CHITRADURGA NEWS | 01 SEPTEMBER 2024
ಚಿತ್ರದುರ್ಗ: ಅಂಗಡಿಗೆ ಟೀ ಪೌಡರ್ ತರಲು ತೆರಳುತ್ತಿದ್ದ ಮಹಿಳೆಯ ಕೊರಳಲ್ಲಿದ್ದ ಚಿನ್ನದ ಸರ ಎಗರಿಸಿ, ಖತರ್ನಾಕ್ ಕಳ್ಳ(thief)ರು ಎಸ್ಕೇಪ್ ಆಗಿರುವ ಘಟನೆ ಸೆ.1 ಬೆಳಿಗ್ಗೆ 7 ಗಂಟೆಗೆ ಬೆಳಕಿಗೆ ಬಂದಿದೆ.
ಚಿತ್ರದುರ್ಗ ನಗರದ ಎಸ್ಪಿ ಕಚೇರಿ ಸಮೀಪದಲ್ಲೇ ಈ ಕೃತ್ಯ ಜರುಗಿದೆ.
ಕ್ಲಿಕ್ ಮಾಡಿ ಓದಿ: Kannada Novel: 1 ಹೂತಿಟ್ಟ ಚಿನ್ನಕ್ಕಾಗಿ ಹುಡುಕಾಟ
ಬೈಕ್ ನಲ್ಲಿ ಬಂದ ಇಬ್ಬರು ಮುಸುಕುಧಾರಿ ಯುವಕರು ಈ ಕೃತ್ಯ ಎಸಗಿದ್ದಾರೆ. ನಗರದ ಮುನ್ಸಿಪಲ್ ಕಾಲೋನಿಯ ಅನ್ನ ಪೂರ್ಣಮ್ಮ ಎಂಬ ಮಹಿಳೆಯ ಕೊರಳಲ್ಲಿದ್ದ ಚಿನ್ನದ ಸರ ಎಗರಿಸಿಕೊಂಡು ಅಲ್ಲಿಂದ ಕಾಲ್ಕಿತ್ತಿದ್ದಾರೆ.
45 ಗ್ರಾಂ ತೂಕದ ಅಂದಾಜು 2.25 ಲಕ್ಷ ಮೌಲ್ಯದ ಚಿನ್ನದ ಸರ ಎಂದು ತಿಳಿದು ಬಂದಿದೆ.
ಘಟನಾ ಸ್ಥಳಕ್ಕೆ ಪಿಎಸ್ಐ ರಘು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಕಳ್ಳರಿಗಾಗಿ ಹುಡುಕಾಟ ಆರಂಭಿಸಿದ್ದಾರೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail
chitradurganews23@gmail.com
» Whatsapp Number
