By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Reading: TP officer suspended: ತಾಲ್ಲೂಕು ಪಂಚಾಯಿತಿ ಅಧಿಕಾರಿ ಅಮಾನತು | ಕರ್ತವ್ಯಕ್ಕೆ ಅನಧಿಕೃತ ಗೈರು
Share
Font ResizerAa
Chitradurga News-Kannada NewsChitradurga News-Kannada News
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2022 Foxiz News Network. Ruby Design Company. All Rights Reserved.

Home » TP officer suspended: ತಾಲ್ಲೂಕು ಪಂಚಾಯಿತಿ ಅಧಿಕಾರಿ ಅಮಾನತು | ಕರ್ತವ್ಯಕ್ಕೆ ಅನಧಿಕೃತ ಗೈರು

ಮೊಳಕಾಳ್ಮೂರು

TP officer suspended: ತಾಲ್ಲೂಕು ಪಂಚಾಯಿತಿ ಅಧಿಕಾರಿ ಅಮಾನತು | ಕರ್ತವ್ಯಕ್ಕೆ ಅನಧಿಕೃತ ಗೈರು

News Desk Chitradurga News
Last updated: 28 September 2024 16:46
News Desk Chitradurga News
9 months ago
Share
suspended
ಸಾಂದರ್ಭಿಕ ಚಿತ್ರ (Representative Image)
SHARE
https://chat.whatsapp.com/Jhg5KALiCFpDwME3sTUl7x

CHITRADURGA NEWS | 28 SEPTEMBER 2024
ಚಿತ್ರದುರ್ಗ: ಕರ್ತವ್ಯಕ್ಕೆ ಅನಧಿಕೃತ ಗೈರು ಹಾಗೂ ಕರ್ತವ್ಯದಲ್ಲಿ ನಿರ್ಲಕ್ಷ್ಯ ತೋರಿದ ಕಾರಣಕ್ಕಾಗಿ ಮೊಳಕಾಲ್ಮುರು ತಾಲ್ಲೂಕು ಪಂಚಾಯಿತಿ ವ್ಯವಸ್ಥಾಪಕ ಅರುಣ್‌ ಕುಮಾರ್‌ ಅವರನ್ನು ಸೇವೆಯಿಂದ ಅಮಾನತುಗೊಳಿಸಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಸ್‌.ಜೆ.ಸೋಮಶೇಖರ್‌ ಆದೇಶಿಸಿದ್ದಾರೆ.

ಮೊಳಕಾಲ್ಮುರು ತಾಲ್ಲೂಕು ಪಂಚಾಯಿತಿ ವ್ಯವಸ್ಥಾಪಕ ಅರುಣ್‌ ಕುಮಾರ್‌ ಅವರು 2024ರ ಆಗಸ್ಟ್‌ 8 ರಿಂದ 13 ರವರೆಗೆ ಅನಧಿಕೃತ ಗೈರು ಹಾಜರಾಗಿದ್ದರು. ಈ ಕುರಿತಂತೆ ನೌಕರರಿಗೆ ಕಾರಣ ಕೇಳಿ ನೋಟೀಸ್‌ ಜಾರಿ ಮಾಡಲಾಗಿತ್ತು.

ಕ್ಲಿಕ್ ಮಾಡಿ ಓದಿ: ಶೋಭಾಯಾತ್ರೆಯಲ್ಲಿ ಖಾಕಿ ಪಡೆ ಹೈ ಆಲರ್ಟ್‌ | ಪ್ರಮುಖ ಸ್ಥಳಗಳಲ್ಲಿ ಡಾಗ್‌ ಸ್ಕ್ವಾಡ್‌ ಪಹರೆ

2024ರ ಆಗಸ್ಟ್‌ 14 ರಿಂದ 21 ರವರೆಗೆ ಮೇಲಾಧಿಕಾರಿಗಳ ಅನುಮತಿ ಪಡೆಯದೇ ಪುನಃ ಕರ್ತವ್ಯಕ್ಕೆ ಗೈರಾಗಿದ್ದರು. ಮೇಲಾಧಿಕಾರಿಗಳ ಅನುಮತಿ ಪಡೆಯದೇ ಕರ್ತವ್ಯಕ್ಕೆ ಗೈರಾಗುವುದರಿಂದ ನೌಕರನ ಮೇಲೆ ಶಿಸ್ತು ಕ್ರಮ ಜರುಗಿಸುವಂತೆ ಮೊಳಕಾಲ್ಮುರು ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಣಾ ಅಧಿಕಾರಿ ವರದಿ ಸಲ್ಲಿಸಿದ್ದರು.

