By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Reading: ಈ ವರ್ಷ ಬಹಳ ಬಿಸಿಲು ಸ್ವಾಮೀಜಿ | ಕರುನಾಡ ಚಕ್ರವರ್ತಿ ಡಾ.ಶಿವರಾಜ್‌ ಕುಮಾರ್‌
Share
Font ResizerAa
Chitradurga News-Kannada NewsChitradurga News-Kannada News
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2022 Foxiz News Network. Ruby Design Company. All Rights Reserved.

Home » ಈ ವರ್ಷ ಬಹಳ ಬಿಸಿಲು ಸ್ವಾಮೀಜಿ | ಕರುನಾಡ ಚಕ್ರವರ್ತಿ ಡಾ.ಶಿವರಾಜ್‌ ಕುಮಾರ್‌

ಲೋಕಸಮರ 2024

ಈ ವರ್ಷ ಬಹಳ ಬಿಸಿಲು ಸ್ವಾಮೀಜಿ | ಕರುನಾಡ ಚಕ್ರವರ್ತಿ ಡಾ.ಶಿವರಾಜ್‌ ಕುಮಾರ್‌

News Desk Chitradurga News
Last updated: 28 April 2024 12:55
News Desk Chitradurga News
1 year ago
Share
SHARE
https://chat.whatsapp.com/Jhg5KALiCFpDwME3sTUl7x

CHITRADURGA NEWS | 28 APRIL 2024
ಚಿತ್ರದುರ್ಗ: ಈ ವರ್ಷ ಬಿಸಿಲು ಬಹಳ ಹೆಚ್ಚಾಗಿದೆ ಸ್ವಾಮೀಜಿ..ಇಲ್ಲಿ ಅಷ್ಟೇ ಎಲ್ಲ ಕಡೆನೂ ಇದೇ ಪರಿಸ್ಥಿತಿಯಿದೆ ಸ್ವಾಮೀಜಿ…ಹೀಗೆ ಮಾತು ಶುರು ಮಾಡಿದ್ದು ಕರುನಾಡ ಚಕ್ರವರ್ತಿ ಡಾ.ಶಿವರಾಜ್‌ ಕುಮಾರ್‌.

ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಶಿವಮೊಗ್ಗ ಕ್ಷೇತ್ರದಿಂದ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಪತ್ನಿ ಗೀತಾ ಶಿವರಾಜ್‌ ಕುಮಾರ್ ಜತೆ ಭಾನುವಾರ ಚಿತ್ರದುರ್ಗದ ಭೋವಿ ಗುರುಪೀಠಕ್ಕೆ ಆಗಮಿಸಿ ಸ್ವಾಮೀಜಿಗಳ ಆಶೀರ್ವಾದ ಪಡೆದರು. ಈ ವೇಳೆ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ, ದಂಪತಿಗಳ ಆರೋಗ್ಯ ವಿಚಾರಿಸಿದರು.

‘ಬೆಳಿಗ್ಗೆಯಿಂದಲೇ ಬಿಸಿಲು ಶುರುವಾಗುತ್ತಿದೆ. ಕ್ಷೇತ್ರದ ಎಲ್ಲೆಡೆ ಸಂಚಾರ ನಡೆಸುತ್ತಿದ್ದೇವೆ. ಬಿಸಿಲಿಗೆ ಗೀತಾಗೆ ನಿನ್ನೆಯಿಂದ ಸ್ವಲ್ಪ ಗಂಟಲು ಕಿಚ್‌ಕಿಚ್‌ ಶುರುವಾಗಿದೆ’ ಎಂದು ಶಿವಣ್ಣ ಲೋಕಾಭಿರಾಮವಾಗಿ ಸ್ವಾಮೀಜಿಗಳ ಜತೆ ಮಾತನಾಡಿದರು. ‘ಕಳೆದ ಚುನಾವಣೆಗೆ ಹೋಲಿಸಿದರೆ ಈ ಬಾರಿ ಜನ ಬೆಂಬಲ ವ್ಯಕ್ತವಾಗುತ್ತಿದೆ. ಗೆಲುವಿನ ವಾತಾವರಣ ಕಂಡು ಬರುತ್ತಿದೆ. ನಮಗೆ ಈ ಬಾರಿ ಆತ್ಮ ವಿಶ್ವಾಸವಿದೆ. ಗೆಲುವು ನಮ್ಮದಾಗುತ್ತದೆ ಎಂದು. ಆದರೆ ಇದು ಸ್ಪರ್ಧೆ ಎಲ್ಲರೂ ಗೆಲುವಿಗೆ ಓಡುತ್ತಿದ್ದೇವೆ. ನೋಡೋಣ’ ಎಂದರು.

