CHITRADURGA NEWS | 30 DECEMBER 2024
ಚಿತ್ರದುರ್ಗ: ನಗರದ ಪಕ್ಕದಲ್ಲೇ ಇರುವ ಆಡುಮಲ್ಲೇಶ್ವರ ಕಿರು ಮೃಗಾಲಯ ಈಗ ಆಧುನಿಕರಣಗೊಂಡಿದ್ದು, ಸಾಕಷ್ಟು ಪ್ರವಾಸಿಗರನ್ನು ಕೈ ಬೀಸಿ ಕರೆಯುತ್ತಿದೆ.
ಅಭಿವೃದ್ಧಿಗೆ ತೆರೆದುಕೊಂಡಿರುವ ಆಡುಮಲ್ಲೇಶ್ವರ ಕಿರು ಮೃಗಾಲಯಕ್ಕೆ ಭೇಟಿ ನೀಡುವ ಪ್ರವಾಸಿಗರ ಸಂಖ್ಯೆಯೂ ಹೆಚ್ಚಾಗಿದೆ.

ಇದನ್ನೂ ಓದಿ: 30 TMC ದಾಟಿದ ವಾಣಿವಿಲಾಸ ಸಾಗರ ಜಲಾಶಯ
ಚಿತ್ರದುರ್ಗ ಆಡುಮಲ್ಲೇಶ್ವರ ಕಿರು ಮೃಗಾಲಯಕ್ಕೆ ಪ್ರತಿ ಮಂಗಳವಾರ ರಜೆ ಇರುತ್ತದೆ. ಆದರೆ, ಡಿಸೆಂಬರ್ 31 ಮಂಗಳವಾರ ಮಾತ್ರ ರಜೆ ರದ್ದು ಮಾಡಲಾಗಿದೆ.
ಇಲ್ಲಿದೆ ನೋಡಿ ಆಡುಮಲ್ಲೇಶ್ವರ ಕಿರುಮೃಗಾಲಯದ ವೀಡಿಯೋ..
ಕಾರಣ, ಹೊಸ ವರ್ಷಕ್ಕೆ ಮುನ್ನಾ ದಿನವೇ ಅಂದರೆ ವರ್ಷಾಂತ್ಯದ (Year End) ದಿನ ಆಗಸ್ಟ್ 31 ಬಂದಿದ್ದು, ಸಾಕಷ್ಟು ಪ್ರವಾಸಿಗರು ಬಿಡುವು ಮಾಡಿಕೊಂಡು ವರ್ಷದ ಕೊನೆಯ ದಿನವನ್ನು ಸಂತೋಷವಾಗಿ ಕಳೆಯಲು ಆಡುಮಲ್ಲೇಶ್ವರ ಮೃಗಾಲಯ ಸೇರಿದಂತೆ ಸಾಕಷ್ಟು ಪ್ರವಾಸಿ ತಾಣಗಳಿಗೆ ಬರುತ್ತಾರೆ.
ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ಇಂದಿನ ಮೆಕ್ಕೆಜೋಳ, ಸೂರ್ಯಕಾಂತಿ ರೇಟ್ ಎಷ್ಟಿದೆ?
ಈ ಹಿನ್ನೆಲೆಯಲ್ಲಿ ಪ್ರವಾಸಿಗರಿಗೆ ಅನುಕೂಲವಾಗಲಿ ಎಂಬ ದೃಷ್ಟಿಯಿಂದ ಆಡುಮಲ್ಲೇಶ್ವರದ ರಜಾ ದಿನವನ್ನು ಈ ವಾರ ರದ್ದು ಮಾಡಲಾಗಿದೆ.
ಪ್ರವಾಸಿಗರು ಈ ಸೌಲಭ್ಯವನ್ನು ಉಪಯೋಗಿಸಿಕೊಳ್ಳಲು ಆಡು ಮಲ್ಲೇಶ್ವರ ಮೃಗಾಲಯದ ಕಾರ್ಯನಿರ್ವಾಹಕ ನಿರ್ದೇಶಕರು ಹಾಗೂ ಉಪ ಅರಣ್ಯ ಸಂರಕ್ಷಣಾಧಿಕಾರಿಗಳು ಮನವಿ ಮಾಡಿದ್ದಾರೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail
chitradurganews23@gmail.com
» Whatsapp Number
