
CHITRADURGA NEWS | 21 DECEMBER 2024
ಚಿತ್ರದುರ್ಗ: ನೋಡು ನೋಡುತ್ತಲೇ ಬಸ್ಸೊಂದು ನಡು ರಸ್ತೆಯಲ್ಲೇ ಧಗ ಧಗನೇ ಹೊತ್ತಿ ಉರಿದ ಘಟನೆ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
ಜಿಲ್ಲೆಯ ಹಿರಿಯೂರು ಬಳಿಯಿರುವ ಗುಯಿಲಾಳು ಟೋಲ್ ಬಳಿ ಖಾಸಗಿ ಸಂಸ್ಥೆಗೆ ಸೇರಿದ ಬಸ್ಸೊಂದು ಟೈಯರ್ ಬ್ಲಾಸ್ಟ್ನಿಂದಾಗಿ ಬೆಂಕಿ ಕಾಣಿಸಿಕೊಂಡು ಕ್ಷಣ ಮಾತ್ರದಲ್ಲಿ ಧಗಧಗಿಸಿದೆ.
ಇದನ್ನೂ ಓದಿ: ನಿಮ್ಮ ಕಷ್ಟ ಕಾಲದಲ್ಲಿ ಜೊತೆಗಿದ್ದು ಋಣ ತೀರಿಸುತ್ತೇನೆ | ಕಾರ್ಯಕರ್ತರಿಗೆ ಸಿ.ಟಿ.ರವಿ
ಬೆಂಕಿಯ ಕೆನ್ನಾಲಿಗೆ ಮುಗಿಲು ಮುಟ್ಟಿದೆ. ದಾವಣಗೆರೆ ಕಡೆಯಿಂದ ಬೆಂಗಳೂರು ಕಡೆಗೆ ತೆರಳುತ್ತಿದ್ದ ಖಾಸಗಿ ಬಸ್ ಬೆಂಕಿಗೆ ಆಹುತಿಯಾಗಿದೆ.
ಬಸ್ಸಿನಲ್ಲಿ ಸುಮಾರು 30 ಜನ ಪ್ರಯಾಣಿಸುತ್ತಿದ್ದು, ಬೆಂಕಿ ಕಾಣಿಸಿಕೊಂಡ ತಕ್ಷಣ ಎಲ್ಲರನ್ನೂ ಕೆಳಗೆ ಇಳಿಸಲಾಗಿದೆ. ಅದೃಷ್ಟವಶಾತ್ ಯಾರಿಗೂ ತೊಂದರೆಯಾಗಿಲ್ಲ.
ಇದನ್ನೂ ಓದಿ: ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಕೊಲೆ
ಐಮಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
