CHITRADURGA NEWS | 31 MARCH 2024
ಚಿತ್ರದುರ್ಗ: ನೀರಾವರಿ ಇಲಾಖೆ ನಿವೃತ್ತ ನೌಕರ ಹೊಳಲ್ಕೆರೆ ತಾಲೂಕು ತಾಳ್ಯದ ಟಿ.ಕೆ.ಗಂಗಾಧರಪ್ಪ(74) ಇಂದು(ಭಾನುವಾರ) ಮಧ್ಯಾಹ್ನ ಹೃದಯಾಘಾತದಿಂದ ನಿಧನರಾಗಿದ್ದಾರೆ.
ನೀರಾವರಿ ಇಲಾಖೆಯಲ್ಲಿ ಸ್ಟೋರ್ ಕೀಪರ್ ಹುದ್ದೆಯಲ್ಲಿದ್ದ ಗಂಗಾಧರಪ್ಪ, ದಾವಣಗೆರೆ, ಮಲೆಬೆನ್ನೂರು, ರಾಯಚೂರು ಜಿಲ್ಲೆಗಳಲ್ಲಿ ಸೇವೆ ಸಲ್ಲಿಸಿದ್ದರು.

ನೌಕರಿಗೆ ಸ್ವಯಂ ನಿವೃತ್ತಿ ಪಡೆದ ನಂತರ ಕುಟುಂಬದೊಂದಿಗೆ ತಾಳ್ಯದಲ್ಲಿ ನೆಲೆಸಿ ಕೃಷಿ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿದ್ದರು.
ಮೃತರು ಉದಯವಾಣಿ ಜಾಹೀರಾತು ವಿಭಾಗದ ಪ್ರತಿನಿಧಿ ಶ್ರೀನಿವಾಸ್ ಸೇರಿದಂತೆ ಪತ್ನಿ, ಸಹೋಧರರು, ಬಂಧುಗಳು, ಮೊಮ್ಮಕ್ಕಳನ್ನು ಅಗಲಿದ್ದಾರೆ.
ಸ್ವಗ್ರಾಮ ತಾಳ್ಯದ ತೋಟದಲ್ಲಿ ಏ.1 ಸೋಮವಾರ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail
chitradurganews23@gmail.com
» Whatsapp Number
