By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Reading: ರೈತರ ಗಮನಕ್ಕೆ…ಬೋರ್‌ವೆಲ್‌ ಪ್ರತಿ ಅಡಿಗೆ ರೂ.105 ಫಿಕ್ಸ್‌ | ಕೃಷಿ ಇಲಾಖೆ ಜಂಟಿ ನಿರ್ದೇಶಕ ಡಾ.ಬಿ.ಮಂಜುನಾಥ್
Share
Font ResizerAa
Chitradurga News-Kannada NewsChitradurga News-Kannada News
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2022 Foxiz News Network. Ruby Design Company. All Rights Reserved.

Home » ರೈತರ ಗಮನಕ್ಕೆ…ಬೋರ್‌ವೆಲ್‌ ಪ್ರತಿ ಅಡಿಗೆ ರೂ.105 ಫಿಕ್ಸ್‌ | ಕೃಷಿ ಇಲಾಖೆ ಜಂಟಿ ನಿರ್ದೇಶಕ ಡಾ.ಬಿ.ಮಂಜುನಾಥ್

ಮುಖ್ಯ ಸುದ್ದಿ

ರೈತರ ಗಮನಕ್ಕೆ…ಬೋರ್‌ವೆಲ್‌ ಪ್ರತಿ ಅಡಿಗೆ ರೂ.105 ಫಿಕ್ಸ್‌ | ಕೃಷಿ ಇಲಾಖೆ ಜಂಟಿ ನಿರ್ದೇಶಕ ಡಾ.ಬಿ.ಮಂಜುನಾಥ್

News Desk Chitradurga News
Last updated: 22 March 2024 09:46
News Desk Chitradurga News
1 year ago
Share
SHARE
https://chat.whatsapp.com/Jhg5KALiCFpDwME3sTUl7x

CHITRADURGA NEWS | 22 MARCH 2024
ಚಿತ್ರದುರ್ಗ: ಬರದ ಸಂಕಷ್ಟದಲ್ಲಿದ್ದ ರೈತರನ್ನು ಬೋರ್‌ವೆಲ್‌ ದರ ಮತ್ತಷ್ಟು ಸಮಸ್ಯೆಗೆ ಸಿಲುಕಿಸಿತ್ತು. ಆದರೆ ಜಿಲ್ಲಾಡಳಿತ ಮಧ್ಯ ಪ್ರವೇಶಿಸಿ ತೆಗೆದುಕೊಂಡ ನಿರ್ಧಾರ ಅನ್ನದಾತರಿಗೆ ನೆಮ್ಮದಿ ತಂದಿದೆ.

ಹಿರಿಯೂರು ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ತಾಲ್ಲೂಕು ಮಟ್ಟದ ದರ ನಿಗದಿ ಸಭೆಯಲ್ಲಿ 300 ಅಡಿಯವರೆಗೆ ಪ್ರತಿ ಅಡಿಗೆ 105 ರೂಪಾಯಿ ದರ ನಿಗಧಿಗೊಳಿಸಲಾಗಿದೆ.

ಕ್ಲಿಕ್ ಮಾಡಿ ಓದಿ: ಚಳ್ಳಕೆರೆ ATR ನಲ್ಲಿ ಇಸ್ರೋ ಮಹತ್ವದ ಸಾಧನೆ | ಮರುಬಳಕೆಯ ರಾಕೇಟ್ ಪುಷ್ಪಕ್ ಯಶಸ್ವಿ ಲ್ಯಾಂಡಿಂಗ್

