CHITRADURGA NEWS | 11 JULY 2024
ಚಿತ್ರದುರ್ಗ: ನಗರದ ಮುರುಘಾ ಮಠದಲ್ಲಿ ಕಳ್ಳರು ಕೈಚಳಕ ತೋರಿದ್ದಾರೆ. 22 ಕೆಜಿ ತೂಕದ ಶಿವಮೂರ್ತಿ ಮುರುಘಾ ಶರಣರ ಬೆಳ್ಳಿ ಪುತ್ಥಳಿಯನ್ನು ಕಳವು ಮಾಡಿರುವ ಘಟನೆ ಬೆಳಕಿಗೆ ಬಂದಿದೆ.
ಎಂದಿನಂತೆ ಗುರುವಾರ ಮುಂಜಾನೆ ಪೂಜೆಗೆ ಹೋದ ಸಮಯದಲ್ಲಿ ಪುತ್ಥಳಿ ನಾಪತ್ತೆಯಾಗಿರುವುದು ಗಮನಕ್ಕೆ ಬಂದಿದೆ. ಈ ಸಂಬಂಧ ಮಠದಲ್ಲಿ ಆಂತರಿಕೆ ಸಭೆ ನಡೆಸಿ ಬಳಿಕ ಗ್ರಾಮಾಂತರ ಠಾಣೆಗೆ ಶ್ರೀ ಜಗದ್ಗುರು ಮುರುಘರಾಜೇಂದ್ರ ಬೃಹನ್ಮಠ ಮತ್ತು ವಿದ್ಯಾಪೀಠದ ಆಡಳಿತ ಮಂಡಳಿ ಸದಸ್ಯರಾದ ಡಾ.ಬಸವಕುಮಾರ ಸ್ವಾಮೀಜಿ ದೂರು ನೀಡಿದ್ದಾರೆ.
ಕ್ಲಿಕ್ ಮಾಡಿ ಓದಿ: Car accident:ಹೆದ್ದಾರಿಯಲ್ಲಿ ಕಾರು ಅಪಘಾತ | ಕೃಷಿ ಪತ್ತಿನ ಸಹಕಾರ ಸಂಘದ ಮೂವರು ಮೃತ

‘ಮುಂಜಾನೆ ಪೂಜೆಗೆಂದು ಹೋದ ವೇಳೆ ಮೂರ್ತಿ ಕಳ್ಳತನ ಬೆಳಕಿಗೆ ಬಂದಿದೆ. ಜುಲೈ 26 ರಂದೇ ಮಠದಲ್ಲಿನ ಸಿಸಿಟಿವಿ ಆಫ್ ಆಗಿದ್ದವು. ಈ ವೇಳೆ ದರ್ಬಾರ್ ಹಾಲ್ ನಲ್ಲಿದ್ದ 22 ಕೆಜಿ ತೂಕದ ಬೆಳ್ಳಿ ಪುತ್ಥಳಿ ಕಳ್ಳತನವಾಗಿರುವ ಶಂಕೆ ವ್ಯಕ್ತವಾಗಿದೆ. ಈ ಕುರಿತು ಮಠದ ಆಂತರಿಕ ಸಭೆ ಕರೆದು ವಿಚಾರಣೆ ಮಾಡಿದ್ದೇವೆ’ ಎಂದು ದಾವಣಗೆರೆ ವಿರಕ್ತ ಮಠದ ಬಸವಪ್ರಭು ಸ್ವಾಮಿಜಿ ಮಾಧ್ಯಮದವರಿಗೆ ತಿಳಿಸಿದ್ದಾರೆ.
ವೀಡಿಯೋ ನೋಡಿ: ಬೆಳ್ಳಿ ಪ್ರತಿಮೆ ಕಳ್ಳತನ ಕುರಿತು ಶ್ರೀ ಬಸವಪ್ರಭು ಸ್ವಾಮೀಜಿ ಹೇಳಿಕೆಯ ವೀಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail
chitradurganews23@gmail.com
» Whatsapp Number
