
CHITRADURGA NEWS | 23 FEBRUARY 2024
ಚಿತ್ರದುರ್ಗ: ತಾಲ್ಲೂಕಿನ ಗುಡ್ಡದರಂಗವ್ವನಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದ ಸಭಾಂಗಣದಲ್ಲಿ ಶುಕ್ರವಾರ ಸದಸ್ಯರಿಗೆ ಗ್ರಾಮ ಆರೋಗ್ಯ ಸಮಿತಿಗಳ ಸದಸ್ಯರಿಗೆ ತರಬೇತಿ ನೀಡಲಾಯಿತು.
ಜಿಆರ್ ಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಗೀತಾಂಜಲಿ ಮಾತನಾಡಿ, ಅಪೌಷ್ಟಿಕತೆ ಅನಾರೋಗ್ಯಕ್ಕೆ ಮುಖ್ಯ ಕಾರಣವಾಗಿದೆ. ಅಪೌಷ್ಟಿಕತೆಗೆ ಒಳಗಾದ ಜನರು ರೋಗಗಳಿಂದ ಮುಕ್ತವಾಗುವ ಸಾಮರ್ಥ್ಯ ಕಳೆದುಕೊಂಡಿರುವ ಕಾರಣಗಳಿಂದ ಸುಲಭವಾಗಿ ಅನಾರೋಗ್ಯಕ್ಕೆ ತುತ್ತಾಗುತ್ತಾರೆ ಎಂದರು.
ಇದನ್ನೂ ಓದಿ: ಜಗದೊಡೆಯ ತಿಪ್ಪೇಶನ ಮಹಾರಥೋತ್ಸವ ವೈಭವಕ್ಕೆ ದಿನಗಣನೆ | 24 ರಂದು ಪೂರ್ವಸಿದ್ಧತಾ ಸಭೆ

ಅತಿಸಾರ, ದಡಾರ, ಮಲೇರಿಯಾ ಮತ್ತು ನ್ಯೂಮೋನಿಯದಂತ ರೋಗಗಳೂ ಸಹ ಬಹಳಷ್ಟು ಸಲ ಸಾವಿಗೆ ಕಾರಣವಾಗುತ್ತವೆ. ಆದ್ದರಿಂದ ಗ್ರಾಮ ಆರೋಗ್ಯ ನೈರ್ಮಲ್ಯ ಸಮಿತಿ ಸದಸ್ಯರು ಜನ ಜಾಗೃತಿ ಮೂಡಿಸಲು ಆಂದೋಲನ ದ ಮೂಲಕ ಗ್ರಾಮಗಳಲ್ಲಿ ಅರಿವು ಮೂಡಿಸಬೇಕು ಎಂದರು.
ಜಿಲ್ಲಾ ಸಂಯೋಜಕ ಕರಕಪ್ಪ ಮೇಟಿ, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಬಿ.ಮೂಗಪ್ಪ, ತಾಲ್ಲೂಕು ಆರೋಗ್ಯ ಶಿಕ್ಷಣಾಧಿಕರಿ ಮಂಜುನಾಥ್, ಆರೋಗ್ಯ ನಿರೀಕ್ಷಣಾಧಿಕಾರಿ ಪ್ರಶಾಂತ್, ಪವನ್ ಕುಮಾರ್, ಪ್ರವೀಣ್, ಶಂಕರ್ ನಾಯ್ಕ್, ಆರೋಗ್ಯ ಸುರಕ್ಷತಾಧಿಕಾರಿಗಳಾದ ನಾಗರತ್ನಮ್ಮ,ಸುಧಾ, ಶಿಲ್ಪ, ಮಂಜುಳ,ಗಾಯತ್ರಿ, ಮಂಜುಳಾ ಇದ್ದರು.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