ಕೊಳವೆಬಾವಿ ಕೊರೆಯಲು 300 ಅಡಿಯವರೆಗೆ ಪ್ರತಿ ಅಡಿಗೆ ₹ 105, 300 ರಿಂದ 400 ಅಡಿಯವರೆಗೆ ಪ್ರತಿ ಅಡಿಗೆ ₹ 5, ಹಾಗೂ 400 ರಿಂದ 500 ಅಡಿವರೆಗೆ ಪ್ರತಿ ಅಡಿಗೆ ₹ 8 ಹೆಚ್ಚು ದರ ನಿಗದಿಪಡಿಸಲಾಗಿದೆ. 500 ಅಡಿ ನಂತರದ ಕೊಳವೆ ಬಾವಿ ಕೊರೆಯಲು ಜಿಲ್ಲಾಧಿಕಾರಿ ನೇತೃತ್ವದಲ್ಲಿ ತೀರ್ಮಾನ ಕೈಗೊಳ್ಳಲಾಗುತ್ತದೆ. 500 ಅಡಿಗೂ ಹೆಚ್ಚು ಆಳಕ್ಕೆ ಕೊಳವೆ ಬಾವಿ ಕೊರೆಸಿದಲ್ಲಿ ಏಜೆನ್ಸಿಯವರು ಯಾವುದೇ ರೀತಿಯ ಸಾಗಣಿಕೆ ವೆಚ್ಚವನ್ನು ಭರಿಸತಕ್ಕದ್ದಲ್ಲ ಎಂದು ಸಭೆಯಲ್ಲಿ ನಿರ್ಣಯಿಸಲಾಯಿತು.

ಕ್ಲಿಕ್ ಮಾಡಿ ಓದಿ: ಒಂದೇ ದಿನಕ್ಕೆ ಲಕ್ಷಾಂತರ ಹಣ ಸೀಜ್‌ | ಚೆಕ್‌ಪೋಸ್ಟ್‌ಗಳಲ್ಲಿ ಪೊಲೀಸ್‌ ಕಣ್ಗಾವಲು

ಮಳೆಯ ಕೊರತೆಯಿಂದ ಅಂತರ್ಜಲ ಕುಸಿದಿದ್ದು, ಕೊಳವೆ ಬಾವಿಗಳು ಬತ್ತುತ್ತಿರುವುದನ್ನು ಮನಗಂಡಿರುವ ಕೊಳವೆಬಾವಿ ಕೊರೆಯುವ ಯಂತ್ರಗಳ ಮಾಲೀಕರು ದರವನ್ನು ಅವೈಜ್ಞಾನಿಕವಾಗಿ ಹೆಚ್ಚಿಸಿದ್ದರು. ರೈತರನ್ನು ಸುಲಿಗೆ ಮಾಡುತ್ತಿದ್ದಾರೆ ಎಂದು ನೂರಾರು ರೈತರು ಆರೋಪ ಮಾಡಿದ್ದ ಹಿನ್ನೆಲೆಯಲ್ಲಿ ಕೃಷಿ ಇಲಾಖೆ ಜಂಟಿ ನಿರ್ದೇಶಕ ಡಾ. ಬಿ. ಮಂಜುನಾಥ್ ಅಧ್ಯಕ್ಷತೆಯಲ್ಲಿ ನಡೆದ ರೈತಸಂಘದ ಪದಾಧಿಕಾರಿಗಳು, ಬೋರ್ ವೆಲ್ ಮಾಲೀಕರ ಸಭೆಯಲ್ಲಿ ದರ ಹೆಚ್ಚಳದ ಬಗ್ಗೆ ಚರ್ಚೆ ನಡೆಸಲಾಯಿತು.

ಕ್ಲಿಕ್ ಮಾಡಿ ಓದಿ: ರಾಮನಗರದಲ್ಲಿ ಅಧಿಕಾರಿಗಳ ವಶಕ್ಕೆ ಮಂಕಿ ಮ್ಯಾನ್‌ ಜ್ಯೋತಿರಾಜ್‌

ರಿಗ್‌ ಯಂತ್ರದವರು ವಿಫಲ ಕೊಳವೆ ಬಾವಿಗಳನ್ನು ಕಡ್ಡಾಯವಾಗಿ ಮತ್ತು ಕ್ರಮಬದ್ಧವಾಗಿ ಮುಚ್ಚಬೇಕು. ಯಾವುದೇ ಅವಘಡಗಳಿಗೆ ಅವಕಾಶ ಕೊಡಬಾರದು ಎಂದು ಸಭೆಯಲ್ಲಿ ಎಚ್ಚರಿಸಲಾಯಿತು.

