ಬೆಸ್ಕಾಂ ಎಇಇ ಸೇರಿ ಮೂರು ಜನರಿಗೆ ಜೈಲು ಶಿಕ್ಷೆ | ವಿದ್ಯುತ್‌ ತಗುಲಿ ಬಾಲಕ ಮೃತಪಟ್ಟಿದ್ದ ಪ್ರಕರಣ

CHITRADURGA NEWS | 04 APRIL 2025

ಚಿತ್ರದುರ್ಗ: ಬೆಸ್ಕಾಂ ನಿರ್ಲಕ್ಷ್ಯದಿಂದ ಬಾಲಕ ಮೃತಪಟ್ಟಿದ್ದ ಪ್ರಕರಣದಲ್ಲಿ ಮೊಳಕಾಲ್ಮೂರು ನ್ಯಾಯಾಲಯ ಬೆಸ್ಕಾಂ ಎಇಇ, ಮೆಕ್ಯಾನಿಕ್‌ ಹಾಗೂ ಮತ್ತೊಬ್ಬ ಸಿಬ್ಬಂದಿ ಸೇರಿ ಮೂರು ಜನರಿಗೆ 2 ವರ್ಷ ಜೈಲು ಶಿಕ್ಷೆ ವಿಧಿಸಿ ಆದೇಶಿಸಿದೆ.

ಮೊಳಕಾಲ್ಮೂರು ಪಟ್ಟಣದ ಭೋವಿ ಕಾಲೋನಿಯ ಮೂರ್ತಿ ಎಂಬುವವರ 14 ವರ್ಷದ ಪುತ್ರ ಕಿರಣ್‌ ಆಟವಾಡುತ್ತಿದ್ದಾಗ ಪಂಪ್‌ಹೌಸ್‌ ಬಳಿ 2015 ಜೂನ್‌ 1 ರಂದು ಆಟವಾಡುತ್ತಿದ್ದಾಗ ಸಮೀಪದ ವಿದ್ಯುತ್‌ ಕಂಬದಲ್ಲಿದ್ದ ಸ್ವಚ್‌ ಬೋರ್ಡ್‌ ಹಳೆಯದಾಗಿದ್ದು, ಇದರ ವೈಯರ್‌ ತಾಗಿ ಬಾಲಕ ಮೃತಪಟ್ಟಿದ್ದ.

ಇದನ್ನೂ ಓದಿ:ಚಿತ್ರದುರ್ಗಕ್ಕೆ ವರ್ಷದ‌ ಮೊದಲ ಮಳೆ | ಇಳೆ ತಂಪಾಗುವಂತೆ ಸುರಿದ ಮಳೆ

ಈ ಸಂಬಂಧ ಮೊಳಕಾಲ್ಮೂರು ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪಿಎಸ್‌ಐ ಲೋಕೇಶ್‌ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.

ಸದರಿ ಪ್ರಕರಣದಲ್ಲಿ ಬೆಸ್ಕಾಂ ಇಲಾಖೆಯ ನಿರ್ಲಕ್ಷ್ಯ ಗಮನಿಸಿ, ಎಇಇ ಸೇರಿದಂತೆ ಮೂರು ಜನರನ್ನು ಆರೋಪಿಗಳನ್ನಾಗಿ ಮಾಡಲಾಗಿತ್ತು.

ಇದನ್ನೂ ಓದಿ: ಮಳೆ ವಿವರ | ಏ.3 ರಂದು ಸುರಿದ ಮಳೆಯ ಪೂರ್ಣ ವಿವರ

ಪ್ರಕರಣದ ವಿಚಾರಣೆ ನಡೆಸಿದ ಮೊಳಕಾಲ್ಮೂರು ಪ್ರಧಾನ ಸಿ.ಜೆ. ಮತ್ತು ಜೆಎಂಎಫ್‌ಸಿ ನ್ಯಾಯಾಲಯದ ನ್ಯಾಯಾಧೀಶರಾದ ಪ್ರಿಯಾಂಕ ಕೆ.ಟಿ. ಅವರು ಆರೋಪಿಗಳಾದ ಬೆಸ್ಕಾಂ ಎಇಇ, ಮೆಕ್ಯಾನಿಕ್‌ ಮತ್ತೊಬ್ಬರಿಗೆ 2 ವರ್ಷ ಸಾದಾ ಜೈಲು ಶಿಕ್ಷೆ ಮತ್ತು 1 ಸಾವಿರ ದಂಡ ವಿಧಿಸಿ ತೀರ್ಪು ನೀಡಿದ್ದಾರೆ.

ಸದರಿ ಪ್ರಕರಣದಲ್ಲಿ ಸರ್ಕಾರದ ಪರವಾಗಿ ಸಹಾಯಕ ಸರ್ಕಾರಿ ಅಭಿಯೋಜಕ ಮೊಹಮ್ಮದ್‌ ಶಂಶಿರ್‌ ಅಲಿ ವಾದ ಮಂಡಿಸಿದ್ದರು.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

Share This Article
Leave a Comment

Leave a Reply

Your email address will not be published. Required fields are marked *

Exit mobile version