
CHITRADURGA NEWS | 16 AUGUST 2024
ಚಿತ್ರದುರ್ಗ: ಜಿಲ್ಲೆಯಲ್ಲಿ ವ್ಯಾಪಕವಾಗಿ ಮಳೆಯಾದ ಪರಿಣಾಮ ವಾಣಿವಿಲಾಸ ಸಾಗರ ಜಲಾಶಯಕ್ಕೆ ಹರಿದು ಬರುವ ನೀರಿನ ಒಳಹರಿವಿನ ಪ್ರಮಾಣವೂ ಹೆಚ್ಚಾಗಿದೆ.

ಭದ್ರಾ ಜಲಾಶಯದಿಂದ ಈಗಾಗಲೇ ಪ್ರತಿ ದಿನ 700 ಕ್ಯೂಸೆಕ್ ನೀರು ಹರಿಸುತ್ತಿದ್ದು, ಅದರೊಟ್ಟಿಗೆ ಶುಕ್ರವಾರ ಬೆಳಗ್ಗೆ 8 ಗಂಟೆಗೆ ನಡೆಸಿದ ಮಾಪನದ ವೇಳೆ 300ಕ್ಕೂ ಹೆಚ್ಚು ಕ್ಯೂಸೆಕ್ ನೀರು ಹರಿದು ಬಂದಿದೆ.
ಇದನ್ನೂ ಓದಿ: ಸರ್ಕಾರಿ ನೌಕರರ ಅಭಿನಂದನಾ ಸಮಾರಂಭಕ್ಕೆ NPS ನೌಕರರ ಬಹಿಷ್ಕಾರ
ಶುಕ್ರವಾರದ ಹೊತ್ತಿಗೆ ಒಟ್ಟಾರೆ 1039 ಕ್ಯೂಸೆಕ್ ನೀರು ಜಲಾಶಯದ ಒಡಲು ಸೇರಿದ್ದು, ರೈತರಲ್ಲಿ ಮಂದಹಾಸ ಮೂಡಿದೆ.
130 ಅಡಿ ಎತ್ತರದ, 30 ಟಿಎಂಸಿ ಸಾಮಥ್ರ್ಯದ ವಿವಿ ಸಾಗರ ಜಲಾಶಯದಲ್ಲಿ ಸದ್ಯ 116 ಅಡಿ ನೀರು ಬಂದಿದ್ದು, ಇದರ ಪ್ರಮಾಣ 19.48 ಟಿಎಂಸಿ ಆಗಿದೆ.
ಇದನ್ನೂ ಓದಿ: ರೈತ ಸಂಘದ ಜಿಲ್ಲಾ ಕಾರ್ಯದರ್ಶಿ ಅಪ್ಪರಸನಹಳ್ಳಿ ಬಸವರಾಜಪ್ಪ ನಿಧನ
ಕಳೆದ ವರ್ಷ ಇದೇ ದಿನ ಅಂದರೆ 16 ಆಗಸ್ಟ್ 2023 ರಂದು ವಿವಿ ಸಾಗರ ಜಲಾಶಯದಲ್ಲಿ 123 ಅಡಿ ನೀರಿತ್ತು.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
