
CHITRADURGA NEWS | 22 MAY 2024
ಚಿತ್ರದುರ್ಗ: ವಿಧಾನ ಪರಿಷತ್ ಆಗ್ನೇಯ ಶಿಕ್ಷಕರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವೈ.ಎ.ನಾರಾಯಣಸ್ವಾಮಿ ಪರ ಮಾಜಿ ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ ಮಾತಯಾಚನೆ ಮಾಡಿದರು.
ಇದನ್ನೂ ಓದಿ: ಬೆಳೆವಿಮೆ ತಾರತಮ್ಯ ಸರಿಪಡಿಸಿ | ರೈತರ ಖಾತೆಗೆ ಹಣ ಜಮೆ ಮಾಡಿ
ನಗರದ ಪಿಳ್ಳೆಕೆರನಹಳ್ಳಿಯಲ್ಲಿರುವ ಬಾಪೂಜಿ ಶಿಕ್ಷಣ ಮಹಾವಿದ್ಯಾಲಯದಲ್ಲಿ ವೈ.ಎ.ನಾರಾಯಣಸ್ವಾಮಿರವರ ಪರ ಬುಧವಾರ ಮತಯಾಚಿಸಿ ಮಾತನಾಡಿದ ಅವರು.
ಈ ಬಾರಿಯ ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣೆಗೆ ಸ್ಪರ್ಧಿಸಿರುವ ಬಿಜೆಪಿ ಅಭ್ಯರ್ಥಿ ವೈ.ಎ.ನಾರಾಯಣಸ್ವಾಮಿರವರಿಗೆ ಪ್ರಥಮ ಪ್ರಾಶಸ್ತ್ಯದ ಮತ ನೀಡಿ ಗೆಲ್ಲಿಸುವಂತೆ ಮಾಜಿ ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ ಶಿಕ್ಷಕರುಗಳಲ್ಲಿ ಮನವಿ ಮಾಡಿದರು.
ವಿಧಾನಸಭೆಯಲ್ಲಿ ಮನ ಬಂದಂತೆ ಪಾಸ್ ಮಾಡುವ ಬಿಲ್ಗಳನ್ನು ವಿಧಾನಪರಿಷತ್ನಲ್ಲಿ ತಿರಸ್ಕರಿಸಬೇಕಾದರೆ ಬಹುಮತವಿರಬೇಕು.
ಇದನ್ನೂ ಓದಿ: ಚಿತ್ರದುರ್ಗಕ್ಕೂ ಬಂತು ಡ್ರೋನ್ | ಔಷಧ ಸಿಂಪರಣೆಗೆ ರೈತರಿಗೆ ನೆರವು
ನರೇಂದ್ರ ಮೋದಿ ದೇಶದ ಪ್ರಧಾನಿಯಾದಾಗಿನಿಂದಲೂ ಅಂತರಾಷ್ಟ್ರೀಯ ಮಟ್ಟದಲ್ಲಿ ಭಾರತಕ್ಕೆ ಗೌರವ ಸಿಕ್ಕಿದೆ. ವಿಧಾನಸಭೆಯಲ್ಲಿ ಕಾಂಗ್ರೆಸ್ ಮಾಡುವ ಕಾನೂನುಗಳನ್ನು ಮೇಲ್ಮನೆಗೆ ಕಳಿಸಿದಾಗ ಅಲ್ಲಿ ತೀರ್ಮಾನಿಸಲು ಪಕ್ಷಕ್ಕೆ ಬಹುಮತವಿರಬೇಕು. ಹಾಗಾಗಿ ವಿಧಾನಪರಿಷತ್ ಚುನಾವಣೆ ಅತ್ಯಂತ ಮಹತ್ವದಾಗಿದೆ.
ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಒಬ್ಬ ಮಹಿಳೆಗೆ ಒಂದು ಲಕ್ಷ ರೂ.ಗಳನ್ನು ನೀಡುವುದಾಗಿ ಘೋಷಿಸಿದೆ. ಅದಕ್ಕಾಗಿ 84 ಲಕ್ಷ ಕೋಟಿ ರೂ.ಗಳು ಬೇಕಾಗುತ್ತದೆ. ಹಣ ಎಲ್ಲಿಂದ ತರುತ್ತಾರೆಂದು ಪ್ರಶ್ನಿಸಿದರು?
ನರೇಂದ್ರ ಮೋದಿ ಅವರ ಪಾರದರ್ಶಕ ಆಡಳಿತಕ್ಕೆ ಅಮೇರಿಕಾ, ಬ್ರಿಟನ್, ಜರ್ಮನ್, ರಷ್ಯ ದೇಶಗಳಿಗೆ ನಡುಕ ಉಂಟಾಗಿದೆ. ಮತ್ತೊಮ್ಮೆ ಮೋದಿ ದೇಶದ ಪ್ರಧಾನಿಯಾಗುವುದು ಖಚಿತ ಎಂದು ಹೇಳಿದರು.
