ಚಿತ್ರದುರ್ಗ ನ್ಯೂಸ್.ಕಾಂ
ವರ್ಷಾಂತ್ಯ ಸಮೀಪಿಸುತ್ತಿದ್ದಂತೆ ಚಳಿಯ ತೀವ್ರತೆ ಸಹ ಹೆಚ್ಚಾಗುತ್ತಿದೆ. ಮುಂಜಾನೆ, ಇಳಿ ಸಂಜೆ ವೇಳೆಗೆ ಜಿಲ್ಲಾದ್ಯಂತ ಮೈ ಕೊರೆವ ಚಳಿ ಜನರನ್ನು ನಡುಗಿಸುತ್ತಿದೆ. ಇಂತಹ ವಾತಾವರಣಕ್ಕೆ ಮಳೆರಾಯ ಸಹ ಜತೆಯಾಗಲು ಸಿದ್ಧತೆ ನಡೆಸಿದ್ದಾನೆ.
ಇದನ್ನೂ ಓದಿ: ಗರ್ಭದಲ್ಲೇ ಉಸಿರು ನಿಲ್ಲಿಸಿದ ಕಂದಮ್ಮ; ವೈದ್ಯರ ನಿರ್ಲಕ್ಷ್ಯಕ್ಕೆ ಬಾರದ ಲೋಕಕ್ಕೆ ಪಯಣಿಸಿದ ಶಿಕ್ಷಕಿ; ಮುಗಿಲು ಮುಟ್ಟಿದ ಆಕ್ರಂದನ
ಹಸಿರು ಬರದಿಂದ ದಿಕ್ಕು ತೋಚದ ಸ್ಥಿತಿಗೆ ಸಿಲುಕಿರುವ ಜಿಲ್ಲೆಗೆ ವರುಣಾಗಮನಕ್ಕೆ ದಿನಗಣನೆ ಶುರುವಾಗಿದೆ. ಜನವರಿ 1 ರಿಂದ ಮೂರು ದಿನ ಜಿಲ್ಲೆಯಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಜಿಲ್ಲೆಯಲ್ಲಿ ಗುರುವಾರ ರಾತ್ರಿ ವೇಳೆಗೆ 16 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗುವ ಸಾಧ್ಯತೆಯಿದೆ. ಇನ್ನೂ ನಾಲ್ಕೈದು ದಿನಕ್ಕೆ ಒಂದರೆಡು ಡಿಗ್ರಿ ಸೆಲ್ಸಿಯಸ್ ನಷ್ಟು ಏರುಪೇರಾಗುವ ಸಾಧ್ಯತೆ ಇದೆ. ಶೇ 38 ರಷ್ಟು ಮೋಡ ಮುಸುಕಿದ ವಾತಾವರಣವಿದ್ದು, ಗಾಳಿಯ ಗುಣಮಟ್ಟ ತುಂಬಾ ಅನಾರೋಗ್ಯಕರವಾಗಿದೆ.
ಇದನ್ನೂ ಓದಿ: ಹತ್ತು ಲಕ್ಷ ದರೋಡೆ ಪ್ರಕರಣ; ಒಂದೇ ತಿಂಗಳಲ್ಲಿ ಆರೋಪಿ ಬಂಧನ
ಆರೋಗ್ಯ ಸಮಸ್ಯೆ ಇರುವವರು ಸಾಧ್ಯವಾದಷ್ಟು ಮನೆಯಲ್ಲಿದ್ದರೆ ಉತ್ತಮ. ಆರೋಗ್ಯಕರ ವ್ಯಕ್ತಿಗಳು ಸಹ ಉಸಿರಾಟದ ಸಮಸ್ಯೆ ಮತ್ತು ಗಂಟಲಿನ ಕಿರಿಕಿರಿ ಅನುಭವಿಸುವ ಸಾಧ್ಯತೆ ಇದೆ. ಸಾಧ್ಯವಾದಷ್ಟು ಮುಂಜಾನೆ, ಸಂಜೆ ಮನೆಯಿಂದ ಹೊರಗೆ ಬಾರದಿರುವುದು ಉತ್ತಮ ಎನ್ನುತ್ತದೆ ಹವಾಮಾನ ಇಲಾಖೆ ಸೂಚನೆ.
ಇದನ್ನೂ ಓದಿ: ಮುರುಘಾ ಶ್ರೀ ಪ್ರಕರಣ; ಎರಡನೇ ಆರೋಪಿ ವಾರ್ಡನ್ ರಶ್ಮಿ ಬಿಡುಗಡೆ
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail
chitradurganews23@gmail.com
» Whatsapp Number