By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Reading: ತಂಬಾಕು ಸೇವನೆ | ವಿಶ್ವದಾದ್ಯಂತ ಪ್ರತಿ ವರ್ಷ 60 ಲಕ್ಷ ಸಾವು | ಡಾ.ಶ್ರೀನಿವಾಸ
Share
Font ResizerAa
Chitradurga News-Kannada NewsChitradurga News-Kannada News
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2022 Foxiz News Network. Ruby Design Company. All Rights Reserved.

Home » ತಂಬಾಕು ಸೇವನೆ | ವಿಶ್ವದಾದ್ಯಂತ ಪ್ರತಿ ವರ್ಷ 60 ಲಕ್ಷ ಸಾವು | ಡಾ.ಶ್ರೀನಿವಾಸ

ಮುಖ್ಯ ಸುದ್ದಿ

ತಂಬಾಕು ಸೇವನೆ | ವಿಶ್ವದಾದ್ಯಂತ ಪ್ರತಿ ವರ್ಷ 60 ಲಕ್ಷ ಸಾವು | ಡಾ.ಶ್ರೀನಿವಾಸ

News Desk Chitradurga News
Last updated: 5 June 2025 19:40
News Desk Chitradurga News
1 week ago
Share
ತಂಬಾಕು ನಿಯಂತ್ರಣ ಕುರಿತು ಜಾಗೃತಿ ಕಾರ್ಯಕ್ರಮ
SHARE
https://chat.whatsapp.com/Jhg5KALiCFpDwME3sTUl7x

CHITRADURGA NEWS | 05 JUNE 2025

ಚಿತ್ರದುರ್ಗ: ತಂಬಾಕು ಸೇವನೆಯಿಂದ ವಿಶ್ವದಾದ್ಯಂತ ಪ್ರತಿ ವರ್ಷ 60 ಲಕ್ಷಕ್ಕಿಂತ ಹೆಚ್ಚು ಮಂದಿ ಸಾವನ್ನಪ್ಪುತ್ತಿದ್ದಾರೆಂದು ಎಂದು ಡಾ.ಶ್ರೀನಿವಾಸ ಹೇಳಿದರು.

Also Read: ದ್ವಿತೀಯ PUC ಪರೀಕ್ಷೆ-3 ಜೂನ್ 9 ರಿಂದ 20ರವರೆಗೆ | ಜಿಲ್ಲೆಯ 06 ಪರೀಕ್ಷಾ ಕೇಂದ್ರಗಳಲ್ಲಿ 8658 ವಿದ್ಯಾರ್ಥಿಗಳು

ಜಿ.ಆರ್.ಹಳ್ಳಿ ಸ್ನಾತಕೋತ್ತರ ಕೇಂದ್ರದ ಜ್ಞಾನ ಗಂಗೋತ್ರಿಯ ಆವರಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ಮತ್ತು ಕ್ಷಯರೋಗ ನಿಯಂತ್ರಣ ಕಛೇರಿ ಹಾಗೂ ಜಿಲ್ಲಾರಕ್ತ ನಿಧಿ ಮತ್ತು ರಾಷ್ಟ್ರೀಯ ಸೇವಾ ಯೋಜನೆ ಘಟಕ 1 ಮತ್ತು 2 ಇವರ ಸಹಯೋಗದೊಂದಲ್ಲಿ ಆಯೋಜಿಸಲಾದ ಮಲೇರಿಯಾ ಮಾಸಚರಣೆ, ಕೋವಿಡ್-19 ಬಗ್ಗೆ ಅರಿವು, ರಕ್ತದಾನ ಶಿಬಿರ ಮತ್ತು ತಂಬಾಕು ನಿಯಂತ್ರಣ ಕುರಿತು, ಹಾಗೂ ಜಾಗೃತಿ ಮತು ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ತಂಬಾಕು ಸೇವನೆ ಆರೋಗ್ಯಕ್ಕೆ ಹಾನಿಕಾರಕ, ತಂಬಾಕಿನಲ್ಲಿರುವ ನಿಕೋಟಿನ್ ಎಂಬ ಮಾದಕ ವಸ್ತು ವ್ಯಸನವಾಗಿಸುತ್ತದೆ. ಎಂಬ ಕಟು ಸತ್ಯಅರ್ಥ ಮಾಡಿಕೊಳ್ಳಬೇಕು. ಹದಿ ಹರೆಯದವರು ತಂಬಾಕು ಉತ್ಪನ್ನಗಳನ್ನು ಸೇವನೆ ಮಾಡಲು ನೇರ ಹಾಗೂ ಪರೋಕ್ಷವಾಗಿ ಜಾಹಿರಾತುಗಳು ಉತ್ತೇಜನ ನೀಡುತ್ತವೆ.