ಇದನ್ನೂ ಓದಿ: ವೈ.ಎ.ನಾರಾಯಣಸ್ವಾಮಿ ಪರ ಅಖಾಡಕ್ಕಿಳಿದ ಮಾಜಿ ಮುಖ್ಯಮಂತ್ರಿ | ಕಾಲೇಜುಗಳಲ್ಲಿ ಬಿರುಸಿನ ಪ್ರಚಾರ
ವಿಧಾನ ಪರಿಷತ್ ಸದಸ್ಯ ಅರುಣ್ ಶಹಾಪುರ್ ಮಾತನಾಡಿ, ದೇಶದಲ್ಲಿ ನಿರುದ್ಯೋಗ ಹೋಗಲಾಡಿಸಬೇಕಾದರೆ ಮೊದಲು ಶಿಕ್ಷಣ ಬೇಕು. ಪ್ರಧಾನಿ ಮೋದಿರವರು ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೆ ತರಲು ಹೊರಟಿದ್ದಾರೆ. ಆದರೆ ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಮಾತ್ರ ಇದು ಬೇಕಿಲ್ಲ. 6, 9 ನೇ ತರಗತಿಗೆ ಸಿ.ಬಿ.ಎಸ್.ಇ. ಐಸಿಎಸ್ಇ. ನಲ್ಲಿ ಬದಲಾವಣೆ ಪರ್ವ ಆರಂಭವಾಗಿದೆ.
ಅನರ್ಹರಿಗೆ ರಾಜ್ಯದಲ್ಲಿ ಅಧಿಕಾರ ಸಿಕ್ಕಿರುವುದು ಭವಿಷ್ಯಕ್ಕೆ ಮಾರಕವಾಗಿದೆ. ಎಸ್.ಎಂ.ಕೃಷ್ಣ ರಾಜ್ಯದ ಮುಖ್ಯಮಂತ್ರಿಯಾಗಿದ್ದಾಗ 2021-22 ರಲ್ಲಿ ಅನುದಾನಿತ ಶಾಲೆಗಳಿಗೆ ನೀಡಲಾಗಿದ್ದ ಅನುದಾನವನ್ನು ಹಿಂದಕ್ಕೆ ಪಡೆದಾಗ ಶಿಕ್ಷಕರ ಪರವಾಗಿ ದೊಡ್ಡ ಹೋರಾಟ ಮಾಡಿದೆವು. ಖಾಸಗಿ ಶಿಕ್ಷಣ ವ್ಯವಸ್ಥೆ ಈಗಲೂ ರಾಜ್ಯದಲ್ಲಿ ಉಳಿದಿದೆ ಎನ್ನುವುದಾದರೆ ಅದು ಬಿ.ಎಸ್.ಯಡಿಯೂರಪ್ಪನವರು ರಾಜ್ಯದ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಎನ್ನುವುದನ್ನು ಶಿಕ್ಷಕರುಗಳಿಗೆ ನೆನಪಿಸಿದರು.
ಇದನ್ನೂ ಓದಿ: ಮೈದುಂಬಿ ಹರಿಯುತ್ತಿದೆ ವೇದಾವತಿ | ರೈತರ ಮೊಗದಲ್ಲಿ ಸಂತಸ
ಸದನದಲ್ಲಿ ಶಿಕ್ಷಕರುಗಳ ಬೇಡಿಕೆ, ಸಮಸ್ಯೆಗಳ ಬಗ್ಗೆ ಹಿಂದಿನಿಂದಲೂ ಜಗಳವಾಡುತ್ತಿದ್ದೇವೆ. ಶಿಕ್ಷಣ ವ್ಯವಸ್ಥೆಯನ್ನು ಹೊಸ ಉತ್ತುಂಗಕ್ಕೆ ತೆಗೆದುಕೊಂಡು ಹೋಗಬೇಕಾಗಿರುವುದರಿಂದ ಮುಂದಿನ ತಿಂಗಳು ಮೂರನೆ ತಾರೀಖು ನಡೆಯುವ ಚುನಾವಣೆಯಲ್ಲಿ ವೈ.ಎ.ನಾರಾಯಣಸ್ವಾಮಿರವರನ್ನು ಗೆಲ್ಲಿಸಿ. ಆತ್ಮವಿಶ್ವಾಸದಿಂದ ಪರೀಕ್ಷೆಗಳನ್ನು ಎದುರಿಸಿ ಶಿಕ್ಷಕರುಗಳಾಗಿ ಎಂದು ತಿಳಿಸಿದರು.
ಈ ವೇಳೆ ಬಾಪೂಜಿ ಶಿಕ್ಷಣ ಮಹಾವಿದ್ಯಾಲಯದ ಕಾರ್ಯದರ್ಶಿ ಕೆ.ಎಂ.ವೀರೇಶ್, ಬಿಜೆಪಿ ಜಿಲ್ಲಾಧ್ಯಕ್ಷ ಎ.ಮುರಳಿ, ಗ್ರಾಮಾಂತರ ಮಂಡಲ ಅಧ್ಯಕ್ಷ ಕಲ್ಲೇಶಯ್ಯ, ಶಿಕ್ಷಣ ಜಯಣ್ಣ,ಬಾಪೂಜಿ ಶಿಕ್ಷಣ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಜಯಲಕ್ಷ್ಮಿ ಸೇರಿದಂತೆ ಬಿಜೆಪಿ ಕಾರ್ಯಕರ್ತರು, ಶಿಕ್ಷಕರು ಉಪಸ್ಥಿತರಿದ್ದರು.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