ಕ್ಲಿಕ್ ಮಾಡಿ ಓದಿ: ಶ್ರೀ ಶಿವಕುಮಾರ ಸ್ವಾಮೀಜಿ ರಥೋತ್ಸವಕ್ಕೆ ಸಾಣೇಹಳ್ಳಿ ಸಜ್ಜು | ವಚನಗೀತೆ, ನಾಟಕದ ಮೂಲಕ ಗುರು ಸ್ಮರಣೆ

‘ಕ್ಷೇತ್ರದಲ್ಲಿ ಅಭೂತಪೂರ್ವ ಜನ ಬೆಂಬಲ ವ್ಯಕ್ತವಾಗುತ್ತಿದೆ. ಗುರುಗಳ ಶ್ರೀ ರಕ್ಷೆ ಇಂದು ದೊರಕಿದೆ. ಎಲ್ಲೇಡೆ ಉತ್ತಮ ವಾತಾವರಣವಿದೆ’ ಎಂದು ಗೀತಾ ಶಿವರಾಜ್ ಕುಮಾರ್ ತಿಳಿಸಿದರು.

ಸ್ವಾಮೀಜಿಗಳಿಗೆ ಗೌರವ ಸಲ್ಲಿಸಿದ ಬಳಿಕ ಆಗಮಿಸಿದ ಅಭಿಮಾನಿಗಳ ಜತೆ ಕೊಂಚವೂ ಬೇಸರಿಸಿಕೊಳ್ಳದೆ ಫೋಟೋ ತೆಗೆಸಿಕೊಂಡು ನಗುತ್ತಲೆ ಪ್ರಯಾಣ ಬೆಳೆಸಿದರು.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

TAGGED:BisilucongressGeetaMathShivraj KumarSwamijiಕಾಂಗ್ರೆಸ್ಗೀತಾಬಿಸಿಲುಮಠಶಿವರಾಜ್ ಕುಮಾರ್ಸ್ವಾಮೀಜಿ
Share This Article
Facebook Email Print
Previous Article ಕರುನಾಡ ವಿಜಯ ಸೇನೆ ಪ್ರತಿಭಟನೆ ಯರೇಹಳ್ಳಿಯಲ್ಲಿ ಮರು ಮತದಾನಕ್ಕೆ ಕರುನಾಡ ವಿಜಯಸೇನೆ ಆಗ್ರಹ
Next Article ಮುರುಘಾ ಮಠ ಮುರುಘಾಮಠದಲ್ಲಿ ಸಮಾಲೋಚನಾ ಸಭೆ | ಸೂಕ್ತ ಸಲಹೆ–ಸೂಚನೆಗೆ ಮನವಿ
Leave a Comment

Leave a Reply Cancel reply

Your email address will not be published. Required fields are marked *

ಕಾಂಗ್ರೆಸ್ ಅವಧಿಯಲ್ಲಿ ಶೇ.60 ರಷ್ಟು ಕಮಿಷನ್ ನಡೆಯುತ್ತಿದೆ | AAP ಜಿಲ್ಲಾಧ್ಯಕ್ಷ ಜಗದೀಶ್
ಮುಖ್ಯ ಸುದ್ದಿ
ಗಾಂಧಿವೃತ್ತ, ಸಂತೆಹೊಂಡದ ಬಳಿಯ ವಾಣಿಜ್ಯ ಸಂಕೀರ್ಣಗಳ ಕಾಮಗಾರಿ ವೀಕ್ಷಿಸಿದ ಸಚಿವರು
ಮುಖ್ಯ ಸುದ್ದಿ
ಸಚಿವ ಸ್ಥಾನದಿಂದ ಜಮೀರ್ ಅಹಮದ್‍ ಖಾನ್ ವಜಾಗೊಳಿಸಿ | ಜೆಡಿಎಸ್ ಪ್ರತಿಭಟನೆ
ಮುಖ್ಯ ಸುದ್ದಿ
ಡಾ.ಶ್ರೀ.ಶಿವಮೂರ್ತಿ ಮುರುಘಾ ಶರಣರು
ಮುರುಘಾ ಶ್ರೀಗಳ ಪ್ರಕರಣ ಅಂತಿಮ ಹಂತಕ್ಕೆ | ಖುದ್ದು ಹೇಳಿಕೆ ದಾಖಲಿಸಲು ದಿನಾಂಕ ನಿಗಧಿ | ನ್ಯಾಯಾಲಯಕ್ಕೆ ಹಾಜರಾಗಲಿದ್ದಾರೆ ಶರಣರು
ಮುಖ್ಯ ಸುದ್ದಿ
© Chitradurga News. Ruby Design Company. All Rights Reserved.

Chitradurga News App

Install
Welcome Back!

Sign in to your account

Username or Email Address
Password

Lost your password?

Not a member? Sign Up