CHITRADURGA NEWS | 13 DECEMBER 2024
ಚಿತ್ರದುರ್ಗ: ವಾಣಿವಿಲಾಸ ಸಾಗರಕ್ಕೆ ಭದ್ರಾ ಜಲಾಶಯದಿಂದ ಮತ್ತೆ ನೀರು ಹರಿಯಲು ಪ್ರಾರಂಭವಾಗಿದೆ.
ಇದನ್ನೂ ಓದಿ: ದಾವಣಗೆರೆ – ಚಿತ್ರದುರ್ಗ – ತುಮಕೂರು ನೇರ ರೈಲು ಮಾರ್ಗ | ಈವರೆಗೆ ಆಗಿರುವ ವೆಚ್ಚ ಎಷ್ಟು ?
ನವೆಂಬರ್ 29 ರಂದು ಭದ್ರಾ (Bhadra) ಜಲಾಶಯದಿಂದ ವಿವಿ ಸಾಗರಕ್ಕೆ ನೀರು ಹರಿಸುತ್ತಿದ್ದ ಮಾರ್ಗದಲ್ಲಿದ್ದ ಸೇತುವೆಯೊಂದು ಕುಸಿದು ಬಿದ್ದಿತ್ತು. ಪರಿಣಾಮ ಜಲಾಶಯಕ್ಕೆ ಹರಿದು ಬರುತ್ತಿದ್ದ ನೀರನ್ನು ಸ್ಥಗಿತಗೊಳಿಸಲಾಗಿತ್ತು.
ಚಿಕ್ಕಮಗಳೂರು ಜಿಲ್ಲೆ, ಅಜ್ಜಂಪುರ ಸಮೀಪದ ಕಾಟಿನಗೆರೆ ಹಾಗೂ ಅಬ್ಬಿನಹೊಳಲು ಗ್ರಾಮಗಳನ್ನು ಸಂಪರ್ಕಿಸುವ ಸೇತುವೆ ಕುಸಿದು ಬಿದ್ದ ಕಾರಣ ನೀರು ಸ್ಥಗಿತಗೊಳಿಸಲಾಗಿತ್ತು.
ಇದನ್ನೂ ಓದಿ: ಡಿ.20 ರಂದು ಚಿತ್ರದುರ್ಗದಲ್ಲಿ ರೇಷ್ಮೆ ಕೃಷಿ ಮೇಳ
ಇದರಿಂದ ಕಾಟಿನಗೆರೆ ಗ್ರಾಮದ ಸಂಪರ್ಕವೇ ಕಡಿದು ಹೋಗಿದೆ ಎಂದು ಅಲ್ಲಿನ ರೈತರು, ಶಾಸಕರು ಆಕ್ರೋಶ ವ್ಯಕ್ತಪಡಿಸಿದ್ದರು.
ಆದರೆ, 15 ದಿನಗಳಲ್ಲೇ ಹೊಸ ಸೇತುವೆ ನಿರ್ಮಾಣವಾಗಿದೆ. ಇದರಿಂದಾಗಿ ಭದ್ರಾ ಜಲಾಶಯದಿಂದ ವಿವಿ ಸಾಗರಕ್ಕೆ ಮತ್ತೆ ನೀರು ಹರಿಯಲು ಪ್ರಾರಂಭವಾಗಿದೆ.
ಮುರಿದು ಬಿದ್ದ ಸೇತುವೆ ಪಕ್ಕದಲ್ಲೇ ಹೊಸದೊಂದು ಸೇತೆವೆ ನಿರ್ಮಾಣವಾಗಿದ್ದು, ನೀರು ತುಂಬಿ ಹರಿಯುವ ದೃಶ್ಯಗಳು ವೈರಲ್ ಆಗಿವೆ.
ಇದನ್ನೂ ಓದಿ: ದಿನ ಭವಿಷ್ಯ | 13 ಡಿಸೆಂಬರ್ | ಈ ದಿನ ಹೇಗಿದೆ ನಿಮ್ಮ ರಾಶಿ ಫಲ…
ಈಗ ನೀರು ಹರಿಯಲು ಪ್ರಾರಂಭವಾಗಿದ್ದು, ನಾಳೆ ವೇಳೆಗೆ ಜಲಾಶಯ ಮುಟ್ಟಬಹುದು ಎನ್ನಲಾಗುತ್ತಿದೆ.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