ಸಾಮಾನ್ಯವಾಗಿ 18 ವಯಸ್ಸಿನಿಂದ ಯುವಕರು ತಂಬಾಕು ಉತ್ಪನ್ನ ಸೇವನೆಯನ್ನು ಆರಂಭಿಸುವುದಾಗಿ ಅಂದಾಜಿಸಲಾಗಿದೆ. ಧೂಮಪಾನ ಮಾಡುವುದರಿಂದ ಆರೋಗ್ಯದ ಮೇಲೆ ದುಷ್ಪರಿಣಾಮಕ ಬೀರುವುದರೊಂದಿಗೆ ಕ್ಯಾನ್ಸರ್ , ಹೃದಯ ಶ್ವಾಸ ಸಂಬಂಧಿ ಇತ್ಯಾದಿ ಕಾಯಿಲೆಗಳು ಬರುತ್ತವೆ ಎಂದರು.

Also Read: ಇಂದಿರಾ ಕ್ಯಾಂಟೀನ್‌ ಊಟದ ಮೆನು ವ್ಯತ್ಯಾಸ | ಹೆಚ್ಚುವರಿ ಹಣ | ಪರಿಶೀಲಿಸಿ ಅಮಾನತು ಸಚಿವ ರಹೀಂ ಖಾನ್‌

ಡಾ.ನಂದಿನಿಯವರು ಮಾತಾನಾಡಿ ಮಲೇರಿಯ ನಿಯಂತ್ರಣದಲ್ಲಿ ಸಮುದಾಯದ ಸಹಭಾಗಿತ್ವ ಅತೀ ಮುಖ್ಯವಾಗಿರುತ್ತದೆಯೆಂದು ತಿಳಿಸಿದರು. ಯಾವುದೇ ಜ್ವರ ಮಲೇರಿಯ ಆಗಿರಬಹುದು ಶೀಘ್ರ ಪತ್ತೆ ಮಾಡುವುದರಿಂದ ಸಂಪೂರ್ಣ ಚಿಕಿತ್ಸೆಯಿಂದ ತಡೆಯಬಹುದು.

ಸೊಳ್ಳೆಗಳ ನಿಯಂತ್ರಣ ಕ್ರಮಗಳ, ಜೈವಿಕ ಪರಿಸರ ನಿಯಂತ್ರಣ ಕ್ರಮಕೈಗೊಳ್ಳುವುದು ಸ್ವಯಂರಕ್ಷಣಾ ವಿಧಾನಗಳನ್ನು ಬಳಸುವುದು ಪರಿಸರ ನೈರ್ಮಲ್ಯ ಕಾಪಾಡುವುದು ಗ್ರಾಮ ಪಂಚಾಯಿತಿ ಸದಸ್ಯರು, ಸ್ಥಳಿಯ ಮುಖಂಡರು ಆರೋಗ್ಯ ಕಾರ್ಯಕರ್ತರೊಡನೆ ಸಹಕರಿಸಿ, ಮಲೇರಿಯಾ ನಿಯಂತ್ರಣ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಭಾಗವಹಿಸಿ ಮಲೇರಿಯಾ ನಿಯಂತ್ರಣ ಖಂಡಿತ ಸಾಧ್ಯವೆಂದು ತಿಳಿಸಿದರು.

ಡಾ. ರವೀಂದ್ರಎಸ್ ಪಿ ಇವರು ಮಾತಾನಾಡಿ, ಯಾವುದೇ ಜ್ವರ ಮತ್ತಿತರೆ ಖಾಯಿಲೆಗಳನ್ನು ಶೀಘ್ರದಲ್ಲಿ ಪತ್ತೆ ಮಾಡಿ ನಿಯಂತ್ರಣ ಮಾಡಿ ಆರೋಗ್ಯವನ್ನು ಕಾಪಾಡಿಕೊಳ್ಳುವಂತೆ ಹಾಗೂ ಉತ್ತಮ ಆಹಾರ ಸೇವನೆ, ವ್ಯಾಯಾಮಗಳಿಂದ ಆರೋಗ್ಯವನ್ನು ಕಾಪಾಡಿಕೊಳ್ಳಬಹುದೆಂದು ತಿಳಿಸಿದರು. ಕೋವಿಡ್ -19 ನಿಯಂತ್ರಣಕ್ಕಾಗಿ ಮಾಸ್ಕ್, ಕೈಗಳನ್ನು ಶುಚಿಯಾಗಿಟ್ಟುಕೊಳ್ಳವುದು ಸ್ಯಾನಿಟೈಜರ್ ಬಳಸುವುದು ಇದರಿಂದಾಗಿ ನಿಯಂತ್ರಣ ಮಾಡಬಹುದೆಂದು ತಿಳಿಸಿದರು.

