
CHITRADURGA NEWS | 30 JULY 2024
ಚಿತ್ರದುರ್ಗ: ಹೊಸದುರ್ಗ ತಾಲೂಕಿನ ಕೆಲ್ಲೋಡು ಬಳಿ ವೇದಾವತಿ ನದಿ ಮೈದುಂಬಿ ಹರಿಯುತ್ತಿದ್ದು, ಜಲವೈಭವ ನೋಡಲು ಸುತ್ತಮುತ್ತಲಿನ ಗ್ರಾಮಸ್ಥರು ಧಾವಿಸುತ್ತಿದ್ದಾರೆ.

ಚಿಕ್ಕಮಗಳೂರು ಜಿಲ್ಲೆಯಲ್ಲಿ ಹೆಚ್ಚು ಮಳೆಯಾಗುತ್ತಿರುವ ಪರಿಣಾಮ ವೇದಾವತಿ ನದಿಗೆ ಜೀವಕಳೆ ಬಂದಿದೆ.
ಇದನ್ನೂ ಓದಿ: ಮೈದುಂಬಿದ ವೇದಾವತಿ | ವಿವಿ ಸಾಗರಕ್ಕೆ ಬರೋಬ್ಬರಿ 4737 ಕ್ಯೂಸೆಕ್ ನೀರು
ಚಿತ್ರದುರ್ಗ ಜಿಲ್ಲೆಯಲ್ಲಿ, ವಿಶೇಷವಾಗಿ ವೇದಾವತಿ ಹರಿಯುವ ಹೊಸದುರ್ಗ ತಾಲೂಕಿನಲ್ಲಿ ಹೆಚ್ಚು ಮಳೆಯಾಗದಿದ್ದರೂ ವೇದಾವತಿ ನದಿ ಹರಿಯುತ್ತಿರುವ ದೃಶ್ಯ ಸಂಭ್ರಮ ಮೂಡಿಸಿದೆ.
ವೀಡಿಯೋ ನೋಡಿ: https://www.facebook.com/share/v/ZAQvzm7WdacHH8R8/?mibextid=oFDknk
ಹೊಸದುರ್ಗ ಪಟ್ಟಣಕ್ಕೆ ನೀರು ಸರಬರಾಜು ಮಾಡಲು ಹೊಸದುರ್ಗ-ಹುಳಿಯಾರು ರಸ್ತೆಯಲ್ಲಿರುವ ಕೆಲ್ಲೋಡು ಬಳಿ ವೇದಾವತಿ ನದಿಗೆ ಬ್ಯಾರೇಜ್ ನಿರ್ಮಿಸಿದ್ದು, ಈ ಬ್ಯಾರೇಜ್ ಬಳಿ ವೇದಾವತಿ ವಿವಿ ಸಾಗರದತ್ತ ಧುಮ್ಮುಕ್ಕಿ ಹರಿಯುತ್ತಿರುವ ದೃಶ್ಯ ನಯನ ಮನೋಹರವಾಗಿದೆ.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
