By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Reading: ಹೊಸದುರ್ಗ ಬಂದ್‌ | ಇಂದು ಅಂತ್ಯವಲ್ಲ, ಆರಂಭ | ಸದ್ಗುರು ಪ್ರದೀಪ್‌
Share
Font ResizerAa
Chitradurga News-Kannada NewsChitradurga News-Kannada News
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2022 Foxiz News Network. Ruby Design Company. All Rights Reserved.

Home » ಹೊಸದುರ್ಗ ಬಂದ್‌ | ಇಂದು ಅಂತ್ಯವಲ್ಲ, ಆರಂಭ | ಸದ್ಗುರು ಪ್ರದೀಪ್‌

ಹೊಸದುರ್ಗ

ಹೊಸದುರ್ಗ ಬಂದ್‌ | ಇಂದು ಅಂತ್ಯವಲ್ಲ, ಆರಂಭ | ಸದ್ಗುರು ಪ್ರದೀಪ್‌

chitradurganews.com
Last updated: 28 June 2025 21:19
chitradurganews.com
53 minutes ago
Share
Sadguru Pradeep participate hosadurga bandh
ಹೊಸದುರ್ಗ ಬಂದ್‌ನಲ್ಲಿ ಭಾಗವಹಿಸಿದ್ದ ಸದ್ಗುರು ಸಂಸ್ಥೆಯ ಪ್ರದೀಪ್
SHARE
https://chat.whatsapp.com/Jhg5KALiCFpDwME3sTUl7x

CHITRADURGA NEWS | 28 JUNE 2029

ಹೊಸದುರ್ಗ: ಬಯಲು ಸೀಮೆ ಎಂಬ ಹೆಸರು ಹೊಂದಿರುವ ಹೊಸದುರ್ಗ ತಾಲೂಕು ಮಲೆನಾಡು ಆಗುವವರೆಗೆ ನಮ್ಮ ಹೋರಾಟ ಇರಬೇಕು ಎಂದು ಉದ್ಯಮಿ, ಸದ್ಗುರು ಆಯುರ್ವೇದ ಸೋಪ್‌ ಸಂಸ್ಥೆಯ ಡಿ.ಎಸ್‌.ಪ್ರದೀಪ್‌ ಹೇಳಿದರು.

ಭದ್ರಾ ಜಲಾಶಯದಿಂದ ಹೊಸದುರ್ಗ ಪಟ್ಟಣಕ್ಕೆ ಕುಡಿಯುವ ನೀರು ಸರಬರಾಜು ಕಾಮಗಾರಿಗೆ ದಾವಣಗೆರೆ ರೈತರ ಅಡ್ಡಿ ಹಿನ್ನೆಲೆಯಲ್ಲಿ ಕರೆ ನೀಡಿದ್ದ ಬಂದ್‌ನಲ್ಲಿ ಭಾಗವಹಿಸಿ ಮಾತನಾಡಿದರು.

ಇದನ್ನೂ ಓದಿ: ಹೊಸದುರ್ಗ ಬಂದ್ | ಶಾಸಕ ಬಿ.ಜಿ.ಗೋವಿಂದಪ್ಪ ನೇತೃತ್ವದಲ್ಲಿ ಹೋರಾಟ

ನೀರು ಪಡೆಯಲು ನಮ್ಮ ಹೋರಾಟ ನಿರಂತರವಾಗಿರುತ್ತದೆ. ಇದು ಅಂತ್ಯವಲ್ಲ, ಆರಂಭ ಎಂದ ಅವರು, ನಮಗೆ ನೀರು ಬರಲೇಬೇಕು. ಮುಂದಿನ ಪೀಳಿಗೆಗೆ ಹೊಸದುರ್ಗ ಮಲೆನಾಡಾಗಬೇಕು ಎಂದರು.

ದಾವಣಗೆರೆ, ಶಿವಮೊಗ್ಗ ಜಿಲ್ಲೆಗಳಲ್ಲೂ ಅಡಿಕೆ ಬೆಳೆಯುತ್ತಾರೆ. ಸಾಕಷ್ಟು ನೀರಿದೆ. ಸುಲಭವಾಗಿ ಬೆಳೆಯುತ್ತಾರೆ. ನಮ್ಮ ರೈತರು ಬೋರ್‌ವೆಲ್‌ಗಳಲ್ಲಿ ಬಹಳ ಕಷ್ಟಪಟ್ಟು ಬೆಳೆ ಬೆಳೆಯುತ್ತಾರೆ. ಆ ಭಾಗದಲ್ಲಿ ಮೂರಂತಸ್ಥಿನ ಕಟ್ಟಡಗಳು ಕಾಣಿಸುತ್ತವೆ. ನಮ್ಮ ಜನ ಇನ್ನೂ ಗುಡಿಸಲಿನಲ್ಲಿದ್ದಾರೆ ಎಂದು ಹೇಳಿದರು.

