿ ವಿದ್ಯಾರ್ಥಿನಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ, ಕಾಲಲ್ಲಿ ತುಳಿದು, ಬೆನ್ನಿಗೆ ಬರೆ ಬರುವ ಹಾಗೆ ದೈಹಿಕ ಹಲ್ಲೆ ನಡೆಸಿರುತ್ತಾರೆ ಎಂದು ಶಿಕ್ಷಕನ ವಿರುದ್ದ ಭಾರತೀಯ ದಲಿತ ಸಂಘರ್ಷ ಸಮಿತಿ ದೂರನ್ನು ಸಲ್ಲಿಸಿದ್ದರು.
ಇದರ ಆಧಾರದ ಮೇಲೆ ಬಬ್ಬೂರು ಸರ್ಕಾರಿ ಶಾಲೆ ಶಿಕ್ಷಕ ಬಿ.ರಮೇಶ್ ಅವರನ್ನು ಅಮಾನತುಗೊಳಿಸಿ ಬಿಇಓ ತಿಪ್ಪೇಸ್ವಾಮಿ ಆದೇಶ ಹೊರಡಿಸಿದ್ದಾರೆ.