ಕ್ಲಿಕ್ ಮಾಡಿ ಓದಿ: ಶೋಭಾಯಾತ್ರೆಯಲ್ಲಿ ನಟರ ಫ್ಯಾನ್ಸ್‌ಗಳ ಅಬ್ಬರ | ರಾರಾಜಿಸುತ್ತಿವೆ ಕೇಸರಿ ಬಾವುಟ

ಈ ಎಲ್ಲ ಅಂಶಗಳನ್ನು ಪರಿಶೀಲಿಸಿ, ಕೆಸಿಎಸ್‌ (ಸಿಸಿಎ) ನಿಯಮಾವಳಿ-1957ರ ನಿಯಮ-10(1) ರನ್ವಯ ಮೊಳಕಾಲ್ಮುರು ತಾಲ್ಲೂಕು ಪಂಚಾಯಿತಿ ವ್ಯವಸ್ಥಾಪಕ ಅರುಣ್‌ ಕುಮಾರ್ ಅವರ ವಿರುದ್ಧ ಇಲಾಖಾ ವಿಚಾರಣೆಯನ್ನು ಕಾಯ್ದಿರಿಸಿ ತಕ್ಷಣದಿಂದಲೇ ಜಾರಿಗೆ ಬರುವಂತೆ ಸೇವೆಯಿಂದ ಅಮಾನತುಗೊಳಿಸಿದ್ದು, ಅಮಾನತು ಅವಧಿಯಲ್ಲಿ ಪ್ರಾಧಿಕಾರದ ಅನುಮತಿ ಪಡೆಯದೇ ಕೇಂದ್ರಸ್ಥಾನ ಬಿಡುವಂತಿಲ್ಲ ಮತ್ತು ಅನ್ಯ ಉದ್ಯೋಗದಲ್ಲಿ ತೊಡಗುವಂತಿಲ್ಲ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ಶಿಸ್ತು ಪ್ರಾಧಿಕಾರಿ ಎಸ್‌.ಜೆ.ಸೋಮಶೇಖರ್ ಆದೇಶಿಸಿದ್ದಾರೆ.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

TAGGED:AbsentCEODutyMolakalmuruOfficerSuspendedTaluk PanchayatUnauthorizedZilla Panchayatಅಧಿಕಾರಿಅನಧಿಕೃತಅಮಾನತುಕರ್ತವ್ಯಗೈರುಜಿಲ್ಲಾ ಪಂಚಾಯಿತಿತಾಲ್ಲೂಕು ಪಂಚಾಯಿತಿಮೊಳಕಾಲ್ಮುರುಸಿಇಒ
Share This Article
Facebook Email Print
Previous Article Police High Alert Police High Alert: ಶೋಭಾಯಾತ್ರೆಯಲ್ಲಿ ಖಾಕಿ ಪಡೆ ಹೈ ಆಲರ್ಟ್‌ | ಪ್ರಮುಖ ಸ್ಥಳಗಳಲ್ಲಿ ಡಾಗ್‌ ಸ್ಕ್ವಾಡ್‌ ಪಹರೆ
Next Article JAYADEVA SRI Jayadeva Jagadguru: ಜಯದೇವ ಜಗದ್ಗುರು ತೋರಿದ ಹಾದಿಯಲ್ಲಿ ಸಾಗೋಣ | ಡಾ. ಬಸವಕುಮಾರ ಸ್ವಾಮೀಜಿ
Leave a Comment

Leave a Reply Cancel reply

Your email address will not be published. Required fields are marked *

today bhavishya
Astrology: ದಿನ ಭವಿಷ್ಯ | ಜೂನ್ 29 | ಆಕಸ್ಮಿಕ ಧನ ವ್ಯಯದ ಸೂಚನೆ, ಆಸ್ತಿ ವಿಷಯಗಳಲ್ಲಿ ವಿವಾದಗಳು
Dina Bhavishya
ಸೋಲು ಗೆಲುವಿಗಿಂತ ಚುನಾವಣೆಯಲ್ಲಿ ಸ್ಪರ್ಧಿಸುವುದು ಮುಖ್ಯ | ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷ ಮಂಜುನಾಥ್‍ ಗೌಡ
ಮುಖ್ಯ ಸುದ್ದಿ
Sadguru Pradeep participate hosadurga bandh
ಹೊಸದುರ್ಗ ಬಂದ್‌ | ಇಂದು ಅಂತ್ಯವಲ್ಲ, ಆರಂಭ | ಸದ್ಗುರು ಪ್ರದೀಪ್‌
ಹೊಸದುರ್ಗ
ಹೊಸದುರ್ಗ ಸ್ಥಿತಿ ಸಮುದ್ರದ ನೆಂಟಸ್ಥನ, ಉಪ್ಪಿಗೆ ಬರ | ಕೆ.ಎಸ್.ನವೀನ್
ಹೊಸದುರ್ಗ
© Chitradurga News. Ruby Design Company. All Rights Reserved.

Chitradurga News App

Install
Welcome Back!

Sign in to your account

Username or Email Address
Password

Lost your password?

Not a member? Sign Up