ಕನ್ನಡ ಅಧ್ಯಯನ ವಿಭಾಗದ ಡಾ.ವಿಜಯಕುಮಾರ್.ಹೆಚ್.ಜಿ ಅಧ್ಯಕ್ಷೀಯ ಭಾಷಣದಲ್ಲಿ ಸ್ನಾತಕೋತ್ತರ ಕೇಂದ್ರದ ಎಲ್ಲಾ ವಿದ್ಯಾರ್ಥಿಗಳಿಗೆ, ಆರೋಗ್ಯವನ್ನು ಕಾಪಾಡಿಕೊಳ್ಳುವಲ್ಲಿ ಗಮನ ಹರಿಸಬೇಕು. ಕುಟುಂಬದ ಸದಸ್ಯರ ಆರೋಗ್ಯ ಕಾಪಾಡುವಲ್ಲಿ ಮಹಿಳೆಯರಿಗೆ ಹೆಚ್ಚಿನ ಜವಾಬ್ದಾರಿಯು ಇರುತ್ತದೆ ತಿಳಿಸಿದರು.

Also Read: ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್ ಎಷ್ಟಿದೆ?

ಕಾರ್ಯಕ್ರಮದಲ್ಲಿ ರಕ್ತದಾನ ಶಿಬಿರ ಆಯೋಜಿಸಲಾಗಿತ್ತು. ಸ್ನಾತಕೋತ್ತರ ಕೇಂದ್ರದ ಎಲ್ಲಾ ಅಧ್ಯಯನ ವಿಭಾಗದ ಎನ್‌ಎಸ್‌ಎಸ್ ವಿದ್ಯಾರ್ಥಿ, ವಿದ್ಯಾರ್ಥಿನಿಯರು ರಕ್ತದಾನವನ್ನು ಮಾಡಿದರು.

ರಸಾಯನಶಾಸ್ತ್ರ ಅಧ್ಯಯನ ವಿಭಾಗದ ಡಾ.ರಾಜೇಂದ್ರ ಪ್ರಸಾದ್, ಜಿ ಆರ್ ಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರ ಡಾಗೀತಾಂಜಲಿ, ಎನ್‌ಎಸ್‌ಎಸ್ ಕಾರ್ಯಕ್ರಮಾಧಿಕಾರಿಗಳಾದ ನಿವೇದಿತ.ಬಿ.ಟಿ, ಡಾ.ಸುಂದರಂ ಸೇರಿದಂತೆ ಮತ್ತಿರರು ಉಪಸ್ಥಿತರಿದ್ದರು.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

TAGGED:ChitradurgaChitradurga newsChitradurga UpdatesConsumptioncovidDeadKannada Latest NewsKannada NewsTobaccoworldಕನ್ನಡ ನ್ಯೂಸ್ಕನ್ನಡ ಲೇಟೆಸ್ಟ್ ನ್ಯೂಸ್ಕನ್ನಡ ಸುದ್ದಿಕೋವಿಡ್‌ಚಿತ್ರದುರ್ಗಚಿತ್ರದುರ್ಗ ನ್ಯೂಸ್ತಂಬಾಕುಮೃತವಿಶ್ವಸೇವನೆ
Share This Article
Facebook Email Print
Previous Article ವಿದ್ಯಾರ್ಥಿ ಬಸ್ ಪಾಸ್ ವಿತರಣೆ | ಎಲ್ಲೆಲ್ಲಿ ಅರ್ಜಿ ಸಲ್ಲಿಸಬಹುದು, ಇಲ್ಲಿದೆ ಮಾಹಿತಿ…
Next Article ಸಾಹಿತ್ಯ ಕೃತಿಗಳಿಗೆ ಬಹುಮಾನ | ಅರ್ಜಿ ಅಹ್ವಾನ
Leave a Comment

Leave a Reply Cancel reply

Your email address will not be published. Required fields are marked *

today bhavishya
Astrology: ದಿನ ಭವಿಷ್ಯ | 13 ಜೂನ್ 2025 | ಉದ್ಯೋಗಗಳಲ್ಲಿ ಅನುಕೂಲಕರ ವಾತಾವರಣ, ಆರೋಗ್ಯದ ವಿಚಾರದಲ್ಲಿ ಎಚ್ಚರಿಕೆ ಅಗತ್ಯ
Dina Bhavishya
Shivananda patil meating
ಹೊಸದುರ್ಗದಲ್ಲಿ ಗಾರ್ಮೆಂಟ್ಸ್‌ | ಬೆಂಗಳೂರಿನಲ್ಲಿ ಸಭೆ ನಡೆಸಿದ ಸಚಿವ ಶಿವಾನಂದ ಪಾಟೀಲ್‌ | ಜವಳಿ ಪಾರ್ಕ್‌ ಸ್ಥಳ ನಿಗಧಿ
ಹೊಸದುರ್ಗ
ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ | ವಿವಿಧ ಯೋಜನೆಗಳಿಗೆ ಅರ್ಜಿ 
ಮುಖ್ಯ ಸುದ್ದಿ
ಅರ್ಜಿ ಅಹ್ವಾನ
ಹಿರಿಯೂರು ನಗರಸಭೆಯಿಂದ ಆರ್ಥಿಕ ನೆರವು | ಅರ್ಜಿ ಆಹ್ವಾನ
ಮುಖ್ಯ ಸುದ್ದಿ
© Chitradurga News. Ruby Design Company. All Rights Reserved.
Welcome Back!

Sign in to your account

Username or Email Address
Password

Lost your password?

Not a member? Sign Up