ಇದನ್ನೂ ಓದಿ: ಹೊಸದುರ್ಗ ಸ್ಥಿತಿ ಸಮುದ್ರದ ನೆಂಟಸ್ಥನ, ಉಪ್ಪಿಗೆ ಬರ | ಕೆ.ಎಸ್.ನವೀನ್

ಹಿರಿಯ ಪತ್ರಕರ್ತ ಚಿಕ್ಕಪ್ಪನಹಳ್ಳಿ ಷಣ್ಮುಖಪ್ಪ ಮಾತನಾಡಿ, ಹೊಸದುರ್ಗ ತಾಲೂಕಿನ ಒಂದು ಟಿಎಂಸಿ ಕುಡಿಯುವ ನೀರಿನ ಯೋಜನೆಗೆ ಸರ್ಕಾರ ಅಡ್ಡಿ ಮಾಡಿಲ್ಲ. ಅಡ್ಡಿಯಾಗಿರುವುದು ದಾವಣಗೆರೆಯ ಕೆಲವರು ಮಾತ್ರ. ಇದು ಕಿಡಿಗೇಡಿತನ ಎಂದರು.

ಕುಡಿಯುವ ಉದ್ದೇಶಕ್ಕೆ ಕಾಲುವೆಯಲ್ಲಿನ ಒಂದು ಬೊಗಸೆ ನೀರು ತೆಗೆದುಕೊಂಡರೆ ಅವರಿಗೆ ಯಾವ ನಷ್ಟವೂ ಆಗುವುದಿಲ್ಲ. ಶಾಸಕರಾದ ಬಿ.ಜಿ.ಗೋವಿಂದಪ್ಪ ವಿಶೇಷ ಆಸಕ್ತಿ ವಹಿಸಿ ಈ ಯೋಜನೆ ಜಾರಿ ಮಾಡಿಸಿದ್ದಾರೆ.

ಇದನ್ನೂ ಓದಿ: ಹೊಸದುರ್ಗ ಬಂದ್ | ನೀರಿಗೆ ಅಡ್ಡಿ ಕಿಡಿಗೇಡಿ ಕೃತ್ಯ | ಎಸ್.ಲಿಂಗಮೂರ್ತಿ

ಹೊಸದುರ್ಗಕ್ಕೆ ಬರುವ 30 ಕ್ಯೂಸೆಕ್‌ ನೀರಿನಿಂದ ದಾವಣಗೆರೆ ಜಿಲ್ಲೆಯ ಕೊನೆ ಭಾಗದ ರೈತರಿಗೆ ನೀರು ತಲುಪುವುದಿಲ್ಲ ಎನ್ನುವ ವಾದದಲ್ಲಿ ಯಾವುದೇ ಹುರುಳಿಲ್ಲ ಎಂದು ಹೇಳಿದರು.

ಮುಖಂಡರಾದ ತುಂಬಿನಕೆರೆ ಬಸವರಾಜ್‌, ಜೆಡಿಎಸ್‌ ತಾಲೂಕು ಅಧ್ಯಕ್ಷ ಗಣೇಶ್‌, ಕಾರೇಹಳ್ಳಿ ಬಸವರಾಜ್‌ ಸೇರಿದಂತೆ ರೈತ ಮುಖಂಡರು, ಕನ್ನಡಪರ ಸಂಘಟನೆಗಳ ಮುಖಂಡರು ಮಾತನಾಡಿದರು.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

TAGGED:BG GovindappaBhadra ReservoirBJPChitradurgacongressDavangereFarmersHosdurga BandhJDSKS NaveenMLAsS. Lingamurthyಎಸ್.ಲಿಂಗಮೂರ್ತಿಕಾಂಗ್ರೆಸ್ಕೆ.ಎಸ್.ನವೀನ್ಚಿತ್ರದುರ್ಗಜೆಡಿಎಸ್ದಾವಣಗೆರೆಬಿ.ಜಿ.ಗೋವಿಂದಪ್ಪಬಿಜೆಪಿಭದ್ರಾ ಜಲಾಶಯರೈತರುಶಾಸಕರುಹೊಸದುರ್ಗ ಬಂದ್‌
Share This Article
Facebook Email Print
Previous Article ಹೊಸದುರ್ಗ ಸ್ಥಿತಿ ಸಮುದ್ರದ ನೆಂಟಸ್ಥನ, ಉಪ್ಪಿಗೆ ಬರ | ಕೆ.ಎಸ್.ನವೀನ್
Leave a Comment

Leave a Reply Cancel reply

Your email address will not be published. Required fields are marked *

ಹೊಸದುರ್ಗ ಸ್ಥಿತಿ ಸಮುದ್ರದ ನೆಂಟಸ್ಥನ, ಉಪ್ಪಿಗೆ ಬರ | ಕೆ.ಎಸ್.ನವೀನ್
ಹೊಸದುರ್ಗ
ಹೊಸದುರ್ಗ ಬಂದ್ | ನೀರಿಗೆ ಅಡ್ಡಿ ಕಿಡಿಗೇಡಿ ಕೃತ್ಯ | ಎಸ್.ಲಿಂಗಮೂರ್ತಿ
ಹೊಸದುರ್ಗ
ಹೊಸದುರ್ಗ ಬಂದ್ | ಶಾಸಕ ಬಿ.ಜಿ.ಗೋವಿಂದಪ್ಪ ನೇತೃತ್ವದಲ್ಲಿ ಹೋರಾಟ
ಹೊಸದುರ್ಗ
APMC: ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್ ಎಷ್ಟಿದೆ?
ಮಾರುಕಟ್ಟೆ ಧಾರಣೆ
© Chitradurga News. Ruby Design Company. All Rights Reserved.

Chitradurga News App

Install
Welcome Back!

Sign in to your account

Username or Email Address
Password

Lost your password?

Not a member? Sign Up