ತಹಶೀಲ್ದಾರ್‌ ರಾಜೇಶ್‌ ಕುಮಾರ್, ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಎಂ.ವಿ.ಮಂಜುನಾಥ್‌, ರೈತಸಂಘದ ಕೆ.ಸಿ.ಹೊರಕೇರಪ್ಪ, ಬಿ.ಒ.ಶಿವಕುಮಾರ್, ಕೆ.ಟಿ.ತಿಪ್ಪೇಸ್ವಾಮಿ, ಆಲೂರು ಸಿದ್ದರಾಮಣ್ಣ ಹಾಗೂ ಬೋರ್ ವೆಲ್ ಮಾಲೀಕರು ಹಾಜರಿದ್ದರು.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

TAGGED:Attention FarmersBorewellDepartment of AgricultureJoint DirectorPratiಕೃಷಿ ಇಲಾಖೆಜಂಟಿ ನಿರ್ದೇಶಕಪ್ರತಿ ಅಡಿಬೋರ್‌ವೆಲ್‌ರೈತರ ಗಮನಕ್ಕೆ
Share This Article
Facebook Email Print
Previous Article ಮರುಬಳಕೆಯ ರಾಕೇಟ್ ಪುಷ್ಪಕ್ ಚಳ್ಳಕೆರೆ ATRನಲ್ಲಿ ಇಸ್ರೋ ಮಹತ್ವದ ಸಾಧನೆ | ಮರುಬಳಕೆಯ ರಾಕೇಟ್ ಪುಷ್ಪಕ್ ಯಶಸ್ವಿ ಲ್ಯಾಂಡಿಂಗ್
Next Article ನಾಯಕನಹಟ್ಟಿ ರಥಕ್ಕೆ ₹ 2.5 ಕೋಟಿ ವಿಮೆ | ವಿಮಾ ಪಾಲಿಸಿ ಹಸ್ತಾಂತರ
Leave a Comment

Leave a Reply Cancel reply

Your email address will not be published. Required fields are marked *

Gavayi smaranothsava
ಶಾರದಮ್ಮ ರುದ್ರಪ್ಪ ಕಲ್ಯಾಣ ಮಂಟಪದಲ್ಲಿ ಗಾನಯೋಗಿಗಳ ಪುಣ್ಯ ಸ್ಮರಣೆ | ಸಾಧಕರಿಗೆ ಸನ್ಮಾನ
ಮುಖ್ಯ ಸುದ್ದಿ
ಮುರುಘಾಮಠದಲ್ಲಿ ಜಾಗತಿಕ ಲಿಂಗಾಯತ ಮಹಾಸಭಾದ ಮೊದಲನೇ ಕಾರ್ಯಕಾರಿ ಸಭೆ | ಮಠಾಧೀಶರು ಸೇರಿದಂತೆ ಗಣ್ಯರು ಭಾಗೀ
ಮುಖ್ಯ ಸುದ್ದಿ
ಉಸಿರಾಟದ ಕಾಯಿಲೆಗಳಿಗೆ ಈ ಎಲೆಯನ್ನು ಬಳಸಿ
Life Style
ಹೃದಯಾಘಾತದ ನಂತರ ಈ ತಪ್ಪುಗಳನ್ನು ಮಾಡಬೇಡಿ
Life Style
© Chitradurga News. Ruby Design Company. All Rights Reserved.

Chitradurga News App

Install
Welcome Back!

Sign in to your account

Username or Email Address
Password

Lost your password?

Not a member? Sign Up